Homeಅಂಕಣಗಳುಮೋದಿ ಸರ್ಕಾರ ಸಾರ್ವಜನಿಕ ಉದ್ದಿಮೆಗಳನ್ನು ನಾಶಮಾಡುತ್ತಿರುವುದು ಅಕ್ಷಮ್ಯ...

ಮೋದಿ ಸರ್ಕಾರ ಸಾರ್ವಜನಿಕ ಉದ್ದಿಮೆಗಳನ್ನು ನಾಶಮಾಡುತ್ತಿರುವುದು ಅಕ್ಷಮ್ಯ…

- Advertisement -
- Advertisement -

ಖಾಸಗೀಕರಣಕ್ಕೆ ಹಾತೊರೆಯುತ್ತಿರುವ ಸರ್ಕಾರ ನಮ್ಮ ಸಾರ್ವಜನಿಕ ಉದ್ಯಮಗಳು ನಷ್ಟಕ್ಕೆ ಏಕೆ ಒಳಗಾದವು? ಅವುಗಳನ್ನು ಲಾಭದಾಯಕ ಮಾಡುವುದು ಹೇಗೆ ಎಂಬುದರ ಕುರಿತು ಗಂಭೀರವಾಗಿ ವಿಚಾರ ಮಾಡದೇ ಅವುಗಳನ್ನು ಮುಚ್ಚಿಸಿ, ಖಾಸಗಿಯವರಿಗೆ ದೋಚಲು ಅವಕಾಶ ಮಾಡಿಕೊಡಲು ಹೊರಟಿರುವುದು ದೇಶದ ದೌರ್ಭಾಗ್ಯವೇ ಸರಿ.

ಸಾರ್ವಜನಿಕ ವಲಯದ ಉದ್ದಿಮೆಗಳನ್ನು ಮಾರಾಟ ಮಾಡುವುದು ಮೋದಿ ಸರ್ಕಾರದ ಧೋರಣೆಯಾಗಿದೆ. ಕೆಲವು ಸಾರ್ವಜನಿಕ ವಲಯದ ಉದ್ದಿಮೆಗಳು ಅನೇಕ ವರ್ಷದಿಂದ ನಷ್ಟದಲ್ಲಿ ನಡೆಯುತ್ತಿವೆ. ಅವುಗಳನ್ನು ಮುಚ್ಚಲು ಅಭ್ಯಂತರವಿಲ್ಲ. ಆದರೆ ಕೆಲವು ಲಾಭದಾಯಕವಾದ ಸಂಸ್ಥೆಗಳನ್ನು ಅವುಗಳನ್ನು ನಿರ್ವಹಿಸುತ್ತಿದ್ದ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ನಷ್ಟದಲ್ಲಿ ನಡೆಯುವಂತೆ ಮಾಡಿ ಕಬಳಿಸಿದ್ದೂ ಉಂಟು.

ಭಾರತದ ಆಭರಣಗಳೆಂದು ಕರೆಯಲ್ಪಡುತ್ತಿದ್ದ ಸಾರ್ವಜನಿಕವಲಯದ ಉದ್ದಿಮೆಗಳನ್ನು ಜವಹಾರ್‍ಲಾಲ್ ನೆಹರು ಅವರು ಆರಂಭಿಸಿದ್ದರು. ಆ ಹೆಮ್ಮೆಯ ದಿನಗಳು ಆಗಿಹೋಯಿತು. ಈಗ ಅವುಗಳನ್ನೆಲ್ಲ ನಷ್ಟದಲ್ಲಿ ನಡೆಯುತ್ತಿದೆಯೆಂದು ಹೆಸರಿಸಿ ಅವುಗಳನ್ನು ತಮಗೆ ಬೇಕಾದ ಉದ್ದಿಮೆದಾರರಿಗೆ ಮಾರಾಟ ಮಾಡುವ ಹುನ್ನಾರ ನಡದಿದೆ. ಉದಾಹರಣೆಗೆ BEML, BEL ಮುಂತಾದ ಲಾಭದಾಯಕ ಉದ್ಯಮಗಳನ್ನು ಮಾರಾಟ ಮಾಡುವ ವಿಚಾರ ಪತ್ರಿಕೆಗಳಲ್ಲಿ ಪ್ರಕಟವಾಗಿದೆ.

