Homeಮುಖಪುಟಗಾಬರಿಗೊಂಡಿದೆಯೇ ಕೇಂದ್ರದ ಆಡಳಿತ ಪಕ್ಷ?

ಗಾಬರಿಗೊಂಡಿದೆಯೇ ಕೇಂದ್ರದ ಆಡಳಿತ ಪಕ್ಷ?

- Advertisement -
- Advertisement -

ಇದೊಂದು ಇಂಟರೆಸ್ಟಿಂಗ್ ಆದ ಕದನ. 2019ರ ಫೈನಲ್‍ಗಿಂತ ಮೊದಲಿನ ‘ಸೆಮಿಫೈನಲ್’ ಎಂದೇ ವ್ಯಾಖ್ಯಾನಿಸಲಾಗುತ್ತಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯು ಕೆಲವರಿಗೆ ಆತಂಕ, ಹಲವರ ಕುತೂಹಲಕ್ಕೆ ಕಾರಣವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ‘ಚುನಾವಣೆ’ ಅಂದರೆ ಮತದಾರರು ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುವ ‘ಅವಕಾಶ’. ಸ್ವಾತಂತ್ರ್ಯೋತ್ತರ ಭಾರತದಲ್ಲಿ ನಡೆದ ಬಹುತೇಕ ಚುನಾವಣೆಗಳು ‘ಅವಕಾಶ’ ನೀಡುವದಕ್ಕೆ ನಡೆದ ‘ಆಟ’ದಂತೆ ನಡೆಯುತ್ತ ಬಂದಿದ್ದವು. ಇತ್ತೀಚಿನ ವರ್ಷಗಳ ಚುನಾವಣೆಯ ಸ್ವರೂಪವೇ ಬದಲಾದ ಮೇಲೆ ಅದನ್ನು ಕುರಿತ ಭಾಷೆಯ ಬಳಕೆಯಲ್ಲಿಯೂ ಸಹಜವಾಗಿ ಗಣನೀಯ ಬದಲಾವಣೆ ಆಗಿದೆ. ಸಮರ, ಕದನ, ರಣತಂತ್ರ ಹೀಗೆ ಯುದ್ಧೋನ್ಮಾದಕ್ಕೆ ಸಂಬಂಧಿಸಿದ ಪದಗಳು ಮುಂಚೂಣಿಗೆ ಬಂದಿವೆ. ‘ಅವಕಾಶ’ ಆಗಿದ್ದ ಚುನಾವಣೆಯು ಈಗ ರಾಜಕೀಯ ಪಕ್ಷಗಳಿಗೆ ‘ಚುನಾವಣೆ’ ಜೀವನ್ಮರಣದ ಪ್ರಶ್ನೆಯಾಗಿ ಪರಿಣಮಿಸಿದೆ. ಯಾವ ಚಿಕ್ಕ-ಪುಟ್ಟ ಚುನಾವಣೆಯನ್ನೂ ಲಘುವಾಗಿ ಪರಿಗಣಿಸಲು ಸಾಧ್ಯವೇ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ. ಆಟದ ನಿಯಮ ಬದಲಿಸಿದ ‘ಚಾಣಕ್ಯ’ರೇ ಪರದಾಡಬೇಕಾದ ಸ್ಥಿತಿ ಬಂದಿದೆ.
ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಗಡ, ತೆಲಂಗಾಣ, ಮಿಜೋರಾಂ ರಾಜ್ಯಗಳ ವಿಧಾನ ಸಭಾ ಚುನಾವಣೆಯು ಕೇಂದ್ರ ಮತ್ತು ಆಯಾ ರಾಜ್ಯಗಳಲ್ಲಿ ಅಧಿಕಾರದಲ್ಲಿ ಇರುವ ಪಕ್ಷಗಳ ಸತ್ವಪರೀಕ್ಷೆಯಾಗಿದೆ. ಐದು ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೆ ತೆಲಂಗಾಣದಲ್ಲಿ ಕೆ. ಚಂದ್ರಶೇಖರರಾವ್ ನೇತೃತ್ವದ ತೆಲಂಗಾಣ ರಾಷ್ಟ್ರೀಯ ಸಮಿತಿ (ಟಿಆರ್ ಎಸ್) ಮತ್ತು ಪುಟ್ಟ ರಾಜ್ಯ ಮಿಜೋರಾಂನಲ್ಲಿ ಕಾಂಗ್ರೆಸ್ ಆಡಳಿತದ ಚುಕ್ಕಾಣಿ ಹಿಡಿದಿವೆ. 2019ರ ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ನಡೆಯುತ್ತಿರುವ ಈ ಐದು ರಾಜ್ಯಗಳ ಚುನಾವಣೆ ‘ದಿಕ್ಸೂಚಿ’ ಆಗಬಹುದು ಎಂದು ಅಂದಾಜಿಸಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಬಿಜೆಪಿಯ ಪಾಲಿಗೆ ಇದು ಸಹಜವಾಗಿಯೇ ‘ಆತಂಕ’ ಉಂಟು ಮಾಡಿದೆ. ಬರಲಿರುವ ವಿಧಾನಸಭಾ ಚುನಾವಣಾ ಆಟದಲ್ಲಿ ಕಾಂಗ್ರೆಸ್ ಕಳೆದುಕೊಳ್ಳುವುದೇನೂ ಇಲ್ಲ. ಈಗಾಗಲೇ ಮಣ್ಣುಪಾಲಾಗಿರುವ ತನ್ನ ಸ್ಥಿತಿಯನ್ನು ಅದು ಸ್ವಲ್ಪಮಟ್ಟಿಗೆ ಉತ್ತಮಪಡಿಸಿಕೊಳ್ಳಬಹುದು. ಈಗ ಇರುವ ಸ್ಥಿತಿಗಿಂತ ಮತ್ತಷ್ಟು ಕೆಳಗೆ ಕುಸಿಯುವ ಸಾಧ್ಯತೆಗಳಿಲ್ಲ.

ಯಾಕೆ ಸೆಮಿಫೈನಲ್?
ಚುನಾವಣೆಯ ನಡೆಯುವ ಐದು ರಾಜ್ಯಗಳ ಪೈಕಿ ಮೂರರಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಅಷ್ಟು ಮಾತ್ರವಲ್ಲದೆ ಲೋಕಸಭೆಯ ಸ್ಥಾನಗಳಲ್ಲಿಯೂ ಅದು ಮುಂಚೂಣಿಯಲ್ಲಿದೆ. ಐದು ರಾಜ್ಯ ಒಟ್ಟು 83 ಸ್ಥಾನಗಳ ಪೈಕಿ 2014ರ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯು 60 ಸ್ಥಾನಗಳನ್ನು ಪಡೆದಿತ್ತು. ಆದರೆ, ಕಾಂಗ್ರೆಸ್ ಪಡೆದದ್ದು ಕೇವಲ 9 ಸ್ಥಾನ ಮಾತ್ರ. ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳ ಪರಸ್ಪರ ಭಿನ್ನ ಎಂಬುದು ನಿಜವಾದರೂ ಪಕ್ಷಗಳ ಮನೋಬಲ ಹೆಚ್ಚಿಸಲು ಮತ್ತು ಕುಗ್ಗಿಸಲು ಕಾರಣವಾಗುವುದರಲ್ಲಿ ಅನುಮಾನವೇ ಇಲ್ಲ.

ಮಧ್ಯಪ್ರದೇಶ
2005 ರಿಂದ ಮಧ್ಯಪ್ರದೇಶದ ಆಡಳಿತ ಚುಕ್ಕಾಣಿ ಬಿಜೆಪಿಯ ವಶದಲ್ಲಿದೆ. ಕಳೆದ ಹದಿನೈದು ವರ್ಷಗಳಿಂದ ಶಿವರಾಜ ಚೌಹ್ವಾಣ ಮುಖ್ಯಮಂತ್ರಿಯಾಗಿದ್ದಾರೆ. 2013ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯು 230 ಸ್ಥಾನಗಳ ಪೈಕಿ 165 ಸ್ಥಾನಗಳ ತನ್ನದಾಗಿಸಿಕೊಂಡಿತ್ತು. ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ 58 ಸ್ಥಾನ ಪಡೆದರೆ ಬಿಎಸ್‍ಪಿ 4 ನಾಲ್ಕು ಸ್ಥಾನ ಪಡೆದಿತ್ತು. ಕಳೆದ

