Homeಮುಖಪುಟಮೋದಿಗೆ ಅಂಬಾನಿ ‘ಕಂಪನಿ’ ಕೊಡುತ್ತಿದ್ದಾರೋ, ಅಥವಾ ಅಂಬಾನಿಗೇ ಮೋದಿ ‘ಕಂಪನಿ’ ಕೊಡುತ್ತಿದ್ದಾರೋ?

ಮೋದಿಗೆ ಅಂಬಾನಿ ‘ಕಂಪನಿ’ ಕೊಡುತ್ತಿದ್ದಾರೋ, ಅಥವಾ ಅಂಬಾನಿಗೇ ಮೋದಿ ‘ಕಂಪನಿ’ ಕೊಡುತ್ತಿದ್ದಾರೋ?

- Advertisement -
- Advertisement -

| ಮಲ್ಲನಗೌಡರ್ ಪಿ.ಕೆ |

ಕಂಡ ಕಂಡಲ್ಲಿ ಸಾಲ ಮಾಡಿಕೊಂಡು ತಿರುಗುವ, ಪರದೇಶಗಳಲ್ಲೂ ತೆರಿಗೆ ವಂಚನೆ ಮಾಡಿ ‘ವಿಶ್ವಗುರು’ ಭಾರತದ ಕೀರ್ತಿ ಪತಾಕೆ ಹಾರಿಸುವ, ಪಾಲುದಾರ ಕಂಪನಿಗಳಿಗೆ ಕೊಡಬೇಕಾದ ಹಣ ನೀಡದೇ ಸತಾಯಿಸುವ, ಜೈಲಿಗೆ ಹಾಕಬೇಕ್ತಾಗದೆ ಹುಷಾರ್ ಎಂದು ಸುಪ್ರಿಂಕೋರ್ಟ್‍ನಿಂದ ಉಗಿಸಿಕೊಳ್ಳುವ ಒಬ್ಬ ದುಷ್ಟ ಬ್ಯುಸಿನೆಸ್‍ಮ್ಯಾನ್ ಜೊತೆ ಪ್ರಧಾನಿ ನರೇಂದ್ರ ಮೋದಿಯ ಸ್ನೇಹ ಎಂಥದ್ದು? ವಿದೇಶ ಪ್ರವಾಸಗಳಲ್ಲಿ ಮೋದಿಗೆ ಅಂಬಾನಿ ಕಂಪನಿ ಕೊಟ್ಟರೋ, ಅಂಬಾನಿಗೇ ಕಂಪನಿ ಕೊಡಲು ಮೋದಿ ಟೂರ್ ಮಾಡಿದರೋ?

ಇವೆಲ್ಲ ಪ್ರಶ್ನೆಗಳನ್ನು ಮತದಾರರು ಈಗ ಎತ್ತಿಕೊಳ್ಳಲೇ ಬೇಕಾಗಿದೆ. ರಫೆಲ್ ಒಪ್ಪಂದದ ನಂತರ ಫ್ರಾನ್ಸ್ ಸರ್ಕಾರ ಅನಿಲ್ ಅಂಬಾನಿ ಕಂಪನಿಗೆ 1,124.9 ಕೋಟಿ ರೂಪಾಯಿ ತೆರಿಗೆ ವಿನಾಯಿತಿ ನೀಡಿರುವುದು ಬೆಳಕಿಗೆ ಬಂದಿದೆ.

      ರಕ್ಷಣಾ ಇಲಾಖೆಯ ‘ಡಿಫೆನ್ಸ್’ ಆಟ!

ಫ್ರಾನ್ಸಿನ ‘ಲೆ ಮಾಂಡೆ’ ಪತ್ರಿಕೆ ಇದನ್ನು ಪ್ರಕಟಿಸಿದ ನಂತರ, ‘ದಿ ವೈರ್’ ಅದನ್ನು ಭಾರತದಲ್ಲಿ ಪ್ರಕಟಿಸಿತು. ವಿಪಕ್ಷಗಳು ಈ ಕುರಿತು ಮೋದಿಯತ್ತ, ಸರ್ಕಾರದತ್ತ ಬೊಟ್ಟು ಮಾಡಿದವು. ಸರ್ಕಾರದ ನಡೆಯ ಬಗ್ಗೆ, ಪ್ರಧಾನಿ ವಿರುದ್ಧ ಟೀಕೆಗೆ ಪ್ರತ್ಯುತ್ತರ ನೀಡುವಲ್ಲಿ ಬಿಜೆಪಿಗಿಂತ ರಕ್ಷಣಾ ಸಚಿವಾಲಯಕ್ಕೇ ಹೆಚ್ಚು ಆಸಕ್ತಿಯಿರುವಂತಿದೆ!

