Homeಮುಖಪುಟಮೋದಿ 2.1: ಆರ್ಥಿಕ ಸಮಸ್ಯೆಗೆ ಪರಿಹಾರ ಕಾಣದ ಕೇಂದ್ರ ಸರ್ಕಾರಕ್ಕೆ ಕೊರೊನಾ ನೆಪ!

ಮೋದಿ 2.1: ಆರ್ಥಿಕ ಸಮಸ್ಯೆಗೆ ಪರಿಹಾರ ಕಾಣದ ಕೇಂದ್ರ ಸರ್ಕಾರಕ್ಕೆ ಕೊರೊನಾ ನೆಪ!

- Advertisement -
- Advertisement -

ಮೋದಿ 2.0 ಸರ್ಕಾರದ ಮೊದಲ ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ಎಂದಿನಂತೆ ಮಾಧ್ಯಮಗಳು ಅಸಲಿ ವಿಚಾರಗಳನ್ನು ದೂರವಿಟ್ಟು ವಿಶ್ಲೇಷಣೆ ಮಾಡುವ ಸಾಧ್ಯತೆಗಳೇ ಹೆಚ್ಚು. ಟ್ವಿಟ್ಟರ್‍ನಲ್ಲಿ ಹಲವಾರು ಟಿವಿ ಚಾನಲ್‍ಗಳು ಮೋದಿ ಆಡಳಿತದ ಬಗ್ಗೆ ಹಲವಾರು ಪೋಲ್‍ಗಳನ್ನು ಸೃಷ್ಟಿಸಿತ್ತು. ರಿಪಬ್ಲಿಕ್ ಟಿವಿಯು ಕೂಡಾ ಮೋದಿಯವರಿಗೆ ಅನುಕೂಲವಾಗುವಂತ ಪ್ರಶ್ನೆಯೊಂದನ್ನೇ ಕೇಳಿತ್ತು. “ಮೋದಿ ಸರ್ಕಾರದ ಒಂದು ವರ್ಷ, ಯಾರು ಹೆಚ್ಚು ಚೆನ್ನಾಗಿ ಕೆಲಸ ಮಾಡಿದ್ದು? ಮೋದಿ ಅಥವಾ ಪ್ರತಿಪಕ್ಷ” ಎಂಬ ಪ್ರಶ್ನೆಗೆ ಆಶ್ಚರ್ಯಕರ ರೀತಿಯಲ್ಲಿ ಶೇ.57 ಜನರು ವಿರೋಧ ಪಕ್ಷದವರೇ ಚೆನ್ನಾಗಿ ಕೆಲಸ ಮಾಡಿದ್ದಾರೆ ಎಂದು ಓಟ್ ಮಾಡಿದ್ದಾರೆ! ಇದೆಲ್ಲದರ ಆಚೆಗೂ ಹೆಚ್ಚಿನ ಮಾಧ್ಯಮಗಳು ಉದ್ಯೋಗ, ಆರ್ಥಿಕತೆ, ಬಡತನ, ಮಾನವ ಅಭಿವೃದ್ಧಿ ಸೂಚ್ಯಾಂಕ, ಪ್ರಜಾಪ್ರಭುತ್ವ, ಸ್ವಾತಂತ್ರ್ಯದ ಸೂಚ್ಯಂಕಗಳ ಕುರಿತು ಮಾತನಾಡುವ ಸಾಧ್ಯತೆ ಬಹಳ ಕಡಿಮೆ.

