Homeಕರ್ನಾಟಕಮೋದಿಗಿಂತ ಮುಂಚೆ ರಾಷ್ಟ್ರಮಟ್ಟದಲ್ಲಿ ಬಿಜೆಪಿ ಕಟ್ಟಿದವರ ಮೂಲೆಗುಂಪು: ಅಡ್ವಾಣಿ ಜೋಷಿಗೆ ಟಿಕೆಟ್ ಇಲ್ಲ

ಮೋದಿಗಿಂತ ಮುಂಚೆ ರಾಷ್ಟ್ರಮಟ್ಟದಲ್ಲಿ ಬಿಜೆಪಿ ಕಟ್ಟಿದವರ ಮೂಲೆಗುಂಪು: ಅಡ್ವಾಣಿ ಜೋಷಿಗೆ ಟಿಕೆಟ್ ಇಲ್ಲ

- Advertisement -
- Advertisement -

ಲಾಲ್ ಕೃಷ್ಣ ಅಡ್ವಾಣಿ ರಥಯಾತ್ರೆ ನಡೆಸುತ್ತಿದ್ದ ಸಂದರ್ಭದಲ್ಲಿ ಭಾಷಣ ಮಾಡುತ್ತಿದ್ದಾಗ ಅವರಿಗೆ ಮೈಕ್ ಹಿಡಿಯುತ್ತಿದ್ದವರು ಯಾರು ಗೊತ್ತೇ? ಬೇರ್ಯಾರು ಅಲ್ಲ, ಈಗಿನ ಪ್ರಧಾನಿ ನರೇಂದ್ರ ಮೋದಿ. 1999ರಲ್ಲಿ ಅಟಲ್ ಬಿಹಾರಿ ವಾಜಪೇಯಿರವರು ಪ್ರಧಾನಿಯಾಗಿದ್ದಾಗ ಅಡ್ವಾಣಿ ನಂತರದ ಮೂರನೇ ಸ್ಥಾನದಲ್ಲಿದ್ದ ಬಿಜೆಪಿಯ ರಾಷ್ಟ್ರ ಮಟ್ಟದ ನಾಯಕರೆಂದರೆ ಮುರಳಿ ಮನೋಹರ್ ಜೋಶಿ. ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್‍ರವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಬಿಜೆಪಿಗಾಗಿ ಸಾಕಷ್ಟು ದುಡಿದವರು.

ಈ ಮೂವರನ್ನು ಈಗ ನೆನೆಸಿಕೊಳ್ಳುತ್ತಿರುವುದಕ್ಕೆ ಒಂದು ಮಹತ್ತರ ಕಾರಣವಿದೆ. ಅದೇನೆಂದರೆ ಈ ಮೂವರಿಗೂ ಬಿಜೆಪಿ ಈ ಚುನಾವಣೆಯಲ್ಲಿ ಬೇಕಂತಲೇ ಟಿಕೇಟ್ ನಿರಾಕರಿಸಿದೆ. 80 ದಾಟಿದ ಹಿರಿಯರು ಈ ಇಳಿವಯಸ್ಸಿನಲ್ಲಿ ಸಂಸತ್ ಚುನಾವಣೆಯಲ್ಲಿ ನಿಂತು ಗೆಲ್ಲಲೇಬೇಕೆಂಬ ಯಾವುದೆ ಅನಿವಾರ್ಯತೆಗಳಿಲ್ಲದಿದ್ದರೂ ಅವರಿಗೆ ಟಿಕೆಟ್ ನೀಡುವಾಗ ಬಿಜೆಪಿ ಮತ್ತು ಮೋದಿ-ಷಾ ಜೋಡಿ ನಡೆದುಕೊಂಡ ರೀತಿ, ಪ್ರಕ್ರಿಯೆ ನೋಡಿದರೆ ತಮಗಾಗದವರನ್ನು ಹೇಗೆ ನಿರ್ನಾಮ ಮಾಡುತ್ತಾರೆ ಅನ್ನುವುದಕ್ಕೆ ತಾಜಾ ಉದಾಹರಣೆಯಂತಿದೆ.

