Homeಮುಖಪುಟಕಲ್ಲಿದ್ದಲು ಹಗರಣ: ಅದಾನಿ ವಿರುದ್ಧ ED, CBI ಕ್ರಮ ಯಾಕಿಲ್ಲ? ಮೋದಿ ವಿರುದ್ಧ ಪ್ರತಿಪಕ್ಷಗಳು ವಾಗ್ಧಾಳಿ

ಕಲ್ಲಿದ್ದಲು ಹಗರಣ: ಅದಾನಿ ವಿರುದ್ಧ ED, CBI ಕ್ರಮ ಯಾಕಿಲ್ಲ? ಮೋದಿ ವಿರುದ್ಧ ಪ್ರತಿಪಕ್ಷಗಳು ವಾಗ್ಧಾಳಿ

- Advertisement -
- Advertisement -

‘ಕಡಿಮೆ ಗುಣಮಟ್ಟದ ಕಲ್ಲಿದ್ದಲನ್ನು ಹೆಚ್ಚಿನ ಮೌಲ್ಯದ ಇಂಧನವಾಗಿ ಮಾರಾಟ ಮಾಡುವ ಮೂಲಕ ಅದಾನಿ ಕಂಪೆನಿ ವಂಚನೆ ಮಾಡಿದೆ’ ಎಂದು ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಯೋಜನೆ (OCCRP) ಮತ್ತು ಫೈನಾನ್ಷಿಯಲ್ ಟೈಮ್ಸ್‌ನ ತನಿಖಾ ವರದಿ ಬಹಿರಂಗಪಡಿಸಿತ್ತು. ಇದರ ಬೆನ್ನಲ್ಲಿ ಅದಾನಿ ಗ್ರೂಪ್‌ನ ವಂಚನೆಗೆ ಸಂಬಂಧಿಸಿ ‘ಸಿಬಿಐ’, ‘ಇಡಿ’ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರತಿಪಕ್ಷಗಳು ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.

ಗೌತಮ್ ಅದಾನಿ ಅವರ ಕಂಪನಿಯು ‘ಕಡಿಮೆ ಗುಣಮಟ್ಟದ ಕಲ್ಲಿದ್ದಲನ್ನು ಹೆಚ್ಚಿನ ಮೌಲ್ಯದ ಇಂಧನವಾಗಿ ಮಾರಾಟ ಮಾಡುವ ಮೂಲಕ ವಂಚನೆ ಮಾಡಿದೆ’ ಎಂದು ವರದಿಯು ಬಹಿರಂಗಪಡಿಸಿದ್ದು, ಬೆಲೆ ಏರಿಕೆಯ ಎಲ್ಲಾ ಆರೋಪಗಳನ್ನು ಅದಾನಿ ತಿರಸ್ಕರಿಸಿದ್ದಾರೆ.

ದಾಖಲೆಗಳ ಪ್ರಕಾರ, ಜನವರಿ 2014ರಲ್ಲಿ ಅದಾನಿ ಕಂಪನಿ ಇಂಡೋನೇಷ್ಯಾದಿಂದ ಕಲ್ಲಿದ್ದಲು ಖರೀದಿಸಿತ್ತು. ಅದು ಗುಣಮಟ್ಟದಲ್ಲಿ ಪ್ರತಿ ಕಿಲೋಗ್ರಾಮ್‌ಗೆ 3,500 ಕ್ಯಾಲೊರಿಗಳನ್ನು ಹೊಂದಿತ್ತು. ಆದರೆ, ಆ ಕಲ್ಲಿದ್ದಲ್ಲನ್ನು ತಮಿಳುನಾಡು ಜನರೇಷನ್ ಅಂಡ್ ಡಿಸ್ಟ್ರಿಬ್ಯೂಷನ್ ಕಂಪನಿಗೆ (ತಂಗೆಡ್ಕೋ) ಅತ್ಯಮೂಲ್ಯ ದರ್ಜೆಯ 6,000 ಕ್ಯಾಲೋರಿಯ ಕಲ್ಲಿದ್ದಲು ಎಂದು ಮಾರಾಟ ಮಾಡಲಾಗಿದೆ. ಈ ಮೂಲಕ ಸಾರಿಗೆ ವೆಚ್ಚ ಹೊರತುಪಡಿಸಿ ಅದಾನಿ ಎರಡು ಪಟ್ಟು ಲಾಭ ಪಡೆದಿದೆ.

