Homeಕರ್ನಾಟಕನಿಜವಾದ ಡ್ರಗ್ ಡೀಲರ್, ಡ್ರಗ್ ಪೆಡ್ಲರ್‌‌ ಎಂದರೆ ಮೋದಿ, ಅಮಿತ್ ಶಾ: ರಕ್ಷಾ ರಾಮಯ್ಯ

ನಿಜವಾದ ಡ್ರಗ್ ಡೀಲರ್, ಡ್ರಗ್ ಪೆಡ್ಲರ್‌‌ ಎಂದರೆ ಮೋದಿ, ಅಮಿತ್ ಶಾ: ರಕ್ಷಾ ರಾಮಯ್ಯ

ಸುಮಾರು 20,000 ಕೋಟಿ ರೂ. ಮೌಲ್ಯದ ಹೆರಾಯಿನ್‌‌ ಗುಜರಾತ್‌‌ನ ಅದಾನಿ ಬಂದರಿನಲ್ಲಿ ಪತ್ತೆಯಾಗಿದ್ದನ್ನು ಉಲ್ಲೇಖಿಸಿ ನಳೀನ್‌ ಕುಮಾರ್‌ ಕಟೀಲ್ ಅವರಿಗೆ ತಿರುಗೇಟು ನೀಡಿದ್ದಾರೆ.

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಡ್ರಗ್, ಪ್ರಡ್ಲರ್ ಎಂದು ಟೀಕಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ತಿರುಗೇಟು ನೀಡಿರುವ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ, “ನಿಜವಾದ ಡ್ರಗ್ ಡೀಲರ್, ಡ್ರಗ್ ಪ್ಲಡ್ಲರ್ ಎಂದರೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ” ಎಂದು ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಅವರ ಮೇಲೆ ಮಾಡಿರುವ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಗುಜರಾತ್‌‌ನ ಅದಾನಿ ಮಾಲೀಕತ್ವದ ಬಂದರಿನಲ್ಲಿ ಮೂರು ಸಾವಿರ ಕೆ.ಜಿ. ಹೆರಾಯಿನ್ ಪತ್ತೆಯಾಗಿದ್ದು, ಈ ಬಗ್ಗೆ ಯಾವುದಾದರೂ ತನಿಖೆ ನಡೆಯುತ್ತಿದೆಯೇ? ಇದಕ್ಕೆ ಕಾರಣರಾದವರ ಮೇಲೆ ಕ್ರಮ ಕೈಗೊಳ್ಳಲಾಗಿದೆಯೇ ಎಂದು ಪ್ರಶ್ನಿಸಿದ್ದಾರೆ.

ಗುಜರಾತ್ ಅತಿ ಹೆಚ್ಚು ಮಂದಿ ಡ್ರಗ್ ಪ್ಲಡ್ಲರ್‌ಗಳ ತಾಣವಾಗಿದೆ. ಇವರನ್ನು ದೊಡ್ಡ ದೊಡ್ಡ ರಾಜಕಾರಣಿಗಳು ಪೋಷಿಸುತ್ತಿದ್ದಾರೆ. ತಮ್ಮ ರಾಜ್ಯದ ಈ ಅಕ್ರಮ ವ್ಯವಹಾರದ ಬಗ್ಗೆ ಪ್ರಧಾನಿ, ಕೇಂದ್ರ ಗೃಹ ಸಚಿವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿರಿ: ಅದಾನಿ ಮಾಲಿಕತ್ವದ ಬಂದರಿನಲ್ಲಿ 20 ಸಾವಿರ ಕೋಟಿ ರೂ.ಗಳ ಹೆರಾಯಿನ್ ವಶ