ಈ ಕುರಿತು ಲಾಲ್ ಕೃಷ್ಣ ಅಡ್ವಾಣಿ ಬಹಿರಂಗವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲವಾದರೂ, ‘ಲೋಕಸಭೆಗೆ ತಾನು ಹೋಗುವ ಅಗತ್ಯವಿರಲಿಲ್ಲ. ಆದರೆ, ನಿಮಗೆ ಟಿಕೆಟ್ ಇಲ್ಲ ಎಂಬ ಕನಿಷ್ಠ ಮಾತುಕತೆಯನ್ನೂ ಮಾಡದೇ, ಮೀಡಿಯಾದಿಂದ ತಿಳಿದುಕೊಳ್ಳಬೇಕಾಗಿ’ ಬಂದುದಕ್ಕೆ ನೊಂದುಕೊಂಡಿದ್ದಾರೆಂದು ಹೇಳಲಾಗುತ್ತಿದೆ. ಆದರೆ ಮುರಳಿ ಮನೋಹರ್ ಜೋಶಿಯವರು ತಮ್ಮ ಕ್ಷೇತ್ರದ ಮತದಾರರಿಗೆ ಪತ್ರ ಬರೆದು ತನಗೆ ಇಲ್ಲಿ ಅಥವಾ ಎಲ್ಲಿಯೂ ಸ್ಪರ್ಧಿಸದಿರಲು ಪಕ್ಷ ಸೂಚಿಸಿದೆಯೆಂದು ಸೂಕ್ಷ್ಮವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿಂದೆಯೇ ವೇದಿಕೆಗಳಲ್ಲಿ ಅಡ್ವಾಣಿಯನ್ನು ವೇದಿಕೆಯ ಮೇಲೆ ಮೋದಿ ನಡೆಸಿಕೊಳ್ಳುತ್ತಿದ್ದ ದಾರುಣ ವಿಡಿಯೋಗಳು ವೈರಲ್ ಆಗಿದ್ದವು. ಅಡ್ವಾಣಿಯೇ ಮೋದಿಗೆ ಕೈ ಮುಗಿದರೂ ತಿರುಗಿಯೂ ನೋಡದೆ ಮೋದಿ ನಡೆದುಬಿಡುತ್ತಿದ್ದ. ಈಗ ಅವರು ಪ್ರತಿನಿಧಿಸುತ್ತಿದ್ದ ಗಾಂಧಿನಗರ ಕ್ಷೇತ್ರವನ್ನು ಮೋದಿ ಅವರಿಂದ ಕಿತ್ತು ಅಮಿತ್ ಷಾ ಗೆ ನೀಡಿದ್ದಾರೆ.

ಅಬ್ದುಲ್ ಕಲಾಂರವರೊಂದಿಗೆ ಕೆಲಸ ಮಾಡಿದ ಅನುಭವವಿದೆ ಎಂದು ಹೇಳಲಾಗುತ್ತಿರುವ ತೇಜಸ್ವಿನಿ ಅನಂತ್ ಕುಮಾರ್‍ರವರು ತಮ್ಮ ಪತಿಯ ನಿಧನದ ಬಳಿಕ ಅವರು ಪ್ರತಿನಿಧಿಸುತ್ತಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆಂದು ಹೇಳಿರಲಿಲ್ಲ. ಆದರೆ, ಹಲವು ಮುಖಂಡರು ಒತ್ತಾಯಿಸಿದ ನಂತರ ಟಿಕೆಟ್ ಆಕಾಂಕ್ಷಿಯಾಗಿದ್ದರು. ಬಿಜೆಪಿಯು ಸಹ ಟಿಕೆಟ್ ನೀಡುವ ಭರವಸೆ ನೀಡಿತ್ತಲ್ಲದೇ ಸಿದ್ಧತೆ ನಡೆಸುವಂತೆ ಸೂಚಿಸಿತ್ತು. ಕಳೆದ ಒಂದು ತಿಂಗಳಿಂದ ತಮ್ಮ ಬೆಂಬಲಿಗರೊಂದಿಗೆ ಕ್ಷೇತ್ರ ತಿರುಗಿ ಭರ್ಜರಿ ಪ್ರಚಾರ ಮಾಡಿಯೇ ಬಿಟ್ಟಿದ್ದರು. ಆದರೆ ಬಿಜೆಪಿ ಬೆಂಗಳೂರು ದಕ್ಷಿಣದ ಟಕೇಟ್ ಅನ್ನು ಯಾರಿಗೆಂದು ಘೋಷಿಸಿರಲಿಲ್ಲ. ಮೋದಿ ನಿಲ್ಲುತ್ತಾರೆಂದು ಪುಕಾರು ಸಹ ಎಬ್ಬಿಸಲಾಗಿತ್ತು. ನಾಮಪತ್ರ ಸಲ್ಲಿಕೆಯ ಕೊನೆದಿನ ತೇಜಸ್ವಿನಿಗೆ ವಂಚಿಸಿ ಕೋಮುವಾದಿ ಭಾಷಣಕಾರ ತೇಜಸ್ವಿ ಸೂರ್ಯನೆಂಬ ಎಳಸನಿಗೆ ನೀಡಿದೆ.

