Homeಮುಖಪುಟಮೋದಿಗೆ ಅಂಬಾನಿ ‘ಕಂಪನಿ’ ಕೊಡುತ್ತಿದ್ದಾರೋ, ಅಥವಾ ಅಂಬಾನಿಗೇ ಮೋದಿ ‘ಕಂಪನಿ’ ಕೊಡುತ್ತಿದ್ದಾರೋ?

ಮೋದಿಗೆ ಅಂಬಾನಿ ‘ಕಂಪನಿ’ ಕೊಡುತ್ತಿದ್ದಾರೋ, ಅಥವಾ ಅಂಬಾನಿಗೇ ಮೋದಿ ‘ಕಂಪನಿ’ ಕೊಡುತ್ತಿದ್ದಾರೋ?

- Advertisement -
- Advertisement -

| ಮಲ್ಲನಗೌಡರ್ ಪಿ.ಕೆ |

ಕಂಡ ಕಂಡಲ್ಲಿ ಸಾಲ ಮಾಡಿಕೊಂಡು ತಿರುಗುವ, ಪರದೇಶಗಳಲ್ಲೂ ತೆರಿಗೆ ವಂಚನೆ ಮಾಡಿ ‘ವಿಶ್ವಗುರು’ ಭಾರತದ ಕೀರ್ತಿ ಪತಾಕೆ ಹಾರಿಸುವ, ಪಾಲುದಾರ ಕಂಪನಿಗಳಿಗೆ ಕೊಡಬೇಕಾದ ಹಣ ನೀಡದೇ ಸತಾಯಿಸುವ, ಜೈಲಿಗೆ ಹಾಕಬೇಕ್ತಾಗದೆ ಹುಷಾರ್ ಎಂದು ಸುಪ್ರಿಂಕೋರ್ಟ್‍ನಿಂದ ಉಗಿಸಿಕೊಳ್ಳುವ ಒಬ್ಬ ದುಷ್ಟ ಬ್ಯುಸಿನೆಸ್‍ಮ್ಯಾನ್ ಜೊತೆ ಪ್ರಧಾನಿ ನರೇಂದ್ರ ಮೋದಿಯ ಸ್ನೇಹ ಎಂಥದ್ದು? ವಿದೇಶ ಪ್ರವಾಸಗಳಲ್ಲಿ ಮೋದಿಗೆ ಅಂಬಾನಿ ಕಂಪನಿ ಕೊಟ್ಟರೋ, ಅಂಬಾನಿಗೇ ಕಂಪನಿ ಕೊಡಲು ಮೋದಿ ಟೂರ್ ಮಾಡಿದರೋ?

ಇವೆಲ್ಲ ಪ್ರಶ್ನೆಗಳನ್ನು ಮತದಾರರು ಈಗ ಎತ್ತಿಕೊಳ್ಳಲೇ ಬೇಕಾಗಿದೆ. ರಫೆಲ್ ಒಪ್ಪಂದದ ನಂತರ ಫ್ರಾನ್ಸ್ ಸರ್ಕಾರ ಅನಿಲ್ ಅಂಬಾನಿ ಕಂಪನಿಗೆ 1,124.9 ಕೋಟಿ ರೂಪಾಯಿ ತೆರಿಗೆ ವಿನಾಯಿತಿ ನೀಡಿರುವುದು ಬೆಳಕಿಗೆ ಬಂದಿದೆ.

      ರಕ್ಷಣಾ ಇಲಾಖೆಯ ‘ಡಿಫೆನ್ಸ್’ ಆಟ!

ಫ್ರಾನ್ಸಿನ ‘ಲೆ ಮಾಂಡೆ’ ಪತ್ರಿಕೆ ಇದನ್ನು ಪ್ರಕಟಿಸಿದ ನಂತರ, ‘ದಿ ವೈರ್’ ಅದನ್ನು ಭಾರತದಲ್ಲಿ ಪ್ರಕಟಿಸಿತು. ವಿಪಕ್ಷಗಳು ಈ ಕುರಿತು ಮೋದಿಯತ್ತ, ಸರ್ಕಾರದತ್ತ ಬೊಟ್ಟು ಮಾಡಿದವು. ಸರ್ಕಾರದ ನಡೆಯ ಬಗ್ಗೆ, ಪ್ರಧಾನಿ ವಿರುದ್ಧ ಟೀಕೆಗೆ ಪ್ರತ್ಯುತ್ತರ ನೀಡುವಲ್ಲಿ ಬಿಜೆಪಿಗಿಂತ ರಕ್ಷಣಾ ಸಚಿವಾಲಯಕ್ಕೇ ಹೆಚ್ಚು ಆಸಕ್ತಿಯಿರುವಂತಿದೆ!

