Homeಕರ್ನಾಟಕಮೋದಿಗಿಂತ ಮುಂಚೆ ರಾಷ್ಟ್ರಮಟ್ಟದಲ್ಲಿ ಬಿಜೆಪಿ ಕಟ್ಟಿದವರ ಮೂಲೆಗುಂಪು: ಅಡ್ವಾಣಿ ಜೋಷಿಗೆ ಟಿಕೆಟ್ ಇಲ್ಲ

ಮೋದಿಗಿಂತ ಮುಂಚೆ ರಾಷ್ಟ್ರಮಟ್ಟದಲ್ಲಿ ಬಿಜೆಪಿ ಕಟ್ಟಿದವರ ಮೂಲೆಗುಂಪು: ಅಡ್ವಾಣಿ ಜೋಷಿಗೆ ಟಿಕೆಟ್ ಇಲ್ಲ

- Advertisement -
- Advertisement -

ಲಾಲ್ ಕೃಷ್ಣ ಅಡ್ವಾಣಿ ರಥಯಾತ್ರೆ ನಡೆಸುತ್ತಿದ್ದ ಸಂದರ್ಭದಲ್ಲಿ ಭಾಷಣ ಮಾಡುತ್ತಿದ್ದಾಗ ಅವರಿಗೆ ಮೈಕ್ ಹಿಡಿಯುತ್ತಿದ್ದವರು ಯಾರು ಗೊತ್ತೇ? ಬೇರ್ಯಾರು ಅಲ್ಲ, ಈಗಿನ ಪ್ರಧಾನಿ ನರೇಂದ್ರ ಮೋದಿ. 1999ರಲ್ಲಿ ಅಟಲ್ ಬಿಹಾರಿ ವಾಜಪೇಯಿರವರು ಪ್ರಧಾನಿಯಾಗಿದ್ದಾಗ ಅಡ್ವಾಣಿ ನಂತರದ ಮೂರನೇ ಸ್ಥಾನದಲ್ಲಿದ್ದ ಬಿಜೆಪಿಯ ರಾಷ್ಟ್ರ ಮಟ್ಟದ ನಾಯಕರೆಂದರೆ ಮುರಳಿ ಮನೋಹರ್ ಜೋಶಿ. ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್‍ರವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಬಿಜೆಪಿಗಾಗಿ ಸಾಕಷ್ಟು ದುಡಿದವರು.

ಈ ಮೂವರನ್ನು ಈಗ ನೆನೆಸಿಕೊಳ್ಳುತ್ತಿರುವುದಕ್ಕೆ ಒಂದು ಮಹತ್ತರ ಕಾರಣವಿದೆ. ಅದೇನೆಂದರೆ ಈ ಮೂವರಿಗೂ ಬಿಜೆಪಿ ಈ ಚುನಾವಣೆಯಲ್ಲಿ ಬೇಕಂತಲೇ ಟಿಕೇಟ್ ನಿರಾಕರಿಸಿದೆ. 80 ದಾಟಿದ ಹಿರಿಯರು ಈ ಇಳಿವಯಸ್ಸಿನಲ್ಲಿ ಸಂಸತ್ ಚುನಾವಣೆಯಲ್ಲಿ ನಿಂತು ಗೆಲ್ಲಲೇಬೇಕೆಂಬ ಯಾವುದೆ ಅನಿವಾರ್ಯತೆಗಳಿಲ್ಲದಿದ್ದರೂ ಅವರಿಗೆ ಟಿಕೆಟ್ ನೀಡುವಾಗ ಬಿಜೆಪಿ ಮತ್ತು ಮೋದಿ-ಷಾ ಜೋಡಿ ನಡೆದುಕೊಂಡ ರೀತಿ, ಪ್ರಕ್ರಿಯೆ ನೋಡಿದರೆ ತಮಗಾಗದವರನ್ನು ಹೇಗೆ ನಿರ್ನಾಮ ಮಾಡುತ್ತಾರೆ ಅನ್ನುವುದಕ್ಕೆ ತಾಜಾ ಉದಾಹರಣೆಯಂತಿದೆ.

