Homeಅಂಕಣಗಳುಆಘಾತವಾಣಿ | ಅಟ್ಯಾಕ್ ಹನ್ಮಂತರಾಜ್ಯ ಎಲ್ಡು ಭಾಗ ಆಗ್ಲಿ, ಒಂದು ಭಾಗದ ಖಾತೆಪಾಣಿ ನನ್ನಪ್ಪನ ಹೆಸರಿನ್ಯಾಗೆ ಐತೆ....

ರಾಜ್ಯ ಎಲ್ಡು ಭಾಗ ಆಗ್ಲಿ, ಒಂದು ಭಾಗದ ಖಾತೆಪಾಣಿ ನನ್ನಪ್ಪನ ಹೆಸರಿನ್ಯಾಗೆ ಐತೆ….

- Advertisement -
- Advertisement -

ಕೇಳುಗರಿಗೆಲ್ಲ ಸ್ವಾಗತ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ..
ಕಟ್ಟುಮಸ್ತಾದ ದೇಹದವರು ಕಂಡರೆ ಕಿಯ್ಯೋ ಕಿಯ್ಯೋ ಎಂದು ಕಿರುಚಾಡಿಕೊಂಡು ಓಡಿಹೋಗುವ ಬ್ಲೂಜೆಪಿ ಪಕ್ಷದ ಕಾರ್ಯಕರ್ತರು ಮತ್ತು ಅಖಿಲಭಾರತ ಉಂಡಾಡಿಗುಂಡರ ಪರಿಷತ್ತಿನ ಪುಕ್ಕಲರ ರಣಹೇಡಿ ಕೃತ್ಯವೊಂದು ಬಯಲಾಗಿದೆ. ಜಾರ್ಖಂಡ್‍ನಲ್ಲಿ ಭಾಷಣವೊಂದನ್ನು ಮುಗಿಸಿ ಬರುತ್ತಿದ್ದ ಸ್ವಾಮಿ ಅಗ್ನಿವೇಶ್ ಎಂಬ 80 ವರ್ಷದ ಇಳಿವೃದ್ಧ ಹೋರಾಟಗಾರರ ಮೇಲೆ ಬ್ಲೂಜೆಪಿಯ ಸಣಕಲುತೊಡೆಯ ಕೋಡಂಗಿಗಳು ಮುಗಿಬಿದ್ದು ಹಲ್ಲೆ ನಡೆಸಿವೆ. ವೃದ್ಧರು, ಮಹಿಳೆಯರನ್ನು ಕಂಡರೆ ಇದ್ದಕ್ಕಿದ್ದಂತೆ ಗಂಡಸರಾಗುವ ಈ ಕ್ರಿಮಿಗಳು ಮತ್ತು ಹುಳಹುಪ್ಪಟೆಗಳ ಪಡೆಯು ಹೊಡೆಯುವುದು ಬಡಿಯುವುದು ಮಾಡುವುದು ಈ ದೇಶದಲ್ಲಿ ಸಾಮಾನ್ಯವಾಗಿ ಹೋಗಿದೆ. ಈ ಲಂಪಟಕ್ರಿಮಿಗಳ ಅನಧಿಕೃತ ಪಿತಾಶ್ರೀ ಬ್ಲೂಜೆಪಿಯ ಪಿಶಾಚಿ ನಾಯಕರು ಮತ್ತವರ ಪುಕ್ಕಲು ಮುದುಕ ಮಾತ್ರ ಈ ಬಗ್ಗೆ ಕ್ಯಾರೆ ಕೆತ್ತ ಎನ್ನದೆ ಗಂಟಲಿಗೆ ಸೋರೆಕಾಯಿ ಸಿಗಿಸಿಕೊಂಡು ನಸುಗುನ್ನಿಗಳಂತೆ ಸುಮ್ಮನಿರುವುದು ಮೂರೂಬಿಟ್ಟವರಿಗಿಂತ ಕಡೆಯಾಗಿ ಕಾಣುತ್ತಿರುವುದು ಈ ದೇಶದ ವಾಸ್ತವ.
