Homeಕರ್ನಾಟಕನಿಜವಾದ ಡ್ರಗ್ ಡೀಲರ್, ಡ್ರಗ್ ಪೆಡ್ಲರ್‌‌ ಎಂದರೆ ಮೋದಿ, ಅಮಿತ್ ಶಾ: ರಕ್ಷಾ ರಾಮಯ್ಯ

ನಿಜವಾದ ಡ್ರಗ್ ಡೀಲರ್, ಡ್ರಗ್ ಪೆಡ್ಲರ್‌‌ ಎಂದರೆ ಮೋದಿ, ಅಮಿತ್ ಶಾ: ರಕ್ಷಾ ರಾಮಯ್ಯ

ಸುಮಾರು 20,000 ಕೋಟಿ ರೂ. ಮೌಲ್ಯದ ಹೆರಾಯಿನ್‌‌ ಗುಜರಾತ್‌‌ನ ಅದಾನಿ ಬಂದರಿನಲ್ಲಿ ಪತ್ತೆಯಾಗಿದ್ದನ್ನು ಉಲ್ಲೇಖಿಸಿ ನಳೀನ್‌ ಕುಮಾರ್‌ ಕಟೀಲ್ ಅವರಿಗೆ ತಿರುಗೇಟು ನೀಡಿದ್ದಾರೆ.

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಡ್ರಗ್, ಪ್ರಡ್ಲರ್ ಎಂದು ಟೀಕಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ತಿರುಗೇಟು ನೀಡಿರುವ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ, “ನಿಜವಾದ ಡ್ರಗ್ ಡೀಲರ್, ಡ್ರಗ್ ಪ್ಲಡ್ಲರ್ ಎಂದರೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ” ಎಂದು ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಅವರ ಮೇಲೆ ಮಾಡಿರುವ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಗುಜರಾತ್‌‌ನ ಅದಾನಿ ಮಾಲೀಕತ್ವದ ಬಂದರಿನಲ್ಲಿ ಮೂರು ಸಾವಿರ ಕೆ.ಜಿ. ಹೆರಾಯಿನ್ ಪತ್ತೆಯಾಗಿದ್ದು, ಈ ಬಗ್ಗೆ ಯಾವುದಾದರೂ ತನಿಖೆ ನಡೆಯುತ್ತಿದೆಯೇ? ಇದಕ್ಕೆ ಕಾರಣರಾದವರ ಮೇಲೆ ಕ್ರಮ ಕೈಗೊಳ್ಳಲಾಗಿದೆಯೇ ಎಂದು ಪ್ರಶ್ನಿಸಿದ್ದಾರೆ.

ಗುಜರಾತ್ ಅತಿ ಹೆಚ್ಚು ಮಂದಿ ಡ್ರಗ್ ಪ್ಲಡ್ಲರ್‌ಗಳ ತಾಣವಾಗಿದೆ. ಇವರನ್ನು ದೊಡ್ಡ ದೊಡ್ಡ ರಾಜಕಾರಣಿಗಳು ಪೋಷಿಸುತ್ತಿದ್ದಾರೆ. ತಮ್ಮ ರಾಜ್ಯದ ಈ ಅಕ್ರಮ ವ್ಯವಹಾರದ ಬಗ್ಗೆ ಪ್ರಧಾನಿ, ಕೇಂದ್ರ ಗೃಹ ಸಚಿವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿರಿ: ಅದಾನಿ ಮಾಲಿಕತ್ವದ ಬಂದರಿನಲ್ಲಿ 20 ಸಾವಿರ ಕೋಟಿ ರೂ.ಗಳ ಹೆರಾಯಿನ್ ವಶ