2014ರ ಸಾರ್ವತ್ರಿಕ ಚುನಾವಣೆಗೂ ಮುನ್ನ ಕಾಂಗ್ರೆಸ್ ಸೋಲಲು ಬಿಜೆಪಿ ಬಳಸಿಕೊಂಡ ಅಸ್ತ್ರಗಳಲ್ಲಿ ಜಿಡಿಪಿ ಕುಸಿತ, ಭ್ರಷ್ಟಾಚಾರ ಆರ್ಥಿಕತೆ, ಡಾಲರ್ ಮುಂದೆ ರೂಪಾಯಿ ಮೌಲ್ಯ ಕುಸಿತ, ನಿರುದ್ಯೋಗ ಇತ್ಯಾದಿಗಳಿದ್ದವು. ಈ ಮುಖ್ಯ ವಿಚಾರಗಳ ಮೇಲೆ ಚುನಾವಣೆ ಪ್ರಚಾರ ನಡೆದುದಷ್ಟೇ ಅಲ್ಲದೇ ಆಶ್ವಾಸನೆ ವಚನಗಳ ಮಾಹಾಪೂರವೇ ಹರಿದಿತ್ತು. ಯುವಜನರೂ ಸಹಾ ಬಲಿಷ್ಠ ದೇಶದ ಕನಸು ಕಂಡರು. ಬಿಜೆಪಿಯನ್ನು ಗೆಲ್ಲಿಸಿಕೊಂಡರು. 2019ರ ಚುನಾವಣೆ ಹೊತ್ತಿಗೆ ಈ ಯಾವ ವಿಷಯವೂ ಚುನಾವಣೆ ಪ್ರಚಾರದ ಆಶ್ವಾಸನೆಯೇ ವಿಷಯವಾಗಲಿಲ್ಲ. ಆದರೆ ದೇಶದ ಆರ್ಥಿಕತೆ ಪಾತಾಳಕ್ಕೆ ಇಳಿದಿರುವ ಮತ್ತು ನಿರುದ್ಯೋಗವು ಗಗನಕ್ಕೇರುತ್ತಿರುವ ಸಂದರ್ಭದಲ್ಲಿ ಅವುಗಳ ಕುರಿತು ಮಾತನಾಡದಿರಲು ಸಾಧ್ಯವಿಲ್ಲ.

ಕೇವಲ ನಾಲ್ಕು ಗಂಟೆಗಳ ಕಾಲಾವಕಾಶ ನೀಡಿ ಲಾಕ್‍ಡೌನ್ ಘೋಷಿಸಿದ್ದರ ಪರಿಣಾಮವಾಗಿ ವಲಸೆ ಕಾರ್ಮಿಕರು ಇಂದಿಗೂ ತಮ್ಮ ಮನೆಗಳನ್ನು ತಲುಪಲಾಗದೆ ಬೀದಿಪಾಲಾಗಿರುವುದನ್ನು ನಾವು ನೋಡುತ್ತಲಿದ್ದವೆ. ತಯಾರಿ ಇಲ್ಲದೆ ಘೋಷಿಸಿದ ಲಾಕ್‍ಡೌನ್ ನಂತರದ ದೇಶದ ಆರ್ಥಿಕತೆಯ ಬಗ್ಗೆ ಹಲವಾರು ಆರ್ಥಿಕ ತಜ್ಞರು, ಅಂಕಿಅಂಶ ಸಂಸ್ಥೆಗಳು ಆತಂಕಕಾರಿ ವರದಿಗಳನ್ನು ನೀಡುತ್ತಿದ್ದಾರೆ. ಈ ಸದ್ಯ ಭಾರತವು ಉದಾರೀಕರಣ ನಂತರದ ಕಾಲಘಟ್ಟದಲ್ಲಿ ಇದೇ ಮೊದಲ ಬಾರಿಗೆ ದೊಡ್ಡ ಆರ್ಥಿಕ ಹಿಂಜರಿತ ಎದುರಿಸುತ್ತಿದೆ. ಕಳೆದ 69 ವರ್ಷದಲ್ಲಿ ಭಾರತವು ಕೇವಲ ಮೂರು ಬಾರಿ ದೊಡ್ಡ ಆರ್ಥಿಕ ಹಿಂಜರಿತ ಕಂಡಿದ್ದು ಇದೀಗ ನಾಲ್ಕನೆಯ ಆರ್ಥಿಕ ಹಿಂಜರಿತ ಕಾಣುತ್ತಿದೆ. 1958, 1966 ಮತ್ತು 1980ರ ನಂತರ ಇದೀಗ ನಾಲ್ಕನೆಯದು. ಈ ಹಿಂದಿನ ಹಿಂಜರಿತಗಳಲ್ಲಿ ಮುಂಗಾರು ಕೈ ಕೊಟ್ಟು ಕೃಷಿಯ ಮೇಲೆ ಬಿದ್ದ ಹೊಡೆತದಿಂದಾಗಿ ಬಿಕ್ಕಟ್ಟು ಉಂಟಾಗಿತ್ತು.

