Homeಮುಖಪುಟಗಾಬರಿಗೊಂಡಿದೆಯೇ ಕೇಂದ್ರದ ಆಡಳಿತ ಪಕ್ಷ?

ಗಾಬರಿಗೊಂಡಿದೆಯೇ ಕೇಂದ್ರದ ಆಡಳಿತ ಪಕ್ಷ?

- Advertisement -
- Advertisement -

ಇದೊಂದು ಇಂಟರೆಸ್ಟಿಂಗ್ ಆದ ಕದನ. 2019ರ ಫೈನಲ್‍ಗಿಂತ ಮೊದಲಿನ ‘ಸೆಮಿಫೈನಲ್’ ಎಂದೇ ವ್ಯಾಖ್ಯಾನಿಸಲಾಗುತ್ತಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯು ಕೆಲವರಿಗೆ ಆತಂಕ, ಹಲವರ ಕುತೂಹಲಕ್ಕೆ ಕಾರಣವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ‘ಚುನಾವಣೆ’ ಅಂದರೆ ಮತದಾರರು ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುವ ‘ಅವಕಾಶ’. ಸ್ವಾತಂತ್ರ್ಯೋತ್ತರ ಭಾರತದಲ್ಲಿ ನಡೆದ ಬಹುತೇಕ ಚುನಾವಣೆಗಳು ‘ಅವಕಾಶ’ ನೀಡುವದಕ್ಕೆ ನಡೆದ ‘ಆಟ’ದಂತೆ ನಡೆಯುತ್ತ ಬಂದಿದ್ದವು. ಇತ್ತೀಚಿನ ವರ್ಷಗಳ ಚುನಾವಣೆಯ ಸ್ವರೂಪವೇ ಬದಲಾದ ಮೇಲೆ ಅದನ್ನು ಕುರಿತ ಭಾಷೆಯ ಬಳಕೆಯಲ್ಲಿಯೂ ಸಹಜವಾಗಿ ಗಣನೀಯ ಬದಲಾವಣೆ ಆಗಿದೆ. ಸಮರ, ಕದನ, ರಣತಂತ್ರ ಹೀಗೆ ಯುದ್ಧೋನ್ಮಾದಕ್ಕೆ ಸಂಬಂಧಿಸಿದ ಪದಗಳು ಮುಂಚೂಣಿಗೆ ಬಂದಿವೆ. ‘ಅವಕಾಶ’ ಆಗಿದ್ದ ಚುನಾವಣೆಯು ಈಗ ರಾಜಕೀಯ ಪಕ್ಷಗಳಿಗೆ ‘ಚುನಾವಣೆ’ ಜೀವನ್ಮರಣದ ಪ್ರಶ್ನೆಯಾಗಿ ಪರಿಣಮಿಸಿದೆ. ಯಾವ ಚಿಕ್ಕ-ಪುಟ್ಟ ಚುನಾವಣೆಯನ್ನೂ ಲಘುವಾಗಿ ಪರಿಗಣಿಸಲು ಸಾಧ್ಯವೇ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ. ಆಟದ ನಿಯಮ ಬದಲಿಸಿದ ‘ಚಾಣಕ್ಯ’ರೇ ಪರದಾಡಬೇಕಾದ ಸ್ಥಿತಿ ಬಂದಿದೆ.
ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಗಡ, ತೆಲಂಗಾಣ, ಮಿಜೋರಾಂ ರಾಜ್ಯಗಳ ವಿಧಾನ ಸಭಾ ಚುನಾವಣೆಯು ಕೇಂದ್ರ ಮತ್ತು ಆಯಾ ರಾಜ್ಯಗಳಲ್ಲಿ ಅಧಿಕಾರದಲ್ಲಿ ಇರುವ ಪಕ್ಷಗಳ ಸತ್ವಪರೀಕ್ಷೆಯಾಗಿದೆ. ಐದು ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೆ ತೆಲಂಗಾಣದಲ್ಲಿ ಕೆ. ಚಂದ್ರಶೇಖರರಾವ್ ನೇತೃತ್ವದ ತೆಲಂಗಾಣ ರಾಷ್ಟ್ರೀಯ ಸಮಿತಿ (ಟಿಆರ್ ಎಸ್) ಮತ್ತು ಪುಟ್ಟ ರಾಜ್ಯ ಮಿಜೋರಾಂನಲ್ಲಿ ಕಾಂಗ್ರೆಸ್ ಆಡಳಿತದ ಚುಕ್ಕಾಣಿ ಹಿಡಿದಿವೆ. 2019ರ ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ನಡೆಯುತ್ತಿರುವ ಈ ಐದು ರಾಜ್ಯಗಳ ಚುನಾವಣೆ ‘ದಿಕ್ಸೂಚಿ’ ಆಗಬಹುದು ಎಂದು ಅಂದಾಜಿಸಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಬಿಜೆಪಿಯ ಪಾಲಿಗೆ ಇದು ಸಹಜವಾಗಿಯೇ ‘ಆತಂಕ’ ಉಂಟು ಮಾಡಿದೆ. ಬರಲಿರುವ ವಿಧಾನಸಭಾ ಚುನಾವಣಾ ಆಟದಲ್ಲಿ ಕಾಂಗ್ರೆಸ್ ಕಳೆದುಕೊಳ್ಳುವುದೇನೂ ಇಲ್ಲ. ಈಗಾಗಲೇ ಮಣ್ಣುಪಾಲಾಗಿರುವ ತನ್ನ ಸ್ಥಿತಿಯನ್ನು ಅದು ಸ್ವಲ್ಪಮಟ್ಟಿಗೆ ಉತ್ತಮಪಡಿಸಿಕೊಳ್ಳಬಹುದು. ಈಗ ಇರುವ ಸ್ಥಿತಿಗಿಂತ ಮತ್ತಷ್ಟು ಕೆಳಗೆ ಕುಸಿಯುವ ಸಾಧ್ಯತೆಗಳಿಲ್ಲ.

