Homeಮುಖಪುಟಗಾಬರಿಗೊಂಡಿದೆಯೇ ಕೇಂದ್ರದ ಆಡಳಿತ ಪಕ್ಷ?

ಗಾಬರಿಗೊಂಡಿದೆಯೇ ಕೇಂದ್ರದ ಆಡಳಿತ ಪಕ್ಷ?

- Advertisement -
- Advertisement -

ಇದೊಂದು ಇಂಟರೆಸ್ಟಿಂಗ್ ಆದ ಕದನ. 2019ರ ಫೈನಲ್‍ಗಿಂತ ಮೊದಲಿನ ‘ಸೆಮಿಫೈನಲ್’ ಎಂದೇ ವ್ಯಾಖ್ಯಾನಿಸಲಾಗುತ್ತಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯು ಕೆಲವರಿಗೆ ಆತಂಕ, ಹಲವರ ಕುತೂಹಲಕ್ಕೆ ಕಾರಣವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ‘ಚುನಾವಣೆ’ ಅಂದರೆ ಮತದಾರರು ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುವ ‘ಅವಕಾಶ’. ಸ್ವಾತಂತ್ರ್ಯೋತ್ತರ ಭಾರತದಲ್ಲಿ ನಡೆದ ಬಹುತೇಕ ಚುನಾವಣೆಗಳು ‘ಅವಕಾಶ’ ನೀಡುವದಕ್ಕೆ ನಡೆದ ‘ಆಟ’ದಂತೆ ನಡೆಯುತ್ತ ಬಂದಿದ್ದವು. ಇತ್ತೀಚಿನ ವರ್ಷಗಳ ಚುನಾವಣೆಯ ಸ್ವರೂಪವೇ ಬದಲಾದ ಮೇಲೆ ಅದನ್ನು ಕುರಿತ ಭಾಷೆಯ ಬಳಕೆಯಲ್ಲಿಯೂ ಸಹಜವಾಗಿ ಗಣನೀಯ ಬದಲಾವಣೆ ಆಗಿದೆ. ಸಮರ, ಕದನ, ರಣತಂತ್ರ ಹೀಗೆ ಯುದ್ಧೋನ್ಮಾದಕ್ಕೆ ಸಂಬಂಧಿಸಿದ ಪದಗಳು ಮುಂಚೂಣಿಗೆ ಬಂದಿವೆ. ‘ಅವಕಾಶ’ ಆಗಿದ್ದ ಚುನಾವಣೆಯು ಈಗ ರಾಜಕೀಯ ಪಕ್ಷಗಳಿಗೆ ‘ಚುನಾವಣೆ’ ಜೀವನ್ಮರಣದ ಪ್ರಶ್ನೆಯಾಗಿ ಪರಿಣಮಿಸಿದೆ. ಯಾವ ಚಿಕ್ಕ-ಪುಟ್ಟ ಚುನಾವಣೆಯನ್ನೂ ಲಘುವಾಗಿ ಪರಿಗಣಿಸಲು ಸಾಧ್ಯವೇ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ. ಆಟದ ನಿಯಮ ಬದಲಿಸಿದ ‘ಚಾಣಕ್ಯ’ರೇ ಪರದಾಡಬೇಕಾದ ಸ್ಥಿತಿ ಬಂದಿದೆ.
ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಗಡ, ತೆಲಂಗಾಣ, ಮಿಜೋರಾಂ ರಾಜ್ಯಗಳ ವಿಧಾನ ಸಭಾ ಚುನಾವಣೆಯು ಕೇಂದ್ರ ಮತ್ತು ಆಯಾ ರಾಜ್ಯಗಳಲ್ಲಿ ಅಧಿಕಾರದಲ್ಲಿ ಇರುವ ಪಕ್ಷಗಳ ಸತ್ವಪರೀಕ್ಷೆಯಾಗಿದೆ. ಐದು ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೆ ತೆಲಂಗಾಣದಲ್ಲಿ ಕೆ. ಚಂದ್ರಶೇಖರರಾವ್ ನೇತೃತ್ವದ ತೆಲಂಗಾಣ ರಾಷ್ಟ್ರೀಯ ಸಮಿತಿ (ಟಿಆರ್ ಎಸ್) ಮತ್ತು ಪುಟ್ಟ ರಾಜ್ಯ ಮಿಜೋರಾಂನಲ್ಲಿ ಕಾಂಗ್ರೆಸ್ ಆಡಳಿತದ ಚುಕ್ಕಾಣಿ ಹಿಡಿದಿವೆ. 2019ರ ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ನಡೆಯುತ್ತಿರುವ ಈ ಐದು ರಾಜ್ಯಗಳ ಚುನಾವಣೆ ‘ದಿಕ್ಸೂಚಿ’ ಆಗಬಹುದು ಎಂದು ಅಂದಾಜಿಸಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಬಿಜೆಪಿಯ ಪಾಲಿಗೆ ಇದು ಸಹಜವಾಗಿಯೇ ‘ಆತಂಕ’ ಉಂಟು ಮಾಡಿದೆ. ಬರಲಿರುವ ವಿಧಾನಸಭಾ ಚುನಾವಣಾ ಆಟದಲ್ಲಿ ಕಾಂಗ್ರೆಸ್ ಕಳೆದುಕೊಳ್ಳುವುದೇನೂ ಇಲ್ಲ. ಈಗಾಗಲೇ ಮಣ್ಣುಪಾಲಾಗಿರುವ ತನ್ನ ಸ್ಥಿತಿಯನ್ನು ಅದು ಸ್ವಲ್ಪಮಟ್ಟಿಗೆ ಉತ್ತಮಪಡಿಸಿಕೊಳ್ಳಬಹುದು. ಈಗ ಇರುವ ಸ್ಥಿತಿಗಿಂತ ಮತ್ತಷ್ಟು ಕೆಳಗೆ ಕುಸಿಯುವ ಸಾಧ್ಯತೆಗಳಿಲ್ಲ.

