Homeಕರ್ನಾಟಕಮೋದಿಗಿಂತ ಮುಂಚೆ ರಾಷ್ಟ್ರಮಟ್ಟದಲ್ಲಿ ಬಿಜೆಪಿ ಕಟ್ಟಿದವರ ಮೂಲೆಗುಂಪು: ಅಡ್ವಾಣಿ ಜೋಷಿಗೆ ಟಿಕೆಟ್ ಇಲ್ಲ

ಮೋದಿಗಿಂತ ಮುಂಚೆ ರಾಷ್ಟ್ರಮಟ್ಟದಲ್ಲಿ ಬಿಜೆಪಿ ಕಟ್ಟಿದವರ ಮೂಲೆಗುಂಪು: ಅಡ್ವಾಣಿ ಜೋಷಿಗೆ ಟಿಕೆಟ್ ಇಲ್ಲ

- Advertisement -
- Advertisement -

ಲಾಲ್ ಕೃಷ್ಣ ಅಡ್ವಾಣಿ ರಥಯಾತ್ರೆ ನಡೆಸುತ್ತಿದ್ದ ಸಂದರ್ಭದಲ್ಲಿ ಭಾಷಣ ಮಾಡುತ್ತಿದ್ದಾಗ ಅವರಿಗೆ ಮೈಕ್ ಹಿಡಿಯುತ್ತಿದ್ದವರು ಯಾರು ಗೊತ್ತೇ? ಬೇರ್ಯಾರು ಅಲ್ಲ, ಈಗಿನ ಪ್ರಧಾನಿ ನರೇಂದ್ರ ಮೋದಿ. 1999ರಲ್ಲಿ ಅಟಲ್ ಬಿಹಾರಿ ವಾಜಪೇಯಿರವರು ಪ್ರಧಾನಿಯಾಗಿದ್ದಾಗ ಅಡ್ವಾಣಿ ನಂತರದ ಮೂರನೇ ಸ್ಥಾನದಲ್ಲಿದ್ದ ಬಿಜೆಪಿಯ ರಾಷ್ಟ್ರ ಮಟ್ಟದ ನಾಯಕರೆಂದರೆ ಮುರಳಿ ಮನೋಹರ್ ಜೋಶಿ. ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್‍ರವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಬಿಜೆಪಿಗಾಗಿ ಸಾಕಷ್ಟು ದುಡಿದವರು.

ಈ ಮೂವರನ್ನು ಈಗ ನೆನೆಸಿಕೊಳ್ಳುತ್ತಿರುವುದಕ್ಕೆ ಒಂದು ಮಹತ್ತರ ಕಾರಣವಿದೆ. ಅದೇನೆಂದರೆ ಈ ಮೂವರಿಗೂ ಬಿಜೆಪಿ ಈ ಚುನಾವಣೆಯಲ್ಲಿ ಬೇಕಂತಲೇ ಟಿಕೇಟ್ ನಿರಾಕರಿಸಿದೆ. 80 ದಾಟಿದ ಹಿರಿಯರು ಈ ಇಳಿವಯಸ್ಸಿನಲ್ಲಿ ಸಂಸತ್ ಚುನಾವಣೆಯಲ್ಲಿ ನಿಂತು ಗೆಲ್ಲಲೇಬೇಕೆಂಬ ಯಾವುದೆ ಅನಿವಾರ್ಯತೆಗಳಿಲ್ಲದಿದ್ದರೂ ಅವರಿಗೆ ಟಿಕೆಟ್ ನೀಡುವಾಗ ಬಿಜೆಪಿ ಮತ್ತು ಮೋದಿ-ಷಾ ಜೋಡಿ ನಡೆದುಕೊಂಡ ರೀತಿ, ಪ್ರಕ್ರಿಯೆ ನೋಡಿದರೆ ತಮಗಾಗದವರನ್ನು ಹೇಗೆ ನಿರ್ನಾಮ ಮಾಡುತ್ತಾರೆ ಅನ್ನುವುದಕ್ಕೆ ತಾಜಾ ಉದಾಹರಣೆಯಂತಿದೆ.