ಈ ಕುರಿತು ಲಾಲ್ ಕೃಷ್ಣ ಅಡ್ವಾಣಿ ಬಹಿರಂಗವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲವಾದರೂ, ‘ಲೋಕಸಭೆಗೆ ತಾನು ಹೋಗುವ ಅಗತ್ಯವಿರಲಿಲ್ಲ. ಆದರೆ, ನಿಮಗೆ ಟಿಕೆಟ್ ಇಲ್ಲ ಎಂಬ ಕನಿಷ್ಠ ಮಾತುಕತೆಯನ್ನೂ ಮಾಡದೇ, ಮೀಡಿಯಾದಿಂದ ತಿಳಿದುಕೊಳ್ಳಬೇಕಾಗಿ’ ಬಂದುದಕ್ಕೆ ನೊಂದುಕೊಂಡಿದ್ದಾರೆಂದು ಹೇಳಲಾಗುತ್ತಿದೆ. ಆದರೆ ಮುರಳಿ ಮನೋಹರ್ ಜೋಶಿಯವರು ತಮ್ಮ ಕ್ಷೇತ್ರದ ಮತದಾರರಿಗೆ ಪತ್ರ ಬರೆದು ತನಗೆ ಇಲ್ಲಿ ಅಥವಾ ಎಲ್ಲಿಯೂ ಸ್ಪರ್ಧಿಸದಿರಲು ಪಕ್ಷ ಸೂಚಿಸಿದೆಯೆಂದು ಸೂಕ್ಷ್ಮವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿಂದೆಯೇ ವೇದಿಕೆಗಳಲ್ಲಿ ಅಡ್ವಾಣಿಯನ್ನು ವೇದಿಕೆಯ ಮೇಲೆ ಮೋದಿ ನಡೆಸಿಕೊಳ್ಳುತ್ತಿದ್ದ ದಾರುಣ ವಿಡಿಯೋಗಳು ವೈರಲ್ ಆಗಿದ್ದವು. ಅಡ್ವಾಣಿಯೇ ಮೋದಿಗೆ ಕೈ ಮುಗಿದರೂ ತಿರುಗಿಯೂ ನೋಡದೆ ಮೋದಿ ನಡೆದುಬಿಡುತ್ತಿದ್ದ. ಈಗ ಅವರು ಪ್ರತಿನಿಧಿಸುತ್ತಿದ್ದ ಗಾಂಧಿನಗರ ಕ್ಷೇತ್ರವನ್ನು ಮೋದಿ ಅವರಿಂದ ಕಿತ್ತು ಅಮಿತ್ ಷಾ ಗೆ ನೀಡಿದ್ದಾರೆ.

ಅಬ್ದುಲ್ ಕಲಾಂರವರೊಂದಿಗೆ ಕೆಲಸ ಮಾಡಿದ ಅನುಭವವಿದೆ ಎಂದು ಹೇಳಲಾಗುತ್ತಿರುವ ತೇಜಸ್ವಿನಿ ಅನಂತ್ ಕುಮಾರ್‍ರವರು ತಮ್ಮ ಪತಿಯ ನಿಧನದ ಬಳಿಕ ಅವರು ಪ್ರತಿನಿಧಿಸುತ್ತಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆಂದು ಹೇಳಿರಲಿಲ್ಲ. ಆದರೆ, ಹಲವು ಮುಖಂಡರು ಒತ್ತಾಯಿಸಿದ ನಂತರ ಟಿಕೆಟ್ ಆಕಾಂಕ್ಷಿಯಾಗಿದ್ದರು. ಬಿಜೆಪಿಯು ಸಹ ಟಿಕೆಟ್ ನೀಡುವ ಭರವಸೆ ನೀಡಿತ್ತಲ್ಲದೇ ಸಿದ್ಧತೆ ನಡೆಸುವಂತೆ ಸೂಚಿಸಿತ್ತು. ಕಳೆದ ಒಂದು ತಿಂಗಳಿಂದ ತಮ್ಮ ಬೆಂಬಲಿಗರೊಂದಿಗೆ ಕ್ಷೇತ್ರ ತಿರುಗಿ ಭರ್ಜರಿ ಪ್ರಚಾರ ಮಾಡಿಯೇ ಬಿಟ್ಟಿದ್ದರು. ಆದರೆ ಬಿಜೆಪಿ ಬೆಂಗಳೂರು ದಕ್ಷಿಣದ ಟಕೇಟ್ ಅನ್ನು ಯಾರಿಗೆಂದು ಘೋಷಿಸಿರಲಿಲ್ಲ. ಮೋದಿ ನಿಲ್ಲುತ್ತಾರೆಂದು ಪುಕಾರು ಸಹ ಎಬ್ಬಿಸಲಾಗಿತ್ತು. ನಾಮಪತ್ರ ಸಲ್ಲಿಕೆಯ ಕೊನೆದಿನ ತೇಜಸ್ವಿನಿಗೆ ವಂಚಿಸಿ ಕೋಮುವಾದಿ ಭಾಷಣಕಾರ ತೇಜಸ್ವಿ ಸೂರ್ಯನೆಂಬ ಎಳಸನಿಗೆ ನೀಡಿದೆ.