ಸ್ವಾತಂತ್ರ್ಯ ಬಂದ ಮೊದಲ ಕೆಲವು ವರ್ಷಗಳ ಕಾಲ ಖಾಸಗಿ ಉದ್ದಿಮೆದಾರರು ಲಕ್ಷಾಂತರ ಹಣ ಹೂಡಿ ಉದ್ಯಮಗಳನ್ನು ಆರಂಭಿಸಲು ಬಂಡವಾಳ ಹಾಕಲು ಹಿಂದೇಟು ಹಾಕುತ್ತಿದ್ದರು. ಅಂತಹ ಸಂದರ್ಭದಲ್ಲಿ ಸರ್ಕಾರಿ ಸ್ವಾಮ್ಯದ ಉದ್ಯಮಗಳಿಗೆ ನೆಹರು ಅವರು ಉತ್ತೇಜನ ಕೊಟ್ಟರು. ಅವೆಲ್ಲ ಲಾಭದಾಯಕ ಸಂಸ್ಥೆಗಳಾಗಿ ಮುಂದುವರೆದವು. ಅದರಿಂದ ದೇಶದ ಆರ್ಥಿಕತೆ ದೌಡಾಯಿಸಿತು. ಆರ್ಥಿಕ ಪ್ರಗತಿ ಆಯಿತು.

ನೆಹರು ಅವರು ಈ ಸರ್ಕಾರಿ ಉದ್ಯಮಗಳನ್ನು ಆರಂಭಿಸಲು ಮತ್ತೊಂದು ಪ್ರಬಲ ಉದ್ದೇಶವಿತ್ತು. ಅದೇನೆಂದರೆ ಜನತೆಗೆ ಉದ್ಯೋಗ ಒದಗಿಸುವುದು. ಉದ್ಯಮೀಕರಣ ದಾಪುಗಾಲಿಟ್ಟಿತಾದರೂ ಜನತೆಗೆ ಉದ್ಯೋಗ ಒದಗಿಸುವ ಗುರಿ ತಲುಪಲಾಗಲಿಲ್ಲ. ನಿರ್ವಹಣೆಯ ಅನಾದರದಿಂದ ಹಾಗೂ ಕಾರ್ಮಿಕ ಸಂಘಟನೆಗಳ ಕಾಟದಿಂದ ಉದ್ಯಮಗಳು ಸೊರಗಲು ಆರಂಭವಾದವು.

ಕೇಂದ್ರದಿಂದ ಆರಂಭವಾದ ಸಾರ್ವಜನಿಕ ವಲಯದ ಉದ್ಯಮಗಳು ಲಾಭದಾಯಕವಾಗಿಯೇ ನಡೆದವಾದರೂ, ರಾಜ್ಯಗಳು ಆರಂಭಿಸಿದ ಸಾರ್ವಜನಿಕ ವಲಯದ ಉದ್ಯಮಗಳು ಕಾಲಕ್ರಮೇಣ ನೆಲಕಚ್ಚಿದವು. ಅವುಗಳಿಗೆ ಆಕ್ಸಿಜನ್ ಕೊಟ್ಟು ಜೀವಂತವಾಗಿಡಲು ವರ್ಷ ವರ್ಷ ಲಕ್ಷಾಂತರ ರೂಗಳನ್ನು ಕೇಂದ್ರ ಸರ್ಕಾರ ಒದಗಿಸಬೇಕಾಯಿತು.

1991ರಲ್ಲಿ ಉದಾರೀಕರಣ ಖಾಸಗೀಕರಣದತ್ತ ಸರ್ಕಾರ ವಾಲಿತು. ಈ ರಾಷ್ಟ್ರೀಕೃತ ಉದ್ಯಮಗಳಿಗಿಂತ ಉತ್ತಮವಾಗಿ ಖಾಸಗಿ ಉದ್ಯಮಗಳು ನಡೆಯುತ್ತಿದ್ದುದರಿಂದ ಸರ್ಕಾರಿ ಉದ್ಯಮಗಳನ್ನು ಸರ್ಕಾರ ಸ್ಥಗಿತ ಗೊಳಿಸಿದವು. ಅವುಗಳ ಷೇರುಗಳನ್ನು ಮಾರಲು ಆರಂಭವಾಯಿತು. ಸರ್ಕಾರ ಕೆಲವು ಕಂಪನಿಗಳ ಷೇರುಗಳನ್ನು ಸಂಪೂರ್ಣವಾಗಿ ಇನ್ನು ಕೆಲವು ಕಂಪನಿಗಳ ಷೇರುಗಳನ್ನು ಭಾಗಶಃ ಮಾರಾಟ ಮಾಡಿದವು ಈ ನಿಲುವಿಗೆ ಸರ್ಕಾರ ತನ್ನ ಸಮರ್ಥನೆ ನೀಡಿತು.