ಯಾಕೆ ಸೆಮಿಫೈನಲ್?
ಚುನಾವಣೆಯ ನಡೆಯುವ ಐದು ರಾಜ್ಯಗಳ ಪೈಕಿ ಮೂರರಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಅಷ್ಟು ಮಾತ್ರವಲ್ಲದೆ ಲೋಕಸಭೆಯ ಸ್ಥಾನಗಳಲ್ಲಿಯೂ ಅದು ಮುಂಚೂಣಿಯಲ್ಲಿದೆ. ಐದು ರಾಜ್ಯ ಒಟ್ಟು 83 ಸ್ಥಾನಗಳ ಪೈಕಿ 2014ರ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯು 60 ಸ್ಥಾನಗಳನ್ನು ಪಡೆದಿತ್ತು. ಆದರೆ, ಕಾಂಗ್ರೆಸ್ ಪಡೆದದ್ದು ಕೇವಲ 9 ಸ್ಥಾನ ಮಾತ್ರ. ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳ ಪರಸ್ಪರ ಭಿನ್ನ ಎಂಬುದು ನಿಜವಾದರೂ ಪಕ್ಷಗಳ ಮನೋಬಲ ಹೆಚ್ಚಿಸಲು ಮತ್ತು ಕುಗ್ಗಿಸಲು ಕಾರಣವಾಗುವುದರಲ್ಲಿ ಅನುಮಾನವೇ ಇಲ್ಲ.

ಮಧ್ಯಪ್ರದೇಶ
2005 ರಿಂದ ಮಧ್ಯಪ್ರದೇಶದ ಆಡಳಿತ ಚುಕ್ಕಾಣಿ ಬಿಜೆಪಿಯ ವಶದಲ್ಲಿದೆ. ಕಳೆದ ಹದಿನೈದು ವರ್ಷಗಳಿಂದ ಶಿವರಾಜ ಚೌಹ್ವಾಣ ಮುಖ್ಯಮಂತ್ರಿಯಾಗಿದ್ದಾರೆ. 2013ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯು 230 ಸ್ಥಾನಗಳ ಪೈಕಿ 165 ಸ್ಥಾನಗಳ ತನ್ನದಾಗಿಸಿಕೊಂಡಿತ್ತು. ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ 58 ಸ್ಥಾನ ಪಡೆದರೆ ಬಿಎಸ್‍ಪಿ 4 ನಾಲ್ಕು ಸ್ಥಾನ ಪಡೆದಿತ್ತು. ಕಳೆದ