shivaraja chowhvan

ಚುನಾವಣೆಯಲ್ಲಿಯೂ ಬಿಎಸ್ ಪಿಯು ಪ್ರತ್ಯೇಕವಾಗಿ ಸ್ಪರ್ಧಿಸಿತ್ತು. ಈ ಬಾರಿ ಕೂಡ ಬಿಎಸ್‍ಪಿ ಕಾಂಗ್ರೆಸ್ ಜೊತೆ ಮೈತ್ರಿಗೆ ನಿರಾಕರಿಸಿದೆ. ಒಂದುವರೆ ದಶಕದ ಆಡಳಿತ ರೂಪಿಸಿರುವ ಆಡಳಿತ ವಿರೋಧಿ ಅಲೆಯನ್ನು ವಿರೋಧ ಪಕ್ಷ ಕಾಂಗ್ರೆಸ್ ತನ್ನೆಡೆಗೆ ತಿರುಗಿಸಿಕೊಳ್ಳಲು ಸಾಧ್ಯವೇ? ಎಂಬ ಪ್ರಶ್ನೆ ಪ್ರಮುಖವಾಗಿದೆ. ವ್ಯಾಪಂನಂತಹ ಅತಿದೊಡ್ಡ ಹಗರಣ ಸೇರಿದಂತೆ ಬಿಜೆಪಿಯ ಒಟ್ಟು ವೈಫಲ್ಯವನ್ನು ಮತದಾರರಿಗೆ ಮನವರಿಕೆ ಮಾಡಿಕೊಡುವಲ್ಲಿ ಕಾಂಗ್ರೆಸ್ ಸಫಲವಾದರೆ ಮಾತ್ರ ಮಧ್ಯಪ್ರದೇಶದಲ್ಲಿ ಅದು ಮುಖ ಉಳಿಸಿಕೊಳ್ಳಬಹುದು. ಚುನಾವಣಾ ತಂತ್ರ ಮತ್ತು ಆಕ್ರಮಣಕಾರಿ ಧೋರಣೆಯಿಂದ ಕಣಕ್ಕೆ ಇಳಿಯುವ ಬಿಜೆಪಿಗೆ ಮಧ್ಯಪ್ರದೇಶದ ಜನತೆ ನೀಡುವ ತೀರ್ಪು ಕೇವಲ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾತ್ರ ನಿರ್ಣಾಯಕವಲ್ಲ. 2014ರ ಲೋಕಸಭಾ ಚುನಾವಣೆಯಲ್ಲಿ 29 ಸ್ಥಾನಗಳಲ್ಲಿ 26 ಪಡೆದಿತ್ತು. ಕಾಂಗ್ರೆಸ್ ಗೆಲುವು ಕೇವಲ 3 ಸ್ಥಾನಗಳಿವೆ ಸೀಮಿತವಾಗಿತ್ತು. ಆದರೆ, 2015ರಲ್ಲಿ ನಡೆದ ರತಲಾಮ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಚ್ಚರಿಗೊಳಿಸುವ ಪ್ರಮಾಣದಲ್ಲಿ ಗೆಲುವು ತನ್ನದಾಗಿಸಿಕೊಂಡಿತ್ತು.

ರಾಜಸ್ಥಾನ
ಚುನಾವಣೆಯ ನಡೆಯಲಿರುವ ಮತ್ತೊಂದು ಪ್ರಮುಖ ರಾಜ್ಯ ರಾಜಸ್ಥಾನ. ಆಟ ಆರಂಭವಾಗುವ ಮುನ್ನವೇ ಆಡಳಿತಾರೂಢ ಪಕ್ಷಕ್ಕೆ ಮುಖಭಂಗದ ಸೂಚನೆಗಳು ದೊರೆಯತೊಡಗಿವೆ. ಮುಖ್ಯಮಂತ್ರಿ ಆಗಿರುವ ವಸುಂಧರಾಜೆ ಸಿಂಧ್ಯಾ ಅವರ ಆಡಳಿತ ವೈಖರಿಗೆ ರೋಸಿದಂತೆ ಕಾಣಿಸುತ್ತಿದೆ. ಅದಕ್ಕೆ ಪ್ರತಿಯಾಗಿ ಸಚಿನ್ ಪೈಲಟ್ ನೇತೃತ್ವದ ಕಾಂಗ್ರೆಸ್ ಉತ್ಸಾಹದಿಂದ ಕಾರ್ಯ ನಿರ್ವಹಿಸುತ್ತಿದೆ. ಕಾಂಗ್ರೆಸ್ ಆಂತರಿಕ