ಪ್ರವಾಸೋದ್ಯಮ, ಹೊಟೇಲ್ ನಡೆಸುವುದು ದಿನಬಳಕೆಯ ವಸ್ತುಗಳ ಉತ್ಪಾದನೆ, ಸಾರಿಗೆವಾಹನಗಳ ಉತ್ಪಾದನೆಗಳನ್ನು ಖಾಸಗಿ ಉದ್ಯಮಿಗಳು ಯಶಸ್ವಿಯಾಗಿ ನಡೆಸುವರಾಗಿದ್ದರಿಂದ ಸರ್ಕಾರ ಈ ಉದ್ಯಮಗಳಿಗೆ ಕೈಹಾಕಬಾರದು. ಸಾರ್ವಜನಿಕ ಉದ್ಯಮಗಳ ಆರೋಗ್ಯಕ್ಕೆ ಸಂಬಂಧಪಟ್ಟ ವಿದ್ಯಮಾನಗಳನ್ನು ಬಲಪಡಿಸುವುದು ಸರ್ಕಾರದ ನಿಲುವಾಯಿತು.

ತದನಂತರ ಅಸ್ತಿತ್ವಕ್ಕೆ ಬಂದ ಸರ್ಕಾರಗಳೂ ಲಾಭದಾಯಕವಾಗಿ ನಡೆಯುತ್ತಿದ್ದ ಸಾರ್ವಜನಿಕ ಉದ್ದಿಮೆಗಳ ಷೇರುಗಳನ್ನು ಮಾರಾಟ ಮಾಡಿ ಒಂದು ಲಕ್ಷ ಕೋಟಿ ರೂಗಳ ಬಂಡವಾಳ ಹಿಂಪಡೆಯಬೇಕೆಂದು ನಿರ್ಧರಿಸಿದವು. ಸಾರ್ವಜನಿಕ ವಲಯದ ಉದ್ಯಮಗಳನ್ನು ಬೆಳೆಸುವುದು ಅನವಶ್ಯಕ. ಖಾಸಗೀಕರಣವೇ ಮುಕ್ತಿದಾಯಕ ಎಂದು ಸರ್ಕಾರ ಭಾವಿಸಿತು. ಸಾರ್ವಜನಿಕ ವಲಯದ ಉದ್ಯಮಗಳ ಷೇರುಗಳ ಮಾರಾಟದ ಜೊತೆಗೆ ಸರ್ಕಾರ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆಗಳನ್ನು ಖಾಸಗೀಕರಣ ಮಾಡತೊಡಗಿದವು. ಹಣಕಾಸಿನ ಕೊರತೆ ಖಾಸಗೀಕರಣಕ್ಕೆ ಕಾರಣ ಎಂದು ಸಬೂಬು ಹೇಳಿತು. ಭಾರತ್ ಪೆಟ್ರೋಲಿಯಂನಂತಹ ಲಾಭದಾಯಕ, ಪ್ರತಿಷ್ಠಿತ ಉದ್ಯಮದ ಷೇರುಗಳನ್ನು ಕೂಡ ಖಾಸಗಿಯವರಿಗೆ ಮಾರಾಟ ಮಾಡಲು ಹೊರಟಿರುವುದು ದುರ್ದೈವ.

ಸಾಮಾನ್ಯ ಜನರಿಗೆ ಆರೋಗ್ಯ ಕಾಪಾಡಿಕೊಳ್ಳಲು, ಉತ್ತಮ ಶಿಕ್ಷಣ ಪಡೆಯಲು ಇದ್ದ ಅವಕಾಶವನ್ನು ಸರ್ಕಾರ ಲಾಭಕೋರ ಖಾಸಗಿ ಸಂಸ್ಥೆಗಳಿಗೆ ವಹಿಸಿ ಪ್ರಜಾದ್ರೋಹ ಎಸಗಲಾಗಿದೆ.