ಹಿಂಡೆನ್‌ಬರ್ಗ್ ರಿಸರ್ಚ್ ಅದಾನಿ ಗ್ರೂಪ್‌ನ ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಮಾರುಕಟ್ಟೆ ವಂಚನೆ ಬಗ್ಗೆ ಆರೋಪಿಸಿತ್ತು. ಈ ಬಗ್ಗೆ ವಿರೋಧ ಪಕ್ಷಗಳು ಹಲವು ಪ್ರಶ್ನೆಗಳನ್ನು ಎತ್ತಿದ್ದವು. OCCRP ಮತ್ತು ಫೈನಾನ್ಷಿಯಲ್ ಟೈಮ್ಸ್‌ ತನಿಖಾ ವರದಿ ಪ್ರಕಟಿಸಿದ ನಂತರ, 2024ರ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ವಿರೋಧ ಪಕ್ಷಗಳು ಹಗರಣದ ಪುರಾವೆಗಳು ಲಭ್ಯವಿದ್ದರೂ ಅದಾನಿ ಸಾಮ್ರಾಜ್ಯದ ವಿರುದ್ಧ ಏಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಪಾದಿತ ಹಗರಣದ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಮೋದಿ ಇತ್ತೀಚೆಗೆ ಚುನಾವಣಾ ರ್ಯಾಲಿಯಲ್ಲಿ ಹೇಳಿದ್ದ ‘ಅದಾನಿ ಮತ್ತು ಅಂಬಾನಿ ಕಾಂಗ್ರೆಸ್‌ಗೆ ಟೆಂಪೋಗಳಲ್ಲಿ ಹಣ ಲಂಚ’ ನೀಡುತ್ತಿದ್ದಾರೆ ಎಂಬ ಹೇಳಿಕೆಯನ್ನು ಉಲ್ಲೇಖಿಸಿ, ವರ್ಷಗಳಿಂದ ಈ ಹಗರಣದ ಮೂಲಕ ಮೋದಿಜಿಯವರ ನೆಚ್ಚಿನ ಗೆಳೆಯ ಅದಾನಿ ಕಡಿಮೆ ದರ್ಜೆಯ ಕಲ್ಲಿದ್ದಲನ್ನು ಮೂರು ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡಿ ಸಾವಿರಾರು ಕೋಟಿ ರೂಪಾಯಿ ಲೂಟಿ ಮಾಡಿದ್ದಾರೆ. ಅದರ ಬೆಲೆಯನ್ನು ಸಾಮಾನ್ಯ ಜನರು ವಿದ್ಯುತ್ ಬಿಲ್ಲುಗಳ ಮೂಲಕ ತಮ್ಮ ಜೇಬಿನಿಂದ ಪಾವತಿಸಿದ್ದಾರೆ. ಈ ಬಹಿರಂಗ ಭ್ರಷ್ಟಾಚಾರದ ಬಗ್ಗೆ ಇಡಿ, ಸಿಬಿಐ ಮತ್ತು ಐಟಿಯನ್ನು ಮೌನವಾಗಿರಿಸಲು ಎಷ್ಟು ಟೆಂಪೋಗಳನ್ನು ಬಳಸಲಾಗಿದೆ ಎಂದು ಪ್ರಧಾನಿ ಹೇಳುವರೇ? ಎಂದು ರಾಹುಲ್‌ ಗಾಂಧಿ ಪ್ರಶ್ನಿಸಿದ್ದಾರೆ.

