Homeಮುಖಪುಟಕಲ್ಲಿದ್ದಲು ಹಗರಣ: ಅದಾನಿ ವಿರುದ್ಧ ED, CBI ಕ್ರಮ ಯಾಕಿಲ್ಲ? ಮೋದಿ ವಿರುದ್ಧ ಪ್ರತಿಪಕ್ಷಗಳು ವಾಗ್ಧಾಳಿ

ಕಲ್ಲಿದ್ದಲು ಹಗರಣ: ಅದಾನಿ ವಿರುದ್ಧ ED, CBI ಕ್ರಮ ಯಾಕಿಲ್ಲ? ಮೋದಿ ವಿರುದ್ಧ ಪ್ರತಿಪಕ್ಷಗಳು ವಾಗ್ಧಾಳಿ

- Advertisement -
- Advertisement -

‘ಕಡಿಮೆ ಗುಣಮಟ್ಟದ ಕಲ್ಲಿದ್ದಲನ್ನು ಹೆಚ್ಚಿನ ಮೌಲ್ಯದ ಇಂಧನವಾಗಿ ಮಾರಾಟ ಮಾಡುವ ಮೂಲಕ ಅದಾನಿ ಕಂಪೆನಿ ವಂಚನೆ ಮಾಡಿದೆ’ ಎಂದು ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಯೋಜನೆ (OCCRP) ಮತ್ತು ಫೈನಾನ್ಷಿಯಲ್ ಟೈಮ್ಸ್‌ನ ತನಿಖಾ ವರದಿ ಬಹಿರಂಗಪಡಿಸಿತ್ತು. ಇದರ ಬೆನ್ನಲ್ಲಿ ಅದಾನಿ ಗ್ರೂಪ್‌ನ ವಂಚನೆಗೆ ಸಂಬಂಧಿಸಿ ‘ಸಿಬಿಐ’, ‘ಇಡಿ’ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರತಿಪಕ್ಷಗಳು ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.

ಗೌತಮ್ ಅದಾನಿ ಅವರ ಕಂಪನಿಯು ‘ಕಡಿಮೆ ಗುಣಮಟ್ಟದ ಕಲ್ಲಿದ್ದಲನ್ನು ಹೆಚ್ಚಿನ ಮೌಲ್ಯದ ಇಂಧನವಾಗಿ ಮಾರಾಟ ಮಾಡುವ ಮೂಲಕ ವಂಚನೆ ಮಾಡಿದೆ’ ಎಂದು ವರದಿಯು ಬಹಿರಂಗಪಡಿಸಿದ್ದು, ಬೆಲೆ ಏರಿಕೆಯ ಎಲ್ಲಾ ಆರೋಪಗಳನ್ನು ಅದಾನಿ ತಿರಸ್ಕರಿಸಿದ್ದಾರೆ.

ದಾಖಲೆಗಳ ಪ್ರಕಾರ, ಜನವರಿ 2014ರಲ್ಲಿ ಅದಾನಿ ಕಂಪನಿ ಇಂಡೋನೇಷ್ಯಾದಿಂದ ಕಲ್ಲಿದ್ದಲು ಖರೀದಿಸಿತ್ತು. ಅದು ಗುಣಮಟ್ಟದಲ್ಲಿ ಪ್ರತಿ ಕಿಲೋಗ್ರಾಮ್‌ಗೆ 3,500 ಕ್ಯಾಲೊರಿಗಳನ್ನು ಹೊಂದಿತ್ತು. ಆದರೆ, ಆ ಕಲ್ಲಿದ್ದಲ್ಲನ್ನು ತಮಿಳುನಾಡು ಜನರೇಷನ್ ಅಂಡ್ ಡಿಸ್ಟ್ರಿಬ್ಯೂಷನ್ ಕಂಪನಿಗೆ (ತಂಗೆಡ್ಕೋ) ಅತ್ಯಮೂಲ್ಯ ದರ್ಜೆಯ 6,000 ಕ್ಯಾಲೋರಿಯ ಕಲ್ಲಿದ್ದಲು ಎಂದು ಮಾರಾಟ ಮಾಡಲಾಗಿದೆ. ಈ ಮೂಲಕ ಸಾರಿಗೆ ವೆಚ್ಚ ಹೊರತುಪಡಿಸಿ ಅದಾನಿ ಎರಡು ಪಟ್ಟು ಲಾಭ ಪಡೆದಿದೆ.