ಯಾಕೆ ಸೆಮಿಫೈನಲ್?
ಚುನಾವಣೆಯ ನಡೆಯುವ ಐದು ರಾಜ್ಯಗಳ ಪೈಕಿ ಮೂರರಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಅಷ್ಟು ಮಾತ್ರವಲ್ಲದೆ ಲೋಕಸಭೆಯ ಸ್ಥಾನಗಳಲ್ಲಿಯೂ ಅದು ಮುಂಚೂಣಿಯಲ್ಲಿದೆ. ಐದು ರಾಜ್ಯ ಒಟ್ಟು 83 ಸ್ಥಾನಗಳ ಪೈಕಿ 2014ರ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯು 60 ಸ್ಥಾನಗಳನ್ನು ಪಡೆದಿತ್ತು. ಆದರೆ, ಕಾಂಗ್ರೆಸ್ ಪಡೆದದ್ದು ಕೇವಲ 9 ಸ್ಥಾನ ಮಾತ್ರ. ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳ ಪರಸ್ಪರ ಭಿನ್ನ ಎಂಬುದು ನಿಜವಾದರೂ ಪಕ್ಷಗಳ ಮನೋಬಲ ಹೆಚ್ಚಿಸಲು ಮತ್ತು ಕುಗ್ಗಿಸಲು ಕಾರಣವಾಗುವುದರಲ್ಲಿ ಅನುಮಾನವೇ ಇಲ್ಲ.

ಮಧ್ಯಪ್ರದೇಶ
2005 ರಿಂದ ಮಧ್ಯಪ್ರದೇಶದ ಆಡಳಿತ ಚುಕ್ಕಾಣಿ ಬಿಜೆಪಿಯ ವಶದಲ್ಲಿದೆ. ಕಳೆದ ಹದಿನೈದು ವರ್ಷಗಳಿಂದ ಶಿವರಾಜ ಚೌಹ್ವಾಣ ಮುಖ್ಯಮಂತ್ರಿಯಾಗಿದ್ದಾರೆ. 2013ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯು 230 ಸ್ಥಾನಗಳ ಪೈಕಿ 165 ಸ್ಥಾನಗಳ ತನ್ನದಾಗಿಸಿಕೊಂಡಿತ್ತು. ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ 58 ಸ್ಥಾನ ಪಡೆದರೆ ಬಿಎಸ್‍ಪಿ 4 ನಾಲ್ಕು ಸ್ಥಾನ ಪಡೆದಿತ್ತು. ಕಳೆದ