ಮುಂಚೆಯೇ ತೇಜಸ್ವಿ ಸೂರ್ಯನಿಗೆ ಟಿಕೆಟ್ ಕೊಟ್ಟರೆ ಅಸಮಾಧಾನ ಭುಗಿಲೇಳುತ್ತದೆ, ಬಂಡಾಯವನ್ನು ತಡೆಯಲು ಸಾಧ್ಯವಿಲ್ಲ ಎಂಬುದನ್ನರಿತಿದ್ದ ಹೈಕಮ್ಯಾಂಡ್ ಕೊನೆ ಕ್ಷಣದಲ್ಲಿ ಕೈ ಕೊಟ್ಟಿದ್ದಾರೆ. ಆದರೂ ತೇಜಸ್ವಿನಿರವರ ಅಭಿಮಾನಿಗಳು ಬೀದಿಗಿಳಿದು ಪ್ರತಿಭಟನೆಯನ್ನೇ ಮಾಡಿದ್ದಾರೆ. ತೇಜಸ್ವಿ ಸೂರ್ಯ ತೇಜಸ್ವಿನಿರವರ ಮನೆಗೆ ಆರ್ಶಿವಾದ ಪಡೆಯಲು ಹೋದಾಗ ಮನೆ ಬಾಗಿಲಿನಲ್ಲೇ ಬಿಜೆಪಿ ಕಾರ್ಯಕರ್ತರು ಅಡ್ಡಗಟ್ಟಿ ನೀನ್ಯಾರು ನಮಗೆ ಗೊತ್ತೆ ಇಲ್ಲ ಎಂದು ಅವಾಜ್ ಹಾಕಿದ್ದಾರೆ. ಮಾತಿಗೆ ಪಕ್ಷದ ಹೈಕಮಾಂಡ್ ಮಾತಿಗೆ ಬದ್ಧ ಎಂದು ತೇಜಸ್ವಿನಿರವರು ಹೇಳುತ್ತಿದ್ದರೂ ಅವರೊಳಗೆ ಕುದಿಯುತ್ತಿರುವ ಆಕ್ರೋಶ ತಣ್ಣಗಾಗುವ ಸೂಚನೆಗಳು ಕಾಣುತ್ತಿಲ್ಲ.

