Homeಮುಖಪುಟಕಲ್ಲಿದ್ದಲು ಹಗರಣ: ಅದಾನಿ ವಿರುದ್ಧ ED, CBI ಕ್ರಮ ಯಾಕಿಲ್ಲ? ಮೋದಿ ವಿರುದ್ಧ ಪ್ರತಿಪಕ್ಷಗಳು ವಾಗ್ಧಾಳಿ

ಕಲ್ಲಿದ್ದಲು ಹಗರಣ: ಅದಾನಿ ವಿರುದ್ಧ ED, CBI ಕ್ರಮ ಯಾಕಿಲ್ಲ? ಮೋದಿ ವಿರುದ್ಧ ಪ್ರತಿಪಕ್ಷಗಳು ವಾಗ್ಧಾಳಿ

- Advertisement -
- Advertisement -

‘ಕಡಿಮೆ ಗುಣಮಟ್ಟದ ಕಲ್ಲಿದ್ದಲನ್ನು ಹೆಚ್ಚಿನ ಮೌಲ್ಯದ ಇಂಧನವಾಗಿ ಮಾರಾಟ ಮಾಡುವ ಮೂಲಕ ಅದಾನಿ ಕಂಪೆನಿ ವಂಚನೆ ಮಾಡಿದೆ’ ಎಂದು ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಯೋಜನೆ (OCCRP) ಮತ್ತು ಫೈನಾನ್ಷಿಯಲ್ ಟೈಮ್ಸ್‌ನ ತನಿಖಾ ವರದಿ ಬಹಿರಂಗಪಡಿಸಿತ್ತು. ಇದರ ಬೆನ್ನಲ್ಲಿ ಅದಾನಿ ಗ್ರೂಪ್‌ನ ವಂಚನೆಗೆ ಸಂಬಂಧಿಸಿ ‘ಸಿಬಿಐ’, ‘ಇಡಿ’ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರತಿಪಕ್ಷಗಳು ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.

ಗೌತಮ್ ಅದಾನಿ ಅವರ ಕಂಪನಿಯು ‘ಕಡಿಮೆ ಗುಣಮಟ್ಟದ ಕಲ್ಲಿದ್ದಲನ್ನು ಹೆಚ್ಚಿನ ಮೌಲ್ಯದ ಇಂಧನವಾಗಿ ಮಾರಾಟ ಮಾಡುವ ಮೂಲಕ ವಂಚನೆ ಮಾಡಿದೆ’ ಎಂದು ವರದಿಯು ಬಹಿರಂಗಪಡಿಸಿದ್ದು, ಬೆಲೆ ಏರಿಕೆಯ ಎಲ್ಲಾ ಆರೋಪಗಳನ್ನು ಅದಾನಿ ತಿರಸ್ಕರಿಸಿದ್ದಾರೆ.

ದಾಖಲೆಗಳ ಪ್ರಕಾರ, ಜನವರಿ 2014ರಲ್ಲಿ ಅದಾನಿ ಕಂಪನಿ ಇಂಡೋನೇಷ್ಯಾದಿಂದ ಕಲ್ಲಿದ್ದಲು ಖರೀದಿಸಿತ್ತು. ಅದು ಗುಣಮಟ್ಟದಲ್ಲಿ ಪ್ರತಿ ಕಿಲೋಗ್ರಾಮ್‌ಗೆ 3,500 ಕ್ಯಾಲೊರಿಗಳನ್ನು ಹೊಂದಿತ್ತು. ಆದರೆ, ಆ ಕಲ್ಲಿದ್ದಲ್ಲನ್ನು ತಮಿಳುನಾಡು ಜನರೇಷನ್ ಅಂಡ್ ಡಿಸ್ಟ್ರಿಬ್ಯೂಷನ್ ಕಂಪನಿಗೆ (ತಂಗೆಡ್ಕೋ) ಅತ್ಯಮೂಲ್ಯ ದರ್ಜೆಯ 6,000 ಕ್ಯಾಲೋರಿಯ ಕಲ್ಲಿದ್ದಲು ಎಂದು ಮಾರಾಟ ಮಾಡಲಾಗಿದೆ. ಈ ಮೂಲಕ ಸಾರಿಗೆ ವೆಚ್ಚ ಹೊರತುಪಡಿಸಿ ಅದಾನಿ ಎರಡು ಪಟ್ಟು ಲಾಭ ಪಡೆದಿದೆ.

