Homeಅಂಕಣಗಳುಮೋದಿಜಿಯ ಸಮುದ್ರ ಗೀತೆಗಳು

ಮೋದಿಜಿಯ ಸಮುದ್ರ ಗೀತೆಗಳು

- Advertisement -
- Advertisement -

| ಥೂತ್ತೇರಿ ಯಾಹೂ |

ಭಾಜಪದ ಮೊದಲ ಪ್ರಧಾನಿ ವಾಜಪೇಯಿ ಆಗಾಗ್ಗೆ ಕವನ ಕೆರೆಯುತ್ತಿದ್ದರು. ಕವಿ ಹೃದಯವೂ ಅವರಿಗಿತ್ತು. ಆದ್ದರಿಂದ ಬಿಜೆಪಿ-ಕವಿ ಎನಿಸಿದ್ದರು. ಅವರಿಗೆ ನಾನೇನು ಕಡಿಮೆ ಎಂದು ಸೆಡ್ಡು ಹೊಡೆದಿರುವ ಈಗಿನ ಪ್ರಧಾನಿ ನರೇಂದ್ರ ಮೋದಿಯೂ ಪದಬೇಧಿ ಮಾಡಿಕೊಂಡು ಅದನ್ನೇ ಕಾವ್ಯವೆಂದು ಪರಿಗಣಿಸಿ ಬಿಜೆಪಿ ಕಾವ್ಯಪ್ರಿಯರಿಗೆ ಬಡಿಸಿದ್ದಾರಂತಲ್ಲಾ. ಅದನ್ನ ಕನ್ನಡ ಕರಪತ್ರ ಎಂಬ ಪತ್ರಿಕೆ ಪ್ರಕಟಿಸಿರುವುದಲ್ಲದೆ ಮೋದಿಯ ಪ್ರಾಮಾಣಿಕ ಅಭಿವ್ಯಕ್ತಿಯನ್ನ ತಿರುಚಿ ಪ್ರಕಟಿಸಿದೆಯಲ್ಲಾ. ವಾಸ್ತವವಾಗಿ ಮೋದಿ ಮೂಲಪ್ರತಿ ಹೇಗಿತ್ತು ಎಂಬ ಊಹೆಯ ಸಾಲುಗಳನ್ನು ನ್ಯಾಯಪಥ ಓದುಗರಿಗೆ ಕೊಡುವುದು ನಮ್ಮ ಧರ್ಮ. ಇದು ಕವಿಯೊಬ್ಬನ ಕಾವ್ಯದ ಸಾಲುಗಳ ನಡುವಿನ ಅಕ್ರಮ ಪ್ರವೇಶವಲ್ಲ. ಕಳೆದ ಶತಮಾನದಲ್ಲೇ ವರಕವಿ ಬೇಂದ್ರೆಯವರು ವಾಚನಕ್ಕೆ ಕಳುಹಿಸಿದ ಕವನದ ಸಾಲುಗಳಲ್ಲಿ ಕಡೆಯ ಕೆಲಸಾಲುಗಳು ಬಿಟ್ಟು ಹೋಗಿದ್ದು ಅದನ್ನ ಊಹಿಸಿ ಬರೆದು ಪೂರ್ಣಗೊಳಿಸಿದ ಕೀರ್ತಿ, ಕೀರ್ತಿನಾಥ ಕುರ್ತುಕೋಟಿಯವರದ್ದು. ಅಂತಹ ಭಾಗ್ಯ ಯಾಹುಗೆ ದೊರಕಿದ್ದು ಭಿನ್ನದೊಳಗಿನ ಸೌಭಾಗ್ಯವಲ್ಲವೆ, ಥೂತ್ತೇರಿ!

“ಮೋದಿಯ ಪದಬೇದಿ”