*****
ಬಾಯಿ ಬಿಟ್ಟರೆ ಸುಳ್ಳುಗಳ ಚರಂಡಿಯನ್ನೇ ಹರಿಸುವ ಅರಳುಮರುಳು ಲೂಸು ಗಿರಾಕಿ ಫಕೀರಪ್ಪನ ಸುಳ್ಳಿನ ಹೊಡೆತ ತಾಳಲಾಗದೆ ಅವನು ಭಾಷಣ ಮಾಡುತ್ತಿದ್ದ ಪೆಂಡಾಲೇ ಸಭಿಕರ ತಲೆಯ ಮೇಲೆ ಧುಡುಮ್ಮನೆ ಕುಸಿದು ಬಿದ್ದಿರುವ ಘಟನೆ ವರದಿಯಾಗಿದೆ. ಪೆಂಡಾಲ್ ಕುಸಿದ ಮೇಲೂ ತನ್ನ ಕೊಳಕುಬಾಯಿಯ ದರಿದ್ರ ಭಾಷಣವನ್ನು ನಿಲ್ಲಿಸದ ಲೂಸ್ ಗಿರಾಕಿ ಫಕೀರಪ್ಪನು ಯಾರ್ ಸತ್ರೆ ನಂಗೇನು ಎಂದು ಕಯೋ ಕಯೋ ಕಯ್ಯಯ್ಯೋ ಅಂತ ಸುಳ್ಳು ಬೊಗಳುತ್ತಲೇ ಇದ್ದನೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
*****
ಇದೀಗ ಬಂದ ಸುದ್ದಿ, ತಲೆಕೆಟ್ಟ ಬೀದಿ ಭಿಕಾರಿಯಂತೆ ಐದೂವರೆ ಅಡಿ ಗಡ್ಡ ಬೆಳೆಸಿಕೊಂಡು ಪೋಲಿ ತಿರುಗುವ ‘ಅಂದ್ರುಗಿನ ಸ್ತ್ರೀ ರಾಮುಲು’ ಈಗ ಹೊಸದಾಗಿ ಇನ್ನೊಂದು ಕಲ್ ಚಪ್ಪಡಿ ತಗೊಂಡು ಹೊಟ್ಟೆ ಮೇಲೆ ಎತ್ತಾಕಿಕೊಂಡಿದ್ದಾನೆ. ಕರ್ನಾಟಕ ನಮ್ಮಪ್ಪನ ಮನೆ ಆಸ್ತಿ, ಅದರ ಮೇಲೆ ನಾನು ಖಾತೆಪಾಣಿ ಮಾಡಿಸ್ಕೊಂಡಿದೀನಿ, ಆದ್ರಿಂದ ರಾಜ್ಯ ಎರಡು ಭಾಗ ಆಗಬೇಕು, ಒಂದು ಭಾಗದಲ್ಲಿ ಯಾರಾದ್ರೂ ಇದ್ಕೊಳ್ಳಿ, ಇನ್ನೊಂದು ಭಾಗವನ್ನ ನಾನು ‘ಟೋಫನ್ ತಲೆ ರೆಡ್ಡಿ’ ಇಬ್ರೂ ಹಂಚಿಕೊಂಡು ಉಪ್ಪಿನಕಾಯ್ ಹಾಕ್ಕೊಂಡು ನೆಕ್ಕೋತೀವಿ ಅಂತ ‘ಸ್ತ್ರೀ ರಾಮುಲು’ ಬೊಗಳಿದೆ. ಮಾತೆತ್ತಿದರೆ ನಮ್ದು ಅಖಂಡ ಭಾರತ, ಜಗತ್ತಲ್ಲಿರೋ ಎಲ್ಲ ದೇಶಗಳೂ ಭಾರತಕ್ಕೇ ಸೇರಬೇಕು ಅಂತ ಗಂಟಲು ಹರಿದುಕೊಳ್ಳೋ ಬ್ಲೂಜೆಪಿ ಪಕ್ಷದಲ್ಲಿದ್ದು, ಇಂತಹ ರಾಜ್ಯ ಒಡೆಯುವ ನಮಕ್ ಹರಾಮ್ ಕೆಲಸಕ್ಕೆ ಸಪೋರ್ಟ್ ಮಾಡ್ತೀನಿ ಅಂದ ರಾಮುಲುಗೆ ಈಗ ಜೀವಭಯ ಎದುರಾಗಿ ಹಾರ್ಟು ‘ಚುಟು ಚುಟು, ಚುಮು ಚುಮು’ ಅಂತಾ ಇದೆಯಂತೆ. ಚಳ್ಳಕೆರೆ ಕಡೆಯ ಕನ್ನಡಪರ ಹೋರಾಟಗಾರರು “ರಾಮುಲು ಎಲ್ಲೇ ಕಂಡರೂ ಅವನ ಮುಖವೇ ಹೂತುಹೋಗಿರೋ ಗಡ್ಡಕ್ಕೆ ಸೀಮೆಣ್ಣೆ ಎರಚಿ ಬೆಂಕಿ ಹಚ್ಚಿ, ಸುಟ್ಟ ಗಡ್ಡದ ಬೂದಿಯನ್ನ ಅವನಿಗೇ ತಿನ್ನಿಸ್ತೀವಿ ಅಂತ “ ಇನ್ನೂ ಬೆದರಿಕೆ ಹಾಕಿಲ್ಲವೆಂದು ತಿಳಿದು ಬಂದಿದೆ.
*****
ಸಾವಿರಾರು ವರ್ಷಗಳಿಂದ ಮೈಬಗ್ಗಿಸಿ ದುಡಿದು ತಿಂದು ಗೊತ್ತೇ ಇರದ ಸನಾತನಿ ಶನಿಗಳು, ಕಳೆದ 30 ವರ್ಷಗಳಿಂದ ಶ್ರೀರಾಮನಿಗೆ ಗುಡಿ ಕಟ್ಟುವ ಟಪಾಸ್ ಅಡ್ವೆಂಚರ್ ಮಾಡುತ್ತ ತಿರುಗುತ್ತಿರುವುದು ನಿಮಗೆ ಗೊತ್ತೇ ಇದೆ. ಈ ಅಡ್ವೆಂಚರ್‍ನಲ್ಲಿ ಮಂಚೂಣಿಯಲ್ಲಿದ್ದ ಸಂಘಟನೆಗಳಲ್ಲಿ ಒಂದಾದ ‘ನಿರ್ಮೋಹಿ ಮಂಚ್’ ಸಂಘಟನೆಯು ರಾಮನಗುಡಿ ಕಟ್ತೇವೆಂದು ಸಾವಿರಾರು ಕೋಟಿ ಚಂದಾ ಎತ್ತಿದ ವಿ.ಹೆಚ್.ಪಿಯು ಆ ಹಣದಲ್ಲಿ ಒಂದು ಇಟ್ಟಿಗೆಯನ್ನೂ ಖರೀದಿಸದೆ ಇಡೀ ಚಂದಾಹಣವನ್ನು ಮುಂಡಾ ಮೋಚಿದೆಯೆಂದು ಆಕ್ರೋಶ ವ್ಯಕ್ತಪಡಿಸಿದೆ. ಇದು ಒಂದು ಕಡೆಯಿರುವಾಗ ಇನ್ನೊಂದು ಕಡೆಯಲ್ಲಿ 2019ರ ಎಲೆಕ್ಷನ್ನಿಗೆ ಮುಂಚೆ ರಾಮನಗುಡಿ ಕಟ್ತೀವಿ ಅಂತ ಹೇಳಿಕೆ ಕೊಟ್ಟ ಗುಜರಾತಿನ ಹಳೇ ಕ್ರಿಮಿನಲ್ ಪಂಟರ್ ‘ಹಮಿತ್ ಶಾ’ ಗಂಟಲಿಗೆ ಬ್ಲೂಜೆಪಿ ಪಕ್ಷ ತನ್ನ ಬಲಗಾಲನ್ನು ತುರುಕಿ ಬಾಯಿ ಮುಚ್ಚಿಸುವ ಪ್ರಯತ್ನ ನಡೆಸಿದೆ. ಈ ಬೋಡಗುಂಡನ ಮಾತು