ಮುಂಚೆಯೇ ತೇಜಸ್ವಿ ಸೂರ್ಯನಿಗೆ ಟಿಕೆಟ್ ಕೊಟ್ಟರೆ ಅಸಮಾಧಾನ ಭುಗಿಲೇಳುತ್ತದೆ, ಬಂಡಾಯವನ್ನು ತಡೆಯಲು ಸಾಧ್ಯವಿಲ್ಲ ಎಂಬುದನ್ನರಿತಿದ್ದ ಹೈಕಮ್ಯಾಂಡ್ ಕೊನೆ ಕ್ಷಣದಲ್ಲಿ ಕೈ ಕೊಟ್ಟಿದ್ದಾರೆ. ಆದರೂ ತೇಜಸ್ವಿನಿರವರ ಅಭಿಮಾನಿಗಳು ಬೀದಿಗಿಳಿದು ಪ್ರತಿಭಟನೆಯನ್ನೇ ಮಾಡಿದ್ದಾರೆ. ತೇಜಸ್ವಿ ಸೂರ್ಯ ತೇಜಸ್ವಿನಿರವರ ಮನೆಗೆ ಆರ್ಶಿವಾದ ಪಡೆಯಲು ಹೋದಾಗ ಮನೆ ಬಾಗಿಲಿನಲ್ಲೇ ಬಿಜೆಪಿ ಕಾರ್ಯಕರ್ತರು ಅಡ್ಡಗಟ್ಟಿ ನೀನ್ಯಾರು ನಮಗೆ ಗೊತ್ತೆ ಇಲ್ಲ ಎಂದು ಅವಾಜ್ ಹಾಕಿದ್ದಾರೆ. ಮಾತಿಗೆ ಪಕ್ಷದ ಹೈಕಮಾಂಡ್ ಮಾತಿಗೆ ಬದ್ಧ ಎಂದು ತೇಜಸ್ವಿನಿರವರು ಹೇಳುತ್ತಿದ್ದರೂ ಅವರೊಳಗೆ ಕುದಿಯುತ್ತಿರುವ ಆಕ್ರೋಶ ತಣ್ಣಗಾಗುವ ಸೂಚನೆಗಳು ಕಾಣುತ್ತಿಲ್ಲ.