ಆದರೆ ಈ ಸಾರಿಯದ್ದು ಭಿನ್ನ. ಮಂಗಳವಾರದ ಹೊತ್ತಿಗೆ ಪ್ರಸ್ತುತ ಹಣಕಾಸು ಅವಧಿಯಲ್ಲಿ ಜಿಡಿಪಿ ಶೇ.5ರಷ್ಟು ಕುಸಿದಿದೆ ಎಂದು ಸಿ.ಆರ್.ಎಸ್.ಐ.ಎಲ್ ತಿಳಿಸಿದ್ದು ಎಸ್.ಬಿ.ಐ ಪ್ರಕಾರ ಮುಂದಿನ ಹಣಕಾಸು ಅವಧಿಗೆ ಸರಾಸರಿ ಶೇ.4.2ರಷ್ಟು ಇಳಿಯಲಿದೆ ಎಂದು ಅಂದಾಜಿಸಲಾಗಿದೆ. ಇನ್ನೂ ಸಿ.ಆರ್.ಎಸ್.ಐ.ಎಲ್ ವರದಿಯ ಪ್ರಕಾರ ಜಿಡಿಪಿ ಬೆಳವಣಿಗೆ ಮತ್ತಷ್ಟು ಕುಸಿಯಲಿದ್ದು ಜಿಡಿಪಿಯ ಶೇ.10%ರಷ್ಟು ಶಾಶ್ವತವಾಗಿ ನಷ್ಟವಾಗಲಿದೆ ಎಂದು ವರದಿ ನೀಡಿದೆ. ಎಸ್.ಬಿ.ಐನ ಆರ್ಥಿಕ ತಜ್ಞರ ಪ್ರಕಾರ ಲಾಕ್‍ಡೌನ್‍ನ ಮೊದಲ 7 ದಿನದಲ್ಲೇ ಕನಿಷ್ಠ 1.4 ಲಕ್ಷ ಕೋಟಿ ನಷ್ಟವಾಗಿದೆ. ಸುಮಾರು 50%ರಷ್ಟು ನಷ್ಟ ಕೆಂಪು ವಲಯದಿಂದ ಉಂಟಾಗಿದ್ದರೆ ಉಳಿದಂತೆ ಶೇ.90 ನಷ್ಟ ಉಂಟಾಗಿದೆ ಎಂದು ಅಂದಾಜಿಸಿದೆ.

ಹಾಗಾದರೆ ಲಾಕ್‍ಡೌನ್ ಮುಂಚೆ ಆರ್ಥಿಕತೆ ಚೆನ್ನಾಗಿತ್ತೆ? ಫೆಬ್ರವರಿ 1ರಂದು 2020-21ನೇ ಸಾಲಿನ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಿದ ಬೆನ್ನಲ್ಲೇ ಜಿಡಿಪಿ ಶೇ.5 (9 ಹಣಕಾಸು ವರ್ಷದಲ್ಲಿಯೇ ಅತ್ಯಂತ ಕಡಿಮೆ)ಗೆ ಕುಸಿದಿತ್ತು. ಇದು 1976 ನಂತರ ಭಾರತ ಕಂಡ ಐತಿಹಾಸಿಕ ಕುಸಿತವಾಗಿತ್ತು. ಅಲ್ಲದೆ 2019ರ ಅಂತ್ಯದಿಂದಲೇ ಉತ್ಪಾದನಾ, ಆಟೋಮೊಬೈಲ್ ಕ್ಷೇತ್ರದಲ್ಲಿಯೂ ಕುಸಿತ ಕಂಡಿದ್ದು ಟಿವಿಎಸ್, ಪಾರ್ಲೆಗಳಲ್ಲದೇ ಹಲವು ದೊಡ್ಡ ದೊಡ್ಡ ಉದ್ದಿಮೆಗಳು ನಷ್ಟ ಅನುಭವಿಸುತ್ತಿರುವ ವರದಿಗಳು ಹೊರಬಂದಿದ್ದವು. ಆರ್ಥಿಕ ಬಿಕ್ಕಟ್ಟಿನ ಸುಳಿವುಗಳು 2019ರಲ್ಲಿಯೇ ಸಿಕ್ಕು ಆರ್ಥಿಕ ತಜ್ಞರು ಎಚ್ಚರಿಸುತ್ತಲೇ ಬಂದಿದ್ದರು. ಇದಕ್ಕೆ ಪೂರಕವಾದ ತಯಾರಿ ಇಲ್ಲದ ಕಾರಣ ಲಾಕ್‍ಡೌನ್ ನಂತರದಲ್ಲಿ ಆರ್ಥಿಕತೆ ಮತ್ತಷ್ಟು ಹದಗೆಟ್ಟಿತು.

