Homeಅಂಕಣಗಳುಆಘಾತವಾಣಿ | ಅಟ್ಯಾಕ್ ಹನ್ಮಂತರಾಜ್ಯ ಎಲ್ಡು ಭಾಗ ಆಗ್ಲಿ, ಒಂದು ಭಾಗದ ಖಾತೆಪಾಣಿ ನನ್ನಪ್ಪನ ಹೆಸರಿನ್ಯಾಗೆ ಐತೆ....

ರಾಜ್ಯ ಎಲ್ಡು ಭಾಗ ಆಗ್ಲಿ, ಒಂದು ಭಾಗದ ಖಾತೆಪಾಣಿ ನನ್ನಪ್ಪನ ಹೆಸರಿನ್ಯಾಗೆ ಐತೆ….

- Advertisement -
- Advertisement -

ಕೇಳುಗರಿಗೆಲ್ಲ ಸ್ವಾಗತ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ..
ಕಟ್ಟುಮಸ್ತಾದ ದೇಹದವರು ಕಂಡರೆ ಕಿಯ್ಯೋ ಕಿಯ್ಯೋ ಎಂದು ಕಿರುಚಾಡಿಕೊಂಡು ಓಡಿಹೋಗುವ ಬ್ಲೂಜೆಪಿ ಪಕ್ಷದ ಕಾರ್ಯಕರ್ತರು ಮತ್ತು ಅಖಿಲಭಾರತ ಉಂಡಾಡಿಗುಂಡರ ಪರಿಷತ್ತಿನ ಪುಕ್ಕಲರ ರಣಹೇಡಿ ಕೃತ್ಯವೊಂದು ಬಯಲಾಗಿದೆ. ಜಾರ್ಖಂಡ್‍ನಲ್ಲಿ ಭಾಷಣವೊಂದನ್ನು ಮುಗಿಸಿ ಬರುತ್ತಿದ್ದ ಸ್ವಾಮಿ ಅಗ್ನಿವೇಶ್ ಎಂಬ 80 ವರ್ಷದ ಇಳಿವೃದ್ಧ ಹೋರಾಟಗಾರರ ಮೇಲೆ ಬ್ಲೂಜೆಪಿಯ ಸಣಕಲುತೊಡೆಯ ಕೋಡಂಗಿಗಳು ಮುಗಿಬಿದ್ದು ಹಲ್ಲೆ ನಡೆಸಿವೆ. ವೃದ್ಧರು, ಮಹಿಳೆಯರನ್ನು ಕಂಡರೆ ಇದ್ದಕ್ಕಿದ್ದಂತೆ ಗಂಡಸರಾಗುವ ಈ ಕ್ರಿಮಿಗಳು ಮತ್ತು ಹುಳಹುಪ್ಪಟೆಗಳ ಪಡೆಯು ಹೊಡೆಯುವುದು ಬಡಿಯುವುದು ಮಾಡುವುದು ಈ ದೇಶದಲ್ಲಿ ಸಾಮಾನ್ಯವಾಗಿ ಹೋಗಿದೆ. ಈ ಲಂಪಟಕ್ರಿಮಿಗಳ ಅನಧಿಕೃತ ಪಿತಾಶ್ರೀ ಬ್ಲೂಜೆಪಿಯ ಪಿಶಾಚಿ ನಾಯಕರು ಮತ್ತವರ ಪುಕ್ಕಲು ಮುದುಕ ಮಾತ್ರ ಈ ಬಗ್ಗೆ ಕ್ಯಾರೆ ಕೆತ್ತ ಎನ್ನದೆ ಗಂಟಲಿಗೆ ಸೋರೆಕಾಯಿ ಸಿಗಿಸಿಕೊಂಡು ನಸುಗುನ್ನಿಗಳಂತೆ ಸುಮ್ಮನಿರುವುದು ಮೂರೂಬಿಟ್ಟವರಿಗಿಂತ ಕಡೆಯಾಗಿ ಕಾಣುತ್ತಿರುವುದು ಈ ದೇಶದ ವಾಸ್ತವ.