1

ನಮಸ್ತೇ ಸದಾ ವತ್ಸಲೇ ಸಾಗರ;
ನೀನು ಧೀರ ಗಂಭೀರ, ಆದರೆ ನಾನು,
ಸೀರ, ಬೀರ, ಚ್ವೌರ, ಕ್ವಾರ,
ನೀನು ನೀಲಿ
ನಮ್ಮ ಸಂಘ ಹಳದಿ
ನೀನು ಜಗತ್ತಿಗೆ ಜೀವನ ನೀಡುವೆ
ನಾನು ಸಂಘವೆಂಬ ವಿಷವೃಕ್ಷಕ್ಕೆ
ಹಾಲೆರೆಯುವೆ.
ಸಮುದ್ರದ ಮೇಲೆ ಕೋಲಾಹಲವಿದೆ,
ಭಾರತದ ಒಳಗೆ ಹಾಲಾಹಲವಿದೆ,
ನೀನು ವಿಚಲಿತನಾಗಲ್ಲ,
ನಾವು ಸದಾ ವಿಚಲಿತರು.
ಗರ್ಜಿಸುವ ಕನ್ನಯ್ಯನನ್ನು ಕಂಡರೆ
ನಮ್ಮವರು ಭಯಭೀತರಾಗುತ್ತಾರೆ.
ಸಾಬರನ್ನು ಕಂಡರೆ ಸಣ್ಣಗೆ ನಡುಗುತ್ತಾರೆ.
ನಿನ್ನೊಳಗೆ ಅಡಗಿರುವ ಶಾರ್ಕುಗಳಂತೆ
ಭಾರತದಲ್ಲಿ ಅಡಿಗಿದ್ದಾರವರು.

2
ನಮಸ್ತೇ ಸದಾವತ್ಸಲೇ ಸಾಗರ;
ನೀನು ಶಕ್ತಿಭಂಡಾರ.
ನಾನು ಕುಯುಕ್ತಿ ಬಿಡಾರ,
ನೀನು ಯಾವತ್ತೂ ನಿನ್ನ ಪರಿಧಿಯಲ್ಲಿರುತ್ತೀ.
ನಾವು ಸದಾ ಪರಿಧಿ ಮೀರುತ್ತೇವೆ,
ನೀನು ಯಾವತ್ತೂ ದೊಡ್ಡತನದ ಬೋಧನೆ ಮಾಡುತ್ತಿ,
ನಾವು ಪ್ರತಿಬಾರಿ ಸಣ್ಣತನದಲ್ಲೇ ವಾದಿಸುತ್ತೇವೆ.
ನಿನ್ನ ಅಲೆಗಳಲ್ಲಿ ಜೀವನ ಸಂದೇಶವಿದೆ,
ನಮ್ಮ ಮಾತುಗಳಲ್ಲಿ ಸರ್ವನಾಶದ ಆಶಯವಿದೆ.
ನಿನಗೆ ಯಾವ ಆಸೆಯೂ ಇಲ್ಲ,
ಭರತಖಂಡವನ್ನು ಹಿಂದೂ ರಾಷ್ಟ್ರ ಮಾಡುವ ದುರಾಶೆ ನಮ್ಮನ್ನು ಆಕ್ರಮಿಸಿದೆ.

3
ನಮಸ್ತೆ ಸದಾವತ್ಸಲೇ ಸಾಗರ;
ನಡೆಯುತ್ತಲೇ ಜೀವನ ನಡೆಸುತ್ತಿ,
ನಾನು ತಿರುಗುತ್ತಲೇ ಜೀವನ ನಡೆಸುತ್ತಿದ್ದೇನೆ.
ತಿರುಗಲು ನನಗೆ ಆಯಾಸವೇ ಇಲ್ಲ
ಏಕೆಂದರೆ ನನಗೆ ಮನೆ ಎಂಬುದೇ ಇಲ್ಲ,
ಅದಕ್ಕೆ ವಿದೇಶಗಳ ತಿರುಗುತ್ತೇನೆ.
ನನ್ನ ದೇಶದಲ್ಲೇ ತಿರುಗಿದರೆ
ಅತಿವೃಷ್ಠಿ ಅನಾವೃಷ್ಠಿಗೆ ತುತ್ತಾದವರ
ಅತಿಯಾದ ಬೇಡಿಕೆ ನಿಂದನೆಯ ನರಕ,
ಅದಕ್ಕೆ ವಿದೇಶಗಳ ತಿರುಗುತ್ತೇನೆ.
ನಾಯಿಗೆ ಕೆಲಸವಿಲ್ಲ,
ಕೂರಲು ಸಮಯವಿಲ್ಲ ಎಂಬಂತೆ,
ನನ್ನ ಅಲೆಮಾರಿ ಸಂದೇಶ
ಅನವರತ-ಅನವರತ.

