Homeಅಂಕಣಗಳುಮೋದಿ ಸರ್ಕಾರ ಸಾರ್ವಜನಿಕ ಉದ್ದಿಮೆಗಳನ್ನು ನಾಶಮಾಡುತ್ತಿರುವುದು ಅಕ್ಷಮ್ಯ...

ಮೋದಿ ಸರ್ಕಾರ ಸಾರ್ವಜನಿಕ ಉದ್ದಿಮೆಗಳನ್ನು ನಾಶಮಾಡುತ್ತಿರುವುದು ಅಕ್ಷಮ್ಯ…

- Advertisement -
- Advertisement -

ಖಾಸಗೀಕರಣಕ್ಕೆ ಹಾತೊರೆಯುತ್ತಿರುವ ಸರ್ಕಾರ ನಮ್ಮ ಸಾರ್ವಜನಿಕ ಉದ್ಯಮಗಳು ನಷ್ಟಕ್ಕೆ ಏಕೆ ಒಳಗಾದವು? ಅವುಗಳನ್ನು ಲಾಭದಾಯಕ ಮಾಡುವುದು ಹೇಗೆ ಎಂಬುದರ ಕುರಿತು ಗಂಭೀರವಾಗಿ ವಿಚಾರ ಮಾಡದೇ ಅವುಗಳನ್ನು ಮುಚ್ಚಿಸಿ, ಖಾಸಗಿಯವರಿಗೆ ದೋಚಲು ಅವಕಾಶ ಮಾಡಿಕೊಡಲು ಹೊರಟಿರುವುದು ದೇಶದ ದೌರ್ಭಾಗ್ಯವೇ ಸರಿ.

ಸಾರ್ವಜನಿಕ ವಲಯದ ಉದ್ದಿಮೆಗಳನ್ನು ಮಾರಾಟ ಮಾಡುವುದು ಮೋದಿ ಸರ್ಕಾರದ ಧೋರಣೆಯಾಗಿದೆ. ಕೆಲವು ಸಾರ್ವಜನಿಕ ವಲಯದ ಉದ್ದಿಮೆಗಳು ಅನೇಕ ವರ್ಷದಿಂದ ನಷ್ಟದಲ್ಲಿ ನಡೆಯುತ್ತಿವೆ. ಅವುಗಳನ್ನು ಮುಚ್ಚಲು ಅಭ್ಯಂತರವಿಲ್ಲ. ಆದರೆ ಕೆಲವು ಲಾಭದಾಯಕವಾದ ಸಂಸ್ಥೆಗಳನ್ನು ಅವುಗಳನ್ನು ನಿರ್ವಹಿಸುತ್ತಿದ್ದ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ನಷ್ಟದಲ್ಲಿ ನಡೆಯುವಂತೆ ಮಾಡಿ ಕಬಳಿಸಿದ್ದೂ ಉಂಟು.

ಭಾರತದ ಆಭರಣಗಳೆಂದು ಕರೆಯಲ್ಪಡುತ್ತಿದ್ದ ಸಾರ್ವಜನಿಕವಲಯದ ಉದ್ದಿಮೆಗಳನ್ನು ಜವಹಾರ್‍ಲಾಲ್ ನೆಹರು ಅವರು ಆರಂಭಿಸಿದ್ದರು. ಆ ಹೆಮ್ಮೆಯ ದಿನಗಳು ಆಗಿಹೋಯಿತು. ಈಗ ಅವುಗಳನ್ನೆಲ್ಲ ನಷ್ಟದಲ್ಲಿ ನಡೆಯುತ್ತಿದೆಯೆಂದು ಹೆಸರಿಸಿ ಅವುಗಳನ್ನು ತಮಗೆ ಬೇಕಾದ ಉದ್ದಿಮೆದಾರರಿಗೆ ಮಾರಾಟ ಮಾಡುವ ಹುನ್ನಾರ ನಡದಿದೆ. ಉದಾಹರಣೆಗೆ BEML, BEL ಮುಂತಾದ ಲಾಭದಾಯಕ ಉದ್ಯಮಗಳನ್ನು ಮಾರಾಟ ಮಾಡುವ ವಿಚಾರ ಪತ್ರಿಕೆಗಳಲ್ಲಿ ಪ್ರಕಟವಾಗಿದೆ.

ಸ್ವಾತಂತ್ರ್ಯ ಬಂದ ಮೊದಲ ಕೆಲವು ವರ್ಷಗಳ ಕಾಲ ಖಾಸಗಿ ಉದ್ದಿಮೆದಾರರು ಲಕ್ಷಾಂತರ ಹಣ ಹೂಡಿ ಉದ್ಯಮಗಳನ್ನು ಆರಂಭಿಸಲು ಬಂಡವಾಳ ಹಾಕಲು ಹಿಂದೇಟು ಹಾಕುತ್ತಿದ್ದರು. ಅಂತಹ ಸಂದರ್ಭದಲ್ಲಿ ಸರ್ಕಾರಿ ಸ್ವಾಮ್ಯದ ಉದ್ಯಮಗಳಿಗೆ ನೆಹರು ಅವರು ಉತ್ತೇಜನ ಕೊಟ್ಟರು. ಅವೆಲ್ಲ ಲಾಭದಾಯಕ ಸಂಸ್ಥೆಗಳಾಗಿ ಮುಂದುವರೆದವು. ಅದರಿಂದ ದೇಶದ ಆರ್ಥಿಕತೆ ದೌಡಾಯಿಸಿತು. ಆರ್ಥಿಕ ಪ್ರಗತಿ ಆಯಿತು.

ನೆಹರು ಅವರು ಈ ಸರ್ಕಾರಿ ಉದ್ಯಮಗಳನ್ನು ಆರಂಭಿಸಲು ಮತ್ತೊಂದು ಪ್ರಬಲ ಉದ್ದೇಶವಿತ್ತು. ಅದೇನೆಂದರೆ ಜನತೆಗೆ ಉದ್ಯೋಗ ಒದಗಿಸುವುದು. ಉದ್ಯಮೀಕರಣ ದಾಪುಗಾಲಿಟ್ಟಿತಾದರೂ ಜನತೆಗೆ ಉದ್ಯೋಗ ಒದಗಿಸುವ ಗುರಿ ತಲುಪಲಾಗಲಿಲ್ಲ. ನಿರ್ವಹಣೆಯ ಅನಾದರದಿಂದ ಹಾಗೂ ಕಾರ್ಮಿಕ ಸಂಘಟನೆಗಳ ಕಾಟದಿಂದ ಉದ್ಯಮಗಳು ಸೊರಗಲು ಆರಂಭವಾದವು.

ಕೇಂದ್ರದಿಂದ ಆರಂಭವಾದ ಸಾರ್ವಜನಿಕ ವಲಯದ ಉದ್ಯಮಗಳು ಲಾಭದಾಯಕವಾಗಿಯೇ ನಡೆದವಾದರೂ, ರಾಜ್ಯಗಳು ಆರಂಭಿಸಿದ ಸಾರ್ವಜನಿಕ ವಲಯದ ಉದ್ಯಮಗಳು ಕಾಲಕ್ರಮೇಣ ನೆಲಕಚ್ಚಿದವು. ಅವುಗಳಿಗೆ ಆಕ್ಸಿಜನ್ ಕೊಟ್ಟು ಜೀವಂತವಾಗಿಡಲು ವರ್ಷ ವರ್ಷ ಲಕ್ಷಾಂತರ ರೂಗಳನ್ನು ಕೇಂದ್ರ ಸರ್ಕಾರ ಒದಗಿಸಬೇಕಾಯಿತು.

1991ರಲ್ಲಿ ಉದಾರೀಕರಣ ಖಾಸಗೀಕರಣದತ್ತ ಸರ್ಕಾರ ವಾಲಿತು. ಈ ರಾಷ್ಟ್ರೀಕೃತ ಉದ್ಯಮಗಳಿಗಿಂತ ಉತ್ತಮವಾಗಿ ಖಾಸಗಿ ಉದ್ಯಮಗಳು ನಡೆಯುತ್ತಿದ್ದುದರಿಂದ ಸರ್ಕಾರಿ ಉದ್ಯಮಗಳನ್ನು ಸರ್ಕಾರ ಸ್ಥಗಿತ ಗೊಳಿಸಿದವು. ಅವುಗಳ ಷೇರುಗಳನ್ನು ಮಾರಲು ಆರಂಭವಾಯಿತು. ಸರ್ಕಾರ ಕೆಲವು ಕಂಪನಿಗಳ ಷೇರುಗಳನ್ನು ಸಂಪೂರ್ಣವಾಗಿ ಇನ್ನು ಕೆಲವು ಕಂಪನಿಗಳ ಷೇರುಗಳನ್ನು ಭಾಗಶಃ ಮಾರಾಟ ಮಾಡಿದವು ಈ ನಿಲುವಿಗೆ ಸರ್ಕಾರ ತನ್ನ ಸಮರ್ಥನೆ ನೀಡಿತು.

