Homeಮುಖಪುಟಕಲ್ಲಿದ್ದಲು ಹಗರಣ: ಅದಾನಿ ವಿರುದ್ಧ ED, CBI ಕ್ರಮ ಯಾಕಿಲ್ಲ? ಮೋದಿ ವಿರುದ್ಧ ಪ್ರತಿಪಕ್ಷಗಳು ವಾಗ್ಧಾಳಿ

ಕಲ್ಲಿದ್ದಲು ಹಗರಣ: ಅದಾನಿ ವಿರುದ್ಧ ED, CBI ಕ್ರಮ ಯಾಕಿಲ್ಲ? ಮೋದಿ ವಿರುದ್ಧ ಪ್ರತಿಪಕ್ಷಗಳು ವಾಗ್ಧಾಳಿ

- Advertisement -
- Advertisement -

‘ಕಡಿಮೆ ಗುಣಮಟ್ಟದ ಕಲ್ಲಿದ್ದಲನ್ನು ಹೆಚ್ಚಿನ ಮೌಲ್ಯದ ಇಂಧನವಾಗಿ ಮಾರಾಟ ಮಾಡುವ ಮೂಲಕ ಅದಾನಿ ಕಂಪೆನಿ ವಂಚನೆ ಮಾಡಿದೆ’ ಎಂದು ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಯೋಜನೆ (OCCRP) ಮತ್ತು ಫೈನಾನ್ಷಿಯಲ್ ಟೈಮ್ಸ್‌ನ ತನಿಖಾ ವರದಿ ಬಹಿರಂಗಪಡಿಸಿತ್ತು. ಇದರ ಬೆನ್ನಲ್ಲಿ ಅದಾನಿ ಗ್ರೂಪ್‌ನ ವಂಚನೆಗೆ ಸಂಬಂಧಿಸಿ ‘ಸಿಬಿಐ’, ‘ಇಡಿ’ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರತಿಪಕ್ಷಗಳು ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.

ಗೌತಮ್ ಅದಾನಿ ಅವರ ಕಂಪನಿಯು ‘ಕಡಿಮೆ ಗುಣಮಟ್ಟದ ಕಲ್ಲಿದ್ದಲನ್ನು ಹೆಚ್ಚಿನ ಮೌಲ್ಯದ ಇಂಧನವಾಗಿ ಮಾರಾಟ ಮಾಡುವ ಮೂಲಕ ವಂಚನೆ ಮಾಡಿದೆ’ ಎಂದು ವರದಿಯು ಬಹಿರಂಗಪಡಿಸಿದ್ದು, ಬೆಲೆ ಏರಿಕೆಯ ಎಲ್ಲಾ ಆರೋಪಗಳನ್ನು ಅದಾನಿ ತಿರಸ್ಕರಿಸಿದ್ದಾರೆ.

ದಾಖಲೆಗಳ ಪ್ರಕಾರ, ಜನವರಿ 2014ರಲ್ಲಿ ಅದಾನಿ ಕಂಪನಿ ಇಂಡೋನೇಷ್ಯಾದಿಂದ ಕಲ್ಲಿದ್ದಲು ಖರೀದಿಸಿತ್ತು. ಅದು ಗುಣಮಟ್ಟದಲ್ಲಿ ಪ್ರತಿ ಕಿಲೋಗ್ರಾಮ್‌ಗೆ 3,500 ಕ್ಯಾಲೊರಿಗಳನ್ನು ಹೊಂದಿತ್ತು. ಆದರೆ, ಆ ಕಲ್ಲಿದ್ದಲ್ಲನ್ನು ತಮಿಳುನಾಡು ಜನರೇಷನ್ ಅಂಡ್ ಡಿಸ್ಟ್ರಿಬ್ಯೂಷನ್ ಕಂಪನಿಗೆ (ತಂಗೆಡ್ಕೋ) ಅತ್ಯಮೂಲ್ಯ ದರ್ಜೆಯ 6,000 ಕ್ಯಾಲೋರಿಯ ಕಲ್ಲಿದ್ದಲು ಎಂದು ಮಾರಾಟ ಮಾಡಲಾಗಿದೆ. ಈ ಮೂಲಕ ಸಾರಿಗೆ ವೆಚ್ಚ ಹೊರತುಪಡಿಸಿ ಅದಾನಿ ಎರಡು ಪಟ್ಟು ಲಾಭ ಪಡೆದಿದೆ.