shivaraja chowhvan

ಚುನಾವಣೆಯಲ್ಲಿಯೂ ಬಿಎಸ್ ಪಿಯು ಪ್ರತ್ಯೇಕವಾಗಿ ಸ್ಪರ್ಧಿಸಿತ್ತು. ಈ ಬಾರಿ ಕೂಡ ಬಿಎಸ್‍ಪಿ ಕಾಂಗ್ರೆಸ್ ಜೊತೆ ಮೈತ್ರಿಗೆ ನಿರಾಕರಿಸಿದೆ. ಒಂದುವರೆ ದಶಕದ ಆಡಳಿತ ರೂಪಿಸಿರುವ ಆಡಳಿತ ವಿರೋಧಿ ಅಲೆಯನ್ನು ವಿರೋಧ ಪಕ್ಷ ಕಾಂಗ್ರೆಸ್ ತನ್ನೆಡೆಗೆ ತಿರುಗಿಸಿಕೊಳ್ಳಲು ಸಾಧ್ಯವೇ? ಎಂಬ ಪ್ರಶ್ನೆ ಪ್ರಮುಖವಾಗಿದೆ. ವ್ಯಾಪಂನಂತಹ ಅತಿದೊಡ್ಡ ಹಗರಣ ಸೇರಿದಂತೆ ಬಿಜೆಪಿಯ ಒಟ್ಟು ವೈಫಲ್ಯವನ್ನು ಮತದಾರರಿಗೆ ಮನವರಿಕೆ ಮಾಡಿಕೊಡುವಲ್ಲಿ ಕಾಂಗ್ರೆಸ್ ಸಫಲವಾದರೆ ಮಾತ್ರ ಮಧ್ಯಪ್ರದೇಶದಲ್ಲಿ ಅದು ಮುಖ ಉಳಿಸಿಕೊಳ್ಳಬಹುದು. ಚುನಾವಣಾ ತಂತ್ರ ಮತ್ತು ಆಕ್ರಮಣಕಾರಿ ಧೋರಣೆಯಿಂದ ಕಣಕ್ಕೆ ಇಳಿಯುವ ಬಿಜೆಪಿಗೆ ಮಧ್ಯಪ್ರದೇಶದ ಜನತೆ ನೀಡುವ ತೀರ್ಪು ಕೇವಲ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾತ್ರ ನಿರ್ಣಾಯಕವಲ್ಲ. 2014ರ ಲೋಕಸಭಾ ಚುನಾವಣೆಯಲ್ಲಿ 29 ಸ್ಥಾನಗಳಲ್ಲಿ 26 ಪಡೆದಿತ್ತು. ಕಾಂಗ್ರೆಸ್ ಗೆಲುವು ಕೇವಲ 3 ಸ್ಥಾನಗಳಿವೆ ಸೀಮಿತವಾಗಿತ್ತು. ಆದರೆ, 2015ರಲ್ಲಿ ನಡೆದ ರತಲಾಮ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಚ್ಚರಿಗೊಳಿಸುವ ಪ್ರಮಾಣದಲ್ಲಿ ಗೆಲುವು ತನ್ನದಾಗಿಸಿಕೊಂಡಿತ್ತು.

ರಾಜಸ್ಥಾನ
ಚುನಾವಣೆಯ ನಡೆಯಲಿರುವ ಮತ್ತೊಂದು ಪ್ರಮುಖ ರಾಜ್ಯ ರಾಜಸ್ಥಾನ. ಆಟ ಆರಂಭವಾಗುವ ಮುನ್ನವೇ ಆಡಳಿತಾರೂಢ ಪಕ್ಷಕ್ಕೆ ಮುಖಭಂಗದ ಸೂಚನೆಗಳು ದೊರೆಯತೊಡಗಿವೆ. ಮುಖ್ಯಮಂತ್ರಿ ಆಗಿರುವ ವಸುಂಧರಾಜೆ ಸಿಂಧ್ಯಾ ಅವರ ಆಡಳಿತ ವೈಖರಿಗೆ ರೋಸಿದಂತೆ ಕಾಣಿಸುತ್ತಿದೆ. ಅದಕ್ಕೆ ಪ್ರತಿಯಾಗಿ ಸಚಿನ್ ಪೈಲಟ್ ನೇತೃತ್ವದ ಕಾಂಗ್ರೆಸ್ ಉತ್ಸಾಹದಿಂದ ಕಾರ್ಯ ನಿರ್ವಹಿಸುತ್ತಿದೆ. ಕಾಂಗ್ರೆಸ್ ಆಂತರಿಕ

