Homeಅಂಕಣಗಳುಆಘಾತವಾಣಿ | ಅಟ್ಯಾಕ್ ಹನ್ಮಂತರಾಜ್ಯ ಎಲ್ಡು ಭಾಗ ಆಗ್ಲಿ, ಒಂದು ಭಾಗದ ಖಾತೆಪಾಣಿ ನನ್ನಪ್ಪನ ಹೆಸರಿನ್ಯಾಗೆ ಐತೆ....

ರಾಜ್ಯ ಎಲ್ಡು ಭಾಗ ಆಗ್ಲಿ, ಒಂದು ಭಾಗದ ಖಾತೆಪಾಣಿ ನನ್ನಪ್ಪನ ಹೆಸರಿನ್ಯಾಗೆ ಐತೆ….

- Advertisement -
- Advertisement -

ಕೇಳುಗರಿಗೆಲ್ಲ ಸ್ವಾಗತ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ..
ಕಟ್ಟುಮಸ್ತಾದ ದೇಹದವರು ಕಂಡರೆ ಕಿಯ್ಯೋ ಕಿಯ್ಯೋ ಎಂದು ಕಿರುಚಾಡಿಕೊಂಡು ಓಡಿಹೋಗುವ ಬ್ಲೂಜೆಪಿ ಪಕ್ಷದ ಕಾರ್ಯಕರ್ತರು ಮತ್ತು ಅಖಿಲಭಾರತ ಉಂಡಾಡಿಗುಂಡರ ಪರಿಷತ್ತಿನ ಪುಕ್ಕಲರ ರಣಹೇಡಿ ಕೃತ್ಯವೊಂದು ಬಯಲಾಗಿದೆ. ಜಾರ್ಖಂಡ್‍ನಲ್ಲಿ ಭಾಷಣವೊಂದನ್ನು ಮುಗಿಸಿ ಬರುತ್ತಿದ್ದ ಸ್ವಾಮಿ ಅಗ್ನಿವೇಶ್ ಎಂಬ 80 ವರ್ಷದ ಇಳಿವೃದ್ಧ ಹೋರಾಟಗಾರರ ಮೇಲೆ ಬ್ಲೂಜೆಪಿಯ ಸಣಕಲುತೊಡೆಯ ಕೋಡಂಗಿಗಳು ಮುಗಿಬಿದ್ದು ಹಲ್ಲೆ ನಡೆಸಿವೆ. ವೃದ್ಧರು, ಮಹಿಳೆಯರನ್ನು ಕಂಡರೆ ಇದ್ದಕ್ಕಿದ್ದಂತೆ ಗಂಡಸರಾಗುವ ಈ ಕ್ರಿಮಿಗಳು ಮತ್ತು ಹುಳಹುಪ್ಪಟೆಗಳ ಪಡೆಯು ಹೊಡೆಯುವುದು ಬಡಿಯುವುದು ಮಾಡುವುದು ಈ ದೇಶದಲ್ಲಿ ಸಾಮಾನ್ಯವಾಗಿ ಹೋಗಿದೆ. ಈ ಲಂಪಟಕ್ರಿಮಿಗಳ ಅನಧಿಕೃತ ಪಿತಾಶ್ರೀ ಬ್ಲೂಜೆಪಿಯ ಪಿಶಾಚಿ ನಾಯಕರು ಮತ್ತವರ ಪುಕ್ಕಲು ಮುದುಕ ಮಾತ್ರ ಈ ಬಗ್ಗೆ ಕ್ಯಾರೆ ಕೆತ್ತ ಎನ್ನದೆ ಗಂಟಲಿಗೆ ಸೋರೆಕಾಯಿ ಸಿಗಿಸಿಕೊಂಡು ನಸುಗುನ್ನಿಗಳಂತೆ ಸುಮ್ಮನಿರುವುದು ಮೂರೂಬಿಟ್ಟವರಿಗಿಂತ ಕಡೆಯಾಗಿ ಕಾಣುತ್ತಿರುವುದು ಈ ದೇಶದ ವಾಸ್ತವ.
