Homeಕರ್ನಾಟಕಮೋದಿಗಿಂತ ಮುಂಚೆ ರಾಷ್ಟ್ರಮಟ್ಟದಲ್ಲಿ ಬಿಜೆಪಿ ಕಟ್ಟಿದವರ ಮೂಲೆಗುಂಪು: ಅಡ್ವಾಣಿ ಜೋಷಿಗೆ ಟಿಕೆಟ್ ಇಲ್ಲ

ಮೋದಿಗಿಂತ ಮುಂಚೆ ರಾಷ್ಟ್ರಮಟ್ಟದಲ್ಲಿ ಬಿಜೆಪಿ ಕಟ್ಟಿದವರ ಮೂಲೆಗುಂಪು: ಅಡ್ವಾಣಿ ಜೋಷಿಗೆ ಟಿಕೆಟ್ ಇಲ್ಲ

- Advertisement -
- Advertisement -

ಲಾಲ್ ಕೃಷ್ಣ ಅಡ್ವಾಣಿ ರಥಯಾತ್ರೆ ನಡೆಸುತ್ತಿದ್ದ ಸಂದರ್ಭದಲ್ಲಿ ಭಾಷಣ ಮಾಡುತ್ತಿದ್ದಾಗ ಅವರಿಗೆ ಮೈಕ್ ಹಿಡಿಯುತ್ತಿದ್ದವರು ಯಾರು ಗೊತ್ತೇ? ಬೇರ್ಯಾರು ಅಲ್ಲ, ಈಗಿನ ಪ್ರಧಾನಿ ನರೇಂದ್ರ ಮೋದಿ. 1999ರಲ್ಲಿ ಅಟಲ್ ಬಿಹಾರಿ ವಾಜಪೇಯಿರವರು ಪ್ರಧಾನಿಯಾಗಿದ್ದಾಗ ಅಡ್ವಾಣಿ ನಂತರದ ಮೂರನೇ ಸ್ಥಾನದಲ್ಲಿದ್ದ ಬಿಜೆಪಿಯ ರಾಷ್ಟ್ರ ಮಟ್ಟದ ನಾಯಕರೆಂದರೆ ಮುರಳಿ ಮನೋಹರ್ ಜೋಶಿ. ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್‍ರವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಬಿಜೆಪಿಗಾಗಿ ಸಾಕಷ್ಟು ದುಡಿದವರು.

ಈ ಮೂವರನ್ನು ಈಗ ನೆನೆಸಿಕೊಳ್ಳುತ್ತಿರುವುದಕ್ಕೆ ಒಂದು ಮಹತ್ತರ ಕಾರಣವಿದೆ. ಅದೇನೆಂದರೆ ಈ ಮೂವರಿಗೂ ಬಿಜೆಪಿ ಈ ಚುನಾವಣೆಯಲ್ಲಿ ಬೇಕಂತಲೇ ಟಿಕೇಟ್ ನಿರಾಕರಿಸಿದೆ. 80 ದಾಟಿದ ಹಿರಿಯರು ಈ ಇಳಿವಯಸ್ಸಿನಲ್ಲಿ ಸಂಸತ್ ಚುನಾವಣೆಯಲ್ಲಿ ನಿಂತು ಗೆಲ್ಲಲೇಬೇಕೆಂಬ ಯಾವುದೆ ಅನಿವಾರ್ಯತೆಗಳಿಲ್ಲದಿದ್ದರೂ ಅವರಿಗೆ ಟಿಕೆಟ್ ನೀಡುವಾಗ ಬಿಜೆಪಿ ಮತ್ತು ಮೋದಿ-ಷಾ ಜೋಡಿ ನಡೆದುಕೊಂಡ ರೀತಿ, ಪ್ರಕ್ರಿಯೆ ನೋಡಿದರೆ ತಮಗಾಗದವರನ್ನು ಹೇಗೆ ನಿರ್ನಾಮ ಮಾಡುತ್ತಾರೆ ಅನ್ನುವುದಕ್ಕೆ ತಾಜಾ ಉದಾಹರಣೆಯಂತಿದೆ.