*****
ಬಾಯಿ ಬಿಟ್ಟರೆ ಸುಳ್ಳುಗಳ ಚರಂಡಿಯನ್ನೇ ಹರಿಸುವ ಅರಳುಮರುಳು ಲೂಸು ಗಿರಾಕಿ ಫಕೀರಪ್ಪನ ಸುಳ್ಳಿನ ಹೊಡೆತ ತಾಳಲಾಗದೆ ಅವನು ಭಾಷಣ ಮಾಡುತ್ತಿದ್ದ ಪೆಂಡಾಲೇ ಸಭಿಕರ ತಲೆಯ ಮೇಲೆ ಧುಡುಮ್ಮನೆ ಕುಸಿದು ಬಿದ್ದಿರುವ ಘಟನೆ ವರದಿಯಾಗಿದೆ. ಪೆಂಡಾಲ್ ಕುಸಿದ ಮೇಲೂ ತನ್ನ ಕೊಳಕುಬಾಯಿಯ ದರಿದ್ರ ಭಾಷಣವನ್ನು ನಿಲ್ಲಿಸದ ಲೂಸ್ ಗಿರಾಕಿ ಫಕೀರಪ್ಪನು ಯಾರ್ ಸತ್ರೆ ನಂಗೇನು ಎಂದು ಕಯೋ ಕಯೋ ಕಯ್ಯಯ್ಯೋ ಅಂತ ಸುಳ್ಳು ಬೊಗಳುತ್ತಲೇ ಇದ್ದನೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
*****
ಇದೀಗ ಬಂದ ಸುದ್ದಿ, ತಲೆಕೆಟ್ಟ ಬೀದಿ ಭಿಕಾರಿಯಂತೆ ಐದೂವರೆ ಅಡಿ ಗಡ್ಡ ಬೆಳೆಸಿಕೊಂಡು ಪೋಲಿ ತಿರುಗುವ ‘ಅಂದ್ರುಗಿನ ಸ್ತ್ರೀ ರಾಮುಲು’ ಈಗ ಹೊಸದಾಗಿ ಇನ್ನೊಂದು ಕಲ್ ಚಪ್ಪಡಿ ತಗೊಂಡು ಹೊಟ್ಟೆ ಮೇಲೆ ಎತ್ತಾಕಿಕೊಂಡಿದ್ದಾನೆ. ಕರ್ನಾಟಕ ನಮ್ಮಪ್ಪನ ಮನೆ ಆಸ್ತಿ, ಅದರ ಮೇಲೆ ನಾನು ಖಾತೆಪಾಣಿ ಮಾಡಿಸ್ಕೊಂಡಿದೀನಿ, ಆದ್ರಿಂದ ರಾಜ್ಯ ಎರಡು ಭಾಗ ಆಗಬೇಕು, ಒಂದು ಭಾಗದಲ್ಲಿ ಯಾರಾದ್ರೂ ಇದ್ಕೊಳ್ಳಿ, ಇನ್ನೊಂದು ಭಾಗವನ್ನ ನಾನು ‘ಟೋಫನ್ ತಲೆ ರೆಡ್ಡಿ’ ಇಬ್ರೂ ಹಂಚಿಕೊಂಡು ಉಪ್ಪಿನಕಾಯ್ ಹಾಕ್ಕೊಂಡು ನೆಕ್ಕೋತೀವಿ ಅಂತ ‘ಸ್ತ್ರೀ ರಾಮುಲು’ ಬೊಗಳಿದೆ. ಮಾತೆತ್ತಿದರೆ ನಮ್ದು ಅಖಂಡ ಭಾರತ, ಜಗತ್ತಲ್ಲಿರೋ ಎಲ್ಲ ದೇಶಗಳೂ ಭಾರತಕ್ಕೇ ಸೇರಬೇಕು ಅಂತ ಗಂಟಲು ಹರಿದುಕೊಳ್ಳೋ ಬ್ಲೂಜೆಪಿ ಪಕ್ಷದಲ್ಲಿದ್ದು, ಇಂತಹ ರಾಜ್ಯ ಒಡೆಯುವ ನಮಕ್ ಹರಾಮ್ ಕೆಲಸಕ್ಕೆ ಸಪೋರ್ಟ್ ಮಾಡ್ತೀನಿ ಅಂದ ರಾಮುಲುಗೆ ಈಗ ಜೀವಭಯ ಎದುರಾಗಿ ಹಾರ್ಟು ‘ಚುಟು ಚುಟು, ಚುಮು ಚುಮು’ ಅಂತಾ ಇದೆಯಂತೆ. ಚಳ್ಳಕೆರೆ ಕಡೆಯ ಕನ್ನಡಪರ ಹೋರಾಟಗಾರರು “ರಾಮುಲು ಎಲ್ಲೇ ಕಂಡರೂ ಅವನ ಮುಖವೇ ಹೂತುಹೋಗಿರೋ ಗಡ್ಡಕ್ಕೆ ಸೀಮೆಣ್ಣೆ ಎರಚಿ ಬೆಂಕಿ ಹಚ್ಚಿ, ಸುಟ್ಟ ಗಡ್ಡದ ಬೂದಿಯನ್ನ ಅವನಿಗೇ ತಿನ್ನಿಸ್ತೀವಿ ಅಂತ “ ಇನ್ನೂ ಬೆದರಿಕೆ ಹಾಕಿಲ್ಲವೆಂದು ತಿಳಿದು ಬಂದಿದೆ.
*****
ಸಾವಿರಾರು ವರ್ಷಗಳಿಂದ ಮೈಬಗ್ಗಿಸಿ ದುಡಿದು ತಿಂದು ಗೊತ್ತೇ ಇರದ ಸನಾತನಿ ಶನಿಗಳು, ಕಳೆದ 30 ವರ್ಷಗಳಿಂದ ಶ್ರೀರಾಮನಿಗೆ ಗುಡಿ ಕಟ್ಟುವ ಟಪಾಸ್ ಅಡ್ವೆಂಚರ್ ಮಾಡುತ್ತ ತಿರುಗುತ್ತಿರುವುದು ನಿಮಗೆ ಗೊತ್ತೇ ಇದೆ. ಈ ಅಡ್ವೆಂಚರ್‍ನಲ್ಲಿ ಮಂಚೂಣಿಯಲ್ಲಿದ್ದ ಸಂಘಟನೆಗಳಲ್ಲಿ ಒಂದಾದ ‘ನಿರ್ಮೋಹಿ ಮಂಚ್’ ಸಂಘಟನೆಯು ರಾಮನಗುಡಿ ಕಟ್ತೇವೆಂದು ಸಾವಿರಾರು ಕೋಟಿ ಚಂದಾ ಎತ್ತಿದ ವಿ.ಹೆಚ್.ಪಿಯು ಆ ಹಣದಲ್ಲಿ ಒಂದು ಇಟ್ಟಿಗೆಯನ್ನೂ ಖರೀದಿಸದೆ ಇಡೀ ಚಂದಾಹಣವನ್ನು ಮುಂಡಾ ಮೋಚಿದೆಯೆಂದು ಆಕ್ರೋಶ ವ್ಯಕ್ತಪಡಿಸಿದೆ. ಇದು ಒಂದು ಕಡೆಯಿರುವಾಗ ಇನ್ನೊಂದು ಕಡೆಯಲ್ಲಿ 2019ರ ಎಲೆಕ್ಷನ್ನಿಗೆ ಮುಂಚೆ ರಾಮನಗುಡಿ ಕಟ್ತೀವಿ ಅಂತ ಹೇಳಿಕೆ ಕೊಟ್ಟ ಗುಜರಾತಿನ ಹಳೇ ಕ್ರಿಮಿನಲ್ ಪಂಟರ್ ‘ಹಮಿತ್ ಶಾ’ ಗಂಟಲಿಗೆ ಬ್ಲೂಜೆಪಿ ಪಕ್ಷ ತನ್ನ ಬಲಗಾಲನ್ನು ತುರುಕಿ ಬಾಯಿ ಮುಚ್ಚಿಸುವ ಪ್ರಯತ್ನ ನಡೆಸಿದೆ. ಈ ಬೋಡಗುಂಡನ ಮಾತು