ಈ ಕುರಿತು ಲಾಲ್ ಕೃಷ್ಣ ಅಡ್ವಾಣಿ ಬಹಿರಂಗವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲವಾದರೂ, ‘ಲೋಕಸಭೆಗೆ ತಾನು ಹೋಗುವ ಅಗತ್ಯವಿರಲಿಲ್ಲ. ಆದರೆ, ನಿಮಗೆ ಟಿಕೆಟ್ ಇಲ್ಲ ಎಂಬ ಕನಿಷ್ಠ ಮಾತುಕತೆಯನ್ನೂ ಮಾಡದೇ, ಮೀಡಿಯಾದಿಂದ ತಿಳಿದುಕೊಳ್ಳಬೇಕಾಗಿ’ ಬಂದುದಕ್ಕೆ ನೊಂದುಕೊಂಡಿದ್ದಾರೆಂದು ಹೇಳಲಾಗುತ್ತಿದೆ. ಆದರೆ ಮುರಳಿ ಮನೋಹರ್ ಜೋಶಿಯವರು ತಮ್ಮ ಕ್ಷೇತ್ರದ ಮತದಾರರಿಗೆ ಪತ್ರ ಬರೆದು ತನಗೆ ಇಲ್ಲಿ ಅಥವಾ ಎಲ್ಲಿಯೂ ಸ್ಪರ್ಧಿಸದಿರಲು ಪಕ್ಷ ಸೂಚಿಸಿದೆಯೆಂದು ಸೂಕ್ಷ್ಮವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿಂದೆಯೇ ವೇದಿಕೆಗಳಲ್ಲಿ ಅಡ್ವಾಣಿಯನ್ನು ವೇದಿಕೆಯ ಮೇಲೆ ಮೋದಿ ನಡೆಸಿಕೊಳ್ಳುತ್ತಿದ್ದ ದಾರುಣ ವಿಡಿಯೋಗಳು ವೈರಲ್ ಆಗಿದ್ದವು. ಅಡ್ವಾಣಿಯೇ ಮೋದಿಗೆ ಕೈ ಮುಗಿದರೂ ತಿರುಗಿಯೂ ನೋಡದೆ ಮೋದಿ ನಡೆದುಬಿಡುತ್ತಿದ್ದ. ಈಗ ಅವರು ಪ್ರತಿನಿಧಿಸುತ್ತಿದ್ದ ಗಾಂಧಿನಗರ ಕ್ಷೇತ್ರವನ್ನು ಮೋದಿ ಅವರಿಂದ ಕಿತ್ತು ಅಮಿತ್ ಷಾ ಗೆ ನೀಡಿದ್ದಾರೆ.

ಅಬ್ದುಲ್ ಕಲಾಂರವರೊಂದಿಗೆ ಕೆಲಸ ಮಾಡಿದ ಅನುಭವವಿದೆ ಎಂದು ಹೇಳಲಾಗುತ್ತಿರುವ ತೇಜಸ್ವಿನಿ ಅನಂತ್ ಕುಮಾರ್‍ರವರು ತಮ್ಮ ಪತಿಯ ನಿಧನದ ಬಳಿಕ ಅವರು ಪ್ರತಿನಿಧಿಸುತ್ತಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆಂದು ಹೇಳಿರಲಿಲ್ಲ. ಆದರೆ, ಹಲವು ಮುಖಂಡರು ಒತ್ತಾಯಿಸಿದ ನಂತರ ಟಿಕೆಟ್ ಆಕಾಂಕ್ಷಿಯಾಗಿದ್ದರು. ಬಿಜೆಪಿಯು ಸಹ ಟಿಕೆಟ್ ನೀಡುವ ಭರವಸೆ ನೀಡಿತ್ತಲ್ಲದೇ ಸಿದ್ಧತೆ ನಡೆಸುವಂತೆ ಸೂಚಿಸಿತ್ತು. ಕಳೆದ ಒಂದು ತಿಂಗಳಿಂದ ತಮ್ಮ ಬೆಂಬಲಿಗರೊಂದಿಗೆ ಕ್ಷೇತ್ರ ತಿರುಗಿ ಭರ್ಜರಿ ಪ್ರಚಾರ ಮಾಡಿಯೇ ಬಿಟ್ಟಿದ್ದರು. ಆದರೆ ಬಿಜೆಪಿ ಬೆಂಗಳೂರು ದಕ್ಷಿಣದ ಟಕೇಟ್ ಅನ್ನು ಯಾರಿಗೆಂದು ಘೋಷಿಸಿರಲಿಲ್ಲ. ಮೋದಿ ನಿಲ್ಲುತ್ತಾರೆಂದು ಪುಕಾರು ಸಹ ಎಬ್ಬಿಸಲಾಗಿತ್ತು. ನಾಮಪತ್ರ ಸಲ್ಲಿಕೆಯ ಕೊನೆದಿನ ತೇಜಸ್ವಿನಿಗೆ ವಂಚಿಸಿ ಕೋಮುವಾದಿ ಭಾಷಣಕಾರ ತೇಜಸ್ವಿ ಸೂರ್ಯನೆಂಬ ಎಳಸನಿಗೆ ನೀಡಿದೆ.