ಅದರಂತೆಯೇ ಷಿಪ್ಪಿಂಗ್ ಇಂಡಸ್ಟ್ರಿ ಆಫ್ ಇಂಡಿಯಾ ಮತ್ತು ಕಂಟೈನರ್ ಕಾರ್ಪೊರೇಷನ್ ಆಫ್ ಇಂಡಿಯಾ ಕಂಪನಿಗಳ ಷೇರುಗಳನ್ನು ಮಾರಾಟ ಮಾಡಲು ತೀರ್ಮಾನಿಸಿರುವುದರ ಲಾಜಿಕ್ ಏನು ಎಂಬುದು ಒಂದು ಚಿದಂಬರ ರಹಸ್ಯವಾಗಿದೆ. ಒಟ್ಟಿನಲ್ಲಿ ಈ ಎಲ್ಲಾ ಸಾರ್ವಜನಿಕ ಸೇವಾಉದ್ಯಮಗಳ ಶೇ.51ರಷ್ಟು ಷೇರುಗಳನ್ನು ಹಿಂಪಡೆಯಲು ಸರ್ಕಾರ ನಿರ್ಧರಿಸಿದೆ. ಇದಕ್ಕಿರುವ ಏಕೈಕ ಕಾರಣ ಇಂದಿನ ಸರ್ಕಾರಕ್ಕೆ ಉಡಾಯಿಸಲು ಹಣ ಬೇಕು. ಅದೇ ದೃಷ್ಟಿಯಿಂದ ರಿಸರ್ವ್ ಬ್ಯಾಂಕಿನ ರಿಸರ್ವ್ ಫಂಡಿನಲ್ಲಿ ಒಂದು ಭಾಗ ಅಂದರೆ ಎಷ್ಟೋ ಕೋಟಿ ಹಣ ಸರ್ಕಾರಕ್ಕೆ ಕೊಡಿ ಎಂಬ ಒತ್ತಾಯ ಬಂದಿದೆ. ನವರತ್ನಗಳಲ್ಲಿ ಒಂದಾದ ಭಾರತ್ ಪೆಟ್ರೋಲಿಯಂ ಕಂಪನಿಯನ್ನು ಮಾರಲು ಹೊರಟಿವುದರ ರಹಸ್ಯವೇನು? ಇದರಿಂದ ನಾವು ಕಲಿಯಬಹುದಾದ ಪಾಠ ಯಾವುದು?

ಲಾಭದಾಯಕವೋ, ನಷ್ಟವೋ PSUಗಳನ್ನು ಮಾರಾಟ ಮಾಡುವುದು ನಮ್ಮ ಧ್ಯೇಯ ಎಂದು ಸರ್ಕಾರ ಭಾವಿಸಿರಬಹುದು.

ಖಾಸಗೀಕರಣಕ್ಕೆ ಹಾತೊರೆಯುತ್ತಿರುವ ಸರ್ಕಾರ ನಮ್ಮ ಸಾರ್ವಜನಿಕ ಉದ್ಯಮಗಳು ನಷ್ಟಕ್ಕೆ ಏಕೆ ಒಳಗಾದವು? ಅವುಗಳನ್ನು ಲಾಭದಾಯಕ ಮಾಡುವುದು ಹೇಗೆ ಎಂಬುದರ ಕುರಿತು ಗಂಭೀರವಾಗಿ ವಿಚಾರ ಮಾಡದೇ ಅವುಗಳನ್ನು ಮುಚ್ಚಿಸಿ, ಖಾಸಗಿಯವರಿಗೆ ದೋಚಲು ಅವಕಾಶ ಮಾಡಿಕೊಡಲು ಹೊರಟಿರುವುದು ದೇಶದ ದೌರ್ಭಾಗ್ಯವೇ ಸರಿ.

PSUಗಳನ್ನು ಮುಗಿಸುವುದಕ್ಕೆ ಕಾರಣಗಳೇನು ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ರಿಸರ್ವ್ ಬ್ಯಾಂಕಿನ ರಿಸರ್ವ್ ಫಂಡಿಗೆ ಏಕೆ ಲಗ್ಗೆ ಹಾಕಬೇಕು ಎಂಬುದನ್ನು ಜನತೆಗೆ ಸ್ಪಷ್ಟ ನುಡಿಗಳಲ್ಲಿ ಮನವರಿಕೆ ಮಾಡಿಕೊಡಬೇಕು. ಈ ಬಗೆಗೆ ಸರ್ಕಾರದ ಪಾಲಿಸಿ ಏನು ಎಂಬುದನ್ನು ನಿರ್ದಿಷ್ಟವಾಗಿ ತಿಳಿಸಬೇಕು. PSUಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ತಮ್ಮ ಭವಿಷ್ಯದ ಬಗೆಗೆ ಗಾಬರಿ ಉಂಟಾಗುತ್ತದೆ.

ಚುನಾಯಿತ ಸರ್ಕಾರ ಅಭಿವೃದ್ಧಿ ಮತ್ತು ಸಮಾನತೆಗೆ ಬದ್ಧನಾಗಿರಬೇಕು. ಅಭಿವೃದ್ಧಿಯ ಎಲ್ಲ ಆಯಾಮಗಳನ್ನು ಪಟ್ಟಭದ್ರ ಹಿತಾಸಕ್ತಿಗಳೇ ನಿರ್ಧರಿಸುವುದಾದರೆ ಜನಸಾಮಾನ್ಯರ ಪಾಡೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...