vasumdaraje sindhya

ಕಚ್ಚಾಟದಿಂದ ಆತ್ಮಹತ್ಯೆ ಮಾಡಿಕೊಳ್ಳದಿದ್ದರೆ ರಾಜಸ್ಥಾನದಲ್ಲಿ ಅದು ಅಧಿಕಾರಕ್ಕೆ ಬರದಂತೆ ತಡೆಯುವುದು ಕಷ್ಟ. ಆದರೆ, ತನ್ನ ಆತ್ಮಹತ್ಯಾತ್ಮಕ ಧೋರಣೆಗಳಿಗೆ ಹೆಸರುವಾಸಿಯಾಗಿರುವ ಕಾಂಗ್ರೆಸ್ ಅದನ್ನು ಮೀರುವುದೇ? ಕಾದು ನೋಡಬೇಕು.
2013ರ ವಿಧಾನಸಭಾ ಚುನಾವಣೆಯಲ್ಲಿ 200 ಸ್ಥಾನಗಳ ಪೈಕಿ ಬಿಜೆಪಿಯು 163 ಸ್ಥಾನ ಪಡೆದು ಭರ್ಜರಿ ಗೆಲುವು ತನ್ನದಾಗಿಸಿಕೊಂಡಿತ್ತು. ಕಾಂಗ್ರೆಸ್ ಕೇವಲ 21 ಸ್ಥಾನ ಪಡೆದಿತ್ತು. ನಂತರ ನಡೆದ ಉಪಚುನಾವಣೆಗಳಲ್ಲಿ ಆಡಳಿತಾರೂಢ ಪಕ್ಷ ಪರಾಜಯದ ಮುಖ ನೋಡಬೇಕಾಗಿತ್ತು. ಬಿಎಸ್ ಪಿ 3 ಸ್ಥಾನ ಪಡೆದಿತ್ತು. ಚುನಾವಣಾಪೂರ್ವ ಸಮೀಕ್ಷೆಗಳೆಲ್ಲವೂ ಆಡಳಿತ ವಿರೋಧಿ ಅಲೆಯನ್ನು ಸೂಚಿಸುವಂತಿವೆ. ವಿಧಾನಸಭಾ ಚುನಾವಣೆಯು ವಸುಂಧರಾ ಅವರ ಚುನಾವಣೆ ಎಂಬುದರಲ್ಲಿ ಎರಡು ಮಾತಿಲ್ಲ.
ಆದರೆ ರಾಜಸ್ಥಾನದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಇದೇ ಮಾತನ್ನು ಹೇಳುವಂತಿಲ್ಲ. ರಾಜ್ಯದ 25 ಸ್ಥಾನಗಳಲ್ಲಿ ಎಲ್ಲ ಸ್ಥಾನಗಳಲ್ಲಿಯೂ ಗೆಲುವು ಸಾಧಿಸಿ ಕ್ಲೀನ್ ಸ್ವೀಪ್ ಮಾಡಿತ್ತು. ಮೋದಿಯವರು ಎದುರಿಸಲಿರುವ ಚುನಾವಣೆಯಲ್ಲಿಯೂ ಎಲ್ಲ 25 ಸ್ಥಾನ ಉಳಿಸಿಕೊಳ್ಳುವುದು ಸಾಧ್ಯವೇ ಇಲ್ಲ ಎನ್ನುವಂತಹ ಸ್ಥಿತಿ ನಿರ್ಮಾಣವಾಗಿದೆ. ರಾಜಸ್ಥಾನದ ಅಲವರ, ಅಜ್ಮೀರ ಉಪಚುನಾವಣೆಯಲ್ಲಿ ಒಂದುವರೆ ಲಕ್ಷಕ್ಕಿಂತ ಹೆಚ್ಚು ಮತಗಳ ಅಂತರದಿಂದ ಕಾಂಗ್ರೆಸ್ ಗೆಲುವು ತನ್ನದಾಗಿಸಿಕೊಂಡಿದೆ.