shivaraja chowhvan

ಚುನಾವಣೆಯಲ್ಲಿಯೂ ಬಿಎಸ್ ಪಿಯು ಪ್ರತ್ಯೇಕವಾಗಿ ಸ್ಪರ್ಧಿಸಿತ್ತು. ಈ ಬಾರಿ ಕೂಡ ಬಿಎಸ್‍ಪಿ ಕಾಂಗ್ರೆಸ್ ಜೊತೆ ಮೈತ್ರಿಗೆ ನಿರಾಕರಿಸಿದೆ. ಒಂದುವರೆ ದಶಕದ ಆಡಳಿತ ರೂಪಿಸಿರುವ ಆಡಳಿತ ವಿರೋಧಿ ಅಲೆಯನ್ನು ವಿರೋಧ ಪಕ್ಷ ಕಾಂಗ್ರೆಸ್ ತನ್ನೆಡೆಗೆ ತಿರುಗಿಸಿಕೊಳ್ಳಲು ಸಾಧ್ಯವೇ? ಎಂಬ ಪ್ರಶ್ನೆ ಪ್ರಮುಖವಾಗಿದೆ. ವ್ಯಾಪಂನಂತಹ ಅತಿದೊಡ್ಡ ಹಗರಣ ಸೇರಿದಂತೆ ಬಿಜೆಪಿಯ ಒಟ್ಟು ವೈಫಲ್ಯವನ್ನು ಮತದಾರರಿಗೆ ಮನವರಿಕೆ ಮಾಡಿಕೊಡುವಲ್ಲಿ ಕಾಂಗ್ರೆಸ್ ಸಫಲವಾದರೆ ಮಾತ್ರ ಮಧ್ಯಪ್ರದೇಶದಲ್ಲಿ ಅದು ಮುಖ ಉಳಿಸಿಕೊಳ್ಳಬಹುದು. ಚುನಾವಣಾ ತಂತ್ರ ಮತ್ತು ಆಕ್ರಮಣಕಾರಿ ಧೋರಣೆಯಿಂದ ಕಣಕ್ಕೆ ಇಳಿಯುವ ಬಿಜೆಪಿಗೆ ಮಧ್ಯಪ್ರದೇಶದ ಜನತೆ ನೀಡುವ ತೀರ್ಪು ಕೇವಲ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾತ್ರ ನಿರ್ಣಾಯಕವಲ್ಲ. 2014ರ ಲೋಕಸಭಾ ಚುನಾವಣೆಯಲ್ಲಿ 29 ಸ್ಥಾನಗಳಲ್ಲಿ 26 ಪಡೆದಿತ್ತು. ಕಾಂಗ್ರೆಸ್ ಗೆಲುವು ಕೇವಲ 3 ಸ್ಥಾನಗಳಿವೆ ಸೀಮಿತವಾಗಿತ್ತು. ಆದರೆ, 2015ರಲ್ಲಿ ನಡೆದ ರತಲಾಮ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಚ್ಚರಿಗೊಳಿಸುವ ಪ್ರಮಾಣದಲ್ಲಿ ಗೆಲುವು ತನ್ನದಾಗಿಸಿಕೊಂಡಿತ್ತು.

ರಾಜಸ್ಥಾನ
ಚುನಾವಣೆಯ ನಡೆಯಲಿರುವ ಮತ್ತೊಂದು ಪ್ರಮುಖ ರಾಜ್ಯ ರಾಜಸ್ಥಾನ. ಆಟ ಆರಂಭವಾಗುವ ಮುನ್ನವೇ ಆಡಳಿತಾರೂಢ ಪಕ್ಷಕ್ಕೆ ಮುಖಭಂಗದ ಸೂಚನೆಗಳು ದೊರೆಯತೊಡಗಿವೆ. ಮುಖ್ಯಮಂತ್ರಿ ಆಗಿರುವ ವಸುಂಧರಾಜೆ ಸಿಂಧ್ಯಾ ಅವರ ಆಡಳಿತ ವೈಖರಿಗೆ ರೋಸಿದಂತೆ ಕಾಣಿಸುತ್ತಿದೆ. ಅದಕ್ಕೆ ಪ್ರತಿಯಾಗಿ ಸಚಿನ್ ಪೈಲಟ್ ನೇತೃತ್ವದ ಕಾಂಗ್ರೆಸ್ ಉತ್ಸಾಹದಿಂದ ಕಾರ್ಯ ನಿರ್ವಹಿಸುತ್ತಿದೆ. ಕಾಂಗ್ರೆಸ್ ಆಂತರಿಕ