‘ಡಿಫೆನ್ಸ್ ಗೆ ಇಳಿದ ರಕ್ಷಣಾ ಸಚಿವಾಲಯ, ‘ತೆರಿಗೆ ವಿನಾಯತಿ ಪಡೆದಿರುವುದನ್ನು ರಫೆಲ್ ಒಪ್ಪಂದದ ಜತೆ ಸಂಬಂಧ ಕಲ್ಪಿಸುವುದು ತಪ್ಪು. ಸರ್ಕಾರಕ್ಕೂ ಹಾಗೂ ತೆರಿಗೆ ವಿನಾಯತಿಗೂ ಸಂಬಂಧವಿಲ್ಲ’ ಎಂದು ಸರ್ಕಾರದ ಪರ, ಮೋದಿ ಪರ ‘ರಕ್ಷಣಾತ್ಮಕ’ ಬ್ಯಾಟಿಂಗ್ ಮಾಡಿದೆ! ರಫೆಲ್ ಡೀಲ್‍ನ ಅಧಿಕೃತ ಭಾಗವಾಗಿ ಅಥವಾ ರಫೆಲ್ ಕಾರಣಕ್ಕೇ ಅಂತ ಬಹಿರಂಗವಾಗಿ ಘೋಷಿಸಿ ತೆರಿಗೆ ವಿನಾಯತಿ ಮಾಡಲು ಫ್ರಾನ್ಸ್ ಸರ್ಕಾರವೂ ಮೂರ್ಖವಲ್ಲ, ಅಂಬಾನಿ-ಮೊದಿಯೂ ಮೂರ್ಖರಲ್ಲ. ಈ ಸರಳ ಸತ್ಯ  ರಕ್ಷಣಾ ಸಚಿವಾಲಯಕ್ಕೆ ತಿಳಿಯಲಿಲ್ಲವೇ? ಅಥವಾ ಸರ್ಕಾರವೇ ಒತ್ತಾಯದಿಂದ ಅದರ ಕಡೆ ಸ್ಟೇಟ್‍ಮೆಂಟ್ ಕೊಡೊಸಿತೇ?

ರಫೆಲ್‍ಗೆ ಪೂರಕವಾಗಿ, ಸಮಾಂತರವಾಗಿ ಅನಧಿಕೃತ ಡೀಲ್ ಏರ್ಪಟ್ಟ ಕಾರಣಕ್ಕೆ ತೆರಿಗೆ ವಿನಾಯತಿ ಮಾಡಲಾಗಿದೆ, ಇದಕ್ಕೆ ಪ್ರಧಾನಿಯ ಕೃಪೆ ಇದೆ ಎಂಬುದು ಆರೋಪ. ಹೀಗಿರುವಾಗ ಡಿಫೆನ್ಸ್ ಮಿನಿಸ್ಟ್ರಿ ಕುಂಬಳಕಾಯಿ ಕಳ್ಳನಂತೆ ವರ್ತಿಸಿತೇ?

  ಸಂಶಯಾತ್ಮಕ ಘಟನಾವಳಿಗಳು

ಮಾರ್ಚ್ 25, 2015: ಡಸಾಲ್ಟ್ ಬಿಡುಗಡೆ ಮಾಡಿದ ಅಧಿಕೃತ ವಿಡಿಯೋ ಪ್ರಕಾರ, ಎಚ್‍ಎಎಲ್, ಭಾರತೀಯ ರಕ್ಷಣಾ ಇಲಾಖೆ  ನಡುವಿನ ರಫೆಲ್ ಒಪ್ಪಂದದ ಮಾತುಕತೆಗಳು ಶೇ.95ರಷ್ಟು ಮುಗಿದಿದ್ದು, ಭಾರತ ವಾಯುಸೇನೆಗೆ 126 ರಫೆಲ್ ವಿಮಾನ ಪೂರೈಸಲು ಡಸಾಲ್ಟ್ ಖುಷಿ ಪಡುತ್ತದೆ.

ಮಾರ್ಚ್ 28, 2015: ಯುದ್ಧ ವಿಮಾನವಿರಲಿ, ಏರೋನಾಟಿಕ್ಸ್‍ನಲ್ಲಿ ಕಿಂಚಿತ್ ಅನುಭವ ಇಲ್ಲದ ಅನಿಲ್ ಅಂಬಾನಿಯ ರಿಲಾಯನ್ಸ್‍ನಿಂದ ಡಿಫೆನ್ಸ್ ಕಂಪನಿಯೊಂದು ರಿಜಿಸ್ಟರ್ ಆಗುತ್ತದೆ.

