Homeಮುಖಪುಟಕಲ್ಲಿದ್ದಲು ಹಗರಣ: ಅದಾನಿ ವಿರುದ್ಧ ED, CBI ಕ್ರಮ ಯಾಕಿಲ್ಲ? ಮೋದಿ ವಿರುದ್ಧ ಪ್ರತಿಪಕ್ಷಗಳು ವಾಗ್ಧಾಳಿ

ಕಲ್ಲಿದ್ದಲು ಹಗರಣ: ಅದಾನಿ ವಿರುದ್ಧ ED, CBI ಕ್ರಮ ಯಾಕಿಲ್ಲ? ಮೋದಿ ವಿರುದ್ಧ ಪ್ರತಿಪಕ್ಷಗಳು ವಾಗ್ಧಾಳಿ

- Advertisement -
- Advertisement -

‘ಕಡಿಮೆ ಗುಣಮಟ್ಟದ ಕಲ್ಲಿದ್ದಲನ್ನು ಹೆಚ್ಚಿನ ಮೌಲ್ಯದ ಇಂಧನವಾಗಿ ಮಾರಾಟ ಮಾಡುವ ಮೂಲಕ ಅದಾನಿ ಕಂಪೆನಿ ವಂಚನೆ ಮಾಡಿದೆ’ ಎಂದು ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಯೋಜನೆ (OCCRP) ಮತ್ತು ಫೈನಾನ್ಷಿಯಲ್ ಟೈಮ್ಸ್‌ನ ತನಿಖಾ ವರದಿ ಬಹಿರಂಗಪಡಿಸಿತ್ತು. ಇದರ ಬೆನ್ನಲ್ಲಿ ಅದಾನಿ ಗ್ರೂಪ್‌ನ ವಂಚನೆಗೆ ಸಂಬಂಧಿಸಿ ‘ಸಿಬಿಐ’, ‘ಇಡಿ’ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರತಿಪಕ್ಷಗಳು ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.

ಗೌತಮ್ ಅದಾನಿ ಅವರ ಕಂಪನಿಯು ‘ಕಡಿಮೆ ಗುಣಮಟ್ಟದ ಕಲ್ಲಿದ್ದಲನ್ನು ಹೆಚ್ಚಿನ ಮೌಲ್ಯದ ಇಂಧನವಾಗಿ ಮಾರಾಟ ಮಾಡುವ ಮೂಲಕ ವಂಚನೆ ಮಾಡಿದೆ’ ಎಂದು ವರದಿಯು ಬಹಿರಂಗಪಡಿಸಿದ್ದು, ಬೆಲೆ ಏರಿಕೆಯ ಎಲ್ಲಾ ಆರೋಪಗಳನ್ನು ಅದಾನಿ ತಿರಸ್ಕರಿಸಿದ್ದಾರೆ.

ದಾಖಲೆಗಳ ಪ್ರಕಾರ, ಜನವರಿ 2014ರಲ್ಲಿ ಅದಾನಿ ಕಂಪನಿ ಇಂಡೋನೇಷ್ಯಾದಿಂದ ಕಲ್ಲಿದ್ದಲು ಖರೀದಿಸಿತ್ತು. ಅದು ಗುಣಮಟ್ಟದಲ್ಲಿ ಪ್ರತಿ ಕಿಲೋಗ್ರಾಮ್‌ಗೆ 3,500 ಕ್ಯಾಲೊರಿಗಳನ್ನು ಹೊಂದಿತ್ತು. ಆದರೆ, ಆ ಕಲ್ಲಿದ್ದಲ್ಲನ್ನು ತಮಿಳುನಾಡು ಜನರೇಷನ್ ಅಂಡ್ ಡಿಸ್ಟ್ರಿಬ್ಯೂಷನ್ ಕಂಪನಿಗೆ (ತಂಗೆಡ್ಕೋ) ಅತ್ಯಮೂಲ್ಯ ದರ್ಜೆಯ 6,000 ಕ್ಯಾಲೋರಿಯ ಕಲ್ಲಿದ್ದಲು ಎಂದು ಮಾರಾಟ ಮಾಡಲಾಗಿದೆ. ಈ ಮೂಲಕ ಸಾರಿಗೆ ವೆಚ್ಚ ಹೊರತುಪಡಿಸಿ ಅದಾನಿ ಎರಡು ಪಟ್ಟು ಲಾಭ ಪಡೆದಿದೆ.