ಮುಂಚೆಯೇ ತೇಜಸ್ವಿ ಸೂರ್ಯನಿಗೆ ಟಿಕೆಟ್ ಕೊಟ್ಟರೆ ಅಸಮಾಧಾನ ಭುಗಿಲೇಳುತ್ತದೆ, ಬಂಡಾಯವನ್ನು ತಡೆಯಲು ಸಾಧ್ಯವಿಲ್ಲ ಎಂಬುದನ್ನರಿತಿದ್ದ ಹೈಕಮ್ಯಾಂಡ್ ಕೊನೆ ಕ್ಷಣದಲ್ಲಿ ಕೈ ಕೊಟ್ಟಿದ್ದಾರೆ. ಆದರೂ ತೇಜಸ್ವಿನಿರವರ ಅಭಿಮಾನಿಗಳು ಬೀದಿಗಿಳಿದು ಪ್ರತಿಭಟನೆಯನ್ನೇ ಮಾಡಿದ್ದಾರೆ. ತೇಜಸ್ವಿ ಸೂರ್ಯ ತೇಜಸ್ವಿನಿರವರ ಮನೆಗೆ ಆರ್ಶಿವಾದ ಪಡೆಯಲು ಹೋದಾಗ ಮನೆ ಬಾಗಿಲಿನಲ್ಲೇ ಬಿಜೆಪಿ ಕಾರ್ಯಕರ್ತರು ಅಡ್ಡಗಟ್ಟಿ ನೀನ್ಯಾರು ನಮಗೆ ಗೊತ್ತೆ ಇಲ್ಲ ಎಂದು ಅವಾಜ್ ಹಾಕಿದ್ದಾರೆ. ಮಾತಿಗೆ ಪಕ್ಷದ ಹೈಕಮಾಂಡ್ ಮಾತಿಗೆ ಬದ್ಧ ಎಂದು ತೇಜಸ್ವಿನಿರವರು ಹೇಳುತ್ತಿದ್ದರೂ ಅವರೊಳಗೆ ಕುದಿಯುತ್ತಿರುವ ಆಕ್ರೋಶ ತಣ್ಣಗಾಗುವ ಸೂಚನೆಗಳು ಕಾಣುತ್ತಿಲ್ಲ.

