Homeಕರ್ನಾಟಕ`ಮೋದಿ ಹೆಸರಿಂದ ಅಪಾಯವಿದೆ’ ಎಂಬ ಕಲ್ಲಡ್ಕ ಭಟ್ಟರ ಮಾತಿಗೆ ಅರ್ಥಗಳೇನು?

`ಮೋದಿ ಹೆಸರಿಂದ ಅಪಾಯವಿದೆ’ ಎಂಬ ಕಲ್ಲಡ್ಕ ಭಟ್ಟರ ಮಾತಿಗೆ ಅರ್ಥಗಳೇನು?

- Advertisement -
- Advertisement -

ಜೀವಬೆದರಿಕೆಯ ಕಾರಣದಿಂದ ಪೊಲೀಸರು ಅಜ್ಞಾತ ಸ್ಥಳದಲ್ಲಿಟ್ಟು ರಕ್ಷಣೆ ಕೊಟ್ಟ ಸುದೀರ್ಘ ಸಮಯದ ತರುವಾಯ ಕಲ್ಲಡ್ಕಭಟ್ಟರು ಆಡಿದ ಮಾತು ಹೊಸಹೊಸ ಅರ್ಥಗಳೊಂದಿಗೆ ಹರಿದಾಡುತ್ತಿದೆ. ಮಡಿಕೇರಿಯಲ್ಲಿ ಮಾಧ್ಯಮದವರ ಮುಂದೆ ‘ಬಿಜೆಪಿ ಅಭ್ಯರ್ಥಿಗಳು ಮೋದಿ ಹೆಸರಲ್ಲಿ ಮತ ಕೇಳುತ್ತಿರುವುದು ಭವಿಷ್ಯದಲ್ಲಿ ಅಪಾಯಕಾರಿಯಾಗಲಿದೆ. ಓರ್ವ ವ್ಯಕ್ತಿಯ ಸಾಧನೆ ಬಿಂಬಿಸಿಕೊಂಡು ಮತ ಕೇಳುವುದು ಒಳ್ಳೆಯ ಪ್ರಕ್ರಿಯೆ ಅಲ್ಲ, ವ್ಯಕ್ತಿ ಪೂಜೆ ನಮ್ಮ ಸಂಸ್ಕೃತಿಯಲ್ಲ’ ಎಂದು ಅವರಾಡಿದ ಮಾತುಗಳು ಬಹಳಷ್ಟು ಜನರನ್ನು ಅಚ್ಚರಿಗೊಳಿಸಿದ್ದರೆ, ಬಿಜೆಪಿಗರನ್ನು ಆಘಾತಕ್ಕೀಡು ಮಾಡಿವೆ. ಇದಕ್ಕೆ ಕಾರಣಗಳುಂಟು.

ಭಟ್ಟರ ಈ ಮಾತುಗಳನ್ನು ಎರಡು ನೆಲೆಗಟ್ಟಿನಲ್ಲಿ ವಿಶ್ಲೇಷಿಸಲಾಗುತ್ತಿದೆ. ಮೇಲ್ನೋಟಕ್ಕೆ ಕಾಣುವಂತೆ, ಬಿಜೆಪಿಯಲ್ಲಿ ಮೋದಿ-ಶಾಜೋಡಿಯ ಸರ್ವಾಧಿಕಾರವನ್ನು, ಮೋದಿಯವರ ವ್ಯಕ್ತಿಪೂಜೆಯನ್ನು ಟೀಕಿಸುತ್ತಿರುವುದು ಇಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ. ಬಿಜೆಪಿ ರಾಜಕೀಯ ಪಕ್ಷವಾದರು ಅದನ್ನು ನಿಯಂತ್ರಿಸುತ್ತಿರುವುದು ಆರೆಸೆಸ್ ಎಂಬುದರಲ್ಲಿ ಯಾವ ಅನುಮಾನವೂ ಇಲ್ಲ. ಬಿಜೆಪಿಯಲ್ಲಿ ಯಾವುದೇ ವ್ಯಕ್ತಿ, ಎಷ್ಟೇ ಉನ್ನತ ರಾಜಕೀಯ ಹುದ್ದೆಗೇರಿದರು ಆತ ತನ್ನ ಅಂಕೆಯಲ್ಲಿರಬೇಕೆಂದು ಆರೆಸೆಸ್ ಬಯಸುತ್ತದೆ, ಮತ್ತು ಹಾಗೇ ಹದ್ದುಬಸ್ತಿನಲ್ಲಿಡುತ್ತಾ ಬಂದಿದೆ. ಆದರೆ ಮೋದಿ ಅಧಿಕಾರಕ್ಕೇರಿದ ನಂತರ ಆರೆಸೆಸ್ ಅಂಕೆಯನ್ನೂ ಮೀರಿ ಏಕವ್ಯಕ್ತಿಕೇಂದ್ರಿತ ಶಕ್ತಿಯಾಗಿ ಬೆಳೆಯುತ್ತಿರುವುದು ಸಂಘ ಪರಿವಾರಕ್ಕೆ ನುಂಗಲಾರದ ತುತ್ತಾಗುತ್ತಿದೆ ಎಂಬ ವಾದ ಆಗಾಗ್ಗೆ ನಾಗ್ಪುರದ ಮೂಲಗಳಿಂದ ಕೇಳಿಬರುತ್ತಲೇ ಇತ್ತು. ಅದಕ್ಕೆ ಪೂರಕವಾಗಿ 2014ರ ಎಂಪಿ ಚುನಾವಣೆಯ ನಂತರ ನಡೆದ ಬಹುತೇಕ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಮೋದಿ-ಶಾ ನೇತೃತ್ವದಲ್ಲಿ ಗೆಲ್ಲುತ್ತಾ ಬಂದದ್ದು ಆರೆಸೆಸ್ ಅನ್ನು ಕಟ್ಟಿಹಾಕಿತ್ತು.

ಆದರೆ ಕಳೆದ ಡಿಸೆಂಬರ್‍ನಲ್ಲಿ ಮುಗಿದ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‍ಗಢ ಎಲೆಕ್ಷನ್‍ನಲ್ಲಿ ಬಿಜೆಪಿ ಸೋತು ಅಧಿಕಾರ ಕಳೆದುಕೊಂಡ ತರುವಾಯ ಆರೆಸೆಸ್ ವಲಯದೊಳಗಿನ ಆಂತರಿಕ ಲೆಕ್ಕಾಚಾರಗಳು ಬುಡಮೇಲಾಗಿವೆ ಎನ್ನಲಾಗುತ್ತಿದೆ. ಬಿಜೆಪಿಯಲ್ಲಿ ಮೋದಿ ಪ್ರಭುತ್ವವನ್ನು ಕುಗ್ಗಿಸಲು, ಪಕ್ಷದ ಮೇಲೆ ಮತ್ತೆ ನಾಗ್ಪುರ ಕೇಂದ್ರದ ಹಿಡಿತವನ್ನು ಬಿಗಿತಗೊಳಿಸಲು ಕಸರತ್ತುಗಳು ಶುರುವಾಗಿದ್ದವು. ಮೋದಿಯ ಪ್ರಭಾವ ತಗ್ಗಿಸುವುದರ ಜೊತೆಗೆ ಇದಕ್ಕೆ ಮತ್ತೂ ಒಂದು ಕಾರಣವಿತ್ತು. 2019ರ ಚುನಾವಣೆಯಲ್ಲಿ ಬಿಜೆಪಿಯಾಗಲಿ ಅಥವಾ ಎನ್‍ಡಿಎ ಆಗಲಿ ಸ್ವಂತ ಬಲದ ಮೇಲೆ