ಈ ಕುರಿತು ಲಾಲ್ ಕೃಷ್ಣ ಅಡ್ವಾಣಿ ಬಹಿರಂಗವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲವಾದರೂ, ‘ಲೋಕಸಭೆಗೆ ತಾನು ಹೋಗುವ ಅಗತ್ಯವಿರಲಿಲ್ಲ. ಆದರೆ, ನಿಮಗೆ ಟಿಕೆಟ್ ಇಲ್ಲ ಎಂಬ ಕನಿಷ್ಠ ಮಾತುಕತೆಯನ್ನೂ ಮಾಡದೇ, ಮೀಡಿಯಾದಿಂದ ತಿಳಿದುಕೊಳ್ಳಬೇಕಾಗಿ’ ಬಂದುದಕ್ಕೆ ನೊಂದುಕೊಂಡಿದ್ದಾರೆಂದು ಹೇಳಲಾಗುತ್ತಿದೆ. ಆದರೆ ಮುರಳಿ ಮನೋಹರ್ ಜೋಶಿಯವರು ತಮ್ಮ ಕ್ಷೇತ್ರದ ಮತದಾರರಿಗೆ ಪತ್ರ ಬರೆದು ತನಗೆ ಇಲ್ಲಿ ಅಥವಾ ಎಲ್ಲಿಯೂ ಸ್ಪರ್ಧಿಸದಿರಲು ಪಕ್ಷ ಸೂಚಿಸಿದೆಯೆಂದು ಸೂಕ್ಷ್ಮವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿಂದೆಯೇ ವೇದಿಕೆಗಳಲ್ಲಿ ಅಡ್ವಾಣಿಯನ್ನು ವೇದಿಕೆಯ ಮೇಲೆ ಮೋದಿ ನಡೆಸಿಕೊಳ್ಳುತ್ತಿದ್ದ ದಾರುಣ ವಿಡಿಯೋಗಳು ವೈರಲ್ ಆಗಿದ್ದವು. ಅಡ್ವಾಣಿಯೇ ಮೋದಿಗೆ ಕೈ ಮುಗಿದರೂ ತಿರುಗಿಯೂ ನೋಡದೆ ಮೋದಿ ನಡೆದುಬಿಡುತ್ತಿದ್ದ. ಈಗ ಅವರು ಪ್ರತಿನಿಧಿಸುತ್ತಿದ್ದ ಗಾಂಧಿನಗರ ಕ್ಷೇತ್ರವನ್ನು ಮೋದಿ ಅವರಿಂದ ಕಿತ್ತು ಅಮಿತ್ ಷಾ ಗೆ ನೀಡಿದ್ದಾರೆ.

ಅಬ್ದುಲ್ ಕಲಾಂರವರೊಂದಿಗೆ ಕೆಲಸ ಮಾಡಿದ ಅನುಭವವಿದೆ ಎಂದು ಹೇಳಲಾಗುತ್ತಿರುವ ತೇಜಸ್ವಿನಿ ಅನಂತ್ ಕುಮಾರ್‍ರವರು ತಮ್ಮ ಪತಿಯ ನಿಧನದ ಬಳಿಕ ಅವರು ಪ್ರತಿನಿಧಿಸುತ್ತಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆಂದು ಹೇಳಿರಲಿಲ್ಲ. ಆದರೆ, ಹಲವು ಮುಖಂಡರು ಒತ್ತಾಯಿಸಿದ ನಂತರ ಟಿಕೆಟ್ ಆಕಾಂಕ್ಷಿಯಾಗಿದ್ದರು. ಬಿಜೆಪಿಯು ಸಹ ಟಿಕೆಟ್ ನೀಡುವ ಭರವಸೆ ನೀಡಿತ್ತಲ್ಲದೇ ಸಿದ್ಧತೆ ನಡೆಸುವಂತೆ ಸೂಚಿಸಿತ್ತು. ಕಳೆದ ಒಂದು ತಿಂಗಳಿಂದ ತಮ್ಮ ಬೆಂಬಲಿಗರೊಂದಿಗೆ ಕ್ಷೇತ್ರ ತಿರುಗಿ ಭರ್ಜರಿ ಪ್ರಚಾರ ಮಾಡಿಯೇ ಬಿಟ್ಟಿದ್ದರು. ಆದರೆ ಬಿಜೆಪಿ ಬೆಂಗಳೂರು ದಕ್ಷಿಣದ ಟಕೇಟ್ ಅನ್ನು ಯಾರಿಗೆಂದು ಘೋಷಿಸಿರಲಿಲ್ಲ. ಮೋದಿ ನಿಲ್ಲುತ್ತಾರೆಂದು ಪುಕಾರು ಸಹ ಎಬ್ಬಿಸಲಾಗಿತ್ತು. ನಾಮಪತ್ರ ಸಲ್ಲಿಕೆಯ ಕೊನೆದಿನ ತೇಜಸ್ವಿನಿಗೆ ವಂಚಿಸಿ ಕೋಮುವಾದಿ ಭಾಷಣಕಾರ ತೇಜಸ್ವಿ ಸೂರ್ಯನೆಂಬ ಎಳಸನಿಗೆ ನೀಡಿದೆ.

