Homeಕರ್ನಾಟಕಮೋದಿಗಿಂತ ಮುಂಚೆ ರಾಷ್ಟ್ರಮಟ್ಟದಲ್ಲಿ ಬಿಜೆಪಿ ಕಟ್ಟಿದವರ ಮೂಲೆಗುಂಪು: ಅಡ್ವಾಣಿ ಜೋಷಿಗೆ ಟಿಕೆಟ್ ಇಲ್ಲ

ಮೋದಿಗಿಂತ ಮುಂಚೆ ರಾಷ್ಟ್ರಮಟ್ಟದಲ್ಲಿ ಬಿಜೆಪಿ ಕಟ್ಟಿದವರ ಮೂಲೆಗುಂಪು: ಅಡ್ವಾಣಿ ಜೋಷಿಗೆ ಟಿಕೆಟ್ ಇಲ್ಲ

- Advertisement -
- Advertisement -

ಲಾಲ್ ಕೃಷ್ಣ ಅಡ್ವಾಣಿ ರಥಯಾತ್ರೆ ನಡೆಸುತ್ತಿದ್ದ ಸಂದರ್ಭದಲ್ಲಿ ಭಾಷಣ ಮಾಡುತ್ತಿದ್ದಾಗ ಅವರಿಗೆ ಮೈಕ್ ಹಿಡಿಯುತ್ತಿದ್ದವರು ಯಾರು ಗೊತ್ತೇ? ಬೇರ್ಯಾರು ಅಲ್ಲ, ಈಗಿನ ಪ್ರಧಾನಿ ನರೇಂದ್ರ ಮೋದಿ. 1999ರಲ್ಲಿ ಅಟಲ್ ಬಿಹಾರಿ ವಾಜಪೇಯಿರವರು ಪ್ರಧಾನಿಯಾಗಿದ್ದಾಗ ಅಡ್ವಾಣಿ ನಂತರದ ಮೂರನೇ ಸ್ಥಾನದಲ್ಲಿದ್ದ ಬಿಜೆಪಿಯ ರಾಷ್ಟ್ರ ಮಟ್ಟದ ನಾಯಕರೆಂದರೆ ಮುರಳಿ ಮನೋಹರ್ ಜೋಶಿ. ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್‍ರವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಬಿಜೆಪಿಗಾಗಿ ಸಾಕಷ್ಟು ದುಡಿದವರು.

ಈ ಮೂವರನ್ನು ಈಗ ನೆನೆಸಿಕೊಳ್ಳುತ್ತಿರುವುದಕ್ಕೆ ಒಂದು ಮಹತ್ತರ ಕಾರಣವಿದೆ. ಅದೇನೆಂದರೆ ಈ ಮೂವರಿಗೂ ಬಿಜೆಪಿ ಈ ಚುನಾವಣೆಯಲ್ಲಿ ಬೇಕಂತಲೇ ಟಿಕೇಟ್ ನಿರಾಕರಿಸಿದೆ. 80 ದಾಟಿದ ಹಿರಿಯರು ಈ ಇಳಿವಯಸ್ಸಿನಲ್ಲಿ ಸಂಸತ್ ಚುನಾವಣೆಯಲ್ಲಿ ನಿಂತು ಗೆಲ್ಲಲೇಬೇಕೆಂಬ ಯಾವುದೆ ಅನಿವಾರ್ಯತೆಗಳಿಲ್ಲದಿದ್ದರೂ ಅವರಿಗೆ ಟಿಕೆಟ್ ನೀಡುವಾಗ ಬಿಜೆಪಿ ಮತ್ತು ಮೋದಿ-ಷಾ ಜೋಡಿ ನಡೆದುಕೊಂಡ ರೀತಿ, ಪ್ರಕ್ರಿಯೆ ನೋಡಿದರೆ ತಮಗಾಗದವರನ್ನು ಹೇಗೆ ನಿರ್ನಾಮ ಮಾಡುತ್ತಾರೆ ಅನ್ನುವುದಕ್ಕೆ ತಾಜಾ ಉದಾಹರಣೆಯಂತಿದೆ.