ಹಿಂಡೆನ್‌ಬರ್ಗ್ ರಿಸರ್ಚ್ ಅದಾನಿ ಗ್ರೂಪ್‌ನ ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಮಾರುಕಟ್ಟೆ ವಂಚನೆ ಬಗ್ಗೆ ಆರೋಪಿಸಿತ್ತು. ಈ ಬಗ್ಗೆ ವಿರೋಧ ಪಕ್ಷಗಳು ಹಲವು ಪ್ರಶ್ನೆಗಳನ್ನು ಎತ್ತಿದ್ದವು. OCCRP ಮತ್ತು ಫೈನಾನ್ಷಿಯಲ್ ಟೈಮ್ಸ್‌ ತನಿಖಾ ವರದಿ ಪ್ರಕಟಿಸಿದ ನಂತರ, 2024ರ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ವಿರೋಧ ಪಕ್ಷಗಳು ಹಗರಣದ ಪುರಾವೆಗಳು ಲಭ್ಯವಿದ್ದರೂ ಅದಾನಿ ಸಾಮ್ರಾಜ್ಯದ ವಿರುದ್ಧ ಏಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಪಾದಿತ ಹಗರಣದ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಮೋದಿ ಇತ್ತೀಚೆಗೆ ಚುನಾವಣಾ ರ್ಯಾಲಿಯಲ್ಲಿ ಹೇಳಿದ್ದ ‘ಅದಾನಿ ಮತ್ತು ಅಂಬಾನಿ ಕಾಂಗ್ರೆಸ್‌ಗೆ ಟೆಂಪೋಗಳಲ್ಲಿ ಹಣ ಲಂಚ’ ನೀಡುತ್ತಿದ್ದಾರೆ ಎಂಬ ಹೇಳಿಕೆಯನ್ನು ಉಲ್ಲೇಖಿಸಿ, ವರ್ಷಗಳಿಂದ ಈ ಹಗರಣದ ಮೂಲಕ ಮೋದಿಜಿಯವರ ನೆಚ್ಚಿನ ಗೆಳೆಯ ಅದಾನಿ ಕಡಿಮೆ ದರ್ಜೆಯ ಕಲ್ಲಿದ್ದಲನ್ನು ಮೂರು ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡಿ ಸಾವಿರಾರು ಕೋಟಿ ರೂಪಾಯಿ ಲೂಟಿ ಮಾಡಿದ್ದಾರೆ. ಅದರ ಬೆಲೆಯನ್ನು ಸಾಮಾನ್ಯ ಜನರು ವಿದ್ಯುತ್ ಬಿಲ್ಲುಗಳ ಮೂಲಕ ತಮ್ಮ ಜೇಬಿನಿಂದ ಪಾವತಿಸಿದ್ದಾರೆ. ಈ ಬಹಿರಂಗ ಭ್ರಷ್ಟಾಚಾರದ ಬಗ್ಗೆ ಇಡಿ, ಸಿಬಿಐ ಮತ್ತು ಐಟಿಯನ್ನು ಮೌನವಾಗಿರಿಸಲು ಎಷ್ಟು ಟೆಂಪೋಗಳನ್ನು ಬಳಸಲಾಗಿದೆ ಎಂದು ಪ್ರಧಾನಿ ಹೇಳುವರೇ? ಎಂದು ರಾಹುಲ್‌ ಗಾಂಧಿ ಪ್ರಶ್ನಿಸಿದ್ದಾರೆ.