ನಂಬಬೇಡಿ, ರಾತ್ರಿ ಹೊಡೆದ ಬಿಟ್ಟಿ ಎಣ್ಣೆ ಏಟಲ್ಲಿ ಹಿಂಗೆಲ್ಲ ವದರವ್ನೆ, ಇವನ ಮಾನಸಿಕ ಸ್ಥಿತಿ ಡೋಲಾಯಮಾನವಾಗಿದೆಯೆಂದು ಸ್ಪಷ್ಟನೆ ಕೊಟ್ಟಿದೆ. ಅಂದಹಾಗೆ, ಇವರ ರಾಮನಗುಡಿ ಅಡ್ವೆಂಚರ್ ಮುಂದಿನ 500 ವರ್ಷಕ್ಕೂ ಮುಂದುವರೆಯಲಿದೆ ಎಂಬುದು ಜನತೆಗೆ ಸ್ಪಷ್ಟವಾಗಿದೆ.
*****
ದೇಶದ ರಕ್ಷಣಾ ಢಾಕಿಣಿ, ಅಲ್ಲಲ್ಲ ಮಂತ್ರಿಣಿಯಾದ ‘ನಿರ್ಮಲಾ ರಾಮಸೀತನ್’ ಎಂಬ ಮಧ್ಯವಯಸ್ಕ ಮಹಿಳೆಯು.. ಲೋಕಸಭೆ ಚುನಾವಣೆಗಿಂತ ಮುಂಚೆ ಕಾಂಗ್ರೆಸ್ ದೇಶದಲ್ಲಿ ಕೋಮು ಗಲಭೆಗಳನ್ನು ಹುಟ್ಟು ಹಾಕುವ ಸಂಚು ಮಾಡುತ್ತಿದೆಯೆಂದು ಹಾಸ್ಯಾಸ್ಪದ ಹೇಳಿಕೆಯೊಂದನ್ನು ಕೊಟ್ಟಿದೆ. ಕೋಮುಗಲಭೆಗಳನ್ನು ದೇಶದ ತುಂಬೆಲ್ಲ ಎರಚಾಡಿ, ಸತ್ತವರ ಹೆಣದ ಮೇಲೆ ತಟ್ಟೆಯಿಟ್ಟುಕೊಂಡು ಅಧಿಕಾರ ಸವಿಯುತ್ತಿರೋ ಪೆಕರು ಪಡಪೋಶಿಗಳ ಪಕ್ಷದಲ್ಲಿದ್ದು, ತನ್ನ ತಟ್ಟೆಯಲ್ಲಿ ಕುದುರೆ ಸತ್ತುಬಿದ್ದಿದ್ದರೂ ಕಂಡವರ ತಟ್ಟೆಯಲ್ಲಿ ಅಮೀಬಾ ಹುಡುಕುವ ಈ ಮತಿಗೇಡಿ ಮಹಿಳೆಗೆ ತಲೆ ಎಂಬುದು ಇದೆಯೇ ಇಲ್ಲವೇ ಎಂಬುದು ಈಗ ಚರ್ಚಾಸ್ಪದ ಸಂಗತಿಯಾಗಿದೆ. ಅತ್ತ ಚೀನಾದೇಶವು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ರಾಜಾರೋಷವಾಗಿ ಬಂಕರ್‍ಗಳನ್ನು ಕಟ್ಟಿಕೊಂಡು ಪಾಕ್ ಜೊತೆ ಜಂಟಿ ಸಮರಾಭ್ಯಾಸ ನಡೆಸುತ್ತಿದ್ದರೆ, ಆ ಅಪಾಯದ ಬಗ್ಗೆ ಕಿಂಚಿತ್ ಗ್ಯಾನವಿಲ್ಲದ ಈ ಮೂರ್ಖಮ್ಮನಿಗೆ ‘ಬಾಯಿಗೆ ಬಂದಂಗೆ ಮಾತಾಡಿಕೊಂಡು ಎಲ್ಲರಿಂದ ಉಗಿಸಿಕೊಳ್ಳುವುದೇ’ ಪ್ರಿಯವಾಗಿರುವುದು ದುರಂತ.

