Homeಕರ್ನಾಟಕನಿಜವಾದ ಡ್ರಗ್ ಡೀಲರ್, ಡ್ರಗ್ ಪೆಡ್ಲರ್‌‌ ಎಂದರೆ ಮೋದಿ, ಅಮಿತ್ ಶಾ: ರಕ್ಷಾ ರಾಮಯ್ಯ

ನಿಜವಾದ ಡ್ರಗ್ ಡೀಲರ್, ಡ್ರಗ್ ಪೆಡ್ಲರ್‌‌ ಎಂದರೆ ಮೋದಿ, ಅಮಿತ್ ಶಾ: ರಕ್ಷಾ ರಾಮಯ್ಯ

ಸುಮಾರು 20,000 ಕೋಟಿ ರೂ. ಮೌಲ್ಯದ ಹೆರಾಯಿನ್‌‌ ಗುಜರಾತ್‌‌ನ ಅದಾನಿ ಬಂದರಿನಲ್ಲಿ ಪತ್ತೆಯಾಗಿದ್ದನ್ನು ಉಲ್ಲೇಖಿಸಿ ನಳೀನ್‌ ಕುಮಾರ್‌ ಕಟೀಲ್ ಅವರಿಗೆ ತಿರುಗೇಟು ನೀಡಿದ್ದಾರೆ.

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಡ್ರಗ್, ಪ್ರಡ್ಲರ್ ಎಂದು ಟೀಕಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ತಿರುಗೇಟು ನೀಡಿರುವ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ, “ನಿಜವಾದ ಡ್ರಗ್ ಡೀಲರ್, ಡ್ರಗ್ ಪ್ಲಡ್ಲರ್ ಎಂದರೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ” ಎಂದು ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಅವರ ಮೇಲೆ ಮಾಡಿರುವ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಗುಜರಾತ್‌‌ನ ಅದಾನಿ ಮಾಲೀಕತ್ವದ ಬಂದರಿನಲ್ಲಿ ಮೂರು ಸಾವಿರ ಕೆ.ಜಿ. ಹೆರಾಯಿನ್ ಪತ್ತೆಯಾಗಿದ್ದು, ಈ ಬಗ್ಗೆ ಯಾವುದಾದರೂ ತನಿಖೆ ನಡೆಯುತ್ತಿದೆಯೇ? ಇದಕ್ಕೆ ಕಾರಣರಾದವರ ಮೇಲೆ ಕ್ರಮ ಕೈಗೊಳ್ಳಲಾಗಿದೆಯೇ ಎಂದು ಪ್ರಶ್ನಿಸಿದ್ದಾರೆ.

ಗುಜರಾತ್ ಅತಿ ಹೆಚ್ಚು ಮಂದಿ ಡ್ರಗ್ ಪ್ಲಡ್ಲರ್‌ಗಳ ತಾಣವಾಗಿದೆ. ಇವರನ್ನು ದೊಡ್ಡ ದೊಡ್ಡ ರಾಜಕಾರಣಿಗಳು ಪೋಷಿಸುತ್ತಿದ್ದಾರೆ. ತಮ್ಮ ರಾಜ್ಯದ ಈ ಅಕ್ರಮ ವ್ಯವಹಾರದ ಬಗ್ಗೆ ಪ್ರಧಾನಿ, ಕೇಂದ್ರ ಗೃಹ ಸಚಿವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿರಿ: ಅದಾನಿ ಮಾಲಿಕತ್ವದ ಬಂದರಿನಲ್ಲಿ 20 ಸಾವಿರ ಕೋಟಿ ರೂ.ಗಳ ಹೆರಾಯಿನ್ ವಶ