‘ಡಿಫೆನ್ಸ್ ಗೆ ಇಳಿದ ರಕ್ಷಣಾ ಸಚಿವಾಲಯ, ‘ತೆರಿಗೆ ವಿನಾಯತಿ ಪಡೆದಿರುವುದನ್ನು ರಫೆಲ್ ಒಪ್ಪಂದದ ಜತೆ ಸಂಬಂಧ ಕಲ್ಪಿಸುವುದು ತಪ್ಪು. ಸರ್ಕಾರಕ್ಕೂ ಹಾಗೂ ತೆರಿಗೆ ವಿನಾಯತಿಗೂ ಸಂಬಂಧವಿಲ್ಲ’ ಎಂದು ಸರ್ಕಾರದ ಪರ, ಮೋದಿ ಪರ ‘ರಕ್ಷಣಾತ್ಮಕ’ ಬ್ಯಾಟಿಂಗ್ ಮಾಡಿದೆ! ರಫೆಲ್ ಡೀಲ್‍ನ ಅಧಿಕೃತ ಭಾಗವಾಗಿ ಅಥವಾ ರಫೆಲ್ ಕಾರಣಕ್ಕೇ ಅಂತ ಬಹಿರಂಗವಾಗಿ ಘೋಷಿಸಿ ತೆರಿಗೆ ವಿನಾಯತಿ ಮಾಡಲು ಫ್ರಾನ್ಸ್ ಸರ್ಕಾರವೂ ಮೂರ್ಖವಲ್ಲ, ಅಂಬಾನಿ-ಮೊದಿಯೂ ಮೂರ್ಖರಲ್ಲ. ಈ ಸರಳ ಸತ್ಯ  ರಕ್ಷಣಾ ಸಚಿವಾಲಯಕ್ಕೆ ತಿಳಿಯಲಿಲ್ಲವೇ? ಅಥವಾ ಸರ್ಕಾರವೇ ಒತ್ತಾಯದಿಂದ ಅದರ ಕಡೆ ಸ್ಟೇಟ್‍ಮೆಂಟ್ ಕೊಡೊಸಿತೇ?

ರಫೆಲ್‍ಗೆ ಪೂರಕವಾಗಿ, ಸಮಾಂತರವಾಗಿ ಅನಧಿಕೃತ ಡೀಲ್ ಏರ್ಪಟ್ಟ ಕಾರಣಕ್ಕೆ ತೆರಿಗೆ ವಿನಾಯತಿ ಮಾಡಲಾಗಿದೆ, ಇದಕ್ಕೆ ಪ್ರಧಾನಿಯ ಕೃಪೆ ಇದೆ ಎಂಬುದು ಆರೋಪ. ಹೀಗಿರುವಾಗ ಡಿಫೆನ್ಸ್ ಮಿನಿಸ್ಟ್ರಿ ಕುಂಬಳಕಾಯಿ ಕಳ್ಳನಂತೆ ವರ್ತಿಸಿತೇ?

  ಸಂಶಯಾತ್ಮಕ ಘಟನಾವಳಿಗಳು

ಮಾರ್ಚ್ 25, 2015: ಡಸಾಲ್ಟ್ ಬಿಡುಗಡೆ ಮಾಡಿದ ಅಧಿಕೃತ ವಿಡಿಯೋ ಪ್ರಕಾರ, ಎಚ್‍ಎಎಲ್, ಭಾರತೀಯ ರಕ್ಷಣಾ ಇಲಾಖೆ  ನಡುವಿನ ರಫೆಲ್ ಒಪ್ಪಂದದ ಮಾತುಕತೆಗಳು ಶೇ.95ರಷ್ಟು ಮುಗಿದಿದ್ದು, ಭಾರತ ವಾಯುಸೇನೆಗೆ 126 ರಫೆಲ್ ವಿಮಾನ ಪೂರೈಸಲು ಡಸಾಲ್ಟ್ ಖುಷಿ ಪಡುತ್ತದೆ.

ಮಾರ್ಚ್ 28, 2015: ಯುದ್ಧ ವಿಮಾನವಿರಲಿ, ಏರೋನಾಟಿಕ್ಸ್‍ನಲ್ಲಿ ಕಿಂಚಿತ್ ಅನುಭವ ಇಲ್ಲದ ಅನಿಲ್ ಅಂಬಾನಿಯ ರಿಲಾಯನ್ಸ್‍ನಿಂದ ಡಿಫೆನ್ಸ್ ಕಂಪನಿಯೊಂದು ರಿಜಿಸ್ಟರ್ ಆಗುತ್ತದೆ.