*****
ಬಾಯಿ ಬಿಟ್ಟರೆ ಸುಳ್ಳುಗಳ ಚರಂಡಿಯನ್ನೇ ಹರಿಸುವ ಅರಳುಮರುಳು ಲೂಸು ಗಿರಾಕಿ ಫಕೀರಪ್ಪನ ಸುಳ್ಳಿನ ಹೊಡೆತ ತಾಳಲಾಗದೆ ಅವನು ಭಾಷಣ ಮಾಡುತ್ತಿದ್ದ ಪೆಂಡಾಲೇ ಸಭಿಕರ ತಲೆಯ ಮೇಲೆ ಧುಡುಮ್ಮನೆ ಕುಸಿದು ಬಿದ್ದಿರುವ ಘಟನೆ ವರದಿಯಾಗಿದೆ. ಪೆಂಡಾಲ್ ಕುಸಿದ ಮೇಲೂ ತನ್ನ ಕೊಳಕುಬಾಯಿಯ ದರಿದ್ರ ಭಾಷಣವನ್ನು ನಿಲ್ಲಿಸದ ಲೂಸ್ ಗಿರಾಕಿ ಫಕೀರಪ್ಪನು ಯಾರ್ ಸತ್ರೆ ನಂಗೇನು ಎಂದು ಕಯೋ ಕಯೋ ಕಯ್ಯಯ್ಯೋ ಅಂತ ಸುಳ್ಳು ಬೊಗಳುತ್ತಲೇ ಇದ್ದನೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
*****
ಇದೀಗ ಬಂದ ಸುದ್ದಿ, ತಲೆಕೆಟ್ಟ ಬೀದಿ ಭಿಕಾರಿಯಂತೆ ಐದೂವರೆ ಅಡಿ ಗಡ್ಡ ಬೆಳೆಸಿಕೊಂಡು ಪೋಲಿ ತಿರುಗುವ ‘ಅಂದ್ರುಗಿನ ಸ್ತ್ರೀ ರಾಮುಲು’ ಈಗ ಹೊಸದಾಗಿ ಇನ್ನೊಂದು ಕಲ್ ಚಪ್ಪಡಿ ತಗೊಂಡು ಹೊಟ್ಟೆ ಮೇಲೆ ಎತ್ತಾಕಿಕೊಂಡಿದ್ದಾನೆ. ಕರ್ನಾಟಕ ನಮ್ಮಪ್ಪನ ಮನೆ ಆಸ್ತಿ, ಅದರ ಮೇಲೆ ನಾನು ಖಾತೆಪಾಣಿ ಮಾಡಿಸ್ಕೊಂಡಿದೀನಿ, ಆದ್ರಿಂದ ರಾಜ್ಯ ಎರಡು ಭಾಗ ಆಗಬೇಕು, ಒಂದು ಭಾಗದಲ್ಲಿ ಯಾರಾದ್ರೂ ಇದ್ಕೊಳ್ಳಿ, ಇನ್ನೊಂದು ಭಾಗವನ್ನ ನಾನು ‘ಟೋಫನ್ ತಲೆ ರೆಡ್ಡಿ’ ಇಬ್ರೂ ಹಂಚಿಕೊಂಡು ಉಪ್ಪಿನಕಾಯ್ ಹಾಕ್ಕೊಂಡು ನೆಕ್ಕೋತೀವಿ ಅಂತ ‘ಸ್ತ್ರೀ ರಾಮುಲು’ ಬೊಗಳಿದೆ. ಮಾತೆತ್ತಿದರೆ ನಮ್ದು ಅಖಂಡ ಭಾರತ, ಜಗತ್ತಲ್ಲಿರೋ ಎಲ್ಲ ದೇಶಗಳೂ ಭಾರತಕ್ಕೇ ಸೇರಬೇಕು ಅಂತ ಗಂಟಲು ಹರಿದುಕೊಳ್ಳೋ ಬ್ಲೂಜೆಪಿ ಪಕ್ಷದಲ್ಲಿದ್ದು, ಇಂತಹ ರಾಜ್ಯ ಒಡೆಯುವ ನಮಕ್ ಹರಾಮ್ ಕೆಲಸಕ್ಕೆ ಸಪೋರ್ಟ್ ಮಾಡ್ತೀನಿ ಅಂದ ರಾಮುಲುಗೆ ಈಗ ಜೀವಭಯ ಎದುರಾಗಿ ಹಾರ್ಟು ‘ಚುಟು ಚುಟು, ಚುಮು ಚುಮು’ ಅಂತಾ ಇದೆಯಂತೆ. ಚಳ್ಳಕೆರೆ ಕಡೆಯ ಕನ್ನಡಪರ ಹೋರಾಟಗಾರರು “ರಾಮುಲು ಎಲ್ಲೇ ಕಂಡರೂ ಅವನ ಮುಖವೇ ಹೂತುಹೋಗಿರೋ ಗಡ್ಡಕ್ಕೆ ಸೀಮೆಣ್ಣೆ ಎರಚಿ ಬೆಂಕಿ ಹಚ್ಚಿ, ಸುಟ್ಟ ಗಡ್ಡದ ಬೂದಿಯನ್ನ ಅವನಿಗೇ ತಿನ್ನಿಸ್ತೀವಿ ಅಂತ “ ಇನ್ನೂ ಬೆದರಿಕೆ ಹಾಕಿಲ್ಲವೆಂದು ತಿಳಿದು ಬಂದಿದೆ.
*****
ಸಾವಿರಾರು ವರ್ಷಗಳಿಂದ ಮೈಬಗ್ಗಿಸಿ ದುಡಿದು ತಿಂದು ಗೊತ್ತೇ ಇರದ ಸನಾತನಿ ಶನಿಗಳು, ಕಳೆದ 30 ವರ್ಷಗಳಿಂದ ಶ್ರೀರಾಮನಿಗೆ ಗುಡಿ ಕಟ್ಟುವ ಟಪಾಸ್ ಅಡ್ವೆಂಚರ್ ಮಾಡುತ್ತ ತಿರುಗುತ್ತಿರುವುದು ನಿಮಗೆ ಗೊತ್ತೇ ಇದೆ. ಈ ಅಡ್ವೆಂಚರ್‍ನಲ್ಲಿ ಮಂಚೂಣಿಯಲ್ಲಿದ್ದ ಸಂಘಟನೆಗಳಲ್ಲಿ ಒಂದಾದ ‘ನಿರ್ಮೋಹಿ ಮಂಚ್’ ಸಂಘಟನೆಯು ರಾಮನಗುಡಿ ಕಟ್ತೇವೆಂದು ಸಾವಿರಾರು ಕೋಟಿ ಚಂದಾ ಎತ್ತಿದ ವಿ.ಹೆಚ್.ಪಿಯು ಆ ಹಣದಲ್ಲಿ ಒಂದು ಇಟ್ಟಿಗೆಯನ್ನೂ ಖರೀದಿಸದೆ ಇಡೀ ಚಂದಾಹಣವನ್ನು ಮುಂಡಾ ಮೋಚಿದೆಯೆಂದು ಆಕ್ರೋಶ ವ್ಯಕ್ತಪಡಿಸಿದೆ. ಇದು ಒಂದು ಕಡೆಯಿರುವಾಗ ಇನ್ನೊಂದು ಕಡೆಯಲ್ಲಿ 2019ರ ಎಲೆಕ್ಷನ್ನಿಗೆ ಮುಂಚೆ ರಾಮನಗುಡಿ ಕಟ್ತೀವಿ ಅಂತ ಹೇಳಿಕೆ ಕೊಟ್ಟ ಗುಜರಾತಿನ ಹಳೇ ಕ್ರಿಮಿನಲ್ ಪಂಟರ್ ‘ಹಮಿತ್ ಶಾ’ ಗಂಟಲಿಗೆ ಬ್ಲೂಜೆಪಿ ಪಕ್ಷ ತನ್ನ ಬಲಗಾಲನ್ನು ತುರುಕಿ ಬಾಯಿ ಮುಚ್ಚಿಸುವ ಪ್ರಯತ್ನ ನಡೆಸಿದೆ. ಈ ಬೋಡಗುಂಡನ ಮಾತು