vasumdaraje sindhya

ಕಚ್ಚಾಟದಿಂದ ಆತ್ಮಹತ್ಯೆ ಮಾಡಿಕೊಳ್ಳದಿದ್ದರೆ ರಾಜಸ್ಥಾನದಲ್ಲಿ ಅದು ಅಧಿಕಾರಕ್ಕೆ ಬರದಂತೆ ತಡೆಯುವುದು ಕಷ್ಟ. ಆದರೆ, ತನ್ನ ಆತ್ಮಹತ್ಯಾತ್ಮಕ ಧೋರಣೆಗಳಿಗೆ ಹೆಸರುವಾಸಿಯಾಗಿರುವ ಕಾಂಗ್ರೆಸ್ ಅದನ್ನು ಮೀರುವುದೇ? ಕಾದು ನೋಡಬೇಕು.
2013ರ ವಿಧಾನಸಭಾ ಚುನಾವಣೆಯಲ್ಲಿ 200 ಸ್ಥಾನಗಳ ಪೈಕಿ ಬಿಜೆಪಿಯು 163 ಸ್ಥಾನ ಪಡೆದು ಭರ್ಜರಿ ಗೆಲುವು ತನ್ನದಾಗಿಸಿಕೊಂಡಿತ್ತು. ಕಾಂಗ್ರೆಸ್ ಕೇವಲ 21 ಸ್ಥಾನ ಪಡೆದಿತ್ತು. ನಂತರ ನಡೆದ ಉಪಚುನಾವಣೆಗಳಲ್ಲಿ ಆಡಳಿತಾರೂಢ ಪಕ್ಷ ಪರಾಜಯದ ಮುಖ ನೋಡಬೇಕಾಗಿತ್ತು. ಬಿಎಸ್ ಪಿ 3 ಸ್ಥಾನ ಪಡೆದಿತ್ತು. ಚುನಾವಣಾಪೂರ್ವ ಸಮೀಕ್ಷೆಗಳೆಲ್ಲವೂ ಆಡಳಿತ ವಿರೋಧಿ ಅಲೆಯನ್ನು ಸೂಚಿಸುವಂತಿವೆ. ವಿಧಾನಸಭಾ ಚುನಾವಣೆಯು ವಸುಂಧರಾ ಅವರ ಚುನಾವಣೆ ಎಂಬುದರಲ್ಲಿ ಎರಡು ಮಾತಿಲ್ಲ.
ಆದರೆ ರಾಜಸ್ಥಾನದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಇದೇ ಮಾತನ್ನು ಹೇಳುವಂತಿಲ್ಲ. ರಾಜ್ಯದ 25 ಸ್ಥಾನಗಳಲ್ಲಿ ಎಲ್ಲ ಸ್ಥಾನಗಳಲ್ಲಿಯೂ ಗೆಲುವು ಸಾಧಿಸಿ ಕ್ಲೀನ್ ಸ್ವೀಪ್ ಮಾಡಿತ್ತು. ಮೋದಿಯವರು ಎದುರಿಸಲಿರುವ ಚುನಾವಣೆಯಲ್ಲಿಯೂ ಎಲ್ಲ 25 ಸ್ಥಾನ ಉಳಿಸಿಕೊಳ್ಳುವುದು ಸಾಧ್ಯವೇ ಇಲ್ಲ ಎನ್ನುವಂತಹ ಸ್ಥಿತಿ ನಿರ್ಮಾಣವಾಗಿದೆ. ರಾಜಸ್ಥಾನದ ಅಲವರ, ಅಜ್ಮೀರ ಉಪಚುನಾವಣೆಯಲ್ಲಿ ಒಂದುವರೆ ಲಕ್ಷಕ್ಕಿಂತ ಹೆಚ್ಚು ಮತಗಳ ಅಂತರದಿಂದ ಕಾಂಗ್ರೆಸ್ ಗೆಲುವು ತನ್ನದಾಗಿಸಿಕೊಂಡಿದೆ.