ಇನ್ನು ನಿರುದ್ಯೋಗದ ವಿಚಾರ. 2014ರ ಚುನಾವಣೆಯಲ್ಲಿ ಪ್ರಮುಖ ಆಶ್ವಾಸನೆಗಳಲ್ಲಿ ಒಂದಾಗಿದ್ದು ವರ್ಷಕ್ಕೆ 2 ಕೋಟಿ ಉದ್ಯೋಗದ ಭರವಸೆ. ಮೊದಲೇ ತಿಳಿಸಿದ ಹಾಗೆ 2109ರ ಚುನಾವಣೆಯಲ್ಲಿ ಈ ಮಾತು ಕಾಣೆಯಾಗಿತ್ತು. 2016ರಲ್ಲಿ ನೋಟು ಅಮಾನ್ಯೀಕರಣ ನಂತರದಲ್ಲಿ ಸಣ್ಣ ಅತಿ ಸಣ್ಣ ಕೈಗಾರಿಕೆಗಳು ಮತ್ತು ಉದ್ದಿಮೆಗಳು ದೊಡ್ಡ ಪೆಟ್ಟನ್ನು ತಿಂದ ನಂತರದಿಂದಲೇ ಮೊದಲೇ ಇದ್ದ ನಿರುದ್ಯೋಗದ ಪ್ರಮಾಣ ಹೆಚ್ಚುತ್ತಾ ಹೋಯಿತು. ಇದೀಗ ಲಾಕ್‍ಡೌನ್ ನಂತರದಲ್ಲಿ ಏನಾಗಿದೆ ಎಂದು ನೋಡೋಣ.