ನಂಬಬೇಡಿ, ರಾತ್ರಿ ಹೊಡೆದ ಬಿಟ್ಟಿ ಎಣ್ಣೆ ಏಟಲ್ಲಿ ಹಿಂಗೆಲ್ಲ ವದರವ್ನೆ, ಇವನ ಮಾನಸಿಕ ಸ್ಥಿತಿ ಡೋಲಾಯಮಾನವಾಗಿದೆಯೆಂದು ಸ್ಪಷ್ಟನೆ ಕೊಟ್ಟಿದೆ. ಅಂದಹಾಗೆ, ಇವರ ರಾಮನಗುಡಿ ಅಡ್ವೆಂಚರ್ ಮುಂದಿನ 500 ವರ್ಷಕ್ಕೂ ಮುಂದುವರೆಯಲಿದೆ ಎಂಬುದು ಜನತೆಗೆ ಸ್ಪಷ್ಟವಾಗಿದೆ.
*****
ದೇಶದ ರಕ್ಷಣಾ ಢಾಕಿಣಿ, ಅಲ್ಲಲ್ಲ ಮಂತ್ರಿಣಿಯಾದ ‘ನಿರ್ಮಲಾ ರಾಮಸೀತನ್’ ಎಂಬ ಮಧ್ಯವಯಸ್ಕ ಮಹಿಳೆಯು.. ಲೋಕಸಭೆ ಚುನಾವಣೆಗಿಂತ ಮುಂಚೆ ಕಾಂಗ್ರೆಸ್ ದೇಶದಲ್ಲಿ ಕೋಮು ಗಲಭೆಗಳನ್ನು ಹುಟ್ಟು ಹಾಕುವ ಸಂಚು ಮಾಡುತ್ತಿದೆಯೆಂದು ಹಾಸ್ಯಾಸ್ಪದ ಹೇಳಿಕೆಯೊಂದನ್ನು ಕೊಟ್ಟಿದೆ. ಕೋಮುಗಲಭೆಗಳನ್ನು ದೇಶದ ತುಂಬೆಲ್ಲ ಎರಚಾಡಿ, ಸತ್ತವರ ಹೆಣದ ಮೇಲೆ ತಟ್ಟೆಯಿಟ್ಟುಕೊಂಡು ಅಧಿಕಾರ ಸವಿಯುತ್ತಿರೋ ಪೆಕರು ಪಡಪೋಶಿಗಳ ಪಕ್ಷದಲ್ಲಿದ್ದು, ತನ್ನ ತಟ್ಟೆಯಲ್ಲಿ ಕುದುರೆ ಸತ್ತುಬಿದ್ದಿದ್ದರೂ ಕಂಡವರ ತಟ್ಟೆಯಲ್ಲಿ ಅಮೀಬಾ ಹುಡುಕುವ ಈ ಮತಿಗೇಡಿ ಮಹಿಳೆಗೆ ತಲೆ ಎಂಬುದು ಇದೆಯೇ ಇಲ್ಲವೇ ಎಂಬುದು ಈಗ ಚರ್ಚಾಸ್ಪದ ಸಂಗತಿಯಾಗಿದೆ. ಅತ್ತ ಚೀನಾದೇಶವು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ರಾಜಾರೋಷವಾಗಿ ಬಂಕರ್‍ಗಳನ್ನು ಕಟ್ಟಿಕೊಂಡು ಪಾಕ್ ಜೊತೆ ಜಂಟಿ ಸಮರಾಭ್ಯಾಸ ನಡೆಸುತ್ತಿದ್ದರೆ, ಆ ಅಪಾಯದ ಬಗ್ಗೆ ಕಿಂಚಿತ್ ಗ್ಯಾನವಿಲ್ಲದ ಈ ಮೂರ್ಖಮ್ಮನಿಗೆ ‘ಬಾಯಿಗೆ ಬಂದಂಗೆ ಮಾತಾಡಿಕೊಂಡು ಎಲ್ಲರಿಂದ ಉಗಿಸಿಕೊಳ್ಳುವುದೇ’ ಪ್ರಿಯವಾಗಿರುವುದು ದುರಂತ.

