Homeಕರ್ನಾಟಕನಿಜವಾದ ಡ್ರಗ್ ಡೀಲರ್, ಡ್ರಗ್ ಪೆಡ್ಲರ್‌‌ ಎಂದರೆ ಮೋದಿ, ಅಮಿತ್ ಶಾ: ರಕ್ಷಾ ರಾಮಯ್ಯ

ನಿಜವಾದ ಡ್ರಗ್ ಡೀಲರ್, ಡ್ರಗ್ ಪೆಡ್ಲರ್‌‌ ಎಂದರೆ ಮೋದಿ, ಅಮಿತ್ ಶಾ: ರಕ್ಷಾ ರಾಮಯ್ಯ

ಸುಮಾರು 20,000 ಕೋಟಿ ರೂ. ಮೌಲ್ಯದ ಹೆರಾಯಿನ್‌‌ ಗುಜರಾತ್‌‌ನ ಅದಾನಿ ಬಂದರಿನಲ್ಲಿ ಪತ್ತೆಯಾಗಿದ್ದನ್ನು ಉಲ್ಲೇಖಿಸಿ ನಳೀನ್‌ ಕುಮಾರ್‌ ಕಟೀಲ್ ಅವರಿಗೆ ತಿರುಗೇಟು ನೀಡಿದ್ದಾರೆ.

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಡ್ರಗ್, ಪ್ರಡ್ಲರ್ ಎಂದು ಟೀಕಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ತಿರುಗೇಟು ನೀಡಿರುವ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ, “ನಿಜವಾದ ಡ್ರಗ್ ಡೀಲರ್, ಡ್ರಗ್ ಪ್ಲಡ್ಲರ್ ಎಂದರೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ” ಎಂದು ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಅವರ ಮೇಲೆ ಮಾಡಿರುವ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಗುಜರಾತ್‌‌ನ ಅದಾನಿ ಮಾಲೀಕತ್ವದ ಬಂದರಿನಲ್ಲಿ ಮೂರು ಸಾವಿರ ಕೆ.ಜಿ. ಹೆರಾಯಿನ್ ಪತ್ತೆಯಾಗಿದ್ದು, ಈ ಬಗ್ಗೆ ಯಾವುದಾದರೂ ತನಿಖೆ ನಡೆಯುತ್ತಿದೆಯೇ? ಇದಕ್ಕೆ ಕಾರಣರಾದವರ ಮೇಲೆ ಕ್ರಮ ಕೈಗೊಳ್ಳಲಾಗಿದೆಯೇ ಎಂದು ಪ್ರಶ್ನಿಸಿದ್ದಾರೆ.

ಗುಜರಾತ್ ಅತಿ ಹೆಚ್ಚು ಮಂದಿ ಡ್ರಗ್ ಪ್ಲಡ್ಲರ್‌ಗಳ ತಾಣವಾಗಿದೆ. ಇವರನ್ನು ದೊಡ್ಡ ದೊಡ್ಡ ರಾಜಕಾರಣಿಗಳು ಪೋಷಿಸುತ್ತಿದ್ದಾರೆ. ತಮ್ಮ ರಾಜ್ಯದ ಈ ಅಕ್ರಮ ವ್ಯವಹಾರದ ಬಗ್ಗೆ ಪ್ರಧಾನಿ, ಕೇಂದ್ರ ಗೃಹ ಸಚಿವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿರಿ: ಅದಾನಿ ಮಾಲಿಕತ್ವದ ಬಂದರಿನಲ್ಲಿ 20 ಸಾವಿರ ಕೋಟಿ ರೂ.ಗಳ ಹೆರಾಯಿನ್ ವಶ