ಏಪ್ರಿಲ್ 8, 2015: ಪ್ರಧಾನಿ ಏಪ್ರಿಲ್ 9ರಿಂದ (ಮರುದಿನ) ಕೈಗೊಳ್ಳಲಿರುವ ಫ್ರಾನ್ಸ್ ಪ್ರವಾಸ ಕುರಿತು ವಿದೇಶಾಂಗ ಕಾರ್ಯದರ್ಶಿ ಎಸ್ ಜೈಶಂಕರ್ ಅವರಿಂದ ಪತ್ರಿಕಾಗೋಷ್ಠಿ. 126 ರಫೆಲ್ ವಿಮಾನ ಖರೀದಿ ಕುರಿತು ಡಸಾಲ್ಟ್, ಎಚ್‍ಎಎಲ್, ರಕ್ಷಣಾ ಇಲಾಖೆ ನಡುವೆ ಸುದೀರ್ಘ ಮತ್ತು ತಾಂತ್ರಿಕ ಚರ್ಚೆಗಳು ಮುಂದುವರೆದಿವೆ, ಪ್ರಧಾನಿ ಭೇಟಿಗೂ ಈ ವಿಷಯಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದರು.

ಅಂದರೆ, ಅಲ್ಲಿವರೆಗೂ ವಿದೇಶಾಂಗ ಇಲಾಖೆಗೂ ಎರಡೇ ದಿನದಲ್ಲಿ  ‘ಅಂಬಾನಿಯ ರಫೆಲ್’ ಹಾರುವುದೂ ಗೊತ್ತಿರಲಿಲ್ಲ.

ಏಪ್ರಿಲ್ 10: ಫ್ರಾನ್ಸಿನ ರಾಹಧಾನಿ ಪ್ಯಾರಿಸ್‍ನಲ್ಲಿ ಪ್ರಧಾನಿ ಮೋದಿಯಿಂದ ಸಂಪೂರ್ಣ ಮಾರ್ಪಾಡಾದ ರಫೆಲ್ ಒಪ್ಪಂದದ ಘೋಷಣೆ! ಎಚ್‍ಎಎಲ್ ಬದಲು ಅನಿಲ್ ಅಂಬಾನಿಯ ಕಂಪನಿ1 126ರ ಬದಲು 36 ರಫೆಲ್ ವಿಮಾನ! ಮೂಲ ದರಕ್ಕಿಂತ ಹೆಚ್ಚಿನ ದರದಲ್ಲಿ ಖರೀದಿಯ ಒಪ್ಪಂದ.

ಇದಾದ ಆರು ತಿಂಗಳಿಗೆ, ಫ್ರಾನ್ಸ್ ಸರ್ಕಾರದಿಂದ ಬಹು ವರ್ಷಗಳವರೆಗೂ ಇತ್ಯರ್ಥವಾಗದ ಅಂಬಾನಿಯ ತೆರಿಗೆ ವಂಚನೆ ಪ್ರಕರಣದ ಇತ್ಯರ್ಥ. ಅಂಬಾನಿಗೆ 1,100 ಕೋಟಿ ತೆರಿಗೆ ರಿಯಾಯಿತಿ!

ವಿದೇಶದಲ್ಲೂ ತೆರಿಗೆ ವಂಚಿಸಿದ ಅಂಬಾನಿಗೆ ಮೋದಿ ‘ಕಂಪನಿ’ ಕೊಡುತ್ತಿರುವುದೇಕೆ? ಸ್ವೀಡನ್ನಿನ ಎರಿಕ್ಸನ್ ಕಂನಿಗೆ ಕೊಡಬೇಕಿದ್ದ 462 ಕೋಟಿ ರೂ.ಗಳನ್ನು ನೀಡದೇ ಸತಾಯಿಸಿ, ಪದೇ ಪದೇ ಕೋರ್ಟಿಗೆ ಗೈರಾಗಿ, ಅಂತಿಮದಲ್ಲಿ ಜೈಲಿಗೆ ಕಾಕಬೇಕಾಗ್ತದೆ ಎಂದು ಸುಪ್ರಿಂಕೋರ್ಟಿಂದ ಎಚ್ಚರಿಕೆ ಪಡೆದಿದ್ದ ದಗಲ್ಬಾಜಿ ಅನಿಲ್ ಅಂಬಾನಿಯಂ ಮನುಷ್ಯನನ್ನು ರಫೆಲ್ ಡೀಲ್‍ನಲ್ಲಿ ಸೇರಿಸಿಕೊಂಡಿದ್ದು ಏಕೆ?

ಚೌಕಿದಾರ್ ಮತ್ತು ಅಂಬಾನಿ ನಡುವೆ ಬರೀ ‘ಚಾಯ್’ ಪಾರ್ಟಿಗಳು ನಡೆಯುತ್ತಿವೆಯೋ ಅಥವಾ ಪರಸ್ಪರ ಹಂಚಿ ತಿನ್ನುವ ಡೀಲ್ ನಡೆದಿವೆಯೋ?

ಕೊನೆಯಲ್ಲಿ ಕೇಳಬೇಕಾದ ಪ್ರಶ್ನೆ: ಮೋದಿಗೆ ಅಂಬಾನಿ ‘ಕಂಪನಿ’ ಕೊಡುತ್ತಿದ್ದಾರೋ, ಅಂಬಾನಿಗೇ ಮೋದಿ ‘ಕಂಪನಿ’ ಕೊಡುತ್ತಿದ್ದಾರೋ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...