ಹಿಂಡೆನ್‌ಬರ್ಗ್ ರಿಸರ್ಚ್ ಅದಾನಿ ಗ್ರೂಪ್‌ನ ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಮಾರುಕಟ್ಟೆ ವಂಚನೆ ಬಗ್ಗೆ ಆರೋಪಿಸಿತ್ತು. ಈ ಬಗ್ಗೆ ವಿರೋಧ ಪಕ್ಷಗಳು ಹಲವು ಪ್ರಶ್ನೆಗಳನ್ನು ಎತ್ತಿದ್ದವು. OCCRP ಮತ್ತು ಫೈನಾನ್ಷಿಯಲ್ ಟೈಮ್ಸ್‌ ತನಿಖಾ ವರದಿ ಪ್ರಕಟಿಸಿದ ನಂತರ, 2024ರ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ವಿರೋಧ ಪಕ್ಷಗಳು ಹಗರಣದ ಪುರಾವೆಗಳು ಲಭ್ಯವಿದ್ದರೂ ಅದಾನಿ ಸಾಮ್ರಾಜ್ಯದ ವಿರುದ್ಧ ಏಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಪಾದಿತ ಹಗರಣದ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಮೋದಿ ಇತ್ತೀಚೆಗೆ ಚುನಾವಣಾ ರ್ಯಾಲಿಯಲ್ಲಿ ಹೇಳಿದ್ದ ‘ಅದಾನಿ ಮತ್ತು ಅಂಬಾನಿ ಕಾಂಗ್ರೆಸ್‌ಗೆ ಟೆಂಪೋಗಳಲ್ಲಿ ಹಣ ಲಂಚ’ ನೀಡುತ್ತಿದ್ದಾರೆ ಎಂಬ ಹೇಳಿಕೆಯನ್ನು ಉಲ್ಲೇಖಿಸಿ, ವರ್ಷಗಳಿಂದ ಈ ಹಗರಣದ ಮೂಲಕ ಮೋದಿಜಿಯವರ ನೆಚ್ಚಿನ ಗೆಳೆಯ ಅದಾನಿ ಕಡಿಮೆ ದರ್ಜೆಯ ಕಲ್ಲಿದ್ದಲನ್ನು ಮೂರು ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡಿ ಸಾವಿರಾರು ಕೋಟಿ ರೂಪಾಯಿ ಲೂಟಿ ಮಾಡಿದ್ದಾರೆ. ಅದರ ಬೆಲೆಯನ್ನು ಸಾಮಾನ್ಯ ಜನರು ವಿದ್ಯುತ್ ಬಿಲ್ಲುಗಳ ಮೂಲಕ ತಮ್ಮ ಜೇಬಿನಿಂದ ಪಾವತಿಸಿದ್ದಾರೆ. ಈ ಬಹಿರಂಗ ಭ್ರಷ್ಟಾಚಾರದ ಬಗ್ಗೆ ಇಡಿ, ಸಿಬಿಐ ಮತ್ತು ಐಟಿಯನ್ನು ಮೌನವಾಗಿರಿಸಲು ಎಷ್ಟು ಟೆಂಪೋಗಳನ್ನು ಬಳಸಲಾಗಿದೆ ಎಂದು ಪ್ರಧಾನಿ ಹೇಳುವರೇ? ಎಂದು ರಾಹುಲ್‌ ಗಾಂಧಿ ಪ್ರಶ್ನಿಸಿದ್ದಾರೆ.