ಈ ಕುರಿತು ಲಾಲ್ ಕೃಷ್ಣ ಅಡ್ವಾಣಿ ಬಹಿರಂಗವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲವಾದರೂ, ‘ಲೋಕಸಭೆಗೆ ತಾನು ಹೋಗುವ ಅಗತ್ಯವಿರಲಿಲ್ಲ. ಆದರೆ, ನಿಮಗೆ ಟಿಕೆಟ್ ಇಲ್ಲ ಎಂಬ ಕನಿಷ್ಠ ಮಾತುಕತೆಯನ್ನೂ ಮಾಡದೇ, ಮೀಡಿಯಾದಿಂದ ತಿಳಿದುಕೊಳ್ಳಬೇಕಾಗಿ’ ಬಂದುದಕ್ಕೆ ನೊಂದುಕೊಂಡಿದ್ದಾರೆಂದು ಹೇಳಲಾಗುತ್ತಿದೆ. ಆದರೆ ಮುರಳಿ ಮನೋಹರ್ ಜೋಶಿಯವರು ತಮ್ಮ ಕ್ಷೇತ್ರದ ಮತದಾರರಿಗೆ ಪತ್ರ ಬರೆದು ತನಗೆ ಇಲ್ಲಿ ಅಥವಾ ಎಲ್ಲಿಯೂ ಸ್ಪರ್ಧಿಸದಿರಲು ಪಕ್ಷ ಸೂಚಿಸಿದೆಯೆಂದು ಸೂಕ್ಷ್ಮವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿಂದೆಯೇ ವೇದಿಕೆಗಳಲ್ಲಿ ಅಡ್ವಾಣಿಯನ್ನು ವೇದಿಕೆಯ ಮೇಲೆ ಮೋದಿ ನಡೆಸಿಕೊಳ್ಳುತ್ತಿದ್ದ ದಾರುಣ ವಿಡಿಯೋಗಳು ವೈರಲ್ ಆಗಿದ್ದವು. ಅಡ್ವಾಣಿಯೇ ಮೋದಿಗೆ ಕೈ ಮುಗಿದರೂ ತಿರುಗಿಯೂ ನೋಡದೆ ಮೋದಿ ನಡೆದುಬಿಡುತ್ತಿದ್ದ. ಈಗ ಅವರು ಪ್ರತಿನಿಧಿಸುತ್ತಿದ್ದ ಗಾಂಧಿನಗರ ಕ್ಷೇತ್ರವನ್ನು ಮೋದಿ ಅವರಿಂದ ಕಿತ್ತು ಅಮಿತ್ ಷಾ ಗೆ ನೀಡಿದ್ದಾರೆ.

ಅಬ್ದುಲ್ ಕಲಾಂರವರೊಂದಿಗೆ ಕೆಲಸ ಮಾಡಿದ ಅನುಭವವಿದೆ ಎಂದು ಹೇಳಲಾಗುತ್ತಿರುವ ತೇಜಸ್ವಿನಿ ಅನಂತ್ ಕುಮಾರ್‍ರವರು ತಮ್ಮ ಪತಿಯ ನಿಧನದ ಬಳಿಕ ಅವರು ಪ್ರತಿನಿಧಿಸುತ್ತಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆಂದು ಹೇಳಿರಲಿಲ್ಲ. ಆದರೆ, ಹಲವು ಮುಖಂಡರು ಒತ್ತಾಯಿಸಿದ ನಂತರ ಟಿಕೆಟ್ ಆಕಾಂಕ್ಷಿಯಾಗಿದ್ದರು. ಬಿಜೆಪಿಯು ಸಹ ಟಿಕೆಟ್ ನೀಡುವ ಭರವಸೆ ನೀಡಿತ್ತಲ್ಲದೇ ಸಿದ್ಧತೆ ನಡೆಸುವಂತೆ ಸೂಚಿಸಿತ್ತು. ಕಳೆದ ಒಂದು ತಿಂಗಳಿಂದ ತಮ್ಮ ಬೆಂಬಲಿಗರೊಂದಿಗೆ ಕ್ಷೇತ್ರ ತಿರುಗಿ ಭರ್ಜರಿ ಪ್ರಚಾರ ಮಾಡಿಯೇ ಬಿಟ್ಟಿದ್ದರು. ಆದರೆ ಬಿಜೆಪಿ ಬೆಂಗಳೂರು ದಕ್ಷಿಣದ ಟಕೇಟ್ ಅನ್ನು ಯಾರಿಗೆಂದು ಘೋಷಿಸಿರಲಿಲ್ಲ. ಮೋದಿ ನಿಲ್ಲುತ್ತಾರೆಂದು ಪುಕಾರು ಸಹ ಎಬ್ಬಿಸಲಾಗಿತ್ತು. ನಾಮಪತ್ರ ಸಲ್ಲಿಕೆಯ ಕೊನೆದಿನ ತೇಜಸ್ವಿನಿಗೆ ವಂಚಿಸಿ ಕೋಮುವಾದಿ ಭಾಷಣಕಾರ ತೇಜಸ್ವಿ ಸೂರ್ಯನೆಂಬ ಎಳಸನಿಗೆ ನೀಡಿದೆ.