ಛತ್ತೀಸ್‍ಘಡ
ಛತ್ತೀಸಗಢದಲ್ಲಿಯೂ ಆಡಳಿತದಲ್ಲಿರುವ ಬಿಜೆಪಿಗೆ ರಾಜಸ್ಥಾನದಂತಹ ಸ್ಥಿತಿಯೇನೂ ಇಲ್ಲ. ಆದರೆ, ಅಧಿಕಾರ ಉಳಿಸಿಕೊಳ್ಳಲೇಬೇಕಾದ ಸ್ಥಿತಿಯಲ್ಲಿ ಅಲ್ಲಿನ ಮುಖ್ಯಮಂತ್ರಿ ರಮಣಸಿಂಗ್ ಇದ್ದಾರೆ. ಸಮೀಕ್ಷೆಗಳು ಆಡಳಿತ ಪಕ್ಷವಾಗಿ ಮತದಾರರ ನಿಲುವು ಇಲ್ಲ ಎನ್ನುವ ಸೂಚನೆ ನೀಡಿವೆ. ಆದರೆ, ಕಾಂಗ್ರೆಸ್ ತೊರೆದು ಹೋಗಿರುವ ಅಜಿತ್ ಜೋಗಿ ತನ್ನದೇ ಪಕ್ಷ ಕಟ್ಟಿಕೊಂಡು ವಿರೋಧಿ ಕಾಂಗ್ರೆಸ್ ಪಕ್ಷಕ್ಕೆ

ramana singh

ಸವಾಲಾಗಿದ್ದಾರೆ. ತ್ರಿಕೋನ ಸ್ಪರ್ಧೆಯಲ್ಲಿ ಯಾರ ಕೈ ಮೇಲಾಗಬಹುದು ಎಂಬುದನ್ನು ನಿರ್ಧರಿಸುವುದು ಕಷ್ಟ. ಅಜಿತ್ ಜೋಗಿ ಕಾಂಗ್ರೆಸ್ ತನ್ನ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ಸಾಧ್ಯತೆಗಳಿಲ್ಲವಾದರೂ ಕಾಂಗ್ರೆಸ್‍ಗೆ ಎಷ್ಟರಮಟ್ಟಿಗೆ ನಷ್ಟವನ್ನುಂಟು ಮಾಡುತ್ತಾರೆ ಎಂಬುದು ಆಸಕ್ತಿಕರ ಅಂಶ.
2013ರ ಚುನಾವಣೆಯಲ್ಲಿ ವಿಧಾನಸಭೆಯ 90 ಸ್ಥಾನಗಳ ಪೈಕಿ ಬಿಜೆಪಿಯ 49 ಸ್ಥಾನ ಪಡೆದು ಸರಳ ಬಹುಮತಕ್ಕಿಂತ ಸ್ವಲ್ಪ ಮುಂದಿತ್ತು. 39 ಸ್ಥಾನ ಪಡೆದ ಕಾಂಗ್ರೆಸ್‍ನ ಸ್ಥಿತಿ ಕೂಡ ನಿರಾಶಾದಾಯಕವೇನಾಗಿರಲಿಲ್ಲ. ಈಗಲೂ ಅಜಿತ್ ಜೋಗಿ ಪಕ್ಷದ ಮತ ವಿಭಜನೆಯನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಿದರೆ ಮಾತ್ರ ಕಾಂಗ್ರೆಸ್ ತನ್ನ ನೆಲೆ ಕಂಡುಕೊಳ್ಳಬಹುದು. ಅತಂತ್ರ ಸ್ಥಿತಿ ರೂಪುಗೊಂಡರೆ ಎಲ್ಲ ಸಣ್ಣಪುಟ್ಟ ಪಕ್ಷಗಳಿಗೂ ಭಾರೀ ಬೇಡಿಕೆ ಉಂಟಾಗಲಿದೆ. ಛತ್ತೀಸಗಢಕ್ಕೆ ಸಂಬಂಧಿಸಿದಂತೆ ಈ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ.
2014ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿನ 11 ಸ್ಥಾನಗಳಲ್ಲಿ ಬಿಜೆಪಿಯು 10ರಲ್ಲಿ ಗೆಲುವು ಸಾಧಿಸಿತ್ತು. ಕಾಂಗ್ರೆಸ್ ಖಾತೆ ತೆರೆಯುವಲ್ಲಿ ಮಾತ್ರ ಯಶಸ್ವಿಯಾಗಿತ್ತು. ವಿಧಾನಸಭಾ ಚುನಾವಣೆಯ ಫಲಿತಾಂಶವು 2019ರ ಚುನಾವಣೆಯ ಮೇಲೂ ತನ್ನ ಪ್ರಭಾವ ಬೀರದೇ ಇರಲಾರದು.

