Homeಕರ್ನಾಟಕನಿಜವಾದ ಡ್ರಗ್ ಡೀಲರ್, ಡ್ರಗ್ ಪೆಡ್ಲರ್‌‌ ಎಂದರೆ ಮೋದಿ, ಅಮಿತ್ ಶಾ: ರಕ್ಷಾ ರಾಮಯ್ಯ

ನಿಜವಾದ ಡ್ರಗ್ ಡೀಲರ್, ಡ್ರಗ್ ಪೆಡ್ಲರ್‌‌ ಎಂದರೆ ಮೋದಿ, ಅಮಿತ್ ಶಾ: ರಕ್ಷಾ ರಾಮಯ್ಯ

ಸುಮಾರು 20,000 ಕೋಟಿ ರೂ. ಮೌಲ್ಯದ ಹೆರಾಯಿನ್‌‌ ಗುಜರಾತ್‌‌ನ ಅದಾನಿ ಬಂದರಿನಲ್ಲಿ ಪತ್ತೆಯಾಗಿದ್ದನ್ನು ಉಲ್ಲೇಖಿಸಿ ನಳೀನ್‌ ಕುಮಾರ್‌ ಕಟೀಲ್ ಅವರಿಗೆ ತಿರುಗೇಟು ನೀಡಿದ್ದಾರೆ.

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಡ್ರಗ್, ಪ್ರಡ್ಲರ್ ಎಂದು ಟೀಕಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ತಿರುಗೇಟು ನೀಡಿರುವ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ, “ನಿಜವಾದ ಡ್ರಗ್ ಡೀಲರ್, ಡ್ರಗ್ ಪ್ಲಡ್ಲರ್ ಎಂದರೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ” ಎಂದು ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಅವರ ಮೇಲೆ ಮಾಡಿರುವ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಗುಜರಾತ್‌‌ನ ಅದಾನಿ ಮಾಲೀಕತ್ವದ ಬಂದರಿನಲ್ಲಿ ಮೂರು ಸಾವಿರ ಕೆ.ಜಿ. ಹೆರಾಯಿನ್ ಪತ್ತೆಯಾಗಿದ್ದು, ಈ ಬಗ್ಗೆ ಯಾವುದಾದರೂ ತನಿಖೆ ನಡೆಯುತ್ತಿದೆಯೇ? ಇದಕ್ಕೆ ಕಾರಣರಾದವರ ಮೇಲೆ ಕ್ರಮ ಕೈಗೊಳ್ಳಲಾಗಿದೆಯೇ ಎಂದು ಪ್ರಶ್ನಿಸಿದ್ದಾರೆ.

ಗುಜರಾತ್ ಅತಿ ಹೆಚ್ಚು ಮಂದಿ ಡ್ರಗ್ ಪ್ಲಡ್ಲರ್‌ಗಳ ತಾಣವಾಗಿದೆ. ಇವರನ್ನು ದೊಡ್ಡ ದೊಡ್ಡ ರಾಜಕಾರಣಿಗಳು ಪೋಷಿಸುತ್ತಿದ್ದಾರೆ. ತಮ್ಮ ರಾಜ್ಯದ ಈ ಅಕ್ರಮ ವ್ಯವಹಾರದ ಬಗ್ಗೆ ಪ್ರಧಾನಿ, ಕೇಂದ್ರ ಗೃಹ ಸಚಿವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿರಿ: ಅದಾನಿ ಮಾಲಿಕತ್ವದ ಬಂದರಿನಲ್ಲಿ 20 ಸಾವಿರ ಕೋಟಿ ರೂ.ಗಳ ಹೆರಾಯಿನ್ ವಶ