4
ಓಂ ನಮೋ ಸದಾವತ್ಸಲೇ ಸಾಗರ:
ಅಲೆಯಿಂದ ಅಲೆಗಳು ಹೊರಬೀಳುವುದಿಲ್ಲ.
ಇದೇ ಸಂಘಕ್ಕೆ ಆದರ್ಶ,
ಬಿದ್ದರೂ ಉಪ ಅಲೆಗಳ ಆಶ್ರಯ,
ಹಿಂದೂ ಮಹಾಸಭಾ, ವಿಶ್ವಹಿಂದೂ ಪರಿಷತ್,
ಆರೆಸ್ಸೆಸ್ಸು, ಭಜರಂಗದಳದ ಅಲೆಗಳೆಲ್ಲಾ
ಸಂಘ ಸಂಯಮಗೊಂಡ ಸಮುಚ್ಛಯಗಳು.

5
ನಮಸ್ತೆ ಸದಾವತ್ಸಲೇ ಸಾಗರ:
ಸೂರ್ಯನ ಜೊತೆಗೆ ನಿನ್ನ ಗೆಳೆತನ ಹಳೆಯದು,
ನನ್ನ ಸಂಘ ಪರಿವಾರದ ಗೆಳೆತನವೂ ಹಳೆಯದು.
ಜೀವಂತ ಜಲ ನೀನು,
ನಿನ್ನನ್ನು ಕುಡಿದು, ಹೊರಬಿಡುವ ಜನ್ಮವಷ್ಟೇ ನನ್ನದು.
ನೀನು ಆಗಸವನ್ನ ಚುಂಬಿಸುತ್ತೀ,
ನಾನೇನು ಚುಂಬಿಸಲೀ,
ಚುಂಬನದಿಂದ ವಂಚಿತ ನಾನು.
ನೀನು ಮೋಡವಾಗಿ ಮಳೆ ಸುರಿಸುತ್ತಿ,
ನಾನು ಜನಸಾಗರದ ಮೇಲೆ ಸುಳ್ಳು ಸುರಿಸುತ್ತೇನೆ.
ನೀನು ಮಧುರಭಾವ ಇಟ್ಟುಕೊಂಡಿದ್ದಿ,
ಸಂಘ ಸೇರಿದಾಗಲೇ ನನ್ನ ಮಧುರಭಾವ ಮಾಯವಾಯ್ತು,
ಈಗೇನಿದ್ದರೂ ಮಧುರ ಕಾಶ ತಲೆನೋವಷ್ಟೇ..

6
ಓಂ ನಮೋ ಸದಾವತ್ಸಲೇ ಸಾಗರ:
ಜೀವನದ ಈ ಸೌಂದರ್ಯ ನೀಲಕಂಠನ ಆದರ್ಶ ನಿನ್ನದು,
ಜೀವನದ ಸೌಂದರ್ಯ ಹಾಳುಮಾಡುವುದೇ ನಮ್ಮ ಆದರ್ಶ.
ನೀನು ಭೂಮಿಯ ವಿಷವನ್ನು ಕುಡಿಯುತ್ತಿ,
ನಾವು ಭರತ ಖಂಡಕೆ ವಿಷ ಉಣಿಸುತ್ತೇವೆ.
ನೀನು ಲವಣಾಂಶವನ್ನು ನಿನ್ನಲ್ಲೇ ಇಟ್ಟುಕೊಳ್ಳುವೆ,
ನಾವು ತಡೆಯಲಾಗದೆ ಆಗಾಗ್ಗೆ ಬಿಟ್ಟುಬಿಡುತ್ತೇವೆ.
ನೀನು ಜಗತ್ತಿಗೆ ಹೊಸ ಜೀವನ ನೀಡುತ್ತಿ,
ನಾವು ಜಗತ್ತಿಗೆ ಹೊಸ ನರಕ ಕೊಡುತ್ತಿದ್ದೇವೆ.
ನೀನು ಜೀವನ ನಡೆಸುವ ಮರ್ಮ ನೀಡುತ್ತಿ,
ನಾವು ಜೀವನ ಸರ್ವನಾಶ ಮಾಡುವ ಕರ್ಮ ನೀಡುತ್ತೇವೆ.
ಹೇ ಸಮುದ್ರವೆ, ನಿನಗೆ ನನ್ನ ಶತಸಹಸ್ರ
ಪ್ರಣಾಮಗಳು.
ಥೂ…. ಥೂ….. ಥೂತ್ತೇರಿ!!!

ಸೆ: ಕನ್ನಡ ಕರಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...