Homeಮುಖಪುಟಮೋದಿಗೆ ಅಂಬಾನಿ ‘ಕಂಪನಿ’ ಕೊಡುತ್ತಿದ್ದಾರೋ, ಅಥವಾ ಅಂಬಾನಿಗೇ ಮೋದಿ ‘ಕಂಪನಿ’ ಕೊಡುತ್ತಿದ್ದಾರೋ?

ಮೋದಿಗೆ ಅಂಬಾನಿ ‘ಕಂಪನಿ’ ಕೊಡುತ್ತಿದ್ದಾರೋ, ಅಥವಾ ಅಂಬಾನಿಗೇ ಮೋದಿ ‘ಕಂಪನಿ’ ಕೊಡುತ್ತಿದ್ದಾರೋ?

- Advertisement -
- Advertisement -

| ಮಲ್ಲನಗೌಡರ್ ಪಿ.ಕೆ |

ಕಂಡ ಕಂಡಲ್ಲಿ ಸಾಲ ಮಾಡಿಕೊಂಡು ತಿರುಗುವ, ಪರದೇಶಗಳಲ್ಲೂ ತೆರಿಗೆ ವಂಚನೆ ಮಾಡಿ ‘ವಿಶ್ವಗುರು’ ಭಾರತದ ಕೀರ್ತಿ ಪತಾಕೆ ಹಾರಿಸುವ, ಪಾಲುದಾರ ಕಂಪನಿಗಳಿಗೆ ಕೊಡಬೇಕಾದ ಹಣ ನೀಡದೇ ಸತಾಯಿಸುವ, ಜೈಲಿಗೆ ಹಾಕಬೇಕ್ತಾಗದೆ ಹುಷಾರ್ ಎಂದು ಸುಪ್ರಿಂಕೋರ್ಟ್‍ನಿಂದ ಉಗಿಸಿಕೊಳ್ಳುವ ಒಬ್ಬ ದುಷ್ಟ ಬ್ಯುಸಿನೆಸ್‍ಮ್ಯಾನ್ ಜೊತೆ ಪ್ರಧಾನಿ ನರೇಂದ್ರ ಮೋದಿಯ ಸ್ನೇಹ ಎಂಥದ್ದು? ವಿದೇಶ ಪ್ರವಾಸಗಳಲ್ಲಿ ಮೋದಿಗೆ ಅಂಬಾನಿ ಕಂಪನಿ ಕೊಟ್ಟರೋ, ಅಂಬಾನಿಗೇ ಕಂಪನಿ ಕೊಡಲು ಮೋದಿ ಟೂರ್ ಮಾಡಿದರೋ?

ಇವೆಲ್ಲ ಪ್ರಶ್ನೆಗಳನ್ನು ಮತದಾರರು ಈಗ ಎತ್ತಿಕೊಳ್ಳಲೇ ಬೇಕಾಗಿದೆ. ರಫೆಲ್ ಒಪ್ಪಂದದ ನಂತರ ಫ್ರಾನ್ಸ್ ಸರ್ಕಾರ ಅನಿಲ್ ಅಂಬಾನಿ ಕಂಪನಿಗೆ 1,124.9 ಕೋಟಿ ರೂಪಾಯಿ ತೆರಿಗೆ ವಿನಾಯಿತಿ ನೀಡಿರುವುದು ಬೆಳಕಿಗೆ ಬಂದಿದೆ.

      ರಕ್ಷಣಾ ಇಲಾಖೆಯ ‘ಡಿಫೆನ್ಸ್’ ಆಟ!

ಫ್ರಾನ್ಸಿನ ‘ಲೆ ಮಾಂಡೆ’ ಪತ್ರಿಕೆ ಇದನ್ನು ಪ್ರಕಟಿಸಿದ ನಂತರ, ‘ದಿ ವೈರ್’ ಅದನ್ನು ಭಾರತದಲ್ಲಿ ಪ್ರಕಟಿಸಿತು. ವಿಪಕ್ಷಗಳು ಈ ಕುರಿತು ಮೋದಿಯತ್ತ, ಸರ್ಕಾರದತ್ತ ಬೊಟ್ಟು ಮಾಡಿದವು. ಸರ್ಕಾರದ ನಡೆಯ ಬಗ್ಗೆ, ಪ್ರಧಾನಿ ವಿರುದ್ಧ ಟೀಕೆಗೆ ಪ್ರತ್ಯುತ್ತರ ನೀಡುವಲ್ಲಿ ಬಿಜೆಪಿಗಿಂತ ರಕ್ಷಣಾ ಸಚಿವಾಲಯಕ್ಕೇ ಹೆಚ್ಚು ಆಸಕ್ತಿಯಿರುವಂತಿದೆ!