*****

ತರೀಕೆರೆಯ ರೈತರು ತಮ್ಮ ಹೊಲಗದ್ದೆಗಳಿಗೆ ಕಂಟಕಪ್ರಾಯವಾಗಿದ್ದ ಕಾಡುಪ್ರಾಣಿಗಳನ್ನು ಓಡಿಸಲು ಬ್ಲೂಜೆಪಿ ಪಕ್ಷದ ನ್ಯಾಷನಲ್ ಲೀಡರುಗಳ ಕಟೌಟ್‍ಗಳನ್ನು ಹೊಲದಲ್ಲಿ ನೆಟ್ಟು ಪ್ರಾಣಿಕಾಟದಿಂದ ಮುಕ್ತರಾಗಿದ್ದಾರೆ. ಸತ್ತು ಕೊಳೆತ ಘೇಂಡಾಮೃಗದಂತೆ ಕಾಣುವ ‘ಹಮಿತ್ ಶಾ’, ವಯಸ್ಸಾದ ಓತಿಕ್ಯಾತಕ್ಕೆ ಬಿಳಿ ಗಡ್ಡಮೀಸೆ ಬಂದಂತೆ ಕಾಣುವ ಪಕೋಡತಾತ, ಅಡುಗೂಲಜ್ಜಿ ಮುದುಕಿಗೆ ಬಿಳಿ ಪ್ಯಾಂಟು ಶರ್ಟು ಹಾಕಿದಂತೆ ಕಾಡುವ ‘ ಧಡಿಯೂರಪ್ಲ’ನ ಕಟೌಟುಗಳ ಮುಸುಡಿಗಳನ್ನು ಕಂಡು ಹೆದರಿದ ಹೊಲ ಮೇಯಲು ಬರುವ ಕಾಡುಹಂದಿ, ಸಿಂಗಳೀಕ, ಮುಸಿಯ, ಕಾಡೆಮ್ಮೆಗಳು ಉಚ್ಚೆ ಹೊಯ್ದುಕೊಂಡು ವಾಪಸ್ ಕಾಡೊಳಗೆ ಓಡಿ ಹೋಗುತ್ತಿರುವುದು ರೈತರ ಸಂತೋಷಕ್ಕೆ ಕಾರಣವಾಗಿದೆ. ಜನರಿಗಂತೂ ಈ ಕಟೌಟ್ ಮುಷಂಡಿಗಳಿಂದ ಮೂರುಕಾಸಿನ ಪ್ರಯೋಜನ ಇಲ್ಲ, ಕೊನೇಪಕ್ಷ ಕಾಡುಪ್ರಾಣಿಗಳಿಗೆ ಉಚ್ಚೆ ಹುಯ್ಯಿಸಲಾದರೂ ಈ ಕ್ರಿಮಿಗಳು ಬಳಕೆಯಾದವಲ್ಲ ಎಂದು ಗಬ್ಲಿಕ್ ಟಿವಿ ರಂಗಣ್ಣ ಗೊಳೋ ಎಂದು ಅಳುತ್ತ ಕುಳಿತಿದ್ದಾರಂತೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಬೇಟಿ ಮುಂದಿನವಾರ. ಅಲ್ಲೀತನಕ ನೀವೂ ನೆಮ್ದಿಯಾಗಿರಿ, ನಾವೂ ನೆಮ್ದಿಯಾಗಿರುತ್ತೇವೆ
ಅಂತ ಹೇಳುತ್ತ, ವಾರ್ತಾಪ್ರಸಾರಕ್ಕೆ ಮಂಗಳ ಹಾಡುತ್ತಿದ್ದೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...