ತೆಲಂಗಾಣ
ಅವಧಿಗೆ ಮುನ್ನವೇ ವಿಧಾನಸಭೆಯನ್ನು ವಿಸರ್ಜಿಸಿರುವ ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರರಾವ್ ಅವರು ಅಕಾಲಿಕ ಚುನಾವಣೆಗೆ ಕಾರಣರಾಗಿದ್ದಾರೆ. 2014ರ ಏಪ್ರಿಲ್ ನಲ್ಲಿ ವಿಧಾನಸಭಾ ಚುನಾವಣೆ ನಡೆದಿತ್ತು. ಆಂಧ್ರಪ್ರದೇಶದಿಂದ ವಿಭಜನೆಗೊಂಡ ನಂತರ ನಡೆದ ಮೊದಲ ಚುನಾವಣೆಯಲ್ಲಿ ಟಿಆರ್ ಎಸ್ ಪಕ್ಷವು ಭಾರೀ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಲೋಕಸಭಾ ಚುನಾವಣೆಯ ಜೊತೆಗೆ ಮತದಾರರ ಬಳಿಗೆ ಹೋಗಲು ಹಿಂದೇಟು ಹಾಕಿದ ಟಿಆರ್ ಎಸ್ ಅವಧಿಗೆ ಮುನ್ನವೇ ಚುನಾವಣೆಗೆ ಸಜ್ಜಾಗಿದೆ. 2014ರ