ಪ್ರವಾಸೋದ್ಯಮ, ಹೊಟೇಲ್ ನಡೆಸುವುದು ದಿನಬಳಕೆಯ ವಸ್ತುಗಳ ಉತ್ಪಾದನೆ, ಸಾರಿಗೆವಾಹನಗಳ ಉತ್ಪಾದನೆಗಳನ್ನು ಖಾಸಗಿ ಉದ್ಯಮಿಗಳು ಯಶಸ್ವಿಯಾಗಿ ನಡೆಸುವರಾಗಿದ್ದರಿಂದ ಸರ್ಕಾರ ಈ ಉದ್ಯಮಗಳಿಗೆ ಕೈಹಾಕಬಾರದು. ಸಾರ್ವಜನಿಕ ಉದ್ಯಮಗಳ ಆರೋಗ್ಯಕ್ಕೆ ಸಂಬಂಧಪಟ್ಟ ವಿದ್ಯಮಾನಗಳನ್ನು ಬಲಪಡಿಸುವುದು ಸರ್ಕಾರದ ನಿಲುವಾಯಿತು.

ತದನಂತರ ಅಸ್ತಿತ್ವಕ್ಕೆ ಬಂದ ಸರ್ಕಾರಗಳೂ ಲಾಭದಾಯಕವಾಗಿ ನಡೆಯುತ್ತಿದ್ದ ಸಾರ್ವಜನಿಕ ಉದ್ದಿಮೆಗಳ ಷೇರುಗಳನ್ನು ಮಾರಾಟ ಮಾಡಿ ಒಂದು ಲಕ್ಷ ಕೋಟಿ ರೂಗಳ ಬಂಡವಾಳ ಹಿಂಪಡೆಯಬೇಕೆಂದು ನಿರ್ಧರಿಸಿದವು. ಸಾರ್ವಜನಿಕ ವಲಯದ ಉದ್ಯಮಗಳನ್ನು ಬೆಳೆಸುವುದು ಅನವಶ್ಯಕ. ಖಾಸಗೀಕರಣವೇ ಮುಕ್ತಿದಾಯಕ ಎಂದು ಸರ್ಕಾರ ಭಾವಿಸಿತು. ಸಾರ್ವಜನಿಕ ವಲಯದ ಉದ್ಯಮಗಳ ಷೇರುಗಳ ಮಾರಾಟದ ಜೊತೆಗೆ ಸರ್ಕಾರ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆಗಳನ್ನು ಖಾಸಗೀಕರಣ ಮಾಡತೊಡಗಿದವು. ಹಣಕಾಸಿನ ಕೊರತೆ ಖಾಸಗೀಕರಣಕ್ಕೆ ಕಾರಣ ಎಂದು ಸಬೂಬು ಹೇಳಿತು. ಭಾರತ್ ಪೆಟ್ರೋಲಿಯಂನಂತಹ ಲಾಭದಾಯಕ, ಪ್ರತಿಷ್ಠಿತ ಉದ್ಯಮದ ಷೇರುಗಳನ್ನು ಕೂಡ ಖಾಸಗಿಯವರಿಗೆ ಮಾರಾಟ ಮಾಡಲು ಹೊರಟಿರುವುದು ದುರ್ದೈವ.

ಸಾಮಾನ್ಯ ಜನರಿಗೆ ಆರೋಗ್ಯ ಕಾಪಾಡಿಕೊಳ್ಳಲು, ಉತ್ತಮ ಶಿಕ್ಷಣ ಪಡೆಯಲು ಇದ್ದ ಅವಕಾಶವನ್ನು ಸರ್ಕಾರ ಲಾಭಕೋರ ಖಾಸಗಿ ಸಂಸ್ಥೆಗಳಿಗೆ ವಹಿಸಿ ಪ್ರಜಾದ್ರೋಹ ಎಸಗಲಾಗಿದೆ.