ಸಿ.ಎಮ್.ಐ.ಇ. (ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ) ವರದಿಯ ಪ್ರಕಾರ ಲಾಕ್‍ಡೌನ್ ನಂತರದಲ್ಲಿ ದೇಶದಲ್ಲಿ ನಿರುದ್ಯೋಗವು ಸರಾಸರಿ ಶೇ.28ರಿಂದ ಶೇ.29ಕ್ಕೆ ಏರಿಕೆ ಕಂಡಿದೆ. ಕಾರ್ಮಿಕರ ಭಾಗವಹಿಸುವಿಕೆ ಶೇ.38.7ಕ್ಕೆ ಕುಸಿದಿದೆ ಎಂದು ಹೇಳಿದೆ. ಇನ್ನೂ ಸುಮಾರು 7.7 ಕೋಟಿ ಯುವಜನರು ಉದ್ಯೋಗ ಇಲ್ಲದಿದ್ದರೂ ಉದ್ಯೋಗವನ್ನು ಹುಡುಕುತ್ತಿಲ್ಲ. ಇವರನ್ನು ನಿರುದ್ಯೋಗ ಪಟ್ಟಿಗೆ ಸೇರಿಸಿಲ್ಲ. ಇವರನ್ನೂ ಸೇರಿಸಿದರೆ ನಿರುದ್ಯೋಗದ ಪ್ರಮಾಣ ಇನ್ನಷ್ಟು ಹೆಚ್ಚಲಿದೆ ಎಂದೂ ತಿಳಿಸಿದೆ. ಸಾಮಾನ್ಯ ದಿನಗಳಲ್ಲಿ 1,17,000 ಜನರು ಉದ್ಯೋಗವನ್ನು ಅರಸುತ್ತಾ ಸಂದರ್ಶನ ನೀಡಲು ಬರುತ್ತಿದ್ದರು. ಆದರೆ ಅದು ಈಗ 11 ರಿಂದ 12 ಸಾವಿರ ಜನರಿಗೆ ಇಳಿದಿದೆ, ಅವರು ದೂರವಾಣಿ ಮುಖಾಂತರ ಸಂದರ್ಶನ ನೀಡುತ್ತಿದ್ದಾರೆ ಎಂದು ಹೇಳಿದೆ. ಬರುವ ದಿನಗಳಲ್ಲಿ 2 ಕೋಟಿ ಉದ್ಯೋಗವನ್ನು ಹೇಗೋ ಸೃಷ್ಟಿ ಮಾಡಬಹುದು. ಆದರೆ ಸವಾಲು ಇರುವುದು ಇದರ ಐದು ಪಟ್ಟು ಹೆಚ್ಚು ಅಗತ್ಯವಿರುವ 10.2 ಕೋಟಿ ಉದ್ಯೋಗಗಳನ್ನು ಹೇಗೆ ಸೃಷ್ಟಿ ಮಾಡುವುದು? ಎಂದು ಸಿಎಮ್‍ಐಇ ಆತಂಕ ವ್ಯಕ್ತಪಡಿಸಿದೆ.

ಈ ಪ್ರಮಾಣದ ನಿರುದ್ಯೋಗವೂ ಕೂಡ ಕೇವಲ ಲಾಕ್‍ಡೌನ್‍ನಿಂದಾಗಿ ಸೃಷ್ಟಿಯಾಗಿದ್ದಲ್ಲ. 2019ರಲ್ಲಿಯೇ ಎನ್‍ಎಸ್‍ಎಸ್‍ಓ ನಿರುದ್ಯೋಗದ ವರದಿಯನ್ನು ಬಿಡುಗಡೆ ಮಾಡಲು ಸಿದ್ಧವಾಗಿತ್ತು. ಆದರೆ ಚುನಾವಣೆ ಹತ್ತಿರವಿದ್ದ ಕಾರಣ ಕೇಂದ್ರ ಸರ್ಕಾರವು ಆ ವರದಿಯನ್ನು ಬಹಿರಂಗವಾಗದಂತೆ ನೋಡಿಕೊಂಡಿತು! ಚುನಾವಣೆ ಫಲಿತಾಂಶದ ನಂತರ ಎನ್‍ಎಸ್‍ಎಸ್‍ಓ ವರದಿಯನ್ನು ಬಿಡುಗಡೆಗೊಳಿಸಿತು. ಅದರ ವರದಿಯ ಪ್ರಕಾರ ಶೇ.6.1ರಷ್ಟು ನಿರುದ್ಯೋಗ ಏರಿಕೆಯಾಗಿತ್ತು. ಇದು ಕಳೆದ 45ವರ್ಷದಲ್ಲಿಯೇ ಐತಿಹಾಸಿಕ ಏರಿಕೆ ಎಂದು ವರದಿಯಾಗಿತ್ತು. ನಿರುದ್ಯೋಗದ ಏರಿಕೆ ಅಲ್ಲಿಗೆ ನಿಲ್ಲದೆ ಮಾರ್ಚ್ 2020ರ ಹೊತ್ತಿಗೆ ಅದು ಶೇ.8ಕ್ಕೆ ಏರುತ್ತಾ ಸಾಗಿತ್ತು.