ನಂಬಬೇಡಿ, ರಾತ್ರಿ ಹೊಡೆದ ಬಿಟ್ಟಿ ಎಣ್ಣೆ ಏಟಲ್ಲಿ ಹಿಂಗೆಲ್ಲ ವದರವ್ನೆ, ಇವನ ಮಾನಸಿಕ ಸ್ಥಿತಿ ಡೋಲಾಯಮಾನವಾಗಿದೆಯೆಂದು ಸ್ಪಷ್ಟನೆ ಕೊಟ್ಟಿದೆ. ಅಂದಹಾಗೆ, ಇವರ ರಾಮನಗುಡಿ ಅಡ್ವೆಂಚರ್ ಮುಂದಿನ 500 ವರ್ಷಕ್ಕೂ ಮುಂದುವರೆಯಲಿದೆ ಎಂಬುದು ಜನತೆಗೆ ಸ್ಪಷ್ಟವಾಗಿದೆ.
*****
ದೇಶದ ರಕ್ಷಣಾ ಢಾಕಿಣಿ, ಅಲ್ಲಲ್ಲ ಮಂತ್ರಿಣಿಯಾದ ‘ನಿರ್ಮಲಾ ರಾಮಸೀತನ್’ ಎಂಬ ಮಧ್ಯವಯಸ್ಕ ಮಹಿಳೆಯು.. ಲೋಕಸಭೆ ಚುನಾವಣೆಗಿಂತ ಮುಂಚೆ ಕಾಂಗ್ರೆಸ್ ದೇಶದಲ್ಲಿ ಕೋಮು ಗಲಭೆಗಳನ್ನು ಹುಟ್ಟು ಹಾಕುವ ಸಂಚು ಮಾಡುತ್ತಿದೆಯೆಂದು ಹಾಸ್ಯಾಸ್ಪದ ಹೇಳಿಕೆಯೊಂದನ್ನು ಕೊಟ್ಟಿದೆ. ಕೋಮುಗಲಭೆಗಳನ್ನು ದೇಶದ ತುಂಬೆಲ್ಲ ಎರಚಾಡಿ, ಸತ್ತವರ ಹೆಣದ ಮೇಲೆ ತಟ್ಟೆಯಿಟ್ಟುಕೊಂಡು ಅಧಿಕಾರ ಸವಿಯುತ್ತಿರೋ ಪೆಕರು ಪಡಪೋಶಿಗಳ ಪಕ್ಷದಲ್ಲಿದ್ದು, ತನ್ನ ತಟ್ಟೆಯಲ್ಲಿ ಕುದುರೆ ಸತ್ತುಬಿದ್ದಿದ್ದರೂ ಕಂಡವರ ತಟ್ಟೆಯಲ್ಲಿ ಅಮೀಬಾ ಹುಡುಕುವ ಈ ಮತಿಗೇಡಿ ಮಹಿಳೆಗೆ ತಲೆ ಎಂಬುದು ಇದೆಯೇ ಇಲ್ಲವೇ ಎಂಬುದು ಈಗ ಚರ್ಚಾಸ್ಪದ ಸಂಗತಿಯಾಗಿದೆ. ಅತ್ತ ಚೀನಾದೇಶವು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ರಾಜಾರೋಷವಾಗಿ ಬಂಕರ್‍ಗಳನ್ನು ಕಟ್ಟಿಕೊಂಡು ಪಾಕ್ ಜೊತೆ ಜಂಟಿ ಸಮರಾಭ್ಯಾಸ ನಡೆಸುತ್ತಿದ್ದರೆ, ಆ ಅಪಾಯದ ಬಗ್ಗೆ ಕಿಂಚಿತ್ ಗ್ಯಾನವಿಲ್ಲದ ಈ ಮೂರ್ಖಮ್ಮನಿಗೆ ‘ಬಾಯಿಗೆ ಬಂದಂಗೆ ಮಾತಾಡಿಕೊಂಡು ಎಲ್ಲರಿಂದ ಉಗಿಸಿಕೊಳ್ಳುವುದೇ’ ಪ್ರಿಯವಾಗಿರುವುದು ದುರಂತ.