ಅದಾನಿ ಪೋರ್ಟ್‌ನಲ್ಲಿ ದೊರೆತ ಮಾದಕ ದ್ರವ್ಯದ ಬಗ್ಗೆ ಬಿಜೆಪಿ ಮಟ್ಟದಲ್ಲಿ ಏನಾದರೂ ಚರ್ಚೆಯಾಗಿದೆಯೇ? ಯಾವುದಾದರೂ ಮಾಹಿತಿ ಬಿಡುಗಡೆ ಮಾಡಲಾಗಿದೆಯೇ? ಗುಜರಾತ್‌ನಲ್ಲಿ ಅತಿ ಹೆಚ್ಚು ಮಾದಕ ದ್ರವ್ಯ ದೊರೆಯುತ್ತಿದೆ. ನಿಷೇಧಿತ ಕ್ಯಾಟಮೈನ್ ಮಾದಕ ವಸ್ತು ವಿಶ್ವದಲ್ಲಿಯೇ ಅತಿ ಹೆಚ್ಚು ದೊರೆಯುವ ತಾಣ ಎಂದರೆ ಅದು ಗುಜರಾತ್, ಹೀಗಿರುವಾಗ ರಾಹುಲ್ ಗಾಂಧಿ ಅವರ ಮೇಲೆ ಯಾವ ಉದ್ದೇಶದಿಂದ ಟೀಕೆ ಮಾಡುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಗುಜರಾತ್‌ನಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದ್ದರೂ, ಕಾಳಸಂತೆಯಲ್ಲಿ ಅತಿ ಹೆಚ್ಚು ಮದ್ಯ ಸಿಗುತ್ತಿದೆ. ಮದ್ಯ ಮಾರಾಟ ತಡೆಗೆ ಯಾವುದಾದರೂ ಕ್ರಮ ಕೈಗೊಳ್ಳಲಾಗಿದೆಯೇ? ಇದನ್ನು ಬಿಜೆಪಿ ರಾಜ್ಯಾಧ್ಯಕ್ಷರು ಅರ್ಥಮಾಡಿಕೊಂಡು ಇನ್ನೊಬ್ಬರ ಬಗ್ಗೆ ಸದಾಶಯದಿಂದ ಮಾತನಾಡಬೇಕು. ಕಟೀಲ್ ಅವರದ್ದು ಅತ್ಯಂತ ಕೀಳು ಅಭಿರುಚಿಯ ಮತ್ತು ಹತಾಶೆಯ ಹೇಳಿಕೆಯಾಗಿದೆ ಎಂದು ರಕ್ಷಾ ರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಅದಾನಿ ಬಂದರಿನಲ್ಲಿ ಮೂರು ಸಾವಿರ ಕೆ.ಜಿ.ಗೂ ಹೆಚ್ಚು ಮಾದಕ ದ್ರವ್ಯ ಪತ್ತೆಯಾಗಿತ್ತು. ಈ ಬಗ್ಗೆ ಯಾವ ತನಿಖೆ ನಡೆಯುತ್ತಿದೆ. ಗುಜರಾತ್ ಮಾದಕ ದ್ರವ್ಯದ ತಾಣವಾಗಿದ್ದು, ಇದು ಗುಜರಾತ್ ಮಾದರಿಯ ಆಡಳಿತವೇ? ಗಾಂಧಿ ನಾಡು ಗುಜರಾತ್‌ನಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದ್ದರೂ ಕಾಳಸಂತೆಯಲ್ಲಿ ಅತಿ ಹೆಚ್ಚು ಮದ್ಯ ಅಕ್ರಮವಾಗಿ ಮಾರಾಟವಾಗುತ್ತಿದೆ. ಇದನ್ನು ಮೊದಲು ನಿಯಂತ್ರಿಸಲು ಬಿಜೆಪಿ ನಾಯಕರು ಮುಂದಾಗಲಿ. ನಂತರ ಇನ್ನೊಬ್ಬರ ಬಗ್ಗೆ ಟೀಕಿಸಲಿ ಎಂದಿದ್ದಾರೆ.

ನಳೀನ್ ಕುಮಾರ್ ಕಟೀಲ್ ಅವರನ್ನು ನಿಮ್ಹಾನ್ಸ್‌ಗೆ ಸೇರಿಸಲು ನಮ್ಮ ಪಕ್ಷದಿಂದ ಈಗಾಗಲೇ ಆಂಬುಲೆನ್ಸ್ ಅನ್ನು ಬಿಜೆಪಿ ಕಚೇರಿಗೆ ಕಳುಹಿಸಲಾಗಿದೆ. ಇದೇ ರೀತಿ ರಾಹುಲ್ ಗಾಂಧಿ ಅವರನ್ನು ಟೀಕಿಸಿರುವ ಮತ್ತೊರ್ವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ನಿಮ್ಹಾನ್ಸ್‌ಗೆ ಕಳುಹಿಸಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಯತ್ನಾಳ್ ಅವರಿಗೂ ಮಾನಸಿಕ ಚಿಕಿತ್ಸೆ ಕೊಡಿಸುತ್ತೇವೆ. ನಳೀನ್ ಕುಮಾರ್ ಕಟೀಲ್ ಹಾಗೂ ಬಸನಗೌಡ ಪಾಟೀಲ್ ವಿರುದ್ಧ ದೊಡ್ಡ ಮಟ್ಟದ ಹೋರಾಟ ಮಾಡುತ್ತೇವೆ. ಬಿಜೆಪಿ ನಾಯಕರ ಇಂತಹ ಧೋರಣೆಯನ್ನು ಯುವ ಕಾಂಗ್ರೆಸ್ ಎಂದಿಗೂ ಸಹಿಸುವುದಿಲ್ಲ ಎಂದು ರಕ್ಷಾ ರಾಮಯ್ಯ ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿರಿ: ಗುಜರಾತ್‌ನಲ್ಲಿ ಹೆರಾಯಿನ್ ವಶ: ಮೋದಿ ಮಿತ್ರ ಅದಾನಿಯ ಪಾತ್ರದ ಬಗ್ಗೆ ತನಿಖೆ ಏಕಿಲ್ಲ?- ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...