ಏಪ್ರಿಲ್ 8, 2015: ಪ್ರಧಾನಿ ಏಪ್ರಿಲ್ 9ರಿಂದ (ಮರುದಿನ) ಕೈಗೊಳ್ಳಲಿರುವ ಫ್ರಾನ್ಸ್ ಪ್ರವಾಸ ಕುರಿತು ವಿದೇಶಾಂಗ ಕಾರ್ಯದರ್ಶಿ ಎಸ್ ಜೈಶಂಕರ್ ಅವರಿಂದ ಪತ್ರಿಕಾಗೋಷ್ಠಿ. 126 ರಫೆಲ್ ವಿಮಾನ ಖರೀದಿ ಕುರಿತು ಡಸಾಲ್ಟ್, ಎಚ್‍ಎಎಲ್, ರಕ್ಷಣಾ ಇಲಾಖೆ ನಡುವೆ ಸುದೀರ್ಘ ಮತ್ತು ತಾಂತ್ರಿಕ ಚರ್ಚೆಗಳು ಮುಂದುವರೆದಿವೆ, ಪ್ರಧಾನಿ ಭೇಟಿಗೂ ಈ ವಿಷಯಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದರು.

ಅಂದರೆ, ಅಲ್ಲಿವರೆಗೂ ವಿದೇಶಾಂಗ ಇಲಾಖೆಗೂ ಎರಡೇ ದಿನದಲ್ಲಿ  ‘ಅಂಬಾನಿಯ ರಫೆಲ್’ ಹಾರುವುದೂ ಗೊತ್ತಿರಲಿಲ್ಲ.

ಏಪ್ರಿಲ್ 10: ಫ್ರಾನ್ಸಿನ ರಾಹಧಾನಿ ಪ್ಯಾರಿಸ್‍ನಲ್ಲಿ ಪ್ರಧಾನಿ ಮೋದಿಯಿಂದ ಸಂಪೂರ್ಣ ಮಾರ್ಪಾಡಾದ ರಫೆಲ್ ಒಪ್ಪಂದದ ಘೋಷಣೆ! ಎಚ್‍ಎಎಲ್ ಬದಲು ಅನಿಲ್ ಅಂಬಾನಿಯ ಕಂಪನಿ1 126ರ ಬದಲು 36 ರಫೆಲ್ ವಿಮಾನ! ಮೂಲ ದರಕ್ಕಿಂತ ಹೆಚ್ಚಿನ ದರದಲ್ಲಿ ಖರೀದಿಯ ಒಪ್ಪಂದ.

ಇದಾದ ಆರು ತಿಂಗಳಿಗೆ, ಫ್ರಾನ್ಸ್ ಸರ್ಕಾರದಿಂದ ಬಹು ವರ್ಷಗಳವರೆಗೂ ಇತ್ಯರ್ಥವಾಗದ ಅಂಬಾನಿಯ ತೆರಿಗೆ ವಂಚನೆ ಪ್ರಕರಣದ ಇತ್ಯರ್ಥ. ಅಂಬಾನಿಗೆ 1,100 ಕೋಟಿ ತೆರಿಗೆ ರಿಯಾಯಿತಿ!

ವಿದೇಶದಲ್ಲೂ ತೆರಿಗೆ ವಂಚಿಸಿದ ಅಂಬಾನಿಗೆ ಮೋದಿ ‘ಕಂಪನಿ’ ಕೊಡುತ್ತಿರುವುದೇಕೆ? ಸ್ವೀಡನ್ನಿನ ಎರಿಕ್ಸನ್ ಕಂನಿಗೆ ಕೊಡಬೇಕಿದ್ದ 462 ಕೋಟಿ ರೂ.ಗಳನ್ನು ನೀಡದೇ ಸತಾಯಿಸಿ, ಪದೇ ಪದೇ ಕೋರ್ಟಿಗೆ ಗೈರಾಗಿ, ಅಂತಿಮದಲ್ಲಿ ಜೈಲಿಗೆ ಕಾಕಬೇಕಾಗ್ತದೆ ಎಂದು ಸುಪ್ರಿಂಕೋರ್ಟಿಂದ ಎಚ್ಚರಿಕೆ ಪಡೆದಿದ್ದ ದಗಲ್ಬಾಜಿ ಅನಿಲ್ ಅಂಬಾನಿಯಂ ಮನುಷ್ಯನನ್ನು ರಫೆಲ್ ಡೀಲ್‍ನಲ್ಲಿ ಸೇರಿಸಿಕೊಂಡಿದ್ದು ಏಕೆ?

ಚೌಕಿದಾರ್ ಮತ್ತು ಅಂಬಾನಿ ನಡುವೆ ಬರೀ ‘ಚಾಯ್’ ಪಾರ್ಟಿಗಳು ನಡೆಯುತ್ತಿವೆಯೋ ಅಥವಾ ಪರಸ್ಪರ ಹಂಚಿ ತಿನ್ನುವ ಡೀಲ್ ನಡೆದಿವೆಯೋ?

ಕೊನೆಯಲ್ಲಿ ಕೇಳಬೇಕಾದ ಪ್ರಶ್ನೆ: ಮೋದಿಗೆ ಅಂಬಾನಿ ‘ಕಂಪನಿ’ ಕೊಡುತ್ತಿದ್ದಾರೋ, ಅಂಬಾನಿಗೇ ಮೋದಿ ‘ಕಂಪನಿ’ ಕೊಡುತ್ತಿದ್ದಾರೋ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...