Homeಅಂಕಣಗಳುಮೋದಿಜಿಯ ಸಮುದ್ರ ಗೀತೆಗಳು

ಮೋದಿಜಿಯ ಸಮುದ್ರ ಗೀತೆಗಳು

- Advertisement -
- Advertisement -

| ಥೂತ್ತೇರಿ ಯಾಹೂ |

ಭಾಜಪದ ಮೊದಲ ಪ್ರಧಾನಿ ವಾಜಪೇಯಿ ಆಗಾಗ್ಗೆ ಕವನ ಕೆರೆಯುತ್ತಿದ್ದರು. ಕವಿ ಹೃದಯವೂ ಅವರಿಗಿತ್ತು. ಆದ್ದರಿಂದ ಬಿಜೆಪಿ-ಕವಿ ಎನಿಸಿದ್ದರು. ಅವರಿಗೆ ನಾನೇನು ಕಡಿಮೆ ಎಂದು ಸೆಡ್ಡು ಹೊಡೆದಿರುವ ಈಗಿನ ಪ್ರಧಾನಿ ನರೇಂದ್ರ ಮೋದಿಯೂ ಪದಬೇಧಿ ಮಾಡಿಕೊಂಡು ಅದನ್ನೇ ಕಾವ್ಯವೆಂದು ಪರಿಗಣಿಸಿ ಬಿಜೆಪಿ ಕಾವ್ಯಪ್ರಿಯರಿಗೆ ಬಡಿಸಿದ್ದಾರಂತಲ್ಲಾ. ಅದನ್ನ ಕನ್ನಡ ಕರಪತ್ರ ಎಂಬ ಪತ್ರಿಕೆ ಪ್ರಕಟಿಸಿರುವುದಲ್ಲದೆ ಮೋದಿಯ ಪ್ರಾಮಾಣಿಕ ಅಭಿವ್ಯಕ್ತಿಯನ್ನ ತಿರುಚಿ ಪ್ರಕಟಿಸಿದೆಯಲ್ಲಾ. ವಾಸ್ತವವಾಗಿ ಮೋದಿ ಮೂಲಪ್ರತಿ ಹೇಗಿತ್ತು ಎಂಬ ಊಹೆಯ ಸಾಲುಗಳನ್ನು ನ್ಯಾಯಪಥ ಓದುಗರಿಗೆ ಕೊಡುವುದು ನಮ್ಮ ಧರ್ಮ. ಇದು ಕವಿಯೊಬ್ಬನ ಕಾವ್ಯದ ಸಾಲುಗಳ ನಡುವಿನ ಅಕ್ರಮ ಪ್ರವೇಶವಲ್ಲ. ಕಳೆದ ಶತಮಾನದಲ್ಲೇ ವರಕವಿ ಬೇಂದ್ರೆಯವರು ವಾಚನಕ್ಕೆ ಕಳುಹಿಸಿದ ಕವನದ ಸಾಲುಗಳಲ್ಲಿ ಕಡೆಯ ಕೆಲಸಾಲುಗಳು ಬಿಟ್ಟು ಹೋಗಿದ್ದು ಅದನ್ನ ಊಹಿಸಿ ಬರೆದು ಪೂರ್ಣಗೊಳಿಸಿದ ಕೀರ್ತಿ, ಕೀರ್ತಿನಾಥ ಕುರ್ತುಕೋಟಿಯವರದ್ದು. ಅಂತಹ ಭಾಗ್ಯ ಯಾಹುಗೆ ದೊರಕಿದ್ದು ಭಿನ್ನದೊಳಗಿನ ಸೌಭಾಗ್ಯವಲ್ಲವೆ, ಥೂತ್ತೇರಿ!

“ಮೋದಿಯ ಪದಬೇದಿ”