ಇಂಡಿಯಾ ಮೈತ್ರಿಕೂಟದ ಸರಕಾರ ಅಧಿಕಾರಕ್ಕೆ ಬಂದರೆ ಈ ಹಗರಣದ ಬಗ್ಗೆ ವಿವರವಾಗಿ ತನಿಖೆ ನಡೆಸಲಿದೆ ಎಂದು ರಾಹುಲ್‌ ಗಾಂಧಿ ಭರವಸೆಯನ್ನು ನೀಡಿದ್ದಾರೆ. ಈ ವಿಷಯದ ಕುರಿತು ‘ಮೋದಿ-ಅದಾನಿ ಕಾ ಕೋಲ್ ಮಾಲ್’ ಎಂಬ ಶೀರ್ಷಿಕೆಯ ವ್ಯಂಗ್ಯ ಚಿತ್ರದ ಪೋಸ್ಟರ್‌ನ್ನು ಕಾಂಗ್ರೆಸ್ ಹಂಚಿಕೊಂಡಿದೆ.

ಸಂಸತ್ತಿನಲ್ಲಿ ಅದಾನಿ ಗ್ರೂಪ್‌ಗೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳನ್ನು ಎತ್ತಿದ್ದ ಮತ್ತು ಬಳಿಕ ವಿವಾದಾತ್ಮಕವಾಗಿ ಹೊರಹಾಕಲ್ಪಟ್ಟ ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಕೂಡ ಈ ವಿಷಯದಲ್ಲಿ ತನಿಖಾ ಸಂಸ್ಥೆಗಳ ಆಸಕ್ತಿಯ ಕೊರತೆಯನ್ನು ಪ್ರಸ್ತಾಪಿಸಿ ಪೋಸ್ಟ್‌ ಮಾಡಿದ್ದಾರೆ. ನನ್ನ ಸೀರೆಗಳನ್ನು ಎಣಿಸಿದ್ದ ಮತ್ತು ನನ್ನ ಸ್ನೇಹಿತರಿಗೆ ಕರೆ ಮಾಡಿದ್ದ ಸಿಬಿಐ ಮತ್ತು ಇಡಿಗೆ ಈ ಕುರಿತು ತನಿಖೆ ಮಾಡಲು ಹೇಳಿ ಎಂದು ಮಹುವಾ ಮೊಯಿತ್ರಾ ಪ್ರಧಾನಿಗೆ ತನ್ನ ಮೇಲೆ ಈ ಹಿಂದೆ ನಡೆದಿರುವ ದಾಳಿಯನ್ನು ಉಲ್ಲೇಖಿಸಿ ಹೇಳಿದ್ದಾರೆ.

ಟಿಎಂಸಿ ರಾಜ್ಯಸಭಾ ಸಂಸದ ಜವಾಹರ್ ಸಿರ್ಕಾರ್ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಈ ಕುರಿತು ಪತ್ರ ಬರೆದಿದ್ದು, ಸರ್ಕಾರಿ ಆರ್ಥಿಕ ಅಪರಾಧದ ತನಿಖಾಧಿಕಾರಿಗಳು ಈ ಸಾಕ್ಷ್ಯವನ್ನು ಏಕೆ ನಿರ್ಲಕ್ಷಿಸುತ್ತಿದ್ದಾರೆ ಎಂದು ಕೇಳಿದ್ದಾರೆ.

ಶಿವಸೇನೆಯ(ಯುಬಿಟಿ) ಪ್ರಿಯಾಂಕಾ ಚತುರ್ವೇದಿ ಅವರು ಕಲ್ಲಿದ್ದಲು ವೆಚ್ಚದ “ಪವಾಡ” ಒಂದಲ್ಲ 24 ಬಾರಿ ಸಂಭವಿಸಿದೆ, ಪ್ರಧಾನಿ ಒಬ್ಬ ಜಾದೂಗಾರ ಎಂದು ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

 

ಇದನ್ನು ಓದಿ: ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವಂತೆ ಪ್ರಧಾನಿಗೆ ಸಿದ್ದರಾಮಯ್ಯ ಪತ್ರ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...