ಮುಂಚೆಯೇ ತೇಜಸ್ವಿ ಸೂರ್ಯನಿಗೆ ಟಿಕೆಟ್ ಕೊಟ್ಟರೆ ಅಸಮಾಧಾನ ಭುಗಿಲೇಳುತ್ತದೆ, ಬಂಡಾಯವನ್ನು ತಡೆಯಲು ಸಾಧ್ಯವಿಲ್ಲ ಎಂಬುದನ್ನರಿತಿದ್ದ ಹೈಕಮ್ಯಾಂಡ್ ಕೊನೆ ಕ್ಷಣದಲ್ಲಿ ಕೈ ಕೊಟ್ಟಿದ್ದಾರೆ. ಆದರೂ ತೇಜಸ್ವಿನಿರವರ ಅಭಿಮಾನಿಗಳು ಬೀದಿಗಿಳಿದು ಪ್ರತಿಭಟನೆಯನ್ನೇ ಮಾಡಿದ್ದಾರೆ. ತೇಜಸ್ವಿ ಸೂರ್ಯ ತೇಜಸ್ವಿನಿರವರ ಮನೆಗೆ ಆರ್ಶಿವಾದ ಪಡೆಯಲು ಹೋದಾಗ ಮನೆ ಬಾಗಿಲಿನಲ್ಲೇ ಬಿಜೆಪಿ ಕಾರ್ಯಕರ್ತರು ಅಡ್ಡಗಟ್ಟಿ ನೀನ್ಯಾರು ನಮಗೆ ಗೊತ್ತೆ ಇಲ್ಲ ಎಂದು ಅವಾಜ್ ಹಾಕಿದ್ದಾರೆ. ಮಾತಿಗೆ ಪಕ್ಷದ ಹೈಕಮಾಂಡ್ ಮಾತಿಗೆ ಬದ್ಧ ಎಂದು ತೇಜಸ್ವಿನಿರವರು ಹೇಳುತ್ತಿದ್ದರೂ ಅವರೊಳಗೆ ಕುದಿಯುತ್ತಿರುವ ಆಕ್ರೋಶ ತಣ್ಣಗಾಗುವ ಸೂಚನೆಗಳು ಕಾಣುತ್ತಿಲ್ಲ.