vasumdaraje sindhya

ಕಚ್ಚಾಟದಿಂದ ಆತ್ಮಹತ್ಯೆ ಮಾಡಿಕೊಳ್ಳದಿದ್ದರೆ ರಾಜಸ್ಥಾನದಲ್ಲಿ ಅದು ಅಧಿಕಾರಕ್ಕೆ ಬರದಂತೆ ತಡೆಯುವುದು ಕಷ್ಟ. ಆದರೆ, ತನ್ನ ಆತ್ಮಹತ್ಯಾತ್ಮಕ ಧೋರಣೆಗಳಿಗೆ ಹೆಸರುವಾಸಿಯಾಗಿರುವ ಕಾಂಗ್ರೆಸ್ ಅದನ್ನು ಮೀರುವುದೇ? ಕಾದು ನೋಡಬೇಕು.
2013ರ ವಿಧಾನಸಭಾ ಚುನಾವಣೆಯಲ್ಲಿ 200 ಸ್ಥಾನಗಳ ಪೈಕಿ ಬಿಜೆಪಿಯು 163 ಸ್ಥಾನ ಪಡೆದು ಭರ್ಜರಿ ಗೆಲುವು ತನ್ನದಾಗಿಸಿಕೊಂಡಿತ್ತು. ಕಾಂಗ್ರೆಸ್ ಕೇವಲ 21 ಸ್ಥಾನ ಪಡೆದಿತ್ತು. ನಂತರ ನಡೆದ ಉಪಚುನಾವಣೆಗಳಲ್ಲಿ ಆಡಳಿತಾರೂಢ ಪಕ್ಷ ಪರಾಜಯದ ಮುಖ ನೋಡಬೇಕಾಗಿತ್ತು. ಬಿಎಸ್ ಪಿ 3 ಸ್ಥಾನ ಪಡೆದಿತ್ತು. ಚುನಾವಣಾಪೂರ್ವ ಸಮೀಕ್ಷೆಗಳೆಲ್ಲವೂ ಆಡಳಿತ ವಿರೋಧಿ ಅಲೆಯನ್ನು ಸೂಚಿಸುವಂತಿವೆ. ವಿಧಾನಸಭಾ ಚುನಾವಣೆಯು ವಸುಂಧರಾ ಅವರ ಚುನಾವಣೆ ಎಂಬುದರಲ್ಲಿ ಎರಡು ಮಾತಿಲ್ಲ.
ಆದರೆ ರಾಜಸ್ಥಾನದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಇದೇ ಮಾತನ್ನು ಹೇಳುವಂತಿಲ್ಲ. ರಾಜ್ಯದ 25 ಸ್ಥಾನಗಳಲ್ಲಿ ಎಲ್ಲ ಸ್ಥಾನಗಳಲ್ಲಿಯೂ ಗೆಲುವು ಸಾಧಿಸಿ ಕ್ಲೀನ್ ಸ್ವೀಪ್ ಮಾಡಿತ್ತು. ಮೋದಿಯವರು ಎದುರಿಸಲಿರುವ ಚುನಾವಣೆಯಲ್ಲಿಯೂ ಎಲ್ಲ 25 ಸ್ಥಾನ ಉಳಿಸಿಕೊಳ್ಳುವುದು ಸಾಧ್ಯವೇ ಇಲ್ಲ ಎನ್ನುವಂತಹ ಸ್ಥಿತಿ ನಿರ್ಮಾಣವಾಗಿದೆ. ರಾಜಸ್ಥಾನದ ಅಲವರ, ಅಜ್ಮೀರ ಉಪಚುನಾವಣೆಯಲ್ಲಿ ಒಂದುವರೆ ಲಕ್ಷಕ್ಕಿಂತ ಹೆಚ್ಚು ಮತಗಳ ಅಂತರದಿಂದ ಕಾಂಗ್ರೆಸ್ ಗೆಲುವು ತನ್ನದಾಗಿಸಿಕೊಂಡಿದೆ.

ಛತ್ತೀಸ್‍ಘಡ
ಛತ್ತೀಸಗಢದಲ್ಲಿಯೂ ಆಡಳಿತದಲ್ಲಿರುವ ಬಿಜೆಪಿಗೆ ರಾಜಸ್ಥಾನದಂತಹ ಸ್ಥಿತಿಯೇನೂ ಇಲ್ಲ. ಆದರೆ, ಅಧಿಕಾರ ಉಳಿಸಿಕೊಳ್ಳಲೇಬೇಕಾದ ಸ್ಥಿತಿಯಲ್ಲಿ ಅಲ್ಲಿನ ಮುಖ್ಯಮಂತ್ರಿ ರಮಣಸಿಂಗ್ ಇದ್ದಾರೆ. ಸಮೀಕ್ಷೆಗಳು ಆಡಳಿತ ಪಕ್ಷವಾಗಿ ಮತದಾರರ ನಿಲುವು ಇಲ್ಲ ಎನ್ನುವ ಸೂಚನೆ ನೀಡಿವೆ. ಆದರೆ, ಕಾಂಗ್ರೆಸ್ ತೊರೆದು ಹೋಗಿರುವ ಅಜಿತ್ ಜೋಗಿ ತನ್ನದೇ ಪಕ್ಷ ಕಟ್ಟಿಕೊಂಡು ವಿರೋಧಿ ಕಾಂಗ್ರೆಸ್ ಪಕ್ಷಕ್ಕೆ

ramana singh

ಸವಾಲಾಗಿದ್ದಾರೆ. ತ್ರಿಕೋನ ಸ್ಪರ್ಧೆಯಲ್ಲಿ ಯಾರ ಕೈ ಮೇಲಾಗಬಹುದು ಎಂಬುದನ್ನು ನಿರ್ಧರಿಸುವುದು ಕಷ್ಟ. ಅಜಿತ್ ಜೋಗಿ ಕಾಂಗ್ರೆಸ್ ತನ್ನ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ಸಾಧ್ಯತೆಗಳಿಲ್ಲವಾದರೂ ಕಾಂಗ್ರೆಸ್‍ಗೆ ಎಷ್ಟರಮಟ್ಟಿಗೆ ನಷ್ಟವನ್ನುಂಟು ಮಾಡುತ್ತಾರೆ ಎಂಬುದು ಆಸಕ್ತಿಕರ ಅಂಶ.
2013ರ ಚುನಾವಣೆಯಲ್ಲಿ ವಿಧಾನಸಭೆಯ 90 ಸ್ಥಾನಗಳ ಪೈಕಿ ಬಿಜೆಪಿಯ 49 ಸ್ಥಾನ ಪಡೆದು ಸರಳ ಬಹುಮತಕ್ಕಿಂತ ಸ್ವಲ್ಪ ಮುಂದಿತ್ತು. 39 ಸ್ಥಾನ ಪಡೆದ ಕಾಂಗ್ರೆಸ್‍ನ ಸ್ಥಿತಿ ಕೂಡ ನಿರಾಶಾದಾಯಕವೇನಾಗಿರಲಿಲ್ಲ. ಈಗಲೂ ಅಜಿತ್ ಜೋಗಿ ಪಕ್ಷದ ಮತ ವಿಭಜನೆಯನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಿದರೆ ಮಾತ್ರ ಕಾಂಗ್ರೆಸ್ ತನ್ನ ನೆಲೆ ಕಂಡುಕೊಳ್ಳಬಹುದು. ಅತಂತ್ರ ಸ್ಥಿತಿ ರೂಪುಗೊಂಡರೆ ಎಲ್ಲ ಸಣ್ಣಪುಟ್ಟ ಪಕ್ಷಗಳಿಗೂ ಭಾರೀ ಬೇಡಿಕೆ ಉಂಟಾಗಲಿದೆ. ಛತ್ತೀಸಗಢಕ್ಕೆ ಸಂಬಂಧಿಸಿದಂತೆ ಈ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ.
2014ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿನ 11 ಸ್ಥಾನಗಳಲ್ಲಿ ಬಿಜೆಪಿಯು 10ರಲ್ಲಿ ಗೆಲುವು ಸಾಧಿಸಿತ್ತು. ಕಾಂಗ್ರೆಸ್ ಖಾತೆ ತೆರೆಯುವಲ್ಲಿ ಮಾತ್ರ ಯಶಸ್ವಿಯಾಗಿತ್ತು. ವಿಧಾನಸಭಾ ಚುನಾವಣೆಯ ಫಲಿತಾಂಶವು 2019ರ ಚುನಾವಣೆಯ ಮೇಲೂ ತನ್ನ ಪ್ರಭಾವ ಬೀರದೇ ಇರಲಾರದು.