ಒಟ್ಟಾರೆಯಲ್ಲಿ ಆರ್ಥಿಕ ಹಿಂಜರಿತ ಮತ್ತು ನಿರುದ್ಯೋಗ ಏರಿಕೆ ಲಾಕ್‍ಡೌನ್ ಮುಂಚೆಯಿಂದಲೂ ಶುರುವಾದ ಪ್ರಕ್ರಿಯೆ ಆಗಿದೆ ಎನ್ನುವುದು ನಾವು ಅರ್ಥ ಮಾಡಿಕೊಳ್ಳಬೇಕಿರುವ ಸಂಗತಿ.

ಈ ಎಲ್ಲಾ ಆತಂಕಕಾರಿ ಅಂಕಿಅಂಶದ ಹೊರತಾಗಿ ಅತ್ಯಂತ ಭಯಾನಕ ವಿಚಾರವೆಂದರೆ ಇದರ ಕುರಿತು ಸರ್ಕಾರದ ಪ್ರತಿಕ್ರಿಯೆ ಮತ್ತು ಅದಕ್ಕಾಗಿನ ತಯಾರಿಗಳು. ಆರ್ಥಿಕ ಹಿಂಜರಿತ ಮತ್ತು ನಿರುದ್ಯೋಗ ಏರಿಕೆಯ ಕುರಿತು ಮೋದಿ ಸರ್ಕಾರ ಇದನ್ನು ಸಮರ್ಥವಾಗಿ ನಿಭಾಯಿಸುವುದು ಹಾಗಿರಲಿ ಆರ್ಥಿಕ ಬಿಕ್ಕಟ್ಟು ಮತ್ತು ನಿರುದ್ಯೋಗ ಇರುವದನ್ನೇ ಒಪ್ಪಿಕೊಳ್ಳಲು ತಯಾರಿಲ್ಲ! 2014ರ ನಂತರದಲ್ಲಿ ಉದ್ಯೋಗ ಸೃಷ್ಟಿ ಮಾಡುವುದರಲ್ಲಿ ವಿಫಲವಾದ ಸ್ಕಿಲ್ ಇಂಡಿಯಾದಂತಹ ಹೆಸರಿಗಾದರೂ ಕೆಲವು ಯೋಜನೆಗಳನ್ನು ಜನಪ್ರಿಯ ಮಾಡಲು ಪ್ರಯತ್ನಿಸಿತ್ತು. ಆದರೆ 2019ರ ನಂತರದಲ್ಲಿ ಯಾವುದೇ ಪ್ರಯತ್ನಕ್ಕೆ ಗಮನ ನೀಡಿಲ್ಲ. ಲಾಕ್‍ಡೌನ್ ನಂತರದಲ್ಲಿಯೂ ಘೋಷಣೆ ಮಾಡಿದ 20 ಲಕ್ಷಕೋಟಿ ಪ್ಯಾಕೇಜ್‍ನಲ್ಲಿಯೂ ಸಣ್ಣ, ಮಧ್ಯಮ ಕೈಗಾರಿಕೆಗಳ ನಿಜವಾದ ಬೇಡಿಕೆಗಳ ಕುರಿತು ಯಾವುದೇ ಪ್ಯಾಕೇಜ್ ಇಲ್ಲ. ಕೃಷಿಗೆ ಸಂಬಂಧಿಸಿದಂತೆ ಹೊಸ ಯೋಜನೆಯೂ ಇಲ್ಲ. ಉದ್ಯೋಗ ಸೃಷ್ಟಿಯ ಬಗ್ಗೆಯೂ ನಿರ್ದಿಷ್ಟ ಮಾತುಗಳು ಕಂಡುಬಂದಿಲ್ಲ. ಪತ್ರಿಕಾಗೋಷ್ಠಿಯಲ್ಲಿ ಪ್ರವಾಸೋದ್ಯಮ, ಹೋಟೆಲ್‍ನಂತಹ ಸಣ್ಣ ಕೈಗಾರಿಕೆಗಳ ಕುರಿತು ಕೇಳಿದ ಬಹುಮುಖ್ಯ ಪ್ರಶ್ನೆಗೆ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ‘ಠೀಕ್ ಹೈ’ ಎಂಬ ಉತ್ತರವನ್ನು ಕೊಟ್ಟು ಎದ್ದುಹೋದರು!