ಅದಾನಿ ಪೋರ್ಟ್‌ನಲ್ಲಿ ದೊರೆತ ಮಾದಕ ದ್ರವ್ಯದ ಬಗ್ಗೆ ಬಿಜೆಪಿ ಮಟ್ಟದಲ್ಲಿ ಏನಾದರೂ ಚರ್ಚೆಯಾಗಿದೆಯೇ? ಯಾವುದಾದರೂ ಮಾಹಿತಿ ಬಿಡುಗಡೆ ಮಾಡಲಾಗಿದೆಯೇ? ಗುಜರಾತ್‌ನಲ್ಲಿ ಅತಿ ಹೆಚ್ಚು ಮಾದಕ ದ್ರವ್ಯ ದೊರೆಯುತ್ತಿದೆ. ನಿಷೇಧಿತ ಕ್ಯಾಟಮೈನ್ ಮಾದಕ ವಸ್ತು ವಿಶ್ವದಲ್ಲಿಯೇ ಅತಿ ಹೆಚ್ಚು ದೊರೆಯುವ ತಾಣ ಎಂದರೆ ಅದು ಗುಜರಾತ್, ಹೀಗಿರುವಾಗ ರಾಹುಲ್ ಗಾಂಧಿ ಅವರ ಮೇಲೆ ಯಾವ ಉದ್ದೇಶದಿಂದ ಟೀಕೆ ಮಾಡುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಗುಜರಾತ್‌ನಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದ್ದರೂ, ಕಾಳಸಂತೆಯಲ್ಲಿ ಅತಿ ಹೆಚ್ಚು ಮದ್ಯ ಸಿಗುತ್ತಿದೆ. ಮದ್ಯ ಮಾರಾಟ ತಡೆಗೆ ಯಾವುದಾದರೂ ಕ್ರಮ ಕೈಗೊಳ್ಳಲಾಗಿದೆಯೇ? ಇದನ್ನು ಬಿಜೆಪಿ ರಾಜ್ಯಾಧ್ಯಕ್ಷರು ಅರ್ಥಮಾಡಿಕೊಂಡು ಇನ್ನೊಬ್ಬರ ಬಗ್ಗೆ ಸದಾಶಯದಿಂದ ಮಾತನಾಡಬೇಕು. ಕಟೀಲ್ ಅವರದ್ದು ಅತ್ಯಂತ ಕೀಳು ಅಭಿರುಚಿಯ ಮತ್ತು ಹತಾಶೆಯ ಹೇಳಿಕೆಯಾಗಿದೆ ಎಂದು ರಕ್ಷಾ ರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಅದಾನಿ ಬಂದರಿನಲ್ಲಿ ಮೂರು ಸಾವಿರ ಕೆ.ಜಿ.ಗೂ ಹೆಚ್ಚು ಮಾದಕ ದ್ರವ್ಯ ಪತ್ತೆಯಾಗಿತ್ತು. ಈ ಬಗ್ಗೆ ಯಾವ ತನಿಖೆ ನಡೆಯುತ್ತಿದೆ. ಗುಜರಾತ್ ಮಾದಕ ದ್ರವ್ಯದ ತಾಣವಾಗಿದ್ದು, ಇದು ಗುಜರಾತ್ ಮಾದರಿಯ ಆಡಳಿತವೇ? ಗಾಂಧಿ ನಾಡು ಗುಜರಾತ್‌ನಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದ್ದರೂ ಕಾಳಸಂತೆಯಲ್ಲಿ ಅತಿ ಹೆಚ್ಚು ಮದ್ಯ ಅಕ್ರಮವಾಗಿ ಮಾರಾಟವಾಗುತ್ತಿದೆ. ಇದನ್ನು ಮೊದಲು ನಿಯಂತ್ರಿಸಲು ಬಿಜೆಪಿ ನಾಯಕರು ಮುಂದಾಗಲಿ. ನಂತರ ಇನ್ನೊಬ್ಬರ ಬಗ್ಗೆ ಟೀಕಿಸಲಿ ಎಂದಿದ್ದಾರೆ.

ನಳೀನ್ ಕುಮಾರ್ ಕಟೀಲ್ ಅವರನ್ನು ನಿಮ್ಹಾನ್ಸ್‌ಗೆ ಸೇರಿಸಲು ನಮ್ಮ ಪಕ್ಷದಿಂದ ಈಗಾಗಲೇ ಆಂಬುಲೆನ್ಸ್ ಅನ್ನು ಬಿಜೆಪಿ ಕಚೇರಿಗೆ ಕಳುಹಿಸಲಾಗಿದೆ. ಇದೇ ರೀತಿ ರಾಹುಲ್ ಗಾಂಧಿ ಅವರನ್ನು ಟೀಕಿಸಿರುವ ಮತ್ತೊರ್ವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ನಿಮ್ಹಾನ್ಸ್‌ಗೆ ಕಳುಹಿಸಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಯತ್ನಾಳ್ ಅವರಿಗೂ ಮಾನಸಿಕ ಚಿಕಿತ್ಸೆ ಕೊಡಿಸುತ್ತೇವೆ. ನಳೀನ್ ಕುಮಾರ್ ಕಟೀಲ್ ಹಾಗೂ ಬಸನಗೌಡ ಪಾಟೀಲ್ ವಿರುದ್ಧ ದೊಡ್ಡ ಮಟ್ಟದ ಹೋರಾಟ ಮಾಡುತ್ತೇವೆ. ಬಿಜೆಪಿ ನಾಯಕರ ಇಂತಹ ಧೋರಣೆಯನ್ನು ಯುವ ಕಾಂಗ್ರೆಸ್ ಎಂದಿಗೂ ಸಹಿಸುವುದಿಲ್ಲ ಎಂದು ರಕ್ಷಾ ರಾಮಯ್ಯ ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿರಿ: ಗುಜರಾತ್‌ನಲ್ಲಿ ಹೆರಾಯಿನ್ ವಶ: ಮೋದಿ ಮಿತ್ರ ಅದಾನಿಯ ಪಾತ್ರದ ಬಗ್ಗೆ ತನಿಖೆ ಏಕಿಲ್ಲ?- ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...