ಹಿಂಡೆನ್‌ಬರ್ಗ್ ರಿಸರ್ಚ್ ಅದಾನಿ ಗ್ರೂಪ್‌ನ ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಮಾರುಕಟ್ಟೆ ವಂಚನೆ ಬಗ್ಗೆ ಆರೋಪಿಸಿತ್ತು. ಈ ಬಗ್ಗೆ ವಿರೋಧ ಪಕ್ಷಗಳು ಹಲವು ಪ್ರಶ್ನೆಗಳನ್ನು ಎತ್ತಿದ್ದವು. OCCRP ಮತ್ತು ಫೈನಾನ್ಷಿಯಲ್ ಟೈಮ್ಸ್‌ ತನಿಖಾ ವರದಿ ಪ್ರಕಟಿಸಿದ ನಂತರ, 2024ರ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ವಿರೋಧ ಪಕ್ಷಗಳು ಹಗರಣದ ಪುರಾವೆಗಳು ಲಭ್ಯವಿದ್ದರೂ ಅದಾನಿ ಸಾಮ್ರಾಜ್ಯದ ವಿರುದ್ಧ ಏಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಪಾದಿತ ಹಗರಣದ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಮೋದಿ ಇತ್ತೀಚೆಗೆ ಚುನಾವಣಾ ರ್ಯಾಲಿಯಲ್ಲಿ ಹೇಳಿದ್ದ ‘ಅದಾನಿ ಮತ್ತು ಅಂಬಾನಿ ಕಾಂಗ್ರೆಸ್‌ಗೆ ಟೆಂಪೋಗಳಲ್ಲಿ ಹಣ ಲಂಚ’ ನೀಡುತ್ತಿದ್ದಾರೆ ಎಂಬ ಹೇಳಿಕೆಯನ್ನು ಉಲ್ಲೇಖಿಸಿ, ವರ್ಷಗಳಿಂದ ಈ ಹಗರಣದ ಮೂಲಕ ಮೋದಿಜಿಯವರ ನೆಚ್ಚಿನ ಗೆಳೆಯ ಅದಾನಿ ಕಡಿಮೆ ದರ್ಜೆಯ ಕಲ್ಲಿದ್ದಲನ್ನು ಮೂರು ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡಿ ಸಾವಿರಾರು ಕೋಟಿ ರೂಪಾಯಿ ಲೂಟಿ ಮಾಡಿದ್ದಾರೆ. ಅದರ ಬೆಲೆಯನ್ನು ಸಾಮಾನ್ಯ ಜನರು ವಿದ್ಯುತ್ ಬಿಲ್ಲುಗಳ ಮೂಲಕ ತಮ್ಮ ಜೇಬಿನಿಂದ ಪಾವತಿಸಿದ್ದಾರೆ. ಈ ಬಹಿರಂಗ ಭ್ರಷ್ಟಾಚಾರದ ಬಗ್ಗೆ ಇಡಿ, ಸಿಬಿಐ ಮತ್ತು ಐಟಿಯನ್ನು ಮೌನವಾಗಿರಿಸಲು ಎಷ್ಟು ಟೆಂಪೋಗಳನ್ನು ಬಳಸಲಾಗಿದೆ ಎಂದು ಪ್ರಧಾನಿ ಹೇಳುವರೇ? ಎಂದು ರಾಹುಲ್‌ ಗಾಂಧಿ ಪ್ರಶ್ನಿಸಿದ್ದಾರೆ.