‘ಡಿಫೆನ್ಸ್ ಗೆ ಇಳಿದ ರಕ್ಷಣಾ ಸಚಿವಾಲಯ, ‘ತೆರಿಗೆ ವಿನಾಯತಿ ಪಡೆದಿರುವುದನ್ನು ರಫೆಲ್ ಒಪ್ಪಂದದ ಜತೆ ಸಂಬಂಧ ಕಲ್ಪಿಸುವುದು ತಪ್ಪು. ಸರ್ಕಾರಕ್ಕೂ ಹಾಗೂ ತೆರಿಗೆ ವಿನಾಯತಿಗೂ ಸಂಬಂಧವಿಲ್ಲ’ ಎಂದು ಸರ್ಕಾರದ ಪರ, ಮೋದಿ ಪರ ‘ರಕ್ಷಣಾತ್ಮಕ’ ಬ್ಯಾಟಿಂಗ್ ಮಾಡಿದೆ! ರಫೆಲ್ ಡೀಲ್‍ನ ಅಧಿಕೃತ ಭಾಗವಾಗಿ ಅಥವಾ ರಫೆಲ್ ಕಾರಣಕ್ಕೇ ಅಂತ ಬಹಿರಂಗವಾಗಿ ಘೋಷಿಸಿ ತೆರಿಗೆ ವಿನಾಯತಿ ಮಾಡಲು ಫ್ರಾನ್ಸ್ ಸರ್ಕಾರವೂ ಮೂರ್ಖವಲ್ಲ, ಅಂಬಾನಿ-ಮೊದಿಯೂ ಮೂರ್ಖರಲ್ಲ. ಈ ಸರಳ ಸತ್ಯ  ರಕ್ಷಣಾ ಸಚಿವಾಲಯಕ್ಕೆ ತಿಳಿಯಲಿಲ್ಲವೇ? ಅಥವಾ ಸರ್ಕಾರವೇ ಒತ್ತಾಯದಿಂದ ಅದರ ಕಡೆ ಸ್ಟೇಟ್‍ಮೆಂಟ್ ಕೊಡೊಸಿತೇ?

ರಫೆಲ್‍ಗೆ ಪೂರಕವಾಗಿ, ಸಮಾಂತರವಾಗಿ ಅನಧಿಕೃತ ಡೀಲ್ ಏರ್ಪಟ್ಟ ಕಾರಣಕ್ಕೆ ತೆರಿಗೆ ವಿನಾಯತಿ ಮಾಡಲಾಗಿದೆ, ಇದಕ್ಕೆ ಪ್ರಧಾನಿಯ ಕೃಪೆ ಇದೆ ಎಂಬುದು ಆರೋಪ. ಹೀಗಿರುವಾಗ ಡಿಫೆನ್ಸ್ ಮಿನಿಸ್ಟ್ರಿ ಕುಂಬಳಕಾಯಿ ಕಳ್ಳನಂತೆ ವರ್ತಿಸಿತೇ?

  ಸಂಶಯಾತ್ಮಕ ಘಟನಾವಳಿಗಳು

ಮಾರ್ಚ್ 25, 2015: ಡಸಾಲ್ಟ್ ಬಿಡುಗಡೆ ಮಾಡಿದ ಅಧಿಕೃತ ವಿಡಿಯೋ ಪ್ರಕಾರ, ಎಚ್‍ಎಎಲ್, ಭಾರತೀಯ ರಕ್ಷಣಾ ಇಲಾಖೆ  ನಡುವಿನ ರಫೆಲ್ ಒಪ್ಪಂದದ ಮಾತುಕತೆಗಳು ಶೇ.95ರಷ್ಟು ಮುಗಿದಿದ್ದು, ಭಾರತ ವಾಯುಸೇನೆಗೆ 126 ರಫೆಲ್ ವಿಮಾನ ಪೂರೈಸಲು ಡಸಾಲ್ಟ್ ಖುಷಿ ಪಡುತ್ತದೆ.

ಮಾರ್ಚ್ 28, 2015: ಯುದ್ಧ ವಿಮಾನವಿರಲಿ, ಏರೋನಾಟಿಕ್ಸ್‍ನಲ್ಲಿ ಕಿಂಚಿತ್ ಅನುಭವ ಇಲ್ಲದ ಅನಿಲ್ ಅಂಬಾನಿಯ ರಿಲಾಯನ್ಸ್‍ನಿಂದ ಡಿಫೆನ್ಸ್ ಕಂಪನಿಯೊಂದು ರಿಜಿಸ್ಟರ್ ಆಗುತ್ತದೆ.