ಜೆಡಿಎಸ್‍ನ ಕುಟುಂಬ ರಾಜಕಾರಣದ ಬಗ್ಗೆ ಪುಂಖಾನುಪುಂಖವಾಗಿ ಪುಂಗಿ ಊದುತ್ತಿದ್ದ ಬಿಜೆಪಿಯವರು ಒಂದೇ ಮನೆಯಲ್ಲಿ ವಾಸವಿರುವ ಬಸವನಗುಡಿ ಶಾಸಕ ರವಿ ಸುಬ್ರಮಣ್ಯನವರ ಅಣ್ಣನ ಮಗ ತೇಜಸ್ವಿ ಸೂರ್ಯನಿಗೆ ಟಿಕೆಟ್ ಕೊಟ್ಟಿದ್ದು ಮಾತ್ರ ಅಪ್ಪಟ ಪ್ರಜಾಪ್ರಭುತ್ವವಂತೆ. ಈ ತೇಜಸ್ವಿ ಸೂರ್ಯನೋ ಮೈಕ್ ಮುಂದೆ ಬೊಬ್ಬಿರಿಯುವ ಭಾಷಣಕಾರ ಅಷ್ಟೆ. ಸಂಘಕ್ಕೆ ನಿಷ್ಟನಾಗಿದ್ದುದು, ತಮ್ಮ ಚಿಕ್ಕಪ್ಪ ಬಿಜೆಪಿಯಲ್ಲಿದ್ದುದು ಮಾತ್ರ ಈತನ ಅರ್ಹತೆ. ಇವನಿಗೆ ಟಿಕೆಟ್ ಕೊಟ್ಟಿದ್ದಕ್ಕೆ ಬಿಜೆಪಿಯ ಬಾಡಿಗೆ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಗೆ ಹೊಟ್ಟೆಯಲ್ಲಿ ಮೆಣಸಿನಕಾಯಿ ಅರೆದ ಹಾಗೆ ಆಗುತ್ತಿದೆ ಎಂದು ಸೋಷಿಯಲ್ ಮಿಡೀಯಾದಲ್ಲಿ ಟ್ರೋಲ್‍ಗಳು ಹರಿದಾಡುತ್ತಿವೆ.

ಮೇಲೆ ತಿಳಿಸಿದ ಮೂವರಿಗೆ ಟಿಕೇಟ್ ಸಿಗದಿರಲು ಸ್ಪಷ್ಟ ಕಾರಣಗಳಿವೆ. ಈ ಮೂವರು ಮೋದಿ ಕ್ಯಾಂಪ್ ಅಲ್ಲ. ಅಡ್ವಾಣಿ, ಜೋಶಿ, ಅನಂತ್ ಕುಮಾರ್ ಮೋದಿಗಿಂತ ಮುಂಚೆ ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯರಾಗಿದ್ದವರು. 2012ರ ನಂತರ ದಿಢೀರನೇ ಇಡೀ ಪಕ್ಷದ ಮೇಲೆ ಹಿಡಿತ ಸಾಧಿಸಿದ ಮೋದಿಗೆ ಆ ಮುಂಚಿನವರ್ಯಾರೂ ಬೇಕಿರಲಿಲ್ಲ. ಹಾಗಾಗಿಯೇ ಜಸ್ವಂತ್‍ಸಿಂಗ್, ಯಶ್ವಂತ್ ಸಿನ್ಹಾ, ಉಮಾಭಾರತಿ ಮತ್ತಿತರೆಲ್ಲರೂ ಮೂಲೆಗುಂಪಾದರು. ಸುಷ್ಮಾ ಸ್ಮರಾಜ್‍ರಿಗೆ ಸಹಾ ರಾಜಕೀಯವೇ ಸಾಕಪ್ಪ ಎನ್ನುವಂತಾಗಿ ನಿವೃತ್ತಿಯ ಮಾತುಗಳನ್ನಾಡುತ್ತಿದ್ದಾರೆ.

80 ದಾಟಿದ ಹಿರಿಯರು ಲೋಕಸಭೆಯಲ್ಲಿ ಇರುವ ಅಗತ್ಯವಿಲ್ಲ. (ಈ ಮಾತು ದೇವೇಗೌಡರಿಗೂ ಅನ್ವಯಿಸಬೇಕು). ಆದರೆ, ಹಿರಿಯರನ್ನು ನಡೆಸಿಕೊಳ್ಳುವುದಕ್ಕೆ ಇರಬೇಕಾದ ರೀತಿ-ನೀತಿಗಳೂ ಬಿಜೆಪಿ ಪಕ್ಷದಲ್ಲಿದ್ದಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...