ಇಂಡಿಯಾ ಮೈತ್ರಿಕೂಟದ ಸರಕಾರ ಅಧಿಕಾರಕ್ಕೆ ಬಂದರೆ ಈ ಹಗರಣದ ಬಗ್ಗೆ ವಿವರವಾಗಿ ತನಿಖೆ ನಡೆಸಲಿದೆ ಎಂದು ರಾಹುಲ್‌ ಗಾಂಧಿ ಭರವಸೆಯನ್ನು ನೀಡಿದ್ದಾರೆ. ಈ ವಿಷಯದ ಕುರಿತು ‘ಮೋದಿ-ಅದಾನಿ ಕಾ ಕೋಲ್ ಮಾಲ್’ ಎಂಬ ಶೀರ್ಷಿಕೆಯ ವ್ಯಂಗ್ಯ ಚಿತ್ರದ ಪೋಸ್ಟರ್‌ನ್ನು ಕಾಂಗ್ರೆಸ್ ಹಂಚಿಕೊಂಡಿದೆ.

ಸಂಸತ್ತಿನಲ್ಲಿ ಅದಾನಿ ಗ್ರೂಪ್‌ಗೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳನ್ನು ಎತ್ತಿದ್ದ ಮತ್ತು ಬಳಿಕ ವಿವಾದಾತ್ಮಕವಾಗಿ ಹೊರಹಾಕಲ್ಪಟ್ಟ ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಕೂಡ ಈ ವಿಷಯದಲ್ಲಿ ತನಿಖಾ ಸಂಸ್ಥೆಗಳ ಆಸಕ್ತಿಯ ಕೊರತೆಯನ್ನು ಪ್ರಸ್ತಾಪಿಸಿ ಪೋಸ್ಟ್‌ ಮಾಡಿದ್ದಾರೆ. ನನ್ನ ಸೀರೆಗಳನ್ನು ಎಣಿಸಿದ್ದ ಮತ್ತು ನನ್ನ ಸ್ನೇಹಿತರಿಗೆ ಕರೆ ಮಾಡಿದ್ದ ಸಿಬಿಐ ಮತ್ತು ಇಡಿಗೆ ಈ ಕುರಿತು ತನಿಖೆ ಮಾಡಲು ಹೇಳಿ ಎಂದು ಮಹುವಾ ಮೊಯಿತ್ರಾ ಪ್ರಧಾನಿಗೆ ತನ್ನ ಮೇಲೆ ಈ ಹಿಂದೆ ನಡೆದಿರುವ ದಾಳಿಯನ್ನು ಉಲ್ಲೇಖಿಸಿ ಹೇಳಿದ್ದಾರೆ.

ಟಿಎಂಸಿ ರಾಜ್ಯಸಭಾ ಸಂಸದ ಜವಾಹರ್ ಸಿರ್ಕಾರ್ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಈ ಕುರಿತು ಪತ್ರ ಬರೆದಿದ್ದು, ಸರ್ಕಾರಿ ಆರ್ಥಿಕ ಅಪರಾಧದ ತನಿಖಾಧಿಕಾರಿಗಳು ಈ ಸಾಕ್ಷ್ಯವನ್ನು ಏಕೆ ನಿರ್ಲಕ್ಷಿಸುತ್ತಿದ್ದಾರೆ ಎಂದು ಕೇಳಿದ್ದಾರೆ.

ಶಿವಸೇನೆಯ(ಯುಬಿಟಿ) ಪ್ರಿಯಾಂಕಾ ಚತುರ್ವೇದಿ ಅವರು ಕಲ್ಲಿದ್ದಲು ವೆಚ್ಚದ “ಪವಾಡ” ಒಂದಲ್ಲ 24 ಬಾರಿ ಸಂಭವಿಸಿದೆ, ಪ್ರಧಾನಿ ಒಬ್ಬ ಜಾದೂಗಾರ ಎಂದು ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

 

ಇದನ್ನು ಓದಿ: ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವಂತೆ ಪ್ರಧಾನಿಗೆ ಸಿದ್ದರಾಮಯ್ಯ ಪತ್ರ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...