1

ನಮಸ್ತೇ ಸದಾ ವತ್ಸಲೇ ಸಾಗರ;
ನೀನು ಧೀರ ಗಂಭೀರ, ಆದರೆ ನಾನು,
ಸೀರ, ಬೀರ, ಚ್ವೌರ, ಕ್ವಾರ,
ನೀನು ನೀಲಿ
ನಮ್ಮ ಸಂಘ ಹಳದಿ
ನೀನು ಜಗತ್ತಿಗೆ ಜೀವನ ನೀಡುವೆ
ನಾನು ಸಂಘವೆಂಬ ವಿಷವೃಕ್ಷಕ್ಕೆ
ಹಾಲೆರೆಯುವೆ.
ಸಮುದ್ರದ ಮೇಲೆ ಕೋಲಾಹಲವಿದೆ,
ಭಾರತದ ಒಳಗೆ ಹಾಲಾಹಲವಿದೆ,
ನೀನು ವಿಚಲಿತನಾಗಲ್ಲ,
ನಾವು ಸದಾ ವಿಚಲಿತರು.
ಗರ್ಜಿಸುವ ಕನ್ನಯ್ಯನನ್ನು ಕಂಡರೆ
ನಮ್ಮವರು ಭಯಭೀತರಾಗುತ್ತಾರೆ.
ಸಾಬರನ್ನು ಕಂಡರೆ ಸಣ್ಣಗೆ ನಡುಗುತ್ತಾರೆ.
ನಿನ್ನೊಳಗೆ ಅಡಗಿರುವ ಶಾರ್ಕುಗಳಂತೆ
ಭಾರತದಲ್ಲಿ ಅಡಿಗಿದ್ದಾರವರು.

2
ನಮಸ್ತೇ ಸದಾವತ್ಸಲೇ ಸಾಗರ;
ನೀನು ಶಕ್ತಿಭಂಡಾರ.
ನಾನು ಕುಯುಕ್ತಿ ಬಿಡಾರ,
ನೀನು ಯಾವತ್ತೂ ನಿನ್ನ ಪರಿಧಿಯಲ್ಲಿರುತ್ತೀ.
ನಾವು ಸದಾ ಪರಿಧಿ ಮೀರುತ್ತೇವೆ,
ನೀನು ಯಾವತ್ತೂ ದೊಡ್ಡತನದ ಬೋಧನೆ ಮಾಡುತ್ತಿ,
ನಾವು ಪ್ರತಿಬಾರಿ ಸಣ್ಣತನದಲ್ಲೇ ವಾದಿಸುತ್ತೇವೆ.
ನಿನ್ನ ಅಲೆಗಳಲ್ಲಿ ಜೀವನ ಸಂದೇಶವಿದೆ,
ನಮ್ಮ ಮಾತುಗಳಲ್ಲಿ ಸರ್ವನಾಶದ ಆಶಯವಿದೆ.
ನಿನಗೆ ಯಾವ ಆಸೆಯೂ ಇಲ್ಲ,
ಭರತಖಂಡವನ್ನು ಹಿಂದೂ ರಾಷ್ಟ್ರ ಮಾಡುವ ದುರಾಶೆ ನಮ್ಮನ್ನು ಆಕ್ರಮಿಸಿದೆ.

3
ನಮಸ್ತೆ ಸದಾವತ್ಸಲೇ ಸಾಗರ;
ನಡೆಯುತ್ತಲೇ ಜೀವನ ನಡೆಸುತ್ತಿ,
ನಾನು ತಿರುಗುತ್ತಲೇ ಜೀವನ ನಡೆಸುತ್ತಿದ್ದೇನೆ.
ತಿರುಗಲು ನನಗೆ ಆಯಾಸವೇ ಇಲ್ಲ
ಏಕೆಂದರೆ ನನಗೆ ಮನೆ ಎಂಬುದೇ ಇಲ್ಲ,
ಅದಕ್ಕೆ ವಿದೇಶಗಳ ತಿರುಗುತ್ತೇನೆ.
ನನ್ನ ದೇಶದಲ್ಲೇ ತಿರುಗಿದರೆ
ಅತಿವೃಷ್ಠಿ ಅನಾವೃಷ್ಠಿಗೆ ತುತ್ತಾದವರ
ಅತಿಯಾದ ಬೇಡಿಕೆ ನಿಂದನೆಯ ನರಕ,
ಅದಕ್ಕೆ ವಿದೇಶಗಳ ತಿರುಗುತ್ತೇನೆ.
ನಾಯಿಗೆ ಕೆಲಸವಿಲ್ಲ,
ಕೂರಲು ಸಮಯವಿಲ್ಲ ಎಂಬಂತೆ,
ನನ್ನ ಅಲೆಮಾರಿ ಸಂದೇಶ
ಅನವರತ-ಅನವರತ.