ಮುಂಚೆಯೇ ತೇಜಸ್ವಿ ಸೂರ್ಯನಿಗೆ ಟಿಕೆಟ್ ಕೊಟ್ಟರೆ ಅಸಮಾಧಾನ ಭುಗಿಲೇಳುತ್ತದೆ, ಬಂಡಾಯವನ್ನು ತಡೆಯಲು ಸಾಧ್ಯವಿಲ್ಲ ಎಂಬುದನ್ನರಿತಿದ್ದ ಹೈಕಮ್ಯಾಂಡ್ ಕೊನೆ ಕ್ಷಣದಲ್ಲಿ ಕೈ ಕೊಟ್ಟಿದ್ದಾರೆ. ಆದರೂ ತೇಜಸ್ವಿನಿರವರ ಅಭಿಮಾನಿಗಳು ಬೀದಿಗಿಳಿದು ಪ್ರತಿಭಟನೆಯನ್ನೇ ಮಾಡಿದ್ದಾರೆ. ತೇಜಸ್ವಿ ಸೂರ್ಯ ತೇಜಸ್ವಿನಿರವರ ಮನೆಗೆ ಆರ್ಶಿವಾದ ಪಡೆಯಲು ಹೋದಾಗ ಮನೆ ಬಾಗಿಲಿನಲ್ಲೇ ಬಿಜೆಪಿ ಕಾರ್ಯಕರ್ತರು ಅಡ್ಡಗಟ್ಟಿ ನೀನ್ಯಾರು ನಮಗೆ ಗೊತ್ತೆ ಇಲ್ಲ ಎಂದು ಅವಾಜ್ ಹಾಕಿದ್ದಾರೆ. ಮಾತಿಗೆ ಪಕ್ಷದ ಹೈಕಮಾಂಡ್ ಮಾತಿಗೆ ಬದ್ಧ ಎಂದು ತೇಜಸ್ವಿನಿರವರು ಹೇಳುತ್ತಿದ್ದರೂ ಅವರೊಳಗೆ ಕುದಿಯುತ್ತಿರುವ ಆಕ್ರೋಶ ತಣ್ಣಗಾಗುವ ಸೂಚನೆಗಳು ಕಾಣುತ್ತಿಲ್ಲ.