ಹಿಂಡೆನ್‌ಬರ್ಗ್ ರಿಸರ್ಚ್ ಅದಾನಿ ಗ್ರೂಪ್‌ನ ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಮಾರುಕಟ್ಟೆ ವಂಚನೆ ಬಗ್ಗೆ ಆರೋಪಿಸಿತ್ತು. ಈ ಬಗ್ಗೆ ವಿರೋಧ ಪಕ್ಷಗಳು ಹಲವು ಪ್ರಶ್ನೆಗಳನ್ನು ಎತ್ತಿದ್ದವು. OCCRP ಮತ್ತು ಫೈನಾನ್ಷಿಯಲ್ ಟೈಮ್ಸ್‌ ತನಿಖಾ ವರದಿ ಪ್ರಕಟಿಸಿದ ನಂತರ, 2024ರ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ವಿರೋಧ ಪಕ್ಷಗಳು ಹಗರಣದ ಪುರಾವೆಗಳು ಲಭ್ಯವಿದ್ದರೂ ಅದಾನಿ ಸಾಮ್ರಾಜ್ಯದ ವಿರುದ್ಧ ಏಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಪಾದಿತ ಹಗರಣದ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಮೋದಿ ಇತ್ತೀಚೆಗೆ ಚುನಾವಣಾ ರ್ಯಾಲಿಯಲ್ಲಿ ಹೇಳಿದ್ದ ‘ಅದಾನಿ ಮತ್ತು ಅಂಬಾನಿ ಕಾಂಗ್ರೆಸ್‌ಗೆ ಟೆಂಪೋಗಳಲ್ಲಿ ಹಣ ಲಂಚ’ ನೀಡುತ್ತಿದ್ದಾರೆ ಎಂಬ ಹೇಳಿಕೆಯನ್ನು ಉಲ್ಲೇಖಿಸಿ, ವರ್ಷಗಳಿಂದ ಈ ಹಗರಣದ ಮೂಲಕ ಮೋದಿಜಿಯವರ ನೆಚ್ಚಿನ ಗೆಳೆಯ ಅದಾನಿ ಕಡಿಮೆ ದರ್ಜೆಯ ಕಲ್ಲಿದ್ದಲನ್ನು ಮೂರು ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡಿ ಸಾವಿರಾರು ಕೋಟಿ ರೂಪಾಯಿ ಲೂಟಿ ಮಾಡಿದ್ದಾರೆ. ಅದರ ಬೆಲೆಯನ್ನು ಸಾಮಾನ್ಯ ಜನರು ವಿದ್ಯುತ್ ಬಿಲ್ಲುಗಳ ಮೂಲಕ ತಮ್ಮ ಜೇಬಿನಿಂದ ಪಾವತಿಸಿದ್ದಾರೆ. ಈ ಬಹಿರಂಗ ಭ್ರಷ್ಟಾಚಾರದ ಬಗ್ಗೆ ಇಡಿ, ಸಿಬಿಐ ಮತ್ತು ಐಟಿಯನ್ನು ಮೌನವಾಗಿರಿಸಲು ಎಷ್ಟು ಟೆಂಪೋಗಳನ್ನು ಬಳಸಲಾಗಿದೆ ಎಂದು ಪ್ರಧಾನಿ ಹೇಳುವರೇ? ಎಂದು ರಾಹುಲ್‌ ಗಾಂಧಿ ಪ್ರಶ್ನಿಸಿದ್ದಾರೆ.