ಅದಾನಿ ಪೋರ್ಟ್‌ನಲ್ಲಿ ದೊರೆತ ಮಾದಕ ದ್ರವ್ಯದ ಬಗ್ಗೆ ಬಿಜೆಪಿ ಮಟ್ಟದಲ್ಲಿ ಏನಾದರೂ ಚರ್ಚೆಯಾಗಿದೆಯೇ? ಯಾವುದಾದರೂ ಮಾಹಿತಿ ಬಿಡುಗಡೆ ಮಾಡಲಾಗಿದೆಯೇ? ಗುಜರಾತ್‌ನಲ್ಲಿ ಅತಿ ಹೆಚ್ಚು ಮಾದಕ ದ್ರವ್ಯ ದೊರೆಯುತ್ತಿದೆ. ನಿಷೇಧಿತ ಕ್ಯಾಟಮೈನ್ ಮಾದಕ ವಸ್ತು ವಿಶ್ವದಲ್ಲಿಯೇ ಅತಿ ಹೆಚ್ಚು ದೊರೆಯುವ ತಾಣ ಎಂದರೆ ಅದು ಗುಜರಾತ್, ಹೀಗಿರುವಾಗ ರಾಹುಲ್ ಗಾಂಧಿ ಅವರ ಮೇಲೆ ಯಾವ ಉದ್ದೇಶದಿಂದ ಟೀಕೆ ಮಾಡುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಗುಜರಾತ್‌ನಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದ್ದರೂ, ಕಾಳಸಂತೆಯಲ್ಲಿ ಅತಿ ಹೆಚ್ಚು ಮದ್ಯ ಸಿಗುತ್ತಿದೆ. ಮದ್ಯ ಮಾರಾಟ ತಡೆಗೆ ಯಾವುದಾದರೂ ಕ್ರಮ ಕೈಗೊಳ್ಳಲಾಗಿದೆಯೇ? ಇದನ್ನು ಬಿಜೆಪಿ ರಾಜ್ಯಾಧ್ಯಕ್ಷರು ಅರ್ಥಮಾಡಿಕೊಂಡು ಇನ್ನೊಬ್ಬರ ಬಗ್ಗೆ ಸದಾಶಯದಿಂದ ಮಾತನಾಡಬೇಕು. ಕಟೀಲ್ ಅವರದ್ದು ಅತ್ಯಂತ ಕೀಳು ಅಭಿರುಚಿಯ ಮತ್ತು ಹತಾಶೆಯ ಹೇಳಿಕೆಯಾಗಿದೆ ಎಂದು ರಕ್ಷಾ ರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಅದಾನಿ ಬಂದರಿನಲ್ಲಿ ಮೂರು ಸಾವಿರ ಕೆ.ಜಿ.ಗೂ ಹೆಚ್ಚು ಮಾದಕ ದ್ರವ್ಯ ಪತ್ತೆಯಾಗಿತ್ತು. ಈ ಬಗ್ಗೆ ಯಾವ ತನಿಖೆ ನಡೆಯುತ್ತಿದೆ. ಗುಜರಾತ್ ಮಾದಕ ದ್ರವ್ಯದ ತಾಣವಾಗಿದ್ದು, ಇದು ಗುಜರಾತ್ ಮಾದರಿಯ ಆಡಳಿತವೇ? ಗಾಂಧಿ ನಾಡು ಗುಜರಾತ್‌ನಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದ್ದರೂ ಕಾಳಸಂತೆಯಲ್ಲಿ ಅತಿ ಹೆಚ್ಚು ಮದ್ಯ ಅಕ್ರಮವಾಗಿ ಮಾರಾಟವಾಗುತ್ತಿದೆ. ಇದನ್ನು ಮೊದಲು ನಿಯಂತ್ರಿಸಲು ಬಿಜೆಪಿ ನಾಯಕರು ಮುಂದಾಗಲಿ. ನಂತರ ಇನ್ನೊಬ್ಬರ ಬಗ್ಗೆ ಟೀಕಿಸಲಿ ಎಂದಿದ್ದಾರೆ.

ನಳೀನ್ ಕುಮಾರ್ ಕಟೀಲ್ ಅವರನ್ನು ನಿಮ್ಹಾನ್ಸ್‌ಗೆ ಸೇರಿಸಲು ನಮ್ಮ ಪಕ್ಷದಿಂದ ಈಗಾಗಲೇ ಆಂಬುಲೆನ್ಸ್ ಅನ್ನು ಬಿಜೆಪಿ ಕಚೇರಿಗೆ ಕಳುಹಿಸಲಾಗಿದೆ. ಇದೇ ರೀತಿ ರಾಹುಲ್ ಗಾಂಧಿ ಅವರನ್ನು ಟೀಕಿಸಿರುವ ಮತ್ತೊರ್ವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ನಿಮ್ಹಾನ್ಸ್‌ಗೆ ಕಳುಹಿಸಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಯತ್ನಾಳ್ ಅವರಿಗೂ ಮಾನಸಿಕ ಚಿಕಿತ್ಸೆ ಕೊಡಿಸುತ್ತೇವೆ. ನಳೀನ್ ಕುಮಾರ್ ಕಟೀಲ್ ಹಾಗೂ ಬಸನಗೌಡ ಪಾಟೀಲ್ ವಿರುದ್ಧ ದೊಡ್ಡ ಮಟ್ಟದ ಹೋರಾಟ ಮಾಡುತ್ತೇವೆ. ಬಿಜೆಪಿ ನಾಯಕರ ಇಂತಹ ಧೋರಣೆಯನ್ನು ಯುವ ಕಾಂಗ್ರೆಸ್ ಎಂದಿಗೂ ಸಹಿಸುವುದಿಲ್ಲ ಎಂದು ರಕ್ಷಾ ರಾಮಯ್ಯ ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿರಿ: ಗುಜರಾತ್‌ನಲ್ಲಿ ಹೆರಾಯಿನ್ ವಶ: ಮೋದಿ ಮಿತ್ರ ಅದಾನಿಯ ಪಾತ್ರದ ಬಗ್ಗೆ ತನಿಖೆ ಏಕಿಲ್ಲ?- ಕಾಂಗ್ರೆಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ ವೀಕ್ಷಿಸುತ್ತಾ ಬೀದಿಯಲ್ಲಿ ತಿರುಗಾಡುವ ಯುವಕರ ಖಾತೆಗಳಿಗೆ ಹಣ...

0
"ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ಗಳನ್ನು ಬಳಸಿಕೊಂಡು ಬೀದಿಗಳಲ್ಲಿ ತಿರುಗುತ್ತಿರುವ ನಮ್ಮ ಯುವಕರ ಬ್ಯಾಂಕ್ ಖಾತೆಗಳಿಗೆ ವಾರ್ಷಿಕ ಒಂದು ಲಕ್ಷ ರೂಪಾಯಿ ಮತ್ತು ತಿಂಗಳಿಗೆ 8,500 ರೂಪಾಯಿಗಳನ್ನು ಜಮಾ ಮಾಡಲಾಗುತ್ತದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ"...