*****

ತರೀಕೆರೆಯ ರೈತರು ತಮ್ಮ ಹೊಲಗದ್ದೆಗಳಿಗೆ ಕಂಟಕಪ್ರಾಯವಾಗಿದ್ದ ಕಾಡುಪ್ರಾಣಿಗಳನ್ನು ಓಡಿಸಲು ಬ್ಲೂಜೆಪಿ ಪಕ್ಷದ ನ್ಯಾಷನಲ್ ಲೀಡರುಗಳ ಕಟೌಟ್‍ಗಳನ್ನು ಹೊಲದಲ್ಲಿ ನೆಟ್ಟು ಪ್ರಾಣಿಕಾಟದಿಂದ ಮುಕ್ತರಾಗಿದ್ದಾರೆ. ಸತ್ತು ಕೊಳೆತ ಘೇಂಡಾಮೃಗದಂತೆ ಕಾಣುವ ‘ಹಮಿತ್ ಶಾ’, ವಯಸ್ಸಾದ ಓತಿಕ್ಯಾತಕ್ಕೆ ಬಿಳಿ ಗಡ್ಡಮೀಸೆ ಬಂದಂತೆ ಕಾಣುವ ಪಕೋಡತಾತ, ಅಡುಗೂಲಜ್ಜಿ ಮುದುಕಿಗೆ ಬಿಳಿ ಪ್ಯಾಂಟು ಶರ್ಟು ಹಾಕಿದಂತೆ ಕಾಡುವ ‘ ಧಡಿಯೂರಪ್ಲ’ನ ಕಟೌಟುಗಳ ಮುಸುಡಿಗಳನ್ನು ಕಂಡು ಹೆದರಿದ ಹೊಲ ಮೇಯಲು ಬರುವ ಕಾಡುಹಂದಿ, ಸಿಂಗಳೀಕ, ಮುಸಿಯ, ಕಾಡೆಮ್ಮೆಗಳು ಉಚ್ಚೆ ಹೊಯ್ದುಕೊಂಡು ವಾಪಸ್ ಕಾಡೊಳಗೆ ಓಡಿ ಹೋಗುತ್ತಿರುವುದು ರೈತರ ಸಂತೋಷಕ್ಕೆ ಕಾರಣವಾಗಿದೆ. ಜನರಿಗಂತೂ ಈ ಕಟೌಟ್ ಮುಷಂಡಿಗಳಿಂದ ಮೂರುಕಾಸಿನ ಪ್ರಯೋಜನ ಇಲ್ಲ, ಕೊನೇಪಕ್ಷ ಕಾಡುಪ್ರಾಣಿಗಳಿಗೆ ಉಚ್ಚೆ ಹುಯ್ಯಿಸಲಾದರೂ ಈ ಕ್ರಿಮಿಗಳು ಬಳಕೆಯಾದವಲ್ಲ ಎಂದು ಗಬ್ಲಿಕ್ ಟಿವಿ ರಂಗಣ್ಣ ಗೊಳೋ ಎಂದು ಅಳುತ್ತ ಕುಳಿತಿದ್ದಾರಂತೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಬೇಟಿ ಮುಂದಿನವಾರ. ಅಲ್ಲೀತನಕ ನೀವೂ ನೆಮ್ದಿಯಾಗಿರಿ, ನಾವೂ ನೆಮ್ದಿಯಾಗಿರುತ್ತೇವೆ
ಅಂತ ಹೇಳುತ್ತ, ವಾರ್ತಾಪ್ರಸಾರಕ್ಕೆ ಮಂಗಳ ಹಾಡುತ್ತಿದ್ದೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...