ತೆಲಂಗಾಣ
ಅವಧಿಗೆ ಮುನ್ನವೇ ವಿಧಾನಸಭೆಯನ್ನು ವಿಸರ್ಜಿಸಿರುವ ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರರಾವ್ ಅವರು ಅಕಾಲಿಕ ಚುನಾವಣೆಗೆ ಕಾರಣರಾಗಿದ್ದಾರೆ. 2014ರ ಏಪ್ರಿಲ್ ನಲ್ಲಿ ವಿಧಾನಸಭಾ ಚುನಾವಣೆ ನಡೆದಿತ್ತು. ಆಂಧ್ರಪ್ರದೇಶದಿಂದ ವಿಭಜನೆಗೊಂಡ ನಂತರ ನಡೆದ ಮೊದಲ ಚುನಾವಣೆಯಲ್ಲಿ ಟಿಆರ್ ಎಸ್ ಪಕ್ಷವು ಭಾರೀ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಲೋಕಸಭಾ ಚುನಾವಣೆಯ ಜೊತೆಗೆ ಮತದಾರರ ಬಳಿಗೆ ಹೋಗಲು ಹಿಂದೇಟು ಹಾಕಿದ ಟಿಆರ್ ಎಸ್ ಅವಧಿಗೆ ಮುನ್ನವೇ ಚುನಾವಣೆಗೆ ಸಜ್ಜಾಗಿದೆ. 2014ರ