ಇಂಡಿಯಾ ಮೈತ್ರಿಕೂಟದ ಸರಕಾರ ಅಧಿಕಾರಕ್ಕೆ ಬಂದರೆ ಈ ಹಗರಣದ ಬಗ್ಗೆ ವಿವರವಾಗಿ ತನಿಖೆ ನಡೆಸಲಿದೆ ಎಂದು ರಾಹುಲ್‌ ಗಾಂಧಿ ಭರವಸೆಯನ್ನು ನೀಡಿದ್ದಾರೆ. ಈ ವಿಷಯದ ಕುರಿತು ‘ಮೋದಿ-ಅದಾನಿ ಕಾ ಕೋಲ್ ಮಾಲ್’ ಎಂಬ ಶೀರ್ಷಿಕೆಯ ವ್ಯಂಗ್ಯ ಚಿತ್ರದ ಪೋಸ್ಟರ್‌ನ್ನು ಕಾಂಗ್ರೆಸ್ ಹಂಚಿಕೊಂಡಿದೆ.

ಸಂಸತ್ತಿನಲ್ಲಿ ಅದಾನಿ ಗ್ರೂಪ್‌ಗೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳನ್ನು ಎತ್ತಿದ್ದ ಮತ್ತು ಬಳಿಕ ವಿವಾದಾತ್ಮಕವಾಗಿ ಹೊರಹಾಕಲ್ಪಟ್ಟ ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಕೂಡ ಈ ವಿಷಯದಲ್ಲಿ ತನಿಖಾ ಸಂಸ್ಥೆಗಳ ಆಸಕ್ತಿಯ ಕೊರತೆಯನ್ನು ಪ್ರಸ್ತಾಪಿಸಿ ಪೋಸ್ಟ್‌ ಮಾಡಿದ್ದಾರೆ. ನನ್ನ ಸೀರೆಗಳನ್ನು ಎಣಿಸಿದ್ದ ಮತ್ತು ನನ್ನ ಸ್ನೇಹಿತರಿಗೆ ಕರೆ ಮಾಡಿದ್ದ ಸಿಬಿಐ ಮತ್ತು ಇಡಿಗೆ ಈ ಕುರಿತು ತನಿಖೆ ಮಾಡಲು ಹೇಳಿ ಎಂದು ಮಹುವಾ ಮೊಯಿತ್ರಾ ಪ್ರಧಾನಿಗೆ ತನ್ನ ಮೇಲೆ ಈ ಹಿಂದೆ ನಡೆದಿರುವ ದಾಳಿಯನ್ನು ಉಲ್ಲೇಖಿಸಿ ಹೇಳಿದ್ದಾರೆ.

ಟಿಎಂಸಿ ರಾಜ್ಯಸಭಾ ಸಂಸದ ಜವಾಹರ್ ಸಿರ್ಕಾರ್ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಈ ಕುರಿತು ಪತ್ರ ಬರೆದಿದ್ದು, ಸರ್ಕಾರಿ ಆರ್ಥಿಕ ಅಪರಾಧದ ತನಿಖಾಧಿಕಾರಿಗಳು ಈ ಸಾಕ್ಷ್ಯವನ್ನು ಏಕೆ ನಿರ್ಲಕ್ಷಿಸುತ್ತಿದ್ದಾರೆ ಎಂದು ಕೇಳಿದ್ದಾರೆ.

ಶಿವಸೇನೆಯ(ಯುಬಿಟಿ) ಪ್ರಿಯಾಂಕಾ ಚತುರ್ವೇದಿ ಅವರು ಕಲ್ಲಿದ್ದಲು ವೆಚ್ಚದ “ಪವಾಡ” ಒಂದಲ್ಲ 24 ಬಾರಿ ಸಂಭವಿಸಿದೆ, ಪ್ರಧಾನಿ ಒಬ್ಬ ಜಾದೂಗಾರ ಎಂದು ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

 

ಇದನ್ನು ಓದಿ: ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವಂತೆ ಪ್ರಧಾನಿಗೆ ಸಿದ್ದರಾಮಯ್ಯ ಪತ್ರ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...