ಛತ್ತೀಸ್‍ಘಡ
ಛತ್ತೀಸಗಢದಲ್ಲಿಯೂ ಆಡಳಿತದಲ್ಲಿರುವ ಬಿಜೆಪಿಗೆ ರಾಜಸ್ಥಾನದಂತಹ ಸ್ಥಿತಿಯೇನೂ ಇಲ್ಲ. ಆದರೆ, ಅಧಿಕಾರ ಉಳಿಸಿಕೊಳ್ಳಲೇಬೇಕಾದ ಸ್ಥಿತಿಯಲ್ಲಿ ಅಲ್ಲಿನ ಮುಖ್ಯಮಂತ್ರಿ ರಮಣಸಿಂಗ್ ಇದ್ದಾರೆ. ಸಮೀಕ್ಷೆಗಳು ಆಡಳಿತ ಪಕ್ಷವಾಗಿ ಮತದಾರರ ನಿಲುವು ಇಲ್ಲ ಎನ್ನುವ ಸೂಚನೆ ನೀಡಿವೆ. ಆದರೆ, ಕಾಂಗ್ರೆಸ್ ತೊರೆದು ಹೋಗಿರುವ ಅಜಿತ್ ಜೋಗಿ ತನ್ನದೇ ಪಕ್ಷ ಕಟ್ಟಿಕೊಂಡು ವಿರೋಧಿ ಕಾಂಗ್ರೆಸ್ ಪಕ್ಷಕ್ಕೆ

ramana singh

ಸವಾಲಾಗಿದ್ದಾರೆ. ತ್ರಿಕೋನ ಸ್ಪರ್ಧೆಯಲ್ಲಿ ಯಾರ ಕೈ ಮೇಲಾಗಬಹುದು ಎಂಬುದನ್ನು ನಿರ್ಧರಿಸುವುದು ಕಷ್ಟ. ಅಜಿತ್ ಜೋಗಿ ಕಾಂಗ್ರೆಸ್ ತನ್ನ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ಸಾಧ್ಯತೆಗಳಿಲ್ಲವಾದರೂ ಕಾಂಗ್ರೆಸ್‍ಗೆ ಎಷ್ಟರಮಟ್ಟಿಗೆ ನಷ್ಟವನ್ನುಂಟು ಮಾಡುತ್ತಾರೆ ಎಂಬುದು ಆಸಕ್ತಿಕರ ಅಂಶ.
2013ರ ಚುನಾವಣೆಯಲ್ಲಿ ವಿಧಾನಸಭೆಯ 90 ಸ್ಥಾನಗಳ ಪೈಕಿ ಬಿಜೆಪಿಯ 49 ಸ್ಥಾನ ಪಡೆದು ಸರಳ ಬಹುಮತಕ್ಕಿಂತ ಸ್ವಲ್ಪ ಮುಂದಿತ್ತು. 39 ಸ್ಥಾನ ಪಡೆದ ಕಾಂಗ್ರೆಸ್‍ನ ಸ್ಥಿತಿ ಕೂಡ ನಿರಾಶಾದಾಯಕವೇನಾಗಿರಲಿಲ್ಲ. ಈಗಲೂ ಅಜಿತ್ ಜೋಗಿ ಪಕ್ಷದ ಮತ ವಿಭಜನೆಯನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಿದರೆ ಮಾತ್ರ ಕಾಂಗ್ರೆಸ್ ತನ್ನ ನೆಲೆ ಕಂಡುಕೊಳ್ಳಬಹುದು. ಅತಂತ್ರ ಸ್ಥಿತಿ ರೂಪುಗೊಂಡರೆ ಎಲ್ಲ ಸಣ್ಣಪುಟ್ಟ ಪಕ್ಷಗಳಿಗೂ ಭಾರೀ ಬೇಡಿಕೆ ಉಂಟಾಗಲಿದೆ. ಛತ್ತೀಸಗಢಕ್ಕೆ ಸಂಬಂಧಿಸಿದಂತೆ ಈ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ.
2014ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿನ 11 ಸ್ಥಾನಗಳಲ್ಲಿ ಬಿಜೆಪಿಯು 10ರಲ್ಲಿ ಗೆಲುವು ಸಾಧಿಸಿತ್ತು. ಕಾಂಗ್ರೆಸ್ ಖಾತೆ ತೆರೆಯುವಲ್ಲಿ ಮಾತ್ರ ಯಶಸ್ವಿಯಾಗಿತ್ತು. ವಿಧಾನಸಭಾ ಚುನಾವಣೆಯ ಫಲಿತಾಂಶವು 2019ರ ಚುನಾವಣೆಯ ಮೇಲೂ ತನ್ನ ಪ್ರಭಾವ ಬೀರದೇ ಇರಲಾರದು.

