Homeಕರ್ನಾಟಕಮೋದಿಗಿಂತ ಮುಂಚೆ ರಾಷ್ಟ್ರಮಟ್ಟದಲ್ಲಿ ಬಿಜೆಪಿ ಕಟ್ಟಿದವರ ಮೂಲೆಗುಂಪು: ಅಡ್ವಾಣಿ ಜೋಷಿಗೆ ಟಿಕೆಟ್ ಇಲ್ಲ

ಮೋದಿಗಿಂತ ಮುಂಚೆ ರಾಷ್ಟ್ರಮಟ್ಟದಲ್ಲಿ ಬಿಜೆಪಿ ಕಟ್ಟಿದವರ ಮೂಲೆಗುಂಪು: ಅಡ್ವಾಣಿ ಜೋಷಿಗೆ ಟಿಕೆಟ್ ಇಲ್ಲ

- Advertisement -
- Advertisement -

ಲಾಲ್ ಕೃಷ್ಣ ಅಡ್ವಾಣಿ ರಥಯಾತ್ರೆ ನಡೆಸುತ್ತಿದ್ದ ಸಂದರ್ಭದಲ್ಲಿ ಭಾಷಣ ಮಾಡುತ್ತಿದ್ದಾಗ ಅವರಿಗೆ ಮೈಕ್ ಹಿಡಿಯುತ್ತಿದ್ದವರು ಯಾರು ಗೊತ್ತೇ? ಬೇರ್ಯಾರು ಅಲ್ಲ, ಈಗಿನ ಪ್ರಧಾನಿ ನರೇಂದ್ರ ಮೋದಿ. 1999ರಲ್ಲಿ ಅಟಲ್ ಬಿಹಾರಿ ವಾಜಪೇಯಿರವರು ಪ್ರಧಾನಿಯಾಗಿದ್ದಾಗ ಅಡ್ವಾಣಿ ನಂತರದ ಮೂರನೇ ಸ್ಥಾನದಲ್ಲಿದ್ದ ಬಿಜೆಪಿಯ ರಾಷ್ಟ್ರ ಮಟ್ಟದ ನಾಯಕರೆಂದರೆ ಮುರಳಿ ಮನೋಹರ್ ಜೋಶಿ. ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್‍ರವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಬಿಜೆಪಿಗಾಗಿ ಸಾಕಷ್ಟು ದುಡಿದವರು.

ಈ ಮೂವರನ್ನು ಈಗ ನೆನೆಸಿಕೊಳ್ಳುತ್ತಿರುವುದಕ್ಕೆ ಒಂದು ಮಹತ್ತರ ಕಾರಣವಿದೆ. ಅದೇನೆಂದರೆ ಈ ಮೂವರಿಗೂ ಬಿಜೆಪಿ ಈ ಚುನಾವಣೆಯಲ್ಲಿ ಬೇಕಂತಲೇ ಟಿಕೇಟ್ ನಿರಾಕರಿಸಿದೆ. 80 ದಾಟಿದ ಹಿರಿಯರು ಈ ಇಳಿವಯಸ್ಸಿನಲ್ಲಿ ಸಂಸತ್ ಚುನಾವಣೆಯಲ್ಲಿ ನಿಂತು ಗೆಲ್ಲಲೇಬೇಕೆಂಬ ಯಾವುದೆ ಅನಿವಾರ್ಯತೆಗಳಿಲ್ಲದಿದ್ದರೂ ಅವರಿಗೆ ಟಿಕೆಟ್ ನೀಡುವಾಗ ಬಿಜೆಪಿ ಮತ್ತು ಮೋದಿ-ಷಾ ಜೋಡಿ ನಡೆದುಕೊಂಡ ರೀತಿ, ಪ್ರಕ್ರಿಯೆ ನೋಡಿದರೆ ತಮಗಾಗದವರನ್ನು ಹೇಗೆ ನಿರ್ನಾಮ ಮಾಡುತ್ತಾರೆ ಅನ್ನುವುದಕ್ಕೆ ತಾಜಾ ಉದಾಹರಣೆಯಂತಿದೆ.

ಈ ಕುರಿತು ಲಾಲ್ ಕೃಷ್ಣ ಅಡ್ವಾಣಿ ಬಹಿರಂಗವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲವಾದರೂ, ‘ಲೋಕಸಭೆಗೆ ತಾನು ಹೋಗುವ ಅಗತ್ಯವಿರಲಿಲ್ಲ. ಆದರೆ, ನಿಮಗೆ ಟಿಕೆಟ್ ಇಲ್ಲ ಎಂಬ ಕನಿಷ್ಠ ಮಾತುಕತೆಯನ್ನೂ ಮಾಡದೇ, ಮೀಡಿಯಾದಿಂದ ತಿಳಿದುಕೊಳ್ಳಬೇಕಾಗಿ’ ಬಂದುದಕ್ಕೆ ನೊಂದುಕೊಂಡಿದ್ದಾರೆಂದು ಹೇಳಲಾಗುತ್ತಿದೆ. ಆದರೆ ಮುರಳಿ ಮನೋಹರ್ ಜೋಶಿಯವರು ತಮ್ಮ ಕ್ಷೇತ್ರದ ಮತದಾರರಿಗೆ ಪತ್ರ ಬರೆದು ತನಗೆ ಇಲ್ಲಿ ಅಥವಾ ಎಲ್ಲಿಯೂ ಸ್ಪರ್ಧಿಸದಿರಲು ಪಕ್ಷ ಸೂಚಿಸಿದೆಯೆಂದು ಸೂಕ್ಷ್ಮವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿಂದೆಯೇ ವೇದಿಕೆಗಳಲ್ಲಿ ಅಡ್ವಾಣಿಯನ್ನು ವೇದಿಕೆಯ ಮೇಲೆ ಮೋದಿ ನಡೆಸಿಕೊಳ್ಳುತ್ತಿದ್ದ ದಾರುಣ ವಿಡಿಯೋಗಳು ವೈರಲ್ ಆಗಿದ್ದವು. ಅಡ್ವಾಣಿಯೇ ಮೋದಿಗೆ ಕೈ ಮುಗಿದರೂ ತಿರುಗಿಯೂ ನೋಡದೆ ಮೋದಿ ನಡೆದುಬಿಡುತ್ತಿದ್ದ. ಈಗ ಅವರು ಪ್ರತಿನಿಧಿಸುತ್ತಿದ್ದ ಗಾಂಧಿನಗರ ಕ್ಷೇತ್ರವನ್ನು ಮೋದಿ ಅವರಿಂದ ಕಿತ್ತು ಅಮಿತ್ ಷಾ ಗೆ ನೀಡಿದ್ದಾರೆ.

ಅಬ್ದುಲ್ ಕಲಾಂರವರೊಂದಿಗೆ ಕೆಲಸ ಮಾಡಿದ ಅನುಭವವಿದೆ ಎಂದು ಹೇಳಲಾಗುತ್ತಿರುವ ತೇಜಸ್ವಿನಿ ಅನಂತ್ ಕುಮಾರ್‍ರವರು ತಮ್ಮ ಪತಿಯ ನಿಧನದ ಬಳಿಕ ಅವರು ಪ್ರತಿನಿಧಿಸುತ್ತಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆಂದು ಹೇಳಿರಲಿಲ್ಲ. ಆದರೆ, ಹಲವು ಮುಖಂಡರು ಒತ್ತಾಯಿಸಿದ ನಂತರ ಟಿಕೆಟ್ ಆಕಾಂಕ್ಷಿಯಾಗಿದ್ದರು. ಬಿಜೆಪಿಯು ಸಹ ಟಿಕೆಟ್ ನೀಡುವ ಭರವಸೆ ನೀಡಿತ್ತಲ್ಲದೇ ಸಿದ್ಧತೆ ನಡೆಸುವಂತೆ ಸೂಚಿಸಿತ್ತು. ಕಳೆದ ಒಂದು ತಿಂಗಳಿಂದ ತಮ್ಮ ಬೆಂಬಲಿಗರೊಂದಿಗೆ ಕ್ಷೇತ್ರ ತಿರುಗಿ ಭರ್ಜರಿ ಪ್ರಚಾರ ಮಾಡಿಯೇ ಬಿಟ್ಟಿದ್ದರು. ಆದರೆ ಬಿಜೆಪಿ ಬೆಂಗಳೂರು ದಕ್ಷಿಣದ ಟಕೇಟ್ ಅನ್ನು ಯಾರಿಗೆಂದು ಘೋಷಿಸಿರಲಿಲ್ಲ. ಮೋದಿ ನಿಲ್ಲುತ್ತಾರೆಂದು ಪುಕಾರು ಸಹ ಎಬ್ಬಿಸಲಾಗಿತ್ತು. ನಾಮಪತ್ರ ಸಲ್ಲಿಕೆಯ ಕೊನೆದಿನ ತೇಜಸ್ವಿನಿಗೆ ವಂಚಿಸಿ ಕೋಮುವಾದಿ ಭಾಷಣಕಾರ ತೇಜಸ್ವಿ ಸೂರ್ಯನೆಂಬ ಎಳಸನಿಗೆ ನೀಡಿದೆ.

ಮುಂಚೆಯೇ ತೇಜಸ್ವಿ ಸೂರ್ಯನಿಗೆ ಟಿಕೆಟ್ ಕೊಟ್ಟರೆ ಅಸಮಾಧಾನ ಭುಗಿಲೇಳುತ್ತದೆ, ಬಂಡಾಯವನ್ನು ತಡೆಯಲು ಸಾಧ್ಯವಿಲ್ಲ ಎಂಬುದನ್ನರಿತಿದ್ದ ಹೈಕಮ್ಯಾಂಡ್ ಕೊನೆ ಕ್ಷಣದಲ್ಲಿ ಕೈ ಕೊಟ್ಟಿದ್ದಾರೆ. ಆದರೂ ತೇಜಸ್ವಿನಿರವರ ಅಭಿಮಾನಿಗಳು ಬೀದಿಗಿಳಿದು ಪ್ರತಿಭಟನೆಯನ್ನೇ ಮಾಡಿದ್ದಾರೆ. ತೇಜಸ್ವಿ ಸೂರ್ಯ ತೇಜಸ್ವಿನಿರವರ ಮನೆಗೆ ಆರ್ಶಿವಾದ ಪಡೆಯಲು ಹೋದಾಗ ಮನೆ ಬಾಗಿಲಿನಲ್ಲೇ ಬಿಜೆಪಿ ಕಾರ್ಯಕರ್ತರು ಅಡ್ಡಗಟ್ಟಿ ನೀನ್ಯಾರು ನಮಗೆ ಗೊತ್ತೆ ಇಲ್ಲ ಎಂದು ಅವಾಜ್ ಹಾಕಿದ್ದಾರೆ. ಮಾತಿಗೆ ಪಕ್ಷದ ಹೈಕಮಾಂಡ್ ಮಾತಿಗೆ ಬದ್ಧ ಎಂದು ತೇಜಸ್ವಿನಿರವರು ಹೇಳುತ್ತಿದ್ದರೂ ಅವರೊಳಗೆ ಕುದಿಯುತ್ತಿರುವ ಆಕ್ರೋಶ ತಣ್ಣಗಾಗುವ ಸೂಚನೆಗಳು ಕಾಣುತ್ತಿಲ್ಲ.