ಜೆಡಿಎಸ್‍ನ ಕುಟುಂಬ ರಾಜಕಾರಣದ ಬಗ್ಗೆ ಪುಂಖಾನುಪುಂಖವಾಗಿ ಪುಂಗಿ ಊದುತ್ತಿದ್ದ ಬಿಜೆಪಿಯವರು ಒಂದೇ ಮನೆಯಲ್ಲಿ ವಾಸವಿರುವ ಬಸವನಗುಡಿ ಶಾಸಕ ರವಿ ಸುಬ್ರಮಣ್ಯನವರ ಅಣ್ಣನ ಮಗ ತೇಜಸ್ವಿ ಸೂರ್ಯನಿಗೆ ಟಿಕೆಟ್ ಕೊಟ್ಟಿದ್ದು ಮಾತ್ರ ಅಪ್ಪಟ ಪ್ರಜಾಪ್ರಭುತ್ವವಂತೆ. ಈ ತೇಜಸ್ವಿ ಸೂರ್ಯನೋ ಮೈಕ್ ಮುಂದೆ ಬೊಬ್ಬಿರಿಯುವ ಭಾಷಣಕಾರ ಅಷ್ಟೆ. ಸಂಘಕ್ಕೆ ನಿಷ್ಟನಾಗಿದ್ದುದು, ತಮ್ಮ ಚಿಕ್ಕಪ್ಪ ಬಿಜೆಪಿಯಲ್ಲಿದ್ದುದು ಮಾತ್ರ ಈತನ ಅರ್ಹತೆ. ಇವನಿಗೆ ಟಿಕೆಟ್ ಕೊಟ್ಟಿದ್ದಕ್ಕೆ ಬಿಜೆಪಿಯ ಬಾಡಿಗೆ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಗೆ ಹೊಟ್ಟೆಯಲ್ಲಿ ಮೆಣಸಿನಕಾಯಿ ಅರೆದ ಹಾಗೆ ಆಗುತ್ತಿದೆ ಎಂದು ಸೋಷಿಯಲ್ ಮಿಡೀಯಾದಲ್ಲಿ ಟ್ರೋಲ್‍ಗಳು ಹರಿದಾಡುತ್ತಿವೆ.

ಮೇಲೆ ತಿಳಿಸಿದ ಮೂವರಿಗೆ ಟಿಕೇಟ್ ಸಿಗದಿರಲು ಸ್ಪಷ್ಟ ಕಾರಣಗಳಿವೆ. ಈ ಮೂವರು ಮೋದಿ ಕ್ಯಾಂಪ್ ಅಲ್ಲ. ಅಡ್ವಾಣಿ, ಜೋಶಿ, ಅನಂತ್ ಕುಮಾರ್ ಮೋದಿಗಿಂತ ಮುಂಚೆ ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯರಾಗಿದ್ದವರು. 2012ರ ನಂತರ ದಿಢೀರನೇ ಇಡೀ ಪಕ್ಷದ ಮೇಲೆ ಹಿಡಿತ ಸಾಧಿಸಿದ ಮೋದಿಗೆ ಆ ಮುಂಚಿನವರ್ಯಾರೂ ಬೇಕಿರಲಿಲ್ಲ. ಹಾಗಾಗಿಯೇ ಜಸ್ವಂತ್‍ಸಿಂಗ್, ಯಶ್ವಂತ್ ಸಿನ್ಹಾ, ಉಮಾಭಾರತಿ ಮತ್ತಿತರೆಲ್ಲರೂ ಮೂಲೆಗುಂಪಾದರು. ಸುಷ್ಮಾ ಸ್ಮರಾಜ್‍ರಿಗೆ ಸಹಾ ರಾಜಕೀಯವೇ ಸಾಕಪ್ಪ ಎನ್ನುವಂತಾಗಿ ನಿವೃತ್ತಿಯ ಮಾತುಗಳನ್ನಾಡುತ್ತಿದ್ದಾರೆ.

80 ದಾಟಿದ ಹಿರಿಯರು ಲೋಕಸಭೆಯಲ್ಲಿ ಇರುವ ಅಗತ್ಯವಿಲ್ಲ. (ಈ ಮಾತು ದೇವೇಗೌಡರಿಗೂ ಅನ್ವಯಿಸಬೇಕು). ಆದರೆ, ಹಿರಿಯರನ್ನು ನಡೆಸಿಕೊಳ್ಳುವುದಕ್ಕೆ ಇರಬೇಕಾದ ರೀತಿ-ನೀತಿಗಳೂ ಬಿಜೆಪಿ ಪಕ್ಷದಲ್ಲಿದ್ದಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

ದೇಶದಲ್ಲಿ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ಮೇಲೆ ಅತೀವ ಕೆಲಸದ ಹೊರೆಯನ್ನು ಹೇರಿ ಅವರ ಖಾಸಗಿ ಜೀವನವನ್ನು ಕಿತ್ತುಕೊಳ್ಳುವ ಮೂಲಕ ಮಾನಸಿಕ ಒತ್ತಡಕ್ಕೆ ತಳ್ಳುತ್ತಿರುವ ಪರಿಸ್ಥಿತಿ ಗಂಭೀರ ಹಂತಕ್ಕೆ ತಲುಪಿದೆ. ಅದಾಗ್ಯೂ ಕೆಲ ಕಾರ್ಪೋರೇಟ್‌...

ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ...

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ. ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ...

ಒಳಮೀಸಲಾತಿ : ಶೇ.17ರ ಪ್ರಮಾಣದಲ್ಲೇ ಮುಂದುವರಿಯಲು ಸರ್ಕಾರ ತೀರ್ಮಾನ?

ಒಳಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಕಗ್ಗಂಟನ್ನು ಎದುರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೇಕಡ 17ರ ಮೀಸಲಾತಿ ಪ್ರಮಾಣದಲ್ಲೇ ಮುಂದುವರಿಯಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಶನಿವಾರ ಸಂಜೆ (ಡಿಸೆಂಬರ್ 6) ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಗೋವಾ ನೈಟ್ ಕ್ಲಬ್‌ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು

ಉತ್ತರ ಗೋವಾದ ನೈಟ್‌ ಕ್ಲಬ್‌ವೊಂದರಲ್ಲಿ ಶನಿವಾರ (ಡಿಸೆಂಬರ್ 6) ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಸಿಬ್ಬಂದಿಯಾಗಿದ್ದು,...

ಮೈಸೂರು| ಒಳಮೀಸಲಾತಿ ಹೋರಾಟ ಹತ್ತಿಕ್ಕಲು ನಿಷೇಧಾಜ್ಞೆ ಹೇರಿದ ಕಾಂಗ್ರೆಸ್ ಸರ್ಕಾರ

ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ' ನಡೆಸುತ್ತಿದ್ದ ಹೋರಾಟಕ್ಕೆ ಜಿಲ್ಲಾ ಪೊಲೀಸರು ಅನುಮತಿ ನಿರಾಕರಿಸಿದ್ದು, ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಇಂದು ಪಾದಯಾತ್ರೆ ಆರಂಭಿಸಿದ ಹೋರಾಟಗಾರರನ್ನು...

‘ನಕಲಿ ಬ್ಯಾಂಕ್ ಗ್ಯಾರಂಟಿ’ ಪ್ರಕರಣ : ರಿಲಯನ್ಸ್ ಪವರ್, ಇತರ ಸಂಸ್ಥೆಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ರಿಲಯನ್ಸ್ ಪವರ್ ಕಂಪನಿಯು ಭಾರತೀಯ ಸೌರಶಕ್ತಿ ನಿಗಮಕ್ಕೆ (ಎಸ್‌ಇಸಿಐ) ಟೆಂಡರ್ ಪಡೆಯಲು ಸಲ್ಲಿಸಿದ 68 ಕೋಟಿ ರೂಪಾಯಿಗಳ ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್‌ನ...

ಉತ್ತರ ಪ್ರದೇಶ| ಬಾಬರಿ ಮಸೀದಿ ಮೇಲಿನ ದಾಳಿಗೆ 33 ವರ್ಷ; ಅಯೋಧ್ಯೆ-ವಾರಣಾಸಿಯಲ್ಲಿ ಬಿಗಿ ಭದ್ರತೆ

ಬಾಬರಿ ಮಸೀದಿ ಧ್ವಂಸವಾಗಿ 33ನೇ ವರ್ಷ ತುಂಬುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಜಾಗರೂಕರಾಗಿದ್ದು, ಎಲ್ಲಾ ಮಾರ್ಗಗಳಲ್ಲಿ ವಾಹನಗಳ ಸಂಪೂರ್ಣ ತಪಾಸಣೆ ನಡೆಸುತ್ತಿವೆ. ಈ ಕುರಿತು...

ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ: ‘ಡಿಕೆ’ ಸಹೋದರರಿಗೆ ಇಡಿ-ದೆಹಲಿ ಪೊಲೀಸರಿಂದ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳಿಗೆ ನೀಡಿದ ದೇಣಿಗೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೈಗೊಂಡಿರುವ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯವು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು...