Homeಕರ್ನಾಟಕಮೋದಿಗಿಂತ ಮುಂಚೆ ರಾಷ್ಟ್ರಮಟ್ಟದಲ್ಲಿ ಬಿಜೆಪಿ ಕಟ್ಟಿದವರ ಮೂಲೆಗುಂಪು: ಅಡ್ವಾಣಿ ಜೋಷಿಗೆ ಟಿಕೆಟ್ ಇಲ್ಲ

ಮೋದಿಗಿಂತ ಮುಂಚೆ ರಾಷ್ಟ್ರಮಟ್ಟದಲ್ಲಿ ಬಿಜೆಪಿ ಕಟ್ಟಿದವರ ಮೂಲೆಗುಂಪು: ಅಡ್ವಾಣಿ ಜೋಷಿಗೆ ಟಿಕೆಟ್ ಇಲ್ಲ

- Advertisement -
- Advertisement -

ಲಾಲ್ ಕೃಷ್ಣ ಅಡ್ವಾಣಿ ರಥಯಾತ್ರೆ ನಡೆಸುತ್ತಿದ್ದ ಸಂದರ್ಭದಲ್ಲಿ ಭಾಷಣ ಮಾಡುತ್ತಿದ್ದಾಗ ಅವರಿಗೆ ಮೈಕ್ ಹಿಡಿಯುತ್ತಿದ್ದವರು ಯಾರು ಗೊತ್ತೇ? ಬೇರ್ಯಾರು ಅಲ್ಲ, ಈಗಿನ ಪ್ರಧಾನಿ ನರೇಂದ್ರ ಮೋದಿ. 1999ರಲ್ಲಿ ಅಟಲ್ ಬಿಹಾರಿ ವಾಜಪೇಯಿರವರು ಪ್ರಧಾನಿಯಾಗಿದ್ದಾಗ ಅಡ್ವಾಣಿ ನಂತರದ ಮೂರನೇ ಸ್ಥಾನದಲ್ಲಿದ್ದ ಬಿಜೆಪಿಯ ರಾಷ್ಟ್ರ ಮಟ್ಟದ ನಾಯಕರೆಂದರೆ ಮುರಳಿ ಮನೋಹರ್ ಜೋಶಿ. ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್‍ರವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಬಿಜೆಪಿಗಾಗಿ ಸಾಕಷ್ಟು ದುಡಿದವರು.

ಈ ಮೂವರನ್ನು ಈಗ ನೆನೆಸಿಕೊಳ್ಳುತ್ತಿರುವುದಕ್ಕೆ ಒಂದು ಮಹತ್ತರ ಕಾರಣವಿದೆ. ಅದೇನೆಂದರೆ ಈ ಮೂವರಿಗೂ ಬಿಜೆಪಿ ಈ ಚುನಾವಣೆಯಲ್ಲಿ ಬೇಕಂತಲೇ ಟಿಕೇಟ್ ನಿರಾಕರಿಸಿದೆ. 80 ದಾಟಿದ ಹಿರಿಯರು ಈ ಇಳಿವಯಸ್ಸಿನಲ್ಲಿ ಸಂಸತ್ ಚುನಾವಣೆಯಲ್ಲಿ ನಿಂತು ಗೆಲ್ಲಲೇಬೇಕೆಂಬ ಯಾವುದೆ ಅನಿವಾರ್ಯತೆಗಳಿಲ್ಲದಿದ್ದರೂ ಅವರಿಗೆ ಟಿಕೆಟ್ ನೀಡುವಾಗ ಬಿಜೆಪಿ ಮತ್ತು ಮೋದಿ-ಷಾ ಜೋಡಿ ನಡೆದುಕೊಂಡ ರೀತಿ, ಪ್ರಕ್ರಿಯೆ ನೋಡಿದರೆ ತಮಗಾಗದವರನ್ನು ಹೇಗೆ ನಿರ್ನಾಮ ಮಾಡುತ್ತಾರೆ ಅನ್ನುವುದಕ್ಕೆ ತಾಜಾ ಉದಾಹರಣೆಯಂತಿದೆ.

ಈ ಕುರಿತು ಲಾಲ್ ಕೃಷ್ಣ ಅಡ್ವಾಣಿ ಬಹಿರಂಗವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲವಾದರೂ, ‘ಲೋಕಸಭೆಗೆ ತಾನು ಹೋಗುವ ಅಗತ್ಯವಿರಲಿಲ್ಲ. ಆದರೆ, ನಿಮಗೆ ಟಿಕೆಟ್ ಇಲ್ಲ ಎಂಬ ಕನಿಷ್ಠ ಮಾತುಕತೆಯನ್ನೂ ಮಾಡದೇ, ಮೀಡಿಯಾದಿಂದ ತಿಳಿದುಕೊಳ್ಳಬೇಕಾಗಿ’ ಬಂದುದಕ್ಕೆ ನೊಂದುಕೊಂಡಿದ್ದಾರೆಂದು ಹೇಳಲಾಗುತ್ತಿದೆ. ಆದರೆ ಮುರಳಿ ಮನೋಹರ್ ಜೋಶಿಯವರು ತಮ್ಮ ಕ್ಷೇತ್ರದ ಮತದಾರರಿಗೆ ಪತ್ರ ಬರೆದು ತನಗೆ ಇಲ್ಲಿ ಅಥವಾ ಎಲ್ಲಿಯೂ ಸ್ಪರ್ಧಿಸದಿರಲು ಪಕ್ಷ ಸೂಚಿಸಿದೆಯೆಂದು ಸೂಕ್ಷ್ಮವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿಂದೆಯೇ ವೇದಿಕೆಗಳಲ್ಲಿ ಅಡ್ವಾಣಿಯನ್ನು ವೇದಿಕೆಯ ಮೇಲೆ ಮೋದಿ ನಡೆಸಿಕೊಳ್ಳುತ್ತಿದ್ದ ದಾರುಣ ವಿಡಿಯೋಗಳು ವೈರಲ್ ಆಗಿದ್ದವು. ಅಡ್ವಾಣಿಯೇ ಮೋದಿಗೆ ಕೈ ಮುಗಿದರೂ ತಿರುಗಿಯೂ ನೋಡದೆ ಮೋದಿ ನಡೆದುಬಿಡುತ್ತಿದ್ದ. ಈಗ ಅವರು ಪ್ರತಿನಿಧಿಸುತ್ತಿದ್ದ ಗಾಂಧಿನಗರ ಕ್ಷೇತ್ರವನ್ನು ಮೋದಿ ಅವರಿಂದ ಕಿತ್ತು ಅಮಿತ್ ಷಾ ಗೆ ನೀಡಿದ್ದಾರೆ.

ಅಬ್ದುಲ್ ಕಲಾಂರವರೊಂದಿಗೆ ಕೆಲಸ ಮಾಡಿದ ಅನುಭವವಿದೆ ಎಂದು ಹೇಳಲಾಗುತ್ತಿರುವ ತೇಜಸ್ವಿನಿ ಅನಂತ್ ಕುಮಾರ್‍ರವರು ತಮ್ಮ ಪತಿಯ ನಿಧನದ ಬಳಿಕ ಅವರು ಪ್ರತಿನಿಧಿಸುತ್ತಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆಂದು ಹೇಳಿರಲಿಲ್ಲ. ಆದರೆ, ಹಲವು ಮುಖಂಡರು ಒತ್ತಾಯಿಸಿದ ನಂತರ ಟಿಕೆಟ್ ಆಕಾಂಕ್ಷಿಯಾಗಿದ್ದರು. ಬಿಜೆಪಿಯು ಸಹ ಟಿಕೆಟ್ ನೀಡುವ ಭರವಸೆ ನೀಡಿತ್ತಲ್ಲದೇ ಸಿದ್ಧತೆ ನಡೆಸುವಂತೆ ಸೂಚಿಸಿತ್ತು. ಕಳೆದ ಒಂದು ತಿಂಗಳಿಂದ ತಮ್ಮ ಬೆಂಬಲಿಗರೊಂದಿಗೆ ಕ್ಷೇತ್ರ ತಿರುಗಿ ಭರ್ಜರಿ ಪ್ರಚಾರ ಮಾಡಿಯೇ ಬಿಟ್ಟಿದ್ದರು. ಆದರೆ ಬಿಜೆಪಿ ಬೆಂಗಳೂರು ದಕ್ಷಿಣದ ಟಕೇಟ್ ಅನ್ನು ಯಾರಿಗೆಂದು ಘೋಷಿಸಿರಲಿಲ್ಲ. ಮೋದಿ ನಿಲ್ಲುತ್ತಾರೆಂದು ಪುಕಾರು ಸಹ ಎಬ್ಬಿಸಲಾಗಿತ್ತು. ನಾಮಪತ್ರ ಸಲ್ಲಿಕೆಯ ಕೊನೆದಿನ ತೇಜಸ್ವಿನಿಗೆ ವಂಚಿಸಿ ಕೋಮುವಾದಿ ಭಾಷಣಕಾರ ತೇಜಸ್ವಿ ಸೂರ್ಯನೆಂಬ ಎಳಸನಿಗೆ ನೀಡಿದೆ.

ಮುಂಚೆಯೇ ತೇಜಸ್ವಿ ಸೂರ್ಯನಿಗೆ ಟಿಕೆಟ್ ಕೊಟ್ಟರೆ ಅಸಮಾಧಾನ ಭುಗಿಲೇಳುತ್ತದೆ, ಬಂಡಾಯವನ್ನು ತಡೆಯಲು ಸಾಧ್ಯವಿಲ್ಲ ಎಂಬುದನ್ನರಿತಿದ್ದ ಹೈಕಮ್ಯಾಂಡ್ ಕೊನೆ ಕ್ಷಣದಲ್ಲಿ ಕೈ ಕೊಟ್ಟಿದ್ದಾರೆ. ಆದರೂ ತೇಜಸ್ವಿನಿರವರ ಅಭಿಮಾನಿಗಳು ಬೀದಿಗಿಳಿದು ಪ್ರತಿಭಟನೆಯನ್ನೇ ಮಾಡಿದ್ದಾರೆ. ತೇಜಸ್ವಿ ಸೂರ್ಯ ತೇಜಸ್ವಿನಿರವರ ಮನೆಗೆ ಆರ್ಶಿವಾದ ಪಡೆಯಲು ಹೋದಾಗ ಮನೆ ಬಾಗಿಲಿನಲ್ಲೇ ಬಿಜೆಪಿ ಕಾರ್ಯಕರ್ತರು ಅಡ್ಡಗಟ್ಟಿ ನೀನ್ಯಾರು ನಮಗೆ ಗೊತ್ತೆ ಇಲ್ಲ ಎಂದು ಅವಾಜ್ ಹಾಕಿದ್ದಾರೆ. ಮಾತಿಗೆ ಪಕ್ಷದ ಹೈಕಮಾಂಡ್ ಮಾತಿಗೆ ಬದ್ಧ ಎಂದು ತೇಜಸ್ವಿನಿರವರು ಹೇಳುತ್ತಿದ್ದರೂ ಅವರೊಳಗೆ ಕುದಿಯುತ್ತಿರುವ ಆಕ್ರೋಶ ತಣ್ಣಗಾಗುವ ಸೂಚನೆಗಳು ಕಾಣುತ್ತಿಲ್ಲ.

ಜೆಡಿಎಸ್‍ನ ಕುಟುಂಬ ರಾಜಕಾರಣದ ಬಗ್ಗೆ ಪುಂಖಾನುಪುಂಖವಾಗಿ ಪುಂಗಿ ಊದುತ್ತಿದ್ದ ಬಿಜೆಪಿಯವರು ಒಂದೇ ಮನೆಯಲ್ಲಿ ವಾಸವಿರುವ ಬಸವನಗುಡಿ ಶಾಸಕ ರವಿ ಸುಬ್ರಮಣ್ಯನವರ ಅಣ್ಣನ ಮಗ ತೇಜಸ್ವಿ ಸೂರ್ಯನಿಗೆ ಟಿಕೆಟ್ ಕೊಟ್ಟಿದ್ದು ಮಾತ್ರ ಅಪ್ಪಟ ಪ್ರಜಾಪ್ರಭುತ್ವವಂತೆ. ಈ ತೇಜಸ್ವಿ ಸೂರ್ಯನೋ ಮೈಕ್ ಮುಂದೆ ಬೊಬ್ಬಿರಿಯುವ ಭಾಷಣಕಾರ ಅಷ್ಟೆ. ಸಂಘಕ್ಕೆ ನಿಷ್ಟನಾಗಿದ್ದುದು, ತಮ್ಮ ಚಿಕ್ಕಪ್ಪ ಬಿಜೆಪಿಯಲ್ಲಿದ್ದುದು ಮಾತ್ರ ಈತನ ಅರ್ಹತೆ. ಇವನಿಗೆ ಟಿಕೆಟ್ ಕೊಟ್ಟಿದ್ದಕ್ಕೆ ಬಿಜೆಪಿಯ ಬಾಡಿಗೆ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಗೆ ಹೊಟ್ಟೆಯಲ್ಲಿ ಮೆಣಸಿನಕಾಯಿ ಅರೆದ ಹಾಗೆ ಆಗುತ್ತಿದೆ ಎಂದು ಸೋಷಿಯಲ್ ಮಿಡೀಯಾದಲ್ಲಿ ಟ್ರೋಲ್‍ಗಳು ಹರಿದಾಡುತ್ತಿವೆ.

ಮೇಲೆ ತಿಳಿಸಿದ ಮೂವರಿಗೆ ಟಿಕೇಟ್ ಸಿಗದಿರಲು ಸ್ಪಷ್ಟ ಕಾರಣಗಳಿವೆ. ಈ ಮೂವರು ಮೋದಿ ಕ್ಯಾಂಪ್ ಅಲ್ಲ. ಅಡ್ವಾಣಿ, ಜೋಶಿ, ಅನಂತ್ ಕುಮಾರ್ ಮೋದಿಗಿಂತ ಮುಂಚೆ ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯರಾಗಿದ್ದವರು. 2012ರ ನಂತರ ದಿಢೀರನೇ ಇಡೀ ಪಕ್ಷದ ಮೇಲೆ ಹಿಡಿತ ಸಾಧಿಸಿದ ಮೋದಿಗೆ ಆ ಮುಂಚಿನವರ್ಯಾರೂ ಬೇಕಿರಲಿಲ್ಲ. ಹಾಗಾಗಿಯೇ ಜಸ್ವಂತ್‍ಸಿಂಗ್, ಯಶ್ವಂತ್ ಸಿನ್ಹಾ, ಉಮಾಭಾರತಿ ಮತ್ತಿತರೆಲ್ಲರೂ ಮೂಲೆಗುಂಪಾದರು. ಸುಷ್ಮಾ ಸ್ಮರಾಜ್‍ರಿಗೆ ಸಹಾ ರಾಜಕೀಯವೇ ಸಾಕಪ್ಪ ಎನ್ನುವಂತಾಗಿ ನಿವೃತ್ತಿಯ ಮಾತುಗಳನ್ನಾಡುತ್ತಿದ್ದಾರೆ.

80 ದಾಟಿದ ಹಿರಿಯರು ಲೋಕಸಭೆಯಲ್ಲಿ ಇರುವ ಅಗತ್ಯವಿಲ್ಲ. (ಈ ಮಾತು ದೇವೇಗೌಡರಿಗೂ ಅನ್ವಯಿಸಬೇಕು). ಆದರೆ, ಹಿರಿಯರನ್ನು ನಡೆಸಿಕೊಳ್ಳುವುದಕ್ಕೆ ಇರಬೇಕಾದ ರೀತಿ-ನೀತಿಗಳೂ ಬಿಜೆಪಿ ಪಕ್ಷದಲ್ಲಿದ್ದಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...