ಇದು ಪ್ರವಾಸೋದ್ಯಮ, ಹೋಟೆಲ್ ಉದ್ದಿಮೆಗಳ ವಿಚಾರವಷ್ಟೇ ಅಲ್ಲ. ಈ ಸರ್ಕಾರಕ್ಕೆ ಆರ್ಥಿಕತೆಯನ್ನು ಎದ್ದು ನಿಲ್ಲಿಸುವಂತಹ ಯಾವುದೇ ಕ್ರಮ ಗೊತ್ತಿದ್ದಂತೆ ಕಾಣಿಸುತ್ತಿಲ್ಲ. ಕಳೆದ ಮೂರ್ನಾಲ್ಕು ವರ್ಷಗಳಿಂದಲೂ ಆರ್ಥಿಕ ಸಮಸ್ಯೆ ಇರುವುದನ್ನು ಒಪ್ಪಿರಲಿಲ್ಲ. ತೀರಾ ಇತ್ತೀಚೆಗೆ ಲಾಕ್‍ಡೌನ್‍ನಿಂದ ಆರ್ಥಿಕತೆಗೇನೂ ಸಮಸ್ಯೆಯಿಲ್ಲ ಎಂದು ಆರ್ಥಿಕ ಖಾತೆ ರಾಜ್ಯ ಸಚಿವರೊಬ್ಬರು ಹೇಳಿದ್ದರು. ಒಂದು ವೇಳೆ ಒಪ್ಪಿಕೊಂಡರೂ, ಬೇಡಿಕೆ ಹೆಚ್ಚಿಸುವುದಕ್ಕಿಂತ ಹೆಚ್ಚೆಚ್ಚು ಸರಬರಾಜು ಹೆಚ್ಚುವ ಕಡೆಗೆ ಈ ಸರ್ಕಾರದ ಒತ್ತು ನಿರಂತರವಾಗಿರುತ್ತದೆ. ಇದು ಕೊರೊನಾ ಲಾಕ್‍ಡೌನ್‍ನ ಕಾಲದಲ್ಲೂ ಮುಂದುವರೆಯಿತು. ಹೀಗಾಗಿಯೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿ ಎಂದು ನಿರೀಕ್ಷಿಸುವುದೇ ದುಬಾರಿಯಾಗಬಹುದು. ಹೆಚ್ಚೆಂದರೆ ಎಲ್ಲಕ್ಕೂ ಕೊರೊನಾವೇ ಕಾರಣ ಎಂಬ ಸಬೂಬನ್ನು ಅತ್ಯಂತ ಸಮರ್ಥವಾಗಿ ನೀಡುವ ದಾರಿಯನ್ನು ಹುಡುಕಿಕೊಳ್ಳಬಹುದು ಅಷ್ಟೇ. ಈ ಹಿನ್ನೆಲೆಯಲ್ಲಿ ಆರ್ಥಿಕ ತಜ್ಞರ ಅನಿಸಿಕೆಗಳನ್ನು ಅನುಸರಿಸಿ ದೇಶದ ಎಲ್ಲಾ ಜನರೂ ಅರ್ಥಸಾಕ್ಷರರಾಗುವ ಅಗತ್ಯವಿದೆ. ಆ ಮೂಲಕ ಸೂಕ್ತವಾದ ಪರಿಹಾರ ಕ್ರಮಗಳು ಜನಾಂದೋಲನದಿಂದಲೇ ಹೊರಹೊಮ್ಮುವಂತಾದರೆ ಏನಾದರೂ ಬದಲಾವಣೆ ಬರುವ ಸಾಧ್ಯತೆ ತೆರೆದುಕೊಳ್ಳುತ್ತದೆ.


ಇದನ್ನು ಓದಿ: ಜನತೆ ಮೋದಿಯವರ ಸ್ವದೇಶಿ ಘೋಷಣೆಗೆ ಮರುಳಾಗಬಾರದು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...