ಜೆಡಿಎಸ್‍ನ ಕುಟುಂಬ ರಾಜಕಾರಣದ ಬಗ್ಗೆ ಪುಂಖಾನುಪುಂಖವಾಗಿ ಪುಂಗಿ ಊದುತ್ತಿದ್ದ ಬಿಜೆಪಿಯವರು ಒಂದೇ ಮನೆಯಲ್ಲಿ ವಾಸವಿರುವ ಬಸವನಗುಡಿ ಶಾಸಕ ರವಿ ಸುಬ್ರಮಣ್ಯನವರ ಅಣ್ಣನ ಮಗ ತೇಜಸ್ವಿ ಸೂರ್ಯನಿಗೆ ಟಿಕೆಟ್ ಕೊಟ್ಟಿದ್ದು ಮಾತ್ರ ಅಪ್ಪಟ ಪ್ರಜಾಪ್ರಭುತ್ವವಂತೆ. ಈ ತೇಜಸ್ವಿ ಸೂರ್ಯನೋ ಮೈಕ್ ಮುಂದೆ ಬೊಬ್ಬಿರಿಯುವ ಭಾಷಣಕಾರ ಅಷ್ಟೆ. ಸಂಘಕ್ಕೆ ನಿಷ್ಟನಾಗಿದ್ದುದು, ತಮ್ಮ ಚಿಕ್ಕಪ್ಪ ಬಿಜೆಪಿಯಲ್ಲಿದ್ದುದು ಮಾತ್ರ ಈತನ ಅರ್ಹತೆ. ಇವನಿಗೆ ಟಿಕೆಟ್ ಕೊಟ್ಟಿದ್ದಕ್ಕೆ ಬಿಜೆಪಿಯ ಬಾಡಿಗೆ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಗೆ ಹೊಟ್ಟೆಯಲ್ಲಿ ಮೆಣಸಿನಕಾಯಿ ಅರೆದ ಹಾಗೆ ಆಗುತ್ತಿದೆ ಎಂದು ಸೋಷಿಯಲ್ ಮಿಡೀಯಾದಲ್ಲಿ ಟ್ರೋಲ್‍ಗಳು ಹರಿದಾಡುತ್ತಿವೆ.

ಮೇಲೆ ತಿಳಿಸಿದ ಮೂವರಿಗೆ ಟಿಕೇಟ್ ಸಿಗದಿರಲು ಸ್ಪಷ್ಟ ಕಾರಣಗಳಿವೆ. ಈ ಮೂವರು ಮೋದಿ ಕ್ಯಾಂಪ್ ಅಲ್ಲ. ಅಡ್ವಾಣಿ, ಜೋಶಿ, ಅನಂತ್ ಕುಮಾರ್ ಮೋದಿಗಿಂತ ಮುಂಚೆ ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯರಾಗಿದ್ದವರು. 2012ರ ನಂತರ ದಿಢೀರನೇ ಇಡೀ ಪಕ್ಷದ ಮೇಲೆ ಹಿಡಿತ ಸಾಧಿಸಿದ ಮೋದಿಗೆ ಆ ಮುಂಚಿನವರ್ಯಾರೂ ಬೇಕಿರಲಿಲ್ಲ. ಹಾಗಾಗಿಯೇ ಜಸ್ವಂತ್‍ಸಿಂಗ್, ಯಶ್ವಂತ್ ಸಿನ್ಹಾ, ಉಮಾಭಾರತಿ ಮತ್ತಿತರೆಲ್ಲರೂ ಮೂಲೆಗುಂಪಾದರು. ಸುಷ್ಮಾ ಸ್ಮರಾಜ್‍ರಿಗೆ ಸಹಾ ರಾಜಕೀಯವೇ ಸಾಕಪ್ಪ ಎನ್ನುವಂತಾಗಿ ನಿವೃತ್ತಿಯ ಮಾತುಗಳನ್ನಾಡುತ್ತಿದ್ದಾರೆ.

80 ದಾಟಿದ ಹಿರಿಯರು ಲೋಕಸಭೆಯಲ್ಲಿ ಇರುವ ಅಗತ್ಯವಿಲ್ಲ. (ಈ ಮಾತು ದೇವೇಗೌಡರಿಗೂ ಅನ್ವಯಿಸಬೇಕು). ಆದರೆ, ಹಿರಿಯರನ್ನು ನಡೆಸಿಕೊಳ್ಳುವುದಕ್ಕೆ ಇರಬೇಕಾದ ರೀತಿ-ನೀತಿಗಳೂ ಬಿಜೆಪಿ ಪಕ್ಷದಲ್ಲಿದ್ದಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...