ತೆಲಂಗಾಣ
ಅವಧಿಗೆ ಮುನ್ನವೇ ವಿಧಾನಸಭೆಯನ್ನು ವಿಸರ್ಜಿಸಿರುವ ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರರಾವ್ ಅವರು ಅಕಾಲಿಕ ಚುನಾವಣೆಗೆ ಕಾರಣರಾಗಿದ್ದಾರೆ. 2014ರ ಏಪ್ರಿಲ್ ನಲ್ಲಿ ವಿಧಾನಸಭಾ ಚುನಾವಣೆ ನಡೆದಿತ್ತು. ಆಂಧ್ರಪ್ರದೇಶದಿಂದ ವಿಭಜನೆಗೊಂಡ ನಂತರ ನಡೆದ ಮೊದಲ ಚುನಾವಣೆಯಲ್ಲಿ ಟಿಆರ್ ಎಸ್ ಪಕ್ಷವು ಭಾರೀ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಲೋಕಸಭಾ ಚುನಾವಣೆಯ ಜೊತೆಗೆ ಮತದಾರರ ಬಳಿಗೆ ಹೋಗಲು ಹಿಂದೇಟು ಹಾಕಿದ ಟಿಆರ್ ಎಸ್ ಅವಧಿಗೆ ಮುನ್ನವೇ ಚುನಾವಣೆಗೆ ಸಜ್ಜಾಗಿದೆ. 2014ರ