ಇಂಡಿಯಾ ಮೈತ್ರಿಕೂಟದ ಸರಕಾರ ಅಧಿಕಾರಕ್ಕೆ ಬಂದರೆ ಈ ಹಗರಣದ ಬಗ್ಗೆ ವಿವರವಾಗಿ ತನಿಖೆ ನಡೆಸಲಿದೆ ಎಂದು ರಾಹುಲ್‌ ಗಾಂಧಿ ಭರವಸೆಯನ್ನು ನೀಡಿದ್ದಾರೆ. ಈ ವಿಷಯದ ಕುರಿತು ‘ಮೋದಿ-ಅದಾನಿ ಕಾ ಕೋಲ್ ಮಾಲ್’ ಎಂಬ ಶೀರ್ಷಿಕೆಯ ವ್ಯಂಗ್ಯ ಚಿತ್ರದ ಪೋಸ್ಟರ್‌ನ್ನು ಕಾಂಗ್ರೆಸ್ ಹಂಚಿಕೊಂಡಿದೆ.

ಸಂಸತ್ತಿನಲ್ಲಿ ಅದಾನಿ ಗ್ರೂಪ್‌ಗೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳನ್ನು ಎತ್ತಿದ್ದ ಮತ್ತು ಬಳಿಕ ವಿವಾದಾತ್ಮಕವಾಗಿ ಹೊರಹಾಕಲ್ಪಟ್ಟ ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಕೂಡ ಈ ವಿಷಯದಲ್ಲಿ ತನಿಖಾ ಸಂಸ್ಥೆಗಳ ಆಸಕ್ತಿಯ ಕೊರತೆಯನ್ನು ಪ್ರಸ್ತಾಪಿಸಿ ಪೋಸ್ಟ್‌ ಮಾಡಿದ್ದಾರೆ. ನನ್ನ ಸೀರೆಗಳನ್ನು ಎಣಿಸಿದ್ದ ಮತ್ತು ನನ್ನ ಸ್ನೇಹಿತರಿಗೆ ಕರೆ ಮಾಡಿದ್ದ ಸಿಬಿಐ ಮತ್ತು ಇಡಿಗೆ ಈ ಕುರಿತು ತನಿಖೆ ಮಾಡಲು ಹೇಳಿ ಎಂದು ಮಹುವಾ ಮೊಯಿತ್ರಾ ಪ್ರಧಾನಿಗೆ ತನ್ನ ಮೇಲೆ ಈ ಹಿಂದೆ ನಡೆದಿರುವ ದಾಳಿಯನ್ನು ಉಲ್ಲೇಖಿಸಿ ಹೇಳಿದ್ದಾರೆ.

ಟಿಎಂಸಿ ರಾಜ್ಯಸಭಾ ಸಂಸದ ಜವಾಹರ್ ಸಿರ್ಕಾರ್ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಈ ಕುರಿತು ಪತ್ರ ಬರೆದಿದ್ದು, ಸರ್ಕಾರಿ ಆರ್ಥಿಕ ಅಪರಾಧದ ತನಿಖಾಧಿಕಾರಿಗಳು ಈ ಸಾಕ್ಷ್ಯವನ್ನು ಏಕೆ ನಿರ್ಲಕ್ಷಿಸುತ್ತಿದ್ದಾರೆ ಎಂದು ಕೇಳಿದ್ದಾರೆ.

ಶಿವಸೇನೆಯ(ಯುಬಿಟಿ) ಪ್ರಿಯಾಂಕಾ ಚತುರ್ವೇದಿ ಅವರು ಕಲ್ಲಿದ್ದಲು ವೆಚ್ಚದ “ಪವಾಡ” ಒಂದಲ್ಲ 24 ಬಾರಿ ಸಂಭವಿಸಿದೆ, ಪ್ರಧಾನಿ ಒಬ್ಬ ಜಾದೂಗಾರ ಎಂದು ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

 

ಇದನ್ನು ಓದಿ: ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವಂತೆ ಪ್ರಧಾನಿಗೆ ಸಿದ್ದರಾಮಯ್ಯ ಪತ್ರ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...