ಅದಾನಿ ಪೋರ್ಟ್‌ನಲ್ಲಿ ದೊರೆತ ಮಾದಕ ದ್ರವ್ಯದ ಬಗ್ಗೆ ಬಿಜೆಪಿ ಮಟ್ಟದಲ್ಲಿ ಏನಾದರೂ ಚರ್ಚೆಯಾಗಿದೆಯೇ? ಯಾವುದಾದರೂ ಮಾಹಿತಿ ಬಿಡುಗಡೆ ಮಾಡಲಾಗಿದೆಯೇ? ಗುಜರಾತ್‌ನಲ್ಲಿ ಅತಿ ಹೆಚ್ಚು ಮಾದಕ ದ್ರವ್ಯ ದೊರೆಯುತ್ತಿದೆ. ನಿಷೇಧಿತ ಕ್ಯಾಟಮೈನ್ ಮಾದಕ ವಸ್ತು ವಿಶ್ವದಲ್ಲಿಯೇ ಅತಿ ಹೆಚ್ಚು ದೊರೆಯುವ ತಾಣ ಎಂದರೆ ಅದು ಗುಜರಾತ್, ಹೀಗಿರುವಾಗ ರಾಹುಲ್ ಗಾಂಧಿ ಅವರ ಮೇಲೆ ಯಾವ ಉದ್ದೇಶದಿಂದ ಟೀಕೆ ಮಾಡುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಗುಜರಾತ್‌ನಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದ್ದರೂ, ಕಾಳಸಂತೆಯಲ್ಲಿ ಅತಿ ಹೆಚ್ಚು ಮದ್ಯ ಸಿಗುತ್ತಿದೆ. ಮದ್ಯ ಮಾರಾಟ ತಡೆಗೆ ಯಾವುದಾದರೂ ಕ್ರಮ ಕೈಗೊಳ್ಳಲಾಗಿದೆಯೇ? ಇದನ್ನು ಬಿಜೆಪಿ ರಾಜ್ಯಾಧ್ಯಕ್ಷರು ಅರ್ಥಮಾಡಿಕೊಂಡು ಇನ್ನೊಬ್ಬರ ಬಗ್ಗೆ ಸದಾಶಯದಿಂದ ಮಾತನಾಡಬೇಕು. ಕಟೀಲ್ ಅವರದ್ದು ಅತ್ಯಂತ ಕೀಳು ಅಭಿರುಚಿಯ ಮತ್ತು ಹತಾಶೆಯ ಹೇಳಿಕೆಯಾಗಿದೆ ಎಂದು ರಕ್ಷಾ ರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಅದಾನಿ ಬಂದರಿನಲ್ಲಿ ಮೂರು ಸಾವಿರ ಕೆ.ಜಿ.ಗೂ ಹೆಚ್ಚು ಮಾದಕ ದ್ರವ್ಯ ಪತ್ತೆಯಾಗಿತ್ತು. ಈ ಬಗ್ಗೆ ಯಾವ ತನಿಖೆ ನಡೆಯುತ್ತಿದೆ. ಗುಜರಾತ್ ಮಾದಕ ದ್ರವ್ಯದ ತಾಣವಾಗಿದ್ದು, ಇದು ಗುಜರಾತ್ ಮಾದರಿಯ ಆಡಳಿತವೇ? ಗಾಂಧಿ ನಾಡು ಗುಜರಾತ್‌ನಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದ್ದರೂ ಕಾಳಸಂತೆಯಲ್ಲಿ ಅತಿ ಹೆಚ್ಚು ಮದ್ಯ ಅಕ್ರಮವಾಗಿ ಮಾರಾಟವಾಗುತ್ತಿದೆ. ಇದನ್ನು ಮೊದಲು ನಿಯಂತ್ರಿಸಲು ಬಿಜೆಪಿ ನಾಯಕರು ಮುಂದಾಗಲಿ. ನಂತರ ಇನ್ನೊಬ್ಬರ ಬಗ್ಗೆ ಟೀಕಿಸಲಿ ಎಂದಿದ್ದಾರೆ.

ನಳೀನ್ ಕುಮಾರ್ ಕಟೀಲ್ ಅವರನ್ನು ನಿಮ್ಹಾನ್ಸ್‌ಗೆ ಸೇರಿಸಲು ನಮ್ಮ ಪಕ್ಷದಿಂದ ಈಗಾಗಲೇ ಆಂಬುಲೆನ್ಸ್ ಅನ್ನು ಬಿಜೆಪಿ ಕಚೇರಿಗೆ ಕಳುಹಿಸಲಾಗಿದೆ. ಇದೇ ರೀತಿ ರಾಹುಲ್ ಗಾಂಧಿ ಅವರನ್ನು ಟೀಕಿಸಿರುವ ಮತ್ತೊರ್ವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ನಿಮ್ಹಾನ್ಸ್‌ಗೆ ಕಳುಹಿಸಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಯತ್ನಾಳ್ ಅವರಿಗೂ ಮಾನಸಿಕ ಚಿಕಿತ್ಸೆ ಕೊಡಿಸುತ್ತೇವೆ. ನಳೀನ್ ಕುಮಾರ್ ಕಟೀಲ್ ಹಾಗೂ ಬಸನಗೌಡ ಪಾಟೀಲ್ ವಿರುದ್ಧ ದೊಡ್ಡ ಮಟ್ಟದ ಹೋರಾಟ ಮಾಡುತ್ತೇವೆ. ಬಿಜೆಪಿ ನಾಯಕರ ಇಂತಹ ಧೋರಣೆಯನ್ನು ಯುವ ಕಾಂಗ್ರೆಸ್ ಎಂದಿಗೂ ಸಹಿಸುವುದಿಲ್ಲ ಎಂದು ರಕ್ಷಾ ರಾಮಯ್ಯ ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿರಿ: ಗುಜರಾತ್‌ನಲ್ಲಿ ಹೆರಾಯಿನ್ ವಶ: ಮೋದಿ ಮಿತ್ರ ಅದಾನಿಯ ಪಾತ್ರದ ಬಗ್ಗೆ ತನಿಖೆ ಏಕಿಲ್ಲ?- ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...