k chandrashekara rao

ಚುನಾವಣೆಯಲ್ಲಿ 119 ಸ್ಥಾನಗಳ ಪೈಕಿ ಟಿಆರ್ ಎಸ್ ಪಕ್ಷವು 90 ಸ್ಥಾನಗಳ ಅದ್ಭುತ ಗೆಲುವು ಸಾಧಿಸಿತ್ತು. ಕಾಂಗ್ರೆಸ್ 13 ಮತ್ತು ಬಿಜೆಪಿ 5 ಎಐಎಂಎಐಎಂ 7, ತೆಲುಗುದೇಶಂ ಪಕ್ಷ (ಟಿಡಿಪಿ) 3, ಸಿಪಿಐ (ಎಂ) 1 ಸ್ಥಾನಗಳಲ್ಲಿ ತನ್ನ ನೆಲೆ ಕಂಡುಕೊಂಡಿದ್ದವು. ಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಮುಖ ವಿರೋಧ ಪಕ್ಷಗಳಾದ ಕಾಂಗ್ರೆಸ್, ಟಿಡಿಪಿ, ತೆಲಂಗಾಣ ಜನ ಸಮಿತಿ ಹಾಗೂ ಎಡಪಕ್ಷಗಳು ಮಹಾಮೈತ್ರಿ ಮಾಡಿಕೊಂಡಿವೆ. ರಾಜ್ಯ ರಾಜಕಾರಣದಲ್ಲಿ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ಅದು ಅನಿವಾರ್ಯವೂ ಆಗಿತ್ತು. ಈ ಮಹಾಮೈತ್ರಿಗೆ ಟಿಆರ್ ಎಸ್ ಮತ್ತು ಚಂದ್ರಶೇಖರರಾವ್ ಅವರ ಮರು ಆಯ್ಕೆಯನ್ನು ತಡೆಯುವ ಸಾಮಥ್ರ್ಯ ಬರಬಹುದೇ? ಎಂಬುದಕ್ಕೆ ಫಲಿತಾಂಶದ ವರೆಗೂ ಕಾಯಬೇಕು.
2014ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 17 ಸ್ಥಾನಗಳ ಪೈಕಿ ಟಿಆರ್ ಎಸ್ 11 ಸ್ಥಾನ ಪಡೆದಿತ್ತು. ಕಾಂಗ್ರೆಸ್ 2 ಸ್ಥಾನ ಪಡೆದರೆ ಬಿಜೆಪಿ, ಎಐಎಂಐಎಂ, ವೈಎಸ್ ಆರ್ ಕಾಂಗ್ರೆಸ್, ಟಿಡಿಪಿ ತಲಾ ಒಂದು ಸ್ಥಾನ ಪಡೆದಿದ್ದವು. ವಿಧಾನ ಸಭೆಯಲ್ಲಿ ಚಂದ್ರಶೇಖರರಾವ್ ಅವರಿಗೆ ಹಿನ್ನಡೆಯಾದರೆ ಮಾತ್ರ ಅದು ಲೋಕಸಭೆಯ ಚುನಾವಣೆಯ ಮೇಲೂ ಪರಿಣಾಮ ಬೀರಬಹುದು.

ಮಿಜೋರಾಂ
ಈಶಾನ್ಯ ರಾಜ್ಯಗಳಲ್ಲಿ ಒಂದಾಗಿರುವ ಮಿಜೋರಾಂನಲ್ಲಿಯೂ ವಿಧಾನ ಸಭೆ ಚುನಾವಣೆಯ ನಡೆಯುತ್ತಿದೆ. ಸದ್ಯ ಕಾಂಗ್ರೆಸ್‍ನ ಲಾಲ್

lal thanwal

ಥನ್‍ವಾಲ್ ನೇತೃತ್ವದ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ಕಾಂಗ್ರೆಸ್ ಕಳೆದ ಚುನಾವಣೆಯಲ್ಲಿ 40 ಸ್ಥಾನಗಳ ಪೈಕಿ 34ನ್ನು ತನ್ನದಾಗಿಸಿಕೊಂಡಿತ್ತು. ವಿರೋಧಿ ಮಿಜೋ ನ್ಯಾಷನಲ್ ಫ್ರಂಟ್ 4 ಮತ್ತು ಮಿಜೋರಾಂ ಪೀಪಲ್ ಕಾನ್ಫರೆನ್ಸ್ 1 ಸ್ಥಾನ ಪಡೆದಿದ್ದವು. ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿರುವ ಕಾಂಗ್ರೆಸ್ ಉತ್ಸಾಹದಲ್ಲಿದೆ. ಬಿಜೆಪಿಯು ಎರಡು ಕಡೆಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ನಿರ್ಧರಿಸಲಿದೆ. ಮಿಜೋರಾಂನಲ್ಲಿ ಲೋಕಸಭೆಯ ಒಂದು ಸ್ಥಾನ ಇದೆ. ಅದು ಸದ್ಯ ಕಾಂಗ್ರೆಸ್ ವಶದಲ್ಲಿದೆ.
ಲೋಕಸಭಾ ಚುನಾವಣೆಗೆ ಮುನ್ನುಡಿಯಂತಿರುವ ಐದು ರಾಜ್ಯಗಳ ಮತದಾರರು ನೀಡುವ ಜನಾದೇಶ ಮುಂಬರುವ 2019ರ ಪಾರ್ಲಿಮೆಂಟ್ ಎಲೆಕ್ಷನ್‍ಗೆ ‘ದಿಕ್ಸೂಚಿ’ ಎಲ್ಲಾ ಆಗುವ ಸಾಧ್ಯತೆಗಳಿವೆ.

– ಡಿ.ಪಿ.ಗೌತಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...