Homeಮುಖಪುಟ'ಮೋದಿ ಸರ್ವಾಧಿಕಾರಿ, ಅವರ ಮರಳುವಿಕೆ ದೇಶಕ್ಕೆ ವಿನಾಶಕಾರಿ': ಪರಕಾಲ ಪ್ರಭಾಕರ್

‘ಮೋದಿ ಸರ್ವಾಧಿಕಾರಿ, ಅವರ ಮರಳುವಿಕೆ ದೇಶಕ್ಕೆ ವಿನಾಶಕಾರಿ’: ಪರಕಾಲ ಪ್ರಭಾಕರ್

- Advertisement -
- Advertisement -

ಪ್ರಧಾನಿಯಾಗಿ ನರೇಂದ್ರ ಮೋದಿಯವರ 10 ವರ್ಷಗಳ ಅಧಿಕಾರಾವಧಿಯನ್ನು ಕಟುವಾಗಿ ಟೀಕಿಸಿರುವ ಲೇಖಕ, ಆರ್ಥಿಕ ತಜ್ಞ ಹಾಗೂ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ ಪರಕಾಲ ಪ್ರಭಾಕರ್ ಅವರು, “ಮೋದಿ ಸರ್ವಾಧಿಕಾರಿಯಾಗಿದ್ದಾರೆ ಮತ್ತು ನಮ್ಮ ಪ್ರಜಾಪ್ರಭುತ್ವ ಬಿಕ್ಕಟ್ಟಿನಲ್ಲಿದೆ. ನಮ್ಮ ಸಾಮಾಜಿಕ ಸ್ವರೂಪಕ್ಕೆ ಧಕ್ಕೆಯುಂಟಾಗಿದೆ. ನಮ್ಮ ಆರ್ಥಿಕತೆಯು ಅಪಾಯದಲ್ಲಿದೆ ಮತ್ತು ನಮ್ಮನ್ನು ಕತ್ತಲಯುಗಕ್ಕೆ ಮರಳಿ ತಳ್ಳಲಾಗುತ್ತಿದೆ” ಎಂದು ಹೇಳಿದ್ದಾರೆ.

ಸುದ್ದಿ ವೆಬ್‌ಸೈಟ್‌ thewire.in ಗಾಗಿ ಕರಣ್ ಥಾಪರ್ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಪ್ರಭಾಕರ್, ಪ್ರಸ್ತುತ ಸರ್ಕಾರ ಮತ್ತೆ ಅಧಿಕಾರಕ್ಕೆ ಮರಳಿದರೆ, ಅದು ಭಾರತದ ಪಾಲಿಗೆ ವಿನಾಶಕಾರಿಯಾಗಲಿದೆ ಎಂದಿದ್ದಾರೆ.

ಆದಾಗ್ಯೂ, ಇದು ಸಂಭವಿಸುವ ಸಾಧ್ಯತೆಯಿಲ್ಲ ಎಂದಿರುವ ಪ್ರಭಾಕರ್, ಮುಂಬರುವ ಚುನಾವಣೆಯಲ್ಲಿ ಬಿಜೆಪಿ 220-230ಕ್ಕಿಂತ ಹೆಚ್ಚು ಸ್ಥಾನಗಳನ್ನು ಪಡೆಯಲು ಹೆಣಗಾಡಲಿದೆ ಎಂದು ಹೇಳಿದ್ದಾರೆ.

“ಬಿಜೆಪಿ ಉತ್ತರ ಭಾರತದಲ್ಲಿ 50-60 ಸ್ಥಾನಗಳನ್ನು ಕಳೆದುಕೊಳ್ಳಬಹುದು. ದಕ್ಷಿಣದಲ್ಲಿ 10-12 ಸ್ಥಾನಗಳನ್ನು ಕಳೆದುಕೊಳ್ಳಬಹುದು ಎಂದಿದ್ದಾರೆ.

“ಮೋದಿಯವರ ಗಳಿಕೆ 230ಕ್ಕೆ ಸೀಮಿತಗೊಳಿಸಿದರೆ ಬಹುಮತವನ್ನು ಕ್ರೋಡೀಕರಿಸುವ ಚಾಕಚಕ್ಯತೆಯು ಅವರ ಬಳಿ ಇಲ್ಲ ಅಥವಾ ಅದಕ್ಕೆ ನೆರವಾಗಬಹುದಾದ ಜನರೂ ಅವರ ಬಳಿಯಿಲ್ಲ. ಆದ್ದರಿಂದ ಅವರು ಪ್ರತಿಪಕ್ಷದಲ್ಲಿ ಕುಳಿತುಕೊಳ್ಳುವುದು ಅನಿವಾರ್ಯವಾಗಲಿದೆ” ಎಂದೂ ಪ್ರಭಾಕರ್ ಹೇಳಿದ್ದಾರೆ.

“ಆದರೆ, ಒಂದು ವೇಳೆ ಮೋದಿ ಮೂರನೇ ಅವಧಿಗೂ ಗೆದ್ದರೆ ಮಣಿಪುರದಲ್ಲಿ ಇಂದು ಸಂಭವಿಸುತ್ತಿರುವುದು ದೇಶದ ಪ್ರತಿಯೊಂದೂ ರಾಜ್ಯದಲ್ಲಿ ಸಂಭವಿಸುವ ಸಾಧ್ಯತೆಯಿದೆ ಮತ್ತು ಪ್ರತಿಪಕ್ಷಗಳು ಅವರ ತಾಳಕ್ಕೆ ತಕ್ಕಂತೆ ಕುಣಿಯದಿದ್ದರೆ ಸಮಗ್ರ ಪ್ರತಿಪಕ್ಷ ನಾಯಕತ್ವವು ಜೈಲು ಸೇರಬೇಕಾಗುತ್ತದೆ” ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ನಿರುದ್ಯೋಗ, ಹಣದುಬ್ಬರದ ಬಗ್ಗೆ ಉಲ್ಲೇಖವಿಲ್ಲ: ಬಿಜೆಪಿ ಪ್ರಣಾಳಿಕೆ ಬಗ್ಗೆ ವಿಪಕ್ಷಗಳ ನಾಯಕರು ಏನೇನು ಹೇಳಿದ್ರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...