4
ಓಂ ನಮೋ ಸದಾವತ್ಸಲೇ ಸಾಗರ:
ಅಲೆಯಿಂದ ಅಲೆಗಳು ಹೊರಬೀಳುವುದಿಲ್ಲ.
ಇದೇ ಸಂಘಕ್ಕೆ ಆದರ್ಶ,
ಬಿದ್ದರೂ ಉಪ ಅಲೆಗಳ ಆಶ್ರಯ,
ಹಿಂದೂ ಮಹಾಸಭಾ, ವಿಶ್ವಹಿಂದೂ ಪರಿಷತ್,
ಆರೆಸ್ಸೆಸ್ಸು, ಭಜರಂಗದಳದ ಅಲೆಗಳೆಲ್ಲಾ
ಸಂಘ ಸಂಯಮಗೊಂಡ ಸಮುಚ್ಛಯಗಳು.

5
ನಮಸ್ತೆ ಸದಾವತ್ಸಲೇ ಸಾಗರ:
ಸೂರ್ಯನ ಜೊತೆಗೆ ನಿನ್ನ ಗೆಳೆತನ ಹಳೆಯದು,
ನನ್ನ ಸಂಘ ಪರಿವಾರದ ಗೆಳೆತನವೂ ಹಳೆಯದು.
ಜೀವಂತ ಜಲ ನೀನು,
ನಿನ್ನನ್ನು ಕುಡಿದು, ಹೊರಬಿಡುವ ಜನ್ಮವಷ್ಟೇ ನನ್ನದು.
ನೀನು ಆಗಸವನ್ನ ಚುಂಬಿಸುತ್ತೀ,
ನಾನೇನು ಚುಂಬಿಸಲೀ,
ಚುಂಬನದಿಂದ ವಂಚಿತ ನಾನು.
ನೀನು ಮೋಡವಾಗಿ ಮಳೆ ಸುರಿಸುತ್ತಿ,
ನಾನು ಜನಸಾಗರದ ಮೇಲೆ ಸುಳ್ಳು ಸುರಿಸುತ್ತೇನೆ.
ನೀನು ಮಧುರಭಾವ ಇಟ್ಟುಕೊಂಡಿದ್ದಿ,
ಸಂಘ ಸೇರಿದಾಗಲೇ ನನ್ನ ಮಧುರಭಾವ ಮಾಯವಾಯ್ತು,
ಈಗೇನಿದ್ದರೂ ಮಧುರ ಕಾಶ ತಲೆನೋವಷ್ಟೇ..

6
ಓಂ ನಮೋ ಸದಾವತ್ಸಲೇ ಸಾಗರ:
ಜೀವನದ ಈ ಸೌಂದರ್ಯ ನೀಲಕಂಠನ ಆದರ್ಶ ನಿನ್ನದು,
ಜೀವನದ ಸೌಂದರ್ಯ ಹಾಳುಮಾಡುವುದೇ ನಮ್ಮ ಆದರ್ಶ.
ನೀನು ಭೂಮಿಯ ವಿಷವನ್ನು ಕುಡಿಯುತ್ತಿ,
ನಾವು ಭರತ ಖಂಡಕೆ ವಿಷ ಉಣಿಸುತ್ತೇವೆ.
ನೀನು ಲವಣಾಂಶವನ್ನು ನಿನ್ನಲ್ಲೇ ಇಟ್ಟುಕೊಳ್ಳುವೆ,
ನಾವು ತಡೆಯಲಾಗದೆ ಆಗಾಗ್ಗೆ ಬಿಟ್ಟುಬಿಡುತ್ತೇವೆ.
ನೀನು ಜಗತ್ತಿಗೆ ಹೊಸ ಜೀವನ ನೀಡುತ್ತಿ,
ನಾವು ಜಗತ್ತಿಗೆ ಹೊಸ ನರಕ ಕೊಡುತ್ತಿದ್ದೇವೆ.
ನೀನು ಜೀವನ ನಡೆಸುವ ಮರ್ಮ ನೀಡುತ್ತಿ,
ನಾವು ಜೀವನ ಸರ್ವನಾಶ ಮಾಡುವ ಕರ್ಮ ನೀಡುತ್ತೇವೆ.
ಹೇ ಸಮುದ್ರವೆ, ನಿನಗೆ ನನ್ನ ಶತಸಹಸ್ರ
ಪ್ರಣಾಮಗಳು.
ಥೂ…. ಥೂ….. ಥೂತ್ತೇರಿ!!!

ಸೆ: ಕನ್ನಡ ಕರಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...