k chandrashekara rao

ಚುನಾವಣೆಯಲ್ಲಿ 119 ಸ್ಥಾನಗಳ ಪೈಕಿ ಟಿಆರ್ ಎಸ್ ಪಕ್ಷವು 90 ಸ್ಥಾನಗಳ ಅದ್ಭುತ ಗೆಲುವು ಸಾಧಿಸಿತ್ತು. ಕಾಂಗ್ರೆಸ್ 13 ಮತ್ತು ಬಿಜೆಪಿ 5 ಎಐಎಂಎಐಎಂ 7, ತೆಲುಗುದೇಶಂ ಪಕ್ಷ (ಟಿಡಿಪಿ) 3, ಸಿಪಿಐ (ಎಂ) 1 ಸ್ಥಾನಗಳಲ್ಲಿ ತನ್ನ ನೆಲೆ ಕಂಡುಕೊಂಡಿದ್ದವು. ಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಮುಖ ವಿರೋಧ ಪಕ್ಷಗಳಾದ ಕಾಂಗ್ರೆಸ್, ಟಿಡಿಪಿ, ತೆಲಂಗಾಣ ಜನ ಸಮಿತಿ ಹಾಗೂ ಎಡಪಕ್ಷಗಳು ಮಹಾಮೈತ್ರಿ ಮಾಡಿಕೊಂಡಿವೆ. ರಾಜ್ಯ ರಾಜಕಾರಣದಲ್ಲಿ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ಅದು ಅನಿವಾರ್ಯವೂ ಆಗಿತ್ತು. ಈ ಮಹಾಮೈತ್ರಿಗೆ ಟಿಆರ್ ಎಸ್ ಮತ್ತು ಚಂದ್ರಶೇಖರರಾವ್ ಅವರ ಮರು ಆಯ್ಕೆಯನ್ನು ತಡೆಯುವ ಸಾಮಥ್ರ್ಯ ಬರಬಹುದೇ? ಎಂಬುದಕ್ಕೆ ಫಲಿತಾಂಶದ ವರೆಗೂ ಕಾಯಬೇಕು.
2014ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 17 ಸ್ಥಾನಗಳ ಪೈಕಿ ಟಿಆರ್ ಎಸ್ 11 ಸ್ಥಾನ ಪಡೆದಿತ್ತು. ಕಾಂಗ್ರೆಸ್ 2 ಸ್ಥಾನ ಪಡೆದರೆ ಬಿಜೆಪಿ, ಎಐಎಂಐಎಂ, ವೈಎಸ್ ಆರ್ ಕಾಂಗ್ರೆಸ್, ಟಿಡಿಪಿ ತಲಾ ಒಂದು ಸ್ಥಾನ ಪಡೆದಿದ್ದವು. ವಿಧಾನ ಸಭೆಯಲ್ಲಿ ಚಂದ್ರಶೇಖರರಾವ್ ಅವರಿಗೆ ಹಿನ್ನಡೆಯಾದರೆ ಮಾತ್ರ ಅದು ಲೋಕಸಭೆಯ ಚುನಾವಣೆಯ ಮೇಲೂ ಪರಿಣಾಮ ಬೀರಬಹುದು.

ಮಿಜೋರಾಂ
ಈಶಾನ್ಯ ರಾಜ್ಯಗಳಲ್ಲಿ ಒಂದಾಗಿರುವ ಮಿಜೋರಾಂನಲ್ಲಿಯೂ ವಿಧಾನ ಸಭೆ ಚುನಾವಣೆಯ ನಡೆಯುತ್ತಿದೆ. ಸದ್ಯ ಕಾಂಗ್ರೆಸ್‍ನ ಲಾಲ್

lal thanwal

ಥನ್‍ವಾಲ್ ನೇತೃತ್ವದ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ಕಾಂಗ್ರೆಸ್ ಕಳೆದ ಚುನಾವಣೆಯಲ್ಲಿ 40 ಸ್ಥಾನಗಳ ಪೈಕಿ 34ನ್ನು ತನ್ನದಾಗಿಸಿಕೊಂಡಿತ್ತು. ವಿರೋಧಿ ಮಿಜೋ ನ್ಯಾಷನಲ್ ಫ್ರಂಟ್ 4 ಮತ್ತು ಮಿಜೋರಾಂ ಪೀಪಲ್ ಕಾನ್ಫರೆನ್ಸ್ 1 ಸ್ಥಾನ ಪಡೆದಿದ್ದವು. ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿರುವ ಕಾಂಗ್ರೆಸ್ ಉತ್ಸಾಹದಲ್ಲಿದೆ. ಬಿಜೆಪಿಯು ಎರಡು ಕಡೆಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ನಿರ್ಧರಿಸಲಿದೆ. ಮಿಜೋರಾಂನಲ್ಲಿ ಲೋಕಸಭೆಯ ಒಂದು ಸ್ಥಾನ ಇದೆ. ಅದು ಸದ್ಯ ಕಾಂಗ್ರೆಸ್ ವಶದಲ್ಲಿದೆ.
ಲೋಕಸಭಾ ಚುನಾವಣೆಗೆ ಮುನ್ನುಡಿಯಂತಿರುವ ಐದು ರಾಜ್ಯಗಳ ಮತದಾರರು ನೀಡುವ ಜನಾದೇಶ ಮುಂಬರುವ 2019ರ ಪಾರ್ಲಿಮೆಂಟ್ ಎಲೆಕ್ಷನ್‍ಗೆ ‘ದಿಕ್ಸೂಚಿ’ ಎಲ್ಲಾ ಆಗುವ ಸಾಧ್ಯತೆಗಳಿವೆ.

– ಡಿ.ಪಿ.ಗೌತಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...