ಜೆಡಿಎಸ್‍ನ ಕುಟುಂಬ ರಾಜಕಾರಣದ ಬಗ್ಗೆ ಪುಂಖಾನುಪುಂಖವಾಗಿ ಪುಂಗಿ ಊದುತ್ತಿದ್ದ ಬಿಜೆಪಿಯವರು ಒಂದೇ ಮನೆಯಲ್ಲಿ ವಾಸವಿರುವ ಬಸವನಗುಡಿ ಶಾಸಕ ರವಿ ಸುಬ್ರಮಣ್ಯನವರ ಅಣ್ಣನ ಮಗ ತೇಜಸ್ವಿ ಸೂರ್ಯನಿಗೆ ಟಿಕೆಟ್ ಕೊಟ್ಟಿದ್ದು ಮಾತ್ರ ಅಪ್ಪಟ ಪ್ರಜಾಪ್ರಭುತ್ವವಂತೆ. ಈ ತೇಜಸ್ವಿ ಸೂರ್ಯನೋ ಮೈಕ್ ಮುಂದೆ ಬೊಬ್ಬಿರಿಯುವ ಭಾಷಣಕಾರ ಅಷ್ಟೆ. ಸಂಘಕ್ಕೆ ನಿಷ್ಟನಾಗಿದ್ದುದು, ತಮ್ಮ ಚಿಕ್ಕಪ್ಪ ಬಿಜೆಪಿಯಲ್ಲಿದ್ದುದು ಮಾತ್ರ ಈತನ ಅರ್ಹತೆ. ಇವನಿಗೆ ಟಿಕೆಟ್ ಕೊಟ್ಟಿದ್ದಕ್ಕೆ ಬಿಜೆಪಿಯ ಬಾಡಿಗೆ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಗೆ ಹೊಟ್ಟೆಯಲ್ಲಿ ಮೆಣಸಿನಕಾಯಿ ಅರೆದ ಹಾಗೆ ಆಗುತ್ತಿದೆ ಎಂದು ಸೋಷಿಯಲ್ ಮಿಡೀಯಾದಲ್ಲಿ ಟ್ರೋಲ್‍ಗಳು ಹರಿದಾಡುತ್ತಿವೆ.

ಮೇಲೆ ತಿಳಿಸಿದ ಮೂವರಿಗೆ ಟಿಕೇಟ್ ಸಿಗದಿರಲು ಸ್ಪಷ್ಟ ಕಾರಣಗಳಿವೆ. ಈ ಮೂವರು ಮೋದಿ ಕ್ಯಾಂಪ್ ಅಲ್ಲ. ಅಡ್ವಾಣಿ, ಜೋಶಿ, ಅನಂತ್ ಕುಮಾರ್ ಮೋದಿಗಿಂತ ಮುಂಚೆ ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯರಾಗಿದ್ದವರು. 2012ರ ನಂತರ ದಿಢೀರನೇ ಇಡೀ ಪಕ್ಷದ ಮೇಲೆ ಹಿಡಿತ ಸಾಧಿಸಿದ ಮೋದಿಗೆ ಆ ಮುಂಚಿನವರ್ಯಾರೂ ಬೇಕಿರಲಿಲ್ಲ. ಹಾಗಾಗಿಯೇ ಜಸ್ವಂತ್‍ಸಿಂಗ್, ಯಶ್ವಂತ್ ಸಿನ್ಹಾ, ಉಮಾಭಾರತಿ ಮತ್ತಿತರೆಲ್ಲರೂ ಮೂಲೆಗುಂಪಾದರು. ಸುಷ್ಮಾ ಸ್ಮರಾಜ್‍ರಿಗೆ ಸಹಾ ರಾಜಕೀಯವೇ ಸಾಕಪ್ಪ ಎನ್ನುವಂತಾಗಿ ನಿವೃತ್ತಿಯ ಮಾತುಗಳನ್ನಾಡುತ್ತಿದ್ದಾರೆ.

80 ದಾಟಿದ ಹಿರಿಯರು ಲೋಕಸಭೆಯಲ್ಲಿ ಇರುವ ಅಗತ್ಯವಿಲ್ಲ. (ಈ ಮಾತು ದೇವೇಗೌಡರಿಗೂ ಅನ್ವಯಿಸಬೇಕು). ಆದರೆ, ಹಿರಿಯರನ್ನು ನಡೆಸಿಕೊಳ್ಳುವುದಕ್ಕೆ ಇರಬೇಕಾದ ರೀತಿ-ನೀತಿಗಳೂ ಬಿಜೆಪಿ ಪಕ್ಷದಲ್ಲಿದ್ದಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...