ಜೆಡಿಎಸ್‍ನ ಕುಟುಂಬ ರಾಜಕಾರಣದ ಬಗ್ಗೆ ಪುಂಖಾನುಪುಂಖವಾಗಿ ಪುಂಗಿ ಊದುತ್ತಿದ್ದ ಬಿಜೆಪಿಯವರು ಒಂದೇ ಮನೆಯಲ್ಲಿ ವಾಸವಿರುವ ಬಸವನಗುಡಿ ಶಾಸಕ ರವಿ ಸುಬ್ರಮಣ್ಯನವರ ಅಣ್ಣನ ಮಗ ತೇಜಸ್ವಿ ಸೂರ್ಯನಿಗೆ ಟಿಕೆಟ್ ಕೊಟ್ಟಿದ್ದು ಮಾತ್ರ ಅಪ್ಪಟ ಪ್ರಜಾಪ್ರಭುತ್ವವಂತೆ. ಈ ತೇಜಸ್ವಿ ಸೂರ್ಯನೋ ಮೈಕ್ ಮುಂದೆ ಬೊಬ್ಬಿರಿಯುವ ಭಾಷಣಕಾರ ಅಷ್ಟೆ. ಸಂಘಕ್ಕೆ ನಿಷ್ಟನಾಗಿದ್ದುದು, ತಮ್ಮ ಚಿಕ್ಕಪ್ಪ ಬಿಜೆಪಿಯಲ್ಲಿದ್ದುದು ಮಾತ್ರ ಈತನ ಅರ್ಹತೆ. ಇವನಿಗೆ ಟಿಕೆಟ್ ಕೊಟ್ಟಿದ್ದಕ್ಕೆ ಬಿಜೆಪಿಯ ಬಾಡಿಗೆ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಗೆ ಹೊಟ್ಟೆಯಲ್ಲಿ ಮೆಣಸಿನಕಾಯಿ ಅರೆದ ಹಾಗೆ ಆಗುತ್ತಿದೆ ಎಂದು ಸೋಷಿಯಲ್ ಮಿಡೀಯಾದಲ್ಲಿ ಟ್ರೋಲ್‍ಗಳು ಹರಿದಾಡುತ್ತಿವೆ.

ಮೇಲೆ ತಿಳಿಸಿದ ಮೂವರಿಗೆ ಟಿಕೇಟ್ ಸಿಗದಿರಲು ಸ್ಪಷ್ಟ ಕಾರಣಗಳಿವೆ. ಈ ಮೂವರು ಮೋದಿ ಕ್ಯಾಂಪ್ ಅಲ್ಲ. ಅಡ್ವಾಣಿ, ಜೋಶಿ, ಅನಂತ್ ಕುಮಾರ್ ಮೋದಿಗಿಂತ ಮುಂಚೆ ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯರಾಗಿದ್ದವರು. 2012ರ ನಂತರ ದಿಢೀರನೇ ಇಡೀ ಪಕ್ಷದ ಮೇಲೆ ಹಿಡಿತ ಸಾಧಿಸಿದ ಮೋದಿಗೆ ಆ ಮುಂಚಿನವರ್ಯಾರೂ ಬೇಕಿರಲಿಲ್ಲ. ಹಾಗಾಗಿಯೇ ಜಸ್ವಂತ್‍ಸಿಂಗ್, ಯಶ್ವಂತ್ ಸಿನ್ಹಾ, ಉಮಾಭಾರತಿ ಮತ್ತಿತರೆಲ್ಲರೂ ಮೂಲೆಗುಂಪಾದರು. ಸುಷ್ಮಾ ಸ್ಮರಾಜ್‍ರಿಗೆ ಸಹಾ ರಾಜಕೀಯವೇ ಸಾಕಪ್ಪ ಎನ್ನುವಂತಾಗಿ ನಿವೃತ್ತಿಯ ಮಾತುಗಳನ್ನಾಡುತ್ತಿದ್ದಾರೆ.

80 ದಾಟಿದ ಹಿರಿಯರು ಲೋಕಸಭೆಯಲ್ಲಿ ಇರುವ ಅಗತ್ಯವಿಲ್ಲ. (ಈ ಮಾತು ದೇವೇಗೌಡರಿಗೂ ಅನ್ವಯಿಸಬೇಕು). ಆದರೆ, ಹಿರಿಯರನ್ನು ನಡೆಸಿಕೊಳ್ಳುವುದಕ್ಕೆ ಇರಬೇಕಾದ ರೀತಿ-ನೀತಿಗಳೂ ಬಿಜೆಪಿ ಪಕ್ಷದಲ್ಲಿದ್ದಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...