*****

ತರೀಕೆರೆಯ ರೈತರು ತಮ್ಮ ಹೊಲಗದ್ದೆಗಳಿಗೆ ಕಂಟಕಪ್ರಾಯವಾಗಿದ್ದ ಕಾಡುಪ್ರಾಣಿಗಳನ್ನು ಓಡಿಸಲು ಬ್ಲೂಜೆಪಿ ಪಕ್ಷದ ನ್ಯಾಷನಲ್ ಲೀಡರುಗಳ ಕಟೌಟ್‍ಗಳನ್ನು ಹೊಲದಲ್ಲಿ ನೆಟ್ಟು ಪ್ರಾಣಿಕಾಟದಿಂದ ಮುಕ್ತರಾಗಿದ್ದಾರೆ. ಸತ್ತು ಕೊಳೆತ ಘೇಂಡಾಮೃಗದಂತೆ ಕಾಣುವ ‘ಹಮಿತ್ ಶಾ’, ವಯಸ್ಸಾದ ಓತಿಕ್ಯಾತಕ್ಕೆ ಬಿಳಿ ಗಡ್ಡಮೀಸೆ ಬಂದಂತೆ ಕಾಣುವ ಪಕೋಡತಾತ, ಅಡುಗೂಲಜ್ಜಿ ಮುದುಕಿಗೆ ಬಿಳಿ ಪ್ಯಾಂಟು ಶರ್ಟು ಹಾಕಿದಂತೆ ಕಾಡುವ ‘ ಧಡಿಯೂರಪ್ಲ’ನ ಕಟೌಟುಗಳ ಮುಸುಡಿಗಳನ್ನು ಕಂಡು ಹೆದರಿದ ಹೊಲ ಮೇಯಲು ಬರುವ ಕಾಡುಹಂದಿ, ಸಿಂಗಳೀಕ, ಮುಸಿಯ, ಕಾಡೆಮ್ಮೆಗಳು ಉಚ್ಚೆ ಹೊಯ್ದುಕೊಂಡು ವಾಪಸ್ ಕಾಡೊಳಗೆ ಓಡಿ ಹೋಗುತ್ತಿರುವುದು ರೈತರ ಸಂತೋಷಕ್ಕೆ ಕಾರಣವಾಗಿದೆ. ಜನರಿಗಂತೂ ಈ ಕಟೌಟ್ ಮುಷಂಡಿಗಳಿಂದ ಮೂರುಕಾಸಿನ ಪ್ರಯೋಜನ ಇಲ್ಲ, ಕೊನೇಪಕ್ಷ ಕಾಡುಪ್ರಾಣಿಗಳಿಗೆ ಉಚ್ಚೆ ಹುಯ್ಯಿಸಲಾದರೂ ಈ ಕ್ರಿಮಿಗಳು ಬಳಕೆಯಾದವಲ್ಲ ಎಂದು ಗಬ್ಲಿಕ್ ಟಿವಿ ರಂಗಣ್ಣ ಗೊಳೋ ಎಂದು ಅಳುತ್ತ ಕುಳಿತಿದ್ದಾರಂತೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಬೇಟಿ ಮುಂದಿನವಾರ. ಅಲ್ಲೀತನಕ ನೀವೂ ನೆಮ್ದಿಯಾಗಿರಿ, ನಾವೂ ನೆಮ್ದಿಯಾಗಿರುತ್ತೇವೆ
ಅಂತ ಹೇಳುತ್ತ, ವಾರ್ತಾಪ್ರಸಾರಕ್ಕೆ ಮಂಗಳ ಹಾಡುತ್ತಿದ್ದೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...