ಜೆಡಿಎಸ್‍ನ ಕುಟುಂಬ ರಾಜಕಾರಣದ ಬಗ್ಗೆ ಪುಂಖಾನುಪುಂಖವಾಗಿ ಪುಂಗಿ ಊದುತ್ತಿದ್ದ ಬಿಜೆಪಿಯವರು ಒಂದೇ ಮನೆಯಲ್ಲಿ ವಾಸವಿರುವ ಬಸವನಗುಡಿ ಶಾಸಕ ರವಿ ಸುಬ್ರಮಣ್ಯನವರ ಅಣ್ಣನ ಮಗ ತೇಜಸ್ವಿ ಸೂರ್ಯನಿಗೆ ಟಿಕೆಟ್ ಕೊಟ್ಟಿದ್ದು ಮಾತ್ರ ಅಪ್ಪಟ ಪ್ರಜಾಪ್ರಭುತ್ವವಂತೆ. ಈ ತೇಜಸ್ವಿ ಸೂರ್ಯನೋ ಮೈಕ್ ಮುಂದೆ ಬೊಬ್ಬಿರಿಯುವ ಭಾಷಣಕಾರ ಅಷ್ಟೆ. ಸಂಘಕ್ಕೆ ನಿಷ್ಟನಾಗಿದ್ದುದು, ತಮ್ಮ ಚಿಕ್ಕಪ್ಪ ಬಿಜೆಪಿಯಲ್ಲಿದ್ದುದು ಮಾತ್ರ ಈತನ ಅರ್ಹತೆ. ಇವನಿಗೆ ಟಿಕೆಟ್ ಕೊಟ್ಟಿದ್ದಕ್ಕೆ ಬಿಜೆಪಿಯ ಬಾಡಿಗೆ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಗೆ ಹೊಟ್ಟೆಯಲ್ಲಿ ಮೆಣಸಿನಕಾಯಿ ಅರೆದ ಹಾಗೆ ಆಗುತ್ತಿದೆ ಎಂದು ಸೋಷಿಯಲ್ ಮಿಡೀಯಾದಲ್ಲಿ ಟ್ರೋಲ್‍ಗಳು ಹರಿದಾಡುತ್ತಿವೆ.

ಮೇಲೆ ತಿಳಿಸಿದ ಮೂವರಿಗೆ ಟಿಕೇಟ್ ಸಿಗದಿರಲು ಸ್ಪಷ್ಟ ಕಾರಣಗಳಿವೆ. ಈ ಮೂವರು ಮೋದಿ ಕ್ಯಾಂಪ್ ಅಲ್ಲ. ಅಡ್ವಾಣಿ, ಜೋಶಿ, ಅನಂತ್ ಕುಮಾರ್ ಮೋದಿಗಿಂತ ಮುಂಚೆ ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯರಾಗಿದ್ದವರು. 2012ರ ನಂತರ ದಿಢೀರನೇ ಇಡೀ ಪಕ್ಷದ ಮೇಲೆ ಹಿಡಿತ ಸಾಧಿಸಿದ ಮೋದಿಗೆ ಆ ಮುಂಚಿನವರ್ಯಾರೂ ಬೇಕಿರಲಿಲ್ಲ. ಹಾಗಾಗಿಯೇ ಜಸ್ವಂತ್‍ಸಿಂಗ್, ಯಶ್ವಂತ್ ಸಿನ್ಹಾ, ಉಮಾಭಾರತಿ ಮತ್ತಿತರೆಲ್ಲರೂ ಮೂಲೆಗುಂಪಾದರು. ಸುಷ್ಮಾ ಸ್ಮರಾಜ್‍ರಿಗೆ ಸಹಾ ರಾಜಕೀಯವೇ ಸಾಕಪ್ಪ ಎನ್ನುವಂತಾಗಿ ನಿವೃತ್ತಿಯ ಮಾತುಗಳನ್ನಾಡುತ್ತಿದ್ದಾರೆ.

80 ದಾಟಿದ ಹಿರಿಯರು ಲೋಕಸಭೆಯಲ್ಲಿ ಇರುವ ಅಗತ್ಯವಿಲ್ಲ. (ಈ ಮಾತು ದೇವೇಗೌಡರಿಗೂ ಅನ್ವಯಿಸಬೇಕು). ಆದರೆ, ಹಿರಿಯರನ್ನು ನಡೆಸಿಕೊಳ್ಳುವುದಕ್ಕೆ ಇರಬೇಕಾದ ರೀತಿ-ನೀತಿಗಳೂ ಬಿಜೆಪಿ ಪಕ್ಷದಲ್ಲಿದ್ದಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...