ಏಪ್ರಿಲ್ 8, 2015: ಪ್ರಧಾನಿ ಏಪ್ರಿಲ್ 9ರಿಂದ (ಮರುದಿನ) ಕೈಗೊಳ್ಳಲಿರುವ ಫ್ರಾನ್ಸ್ ಪ್ರವಾಸ ಕುರಿತು ವಿದೇಶಾಂಗ ಕಾರ್ಯದರ್ಶಿ ಎಸ್ ಜೈಶಂಕರ್ ಅವರಿಂದ ಪತ್ರಿಕಾಗೋಷ್ಠಿ. 126 ರಫೆಲ್ ವಿಮಾನ ಖರೀದಿ ಕುರಿತು ಡಸಾಲ್ಟ್, ಎಚ್‍ಎಎಲ್, ರಕ್ಷಣಾ ಇಲಾಖೆ ನಡುವೆ ಸುದೀರ್ಘ ಮತ್ತು ತಾಂತ್ರಿಕ ಚರ್ಚೆಗಳು ಮುಂದುವರೆದಿವೆ, ಪ್ರಧಾನಿ ಭೇಟಿಗೂ ಈ ವಿಷಯಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದರು.

ಅಂದರೆ, ಅಲ್ಲಿವರೆಗೂ ವಿದೇಶಾಂಗ ಇಲಾಖೆಗೂ ಎರಡೇ ದಿನದಲ್ಲಿ  ‘ಅಂಬಾನಿಯ ರಫೆಲ್’ ಹಾರುವುದೂ ಗೊತ್ತಿರಲಿಲ್ಲ.

ಏಪ್ರಿಲ್ 10: ಫ್ರಾನ್ಸಿನ ರಾಹಧಾನಿ ಪ್ಯಾರಿಸ್‍ನಲ್ಲಿ ಪ್ರಧಾನಿ ಮೋದಿಯಿಂದ ಸಂಪೂರ್ಣ ಮಾರ್ಪಾಡಾದ ರಫೆಲ್ ಒಪ್ಪಂದದ ಘೋಷಣೆ! ಎಚ್‍ಎಎಲ್ ಬದಲು ಅನಿಲ್ ಅಂಬಾನಿಯ ಕಂಪನಿ1 126ರ ಬದಲು 36 ರಫೆಲ್ ವಿಮಾನ! ಮೂಲ ದರಕ್ಕಿಂತ ಹೆಚ್ಚಿನ ದರದಲ್ಲಿ ಖರೀದಿಯ ಒಪ್ಪಂದ.

ಇದಾದ ಆರು ತಿಂಗಳಿಗೆ, ಫ್ರಾನ್ಸ್ ಸರ್ಕಾರದಿಂದ ಬಹು ವರ್ಷಗಳವರೆಗೂ ಇತ್ಯರ್ಥವಾಗದ ಅಂಬಾನಿಯ ತೆರಿಗೆ ವಂಚನೆ ಪ್ರಕರಣದ ಇತ್ಯರ್ಥ. ಅಂಬಾನಿಗೆ 1,100 ಕೋಟಿ ತೆರಿಗೆ ರಿಯಾಯಿತಿ!

ವಿದೇಶದಲ್ಲೂ ತೆರಿಗೆ ವಂಚಿಸಿದ ಅಂಬಾನಿಗೆ ಮೋದಿ ‘ಕಂಪನಿ’ ಕೊಡುತ್ತಿರುವುದೇಕೆ? ಸ್ವೀಡನ್ನಿನ ಎರಿಕ್ಸನ್ ಕಂನಿಗೆ ಕೊಡಬೇಕಿದ್ದ 462 ಕೋಟಿ ರೂ.ಗಳನ್ನು ನೀಡದೇ ಸತಾಯಿಸಿ, ಪದೇ ಪದೇ ಕೋರ್ಟಿಗೆ ಗೈರಾಗಿ, ಅಂತಿಮದಲ್ಲಿ ಜೈಲಿಗೆ ಕಾಕಬೇಕಾಗ್ತದೆ ಎಂದು ಸುಪ್ರಿಂಕೋರ್ಟಿಂದ ಎಚ್ಚರಿಕೆ ಪಡೆದಿದ್ದ ದಗಲ್ಬಾಜಿ ಅನಿಲ್ ಅಂಬಾನಿಯಂ ಮನುಷ್ಯನನ್ನು ರಫೆಲ್ ಡೀಲ್‍ನಲ್ಲಿ ಸೇರಿಸಿಕೊಂಡಿದ್ದು ಏಕೆ?

ಚೌಕಿದಾರ್ ಮತ್ತು ಅಂಬಾನಿ ನಡುವೆ ಬರೀ ‘ಚಾಯ್’ ಪಾರ್ಟಿಗಳು ನಡೆಯುತ್ತಿವೆಯೋ ಅಥವಾ ಪರಸ್ಪರ ಹಂಚಿ ತಿನ್ನುವ ಡೀಲ್ ನಡೆದಿವೆಯೋ?

ಕೊನೆಯಲ್ಲಿ ಕೇಳಬೇಕಾದ ಪ್ರಶ್ನೆ: ಮೋದಿಗೆ ಅಂಬಾನಿ ‘ಕಂಪನಿ’ ಕೊಡುತ್ತಿದ್ದಾರೋ, ಅಂಬಾನಿಗೇ ಮೋದಿ ‘ಕಂಪನಿ’ ಕೊಡುತ್ತಿದ್ದಾರೋ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...