ಅದರಂತೆಯೇ ಷಿಪ್ಪಿಂಗ್ ಇಂಡಸ್ಟ್ರಿ ಆಫ್ ಇಂಡಿಯಾ ಮತ್ತು ಕಂಟೈನರ್ ಕಾರ್ಪೊರೇಷನ್ ಆಫ್ ಇಂಡಿಯಾ ಕಂಪನಿಗಳ ಷೇರುಗಳನ್ನು ಮಾರಾಟ ಮಾಡಲು ತೀರ್ಮಾನಿಸಿರುವುದರ ಲಾಜಿಕ್ ಏನು ಎಂಬುದು ಒಂದು ಚಿದಂಬರ ರಹಸ್ಯವಾಗಿದೆ. ಒಟ್ಟಿನಲ್ಲಿ ಈ ಎಲ್ಲಾ ಸಾರ್ವಜನಿಕ ಸೇವಾಉದ್ಯಮಗಳ ಶೇ.51ರಷ್ಟು ಷೇರುಗಳನ್ನು ಹಿಂಪಡೆಯಲು ಸರ್ಕಾರ ನಿರ್ಧರಿಸಿದೆ. ಇದಕ್ಕಿರುವ ಏಕೈಕ ಕಾರಣ ಇಂದಿನ ಸರ್ಕಾರಕ್ಕೆ ಉಡಾಯಿಸಲು ಹಣ ಬೇಕು. ಅದೇ ದೃಷ್ಟಿಯಿಂದ ರಿಸರ್ವ್ ಬ್ಯಾಂಕಿನ ರಿಸರ್ವ್ ಫಂಡಿನಲ್ಲಿ ಒಂದು ಭಾಗ ಅಂದರೆ ಎಷ್ಟೋ ಕೋಟಿ ಹಣ ಸರ್ಕಾರಕ್ಕೆ ಕೊಡಿ ಎಂಬ ಒತ್ತಾಯ ಬಂದಿದೆ. ನವರತ್ನಗಳಲ್ಲಿ ಒಂದಾದ ಭಾರತ್ ಪೆಟ್ರೋಲಿಯಂ ಕಂಪನಿಯನ್ನು ಮಾರಲು ಹೊರಟಿವುದರ ರಹಸ್ಯವೇನು? ಇದರಿಂದ ನಾವು ಕಲಿಯಬಹುದಾದ ಪಾಠ ಯಾವುದು?

ಲಾಭದಾಯಕವೋ, ನಷ್ಟವೋ PSUಗಳನ್ನು ಮಾರಾಟ ಮಾಡುವುದು ನಮ್ಮ ಧ್ಯೇಯ ಎಂದು ಸರ್ಕಾರ ಭಾವಿಸಿರಬಹುದು.

ಖಾಸಗೀಕರಣಕ್ಕೆ ಹಾತೊರೆಯುತ್ತಿರುವ ಸರ್ಕಾರ ನಮ್ಮ ಸಾರ್ವಜನಿಕ ಉದ್ಯಮಗಳು ನಷ್ಟಕ್ಕೆ ಏಕೆ ಒಳಗಾದವು? ಅವುಗಳನ್ನು ಲಾಭದಾಯಕ ಮಾಡುವುದು ಹೇಗೆ ಎಂಬುದರ ಕುರಿತು ಗಂಭೀರವಾಗಿ ವಿಚಾರ ಮಾಡದೇ ಅವುಗಳನ್ನು ಮುಚ್ಚಿಸಿ, ಖಾಸಗಿಯವರಿಗೆ ದೋಚಲು ಅವಕಾಶ ಮಾಡಿಕೊಡಲು ಹೊರಟಿರುವುದು ದೇಶದ ದೌರ್ಭಾಗ್ಯವೇ ಸರಿ.

PSUಗಳನ್ನು ಮುಗಿಸುವುದಕ್ಕೆ ಕಾರಣಗಳೇನು ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ರಿಸರ್ವ್ ಬ್ಯಾಂಕಿನ ರಿಸರ್ವ್ ಫಂಡಿಗೆ ಏಕೆ ಲಗ್ಗೆ ಹಾಕಬೇಕು ಎಂಬುದನ್ನು ಜನತೆಗೆ ಸ್ಪಷ್ಟ ನುಡಿಗಳಲ್ಲಿ ಮನವರಿಕೆ ಮಾಡಿಕೊಡಬೇಕು. ಈ ಬಗೆಗೆ ಸರ್ಕಾರದ ಪಾಲಿಸಿ ಏನು ಎಂಬುದನ್ನು ನಿರ್ದಿಷ್ಟವಾಗಿ ತಿಳಿಸಬೇಕು. PSUಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ತಮ್ಮ ಭವಿಷ್ಯದ ಬಗೆಗೆ ಗಾಬರಿ ಉಂಟಾಗುತ್ತದೆ.

ಚುನಾಯಿತ ಸರ್ಕಾರ ಅಭಿವೃದ್ಧಿ ಮತ್ತು ಸಮಾನತೆಗೆ ಬದ್ಧನಾಗಿರಬೇಕು. ಅಭಿವೃದ್ಧಿಯ ಎಲ್ಲ ಆಯಾಮಗಳನ್ನು ಪಟ್ಟಭದ್ರ ಹಿತಾಸಕ್ತಿಗಳೇ ನಿರ್ಧರಿಸುವುದಾದರೆ ಜನಸಾಮಾನ್ಯರ ಪಾಡೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...