ಅದಾನಿ ಪೋರ್ಟ್‌ನಲ್ಲಿ ದೊರೆತ ಮಾದಕ ದ್ರವ್ಯದ ಬಗ್ಗೆ ಬಿಜೆಪಿ ಮಟ್ಟದಲ್ಲಿ ಏನಾದರೂ ಚರ್ಚೆಯಾಗಿದೆಯೇ? ಯಾವುದಾದರೂ ಮಾಹಿತಿ ಬಿಡುಗಡೆ ಮಾಡಲಾಗಿದೆಯೇ? ಗುಜರಾತ್‌ನಲ್ಲಿ ಅತಿ ಹೆಚ್ಚು ಮಾದಕ ದ್ರವ್ಯ ದೊರೆಯುತ್ತಿದೆ. ನಿಷೇಧಿತ ಕ್ಯಾಟಮೈನ್ ಮಾದಕ ವಸ್ತು ವಿಶ್ವದಲ್ಲಿಯೇ ಅತಿ ಹೆಚ್ಚು ದೊರೆಯುವ ತಾಣ ಎಂದರೆ ಅದು ಗುಜರಾತ್, ಹೀಗಿರುವಾಗ ರಾಹುಲ್ ಗಾಂಧಿ ಅವರ ಮೇಲೆ ಯಾವ ಉದ್ದೇಶದಿಂದ ಟೀಕೆ ಮಾಡುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಗುಜರಾತ್‌ನಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದ್ದರೂ, ಕಾಳಸಂತೆಯಲ್ಲಿ ಅತಿ ಹೆಚ್ಚು ಮದ್ಯ ಸಿಗುತ್ತಿದೆ. ಮದ್ಯ ಮಾರಾಟ ತಡೆಗೆ ಯಾವುದಾದರೂ ಕ್ರಮ ಕೈಗೊಳ್ಳಲಾಗಿದೆಯೇ? ಇದನ್ನು ಬಿಜೆಪಿ ರಾಜ್ಯಾಧ್ಯಕ್ಷರು ಅರ್ಥಮಾಡಿಕೊಂಡು ಇನ್ನೊಬ್ಬರ ಬಗ್ಗೆ ಸದಾಶಯದಿಂದ ಮಾತನಾಡಬೇಕು. ಕಟೀಲ್ ಅವರದ್ದು ಅತ್ಯಂತ ಕೀಳು ಅಭಿರುಚಿಯ ಮತ್ತು ಹತಾಶೆಯ ಹೇಳಿಕೆಯಾಗಿದೆ ಎಂದು ರಕ್ಷಾ ರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಅದಾನಿ ಬಂದರಿನಲ್ಲಿ ಮೂರು ಸಾವಿರ ಕೆ.ಜಿ.ಗೂ ಹೆಚ್ಚು ಮಾದಕ ದ್ರವ್ಯ ಪತ್ತೆಯಾಗಿತ್ತು. ಈ ಬಗ್ಗೆ ಯಾವ ತನಿಖೆ ನಡೆಯುತ್ತಿದೆ. ಗುಜರಾತ್ ಮಾದಕ ದ್ರವ್ಯದ ತಾಣವಾಗಿದ್ದು, ಇದು ಗುಜರಾತ್ ಮಾದರಿಯ ಆಡಳಿತವೇ? ಗಾಂಧಿ ನಾಡು ಗುಜರಾತ್‌ನಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದ್ದರೂ ಕಾಳಸಂತೆಯಲ್ಲಿ ಅತಿ ಹೆಚ್ಚು ಮದ್ಯ ಅಕ್ರಮವಾಗಿ ಮಾರಾಟವಾಗುತ್ತಿದೆ. ಇದನ್ನು ಮೊದಲು ನಿಯಂತ್ರಿಸಲು ಬಿಜೆಪಿ ನಾಯಕರು ಮುಂದಾಗಲಿ. ನಂತರ ಇನ್ನೊಬ್ಬರ ಬಗ್ಗೆ ಟೀಕಿಸಲಿ ಎಂದಿದ್ದಾರೆ.

ನಳೀನ್ ಕುಮಾರ್ ಕಟೀಲ್ ಅವರನ್ನು ನಿಮ್ಹಾನ್ಸ್‌ಗೆ ಸೇರಿಸಲು ನಮ್ಮ ಪಕ್ಷದಿಂದ ಈಗಾಗಲೇ ಆಂಬುಲೆನ್ಸ್ ಅನ್ನು ಬಿಜೆಪಿ ಕಚೇರಿಗೆ ಕಳುಹಿಸಲಾಗಿದೆ. ಇದೇ ರೀತಿ ರಾಹುಲ್ ಗಾಂಧಿ ಅವರನ್ನು ಟೀಕಿಸಿರುವ ಮತ್ತೊರ್ವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ನಿಮ್ಹಾನ್ಸ್‌ಗೆ ಕಳುಹಿಸಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಯತ್ನಾಳ್ ಅವರಿಗೂ ಮಾನಸಿಕ ಚಿಕಿತ್ಸೆ ಕೊಡಿಸುತ್ತೇವೆ. ನಳೀನ್ ಕುಮಾರ್ ಕಟೀಲ್ ಹಾಗೂ ಬಸನಗೌಡ ಪಾಟೀಲ್ ವಿರುದ್ಧ ದೊಡ್ಡ ಮಟ್ಟದ ಹೋರಾಟ ಮಾಡುತ್ತೇವೆ. ಬಿಜೆಪಿ ನಾಯಕರ ಇಂತಹ ಧೋರಣೆಯನ್ನು ಯುವ ಕಾಂಗ್ರೆಸ್ ಎಂದಿಗೂ ಸಹಿಸುವುದಿಲ್ಲ ಎಂದು ರಕ್ಷಾ ರಾಮಯ್ಯ ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿರಿ: ಗುಜರಾತ್‌ನಲ್ಲಿ ಹೆರಾಯಿನ್ ವಶ: ಮೋದಿ ಮಿತ್ರ ಅದಾನಿಯ ಪಾತ್ರದ ಬಗ್ಗೆ ತನಿಖೆ ಏಕಿಲ್ಲ?- ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...