k chandrashekara rao

ಚುನಾವಣೆಯಲ್ಲಿ 119 ಸ್ಥಾನಗಳ ಪೈಕಿ ಟಿಆರ್ ಎಸ್ ಪಕ್ಷವು 90 ಸ್ಥಾನಗಳ ಅದ್ಭುತ ಗೆಲುವು ಸಾಧಿಸಿತ್ತು. ಕಾಂಗ್ರೆಸ್ 13 ಮತ್ತು ಬಿಜೆಪಿ 5 ಎಐಎಂಎಐಎಂ 7, ತೆಲುಗುದೇಶಂ ಪಕ್ಷ (ಟಿಡಿಪಿ) 3, ಸಿಪಿಐ (ಎಂ) 1 ಸ್ಥಾನಗಳಲ್ಲಿ ತನ್ನ ನೆಲೆ ಕಂಡುಕೊಂಡಿದ್ದವು. ಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಮುಖ ವಿರೋಧ ಪಕ್ಷಗಳಾದ ಕಾಂಗ್ರೆಸ್, ಟಿಡಿಪಿ, ತೆಲಂಗಾಣ ಜನ ಸಮಿತಿ ಹಾಗೂ ಎಡಪಕ್ಷಗಳು ಮಹಾಮೈತ್ರಿ ಮಾಡಿಕೊಂಡಿವೆ. ರಾಜ್ಯ ರಾಜಕಾರಣದಲ್ಲಿ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ಅದು ಅನಿವಾರ್ಯವೂ ಆಗಿತ್ತು. ಈ ಮಹಾಮೈತ್ರಿಗೆ ಟಿಆರ್ ಎಸ್ ಮತ್ತು ಚಂದ್ರಶೇಖರರಾವ್ ಅವರ ಮರು ಆಯ್ಕೆಯನ್ನು ತಡೆಯುವ ಸಾಮಥ್ರ್ಯ ಬರಬಹುದೇ? ಎಂಬುದಕ್ಕೆ ಫಲಿತಾಂಶದ ವರೆಗೂ ಕಾಯಬೇಕು.
2014ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 17 ಸ್ಥಾನಗಳ ಪೈಕಿ ಟಿಆರ್ ಎಸ್ 11 ಸ್ಥಾನ ಪಡೆದಿತ್ತು. ಕಾಂಗ್ರೆಸ್ 2 ಸ್ಥಾನ ಪಡೆದರೆ ಬಿಜೆಪಿ, ಎಐಎಂಐಎಂ, ವೈಎಸ್ ಆರ್ ಕಾಂಗ್ರೆಸ್, ಟಿಡಿಪಿ ತಲಾ ಒಂದು ಸ್ಥಾನ ಪಡೆದಿದ್ದವು. ವಿಧಾನ ಸಭೆಯಲ್ಲಿ ಚಂದ್ರಶೇಖರರಾವ್ ಅವರಿಗೆ ಹಿನ್ನಡೆಯಾದರೆ ಮಾತ್ರ ಅದು ಲೋಕಸಭೆಯ ಚುನಾವಣೆಯ ಮೇಲೂ ಪರಿಣಾಮ ಬೀರಬಹುದು.

ಮಿಜೋರಾಂ
ಈಶಾನ್ಯ ರಾಜ್ಯಗಳಲ್ಲಿ ಒಂದಾಗಿರುವ ಮಿಜೋರಾಂನಲ್ಲಿಯೂ ವಿಧಾನ ಸಭೆ ಚುನಾವಣೆಯ ನಡೆಯುತ್ತಿದೆ. ಸದ್ಯ ಕಾಂಗ್ರೆಸ್‍ನ ಲಾಲ್

lal thanwal

ಥನ್‍ವಾಲ್ ನೇತೃತ್ವದ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ಕಾಂಗ್ರೆಸ್ ಕಳೆದ ಚುನಾವಣೆಯಲ್ಲಿ 40 ಸ್ಥಾನಗಳ ಪೈಕಿ 34ನ್ನು ತನ್ನದಾಗಿಸಿಕೊಂಡಿತ್ತು. ವಿರೋಧಿ ಮಿಜೋ ನ್ಯಾಷನಲ್ ಫ್ರಂಟ್ 4 ಮತ್ತು ಮಿಜೋರಾಂ ಪೀಪಲ್ ಕಾನ್ಫರೆನ್ಸ್ 1 ಸ್ಥಾನ ಪಡೆದಿದ್ದವು. ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿರುವ ಕಾಂಗ್ರೆಸ್ ಉತ್ಸಾಹದಲ್ಲಿದೆ. ಬಿಜೆಪಿಯು ಎರಡು ಕಡೆಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ನಿರ್ಧರಿಸಲಿದೆ. ಮಿಜೋರಾಂನಲ್ಲಿ ಲೋಕಸಭೆಯ ಒಂದು ಸ್ಥಾನ ಇದೆ. ಅದು ಸದ್ಯ ಕಾಂಗ್ರೆಸ್ ವಶದಲ್ಲಿದೆ.
ಲೋಕಸಭಾ ಚುನಾವಣೆಗೆ ಮುನ್ನುಡಿಯಂತಿರುವ ಐದು ರಾಜ್ಯಗಳ ಮತದಾರರು ನೀಡುವ ಜನಾದೇಶ ಮುಂಬರುವ 2019ರ ಪಾರ್ಲಿಮೆಂಟ್ ಎಲೆಕ್ಷನ್‍ಗೆ ‘ದಿಕ್ಸೂಚಿ’ ಎಲ್ಲಾ ಆಗುವ ಸಾಧ್ಯತೆಗಳಿವೆ.

– ಡಿ.ಪಿ.ಗೌತಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...