ಇಂಡಿಯಾ ಮೈತ್ರಿಕೂಟದ ಸರಕಾರ ಅಧಿಕಾರಕ್ಕೆ ಬಂದರೆ ಈ ಹಗರಣದ ಬಗ್ಗೆ ವಿವರವಾಗಿ ತನಿಖೆ ನಡೆಸಲಿದೆ ಎಂದು ರಾಹುಲ್‌ ಗಾಂಧಿ ಭರವಸೆಯನ್ನು ನೀಡಿದ್ದಾರೆ. ಈ ವಿಷಯದ ಕುರಿತು ‘ಮೋದಿ-ಅದಾನಿ ಕಾ ಕೋಲ್ ಮಾಲ್’ ಎಂಬ ಶೀರ್ಷಿಕೆಯ ವ್ಯಂಗ್ಯ ಚಿತ್ರದ ಪೋಸ್ಟರ್‌ನ್ನು ಕಾಂಗ್ರೆಸ್ ಹಂಚಿಕೊಂಡಿದೆ.

ಸಂಸತ್ತಿನಲ್ಲಿ ಅದಾನಿ ಗ್ರೂಪ್‌ಗೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳನ್ನು ಎತ್ತಿದ್ದ ಮತ್ತು ಬಳಿಕ ವಿವಾದಾತ್ಮಕವಾಗಿ ಹೊರಹಾಕಲ್ಪಟ್ಟ ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಕೂಡ ಈ ವಿಷಯದಲ್ಲಿ ತನಿಖಾ ಸಂಸ್ಥೆಗಳ ಆಸಕ್ತಿಯ ಕೊರತೆಯನ್ನು ಪ್ರಸ್ತಾಪಿಸಿ ಪೋಸ್ಟ್‌ ಮಾಡಿದ್ದಾರೆ. ನನ್ನ ಸೀರೆಗಳನ್ನು ಎಣಿಸಿದ್ದ ಮತ್ತು ನನ್ನ ಸ್ನೇಹಿತರಿಗೆ ಕರೆ ಮಾಡಿದ್ದ ಸಿಬಿಐ ಮತ್ತು ಇಡಿಗೆ ಈ ಕುರಿತು ತನಿಖೆ ಮಾಡಲು ಹೇಳಿ ಎಂದು ಮಹುವಾ ಮೊಯಿತ್ರಾ ಪ್ರಧಾನಿಗೆ ತನ್ನ ಮೇಲೆ ಈ ಹಿಂದೆ ನಡೆದಿರುವ ದಾಳಿಯನ್ನು ಉಲ್ಲೇಖಿಸಿ ಹೇಳಿದ್ದಾರೆ.

ಟಿಎಂಸಿ ರಾಜ್ಯಸಭಾ ಸಂಸದ ಜವಾಹರ್ ಸಿರ್ಕಾರ್ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಈ ಕುರಿತು ಪತ್ರ ಬರೆದಿದ್ದು, ಸರ್ಕಾರಿ ಆರ್ಥಿಕ ಅಪರಾಧದ ತನಿಖಾಧಿಕಾರಿಗಳು ಈ ಸಾಕ್ಷ್ಯವನ್ನು ಏಕೆ ನಿರ್ಲಕ್ಷಿಸುತ್ತಿದ್ದಾರೆ ಎಂದು ಕೇಳಿದ್ದಾರೆ.

ಶಿವಸೇನೆಯ(ಯುಬಿಟಿ) ಪ್ರಿಯಾಂಕಾ ಚತುರ್ವೇದಿ ಅವರು ಕಲ್ಲಿದ್ದಲು ವೆಚ್ಚದ “ಪವಾಡ” ಒಂದಲ್ಲ 24 ಬಾರಿ ಸಂಭವಿಸಿದೆ, ಪ್ರಧಾನಿ ಒಬ್ಬ ಜಾದೂಗಾರ ಎಂದು ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

 

ಇದನ್ನು ಓದಿ: ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವಂತೆ ಪ್ರಧಾನಿಗೆ ಸಿದ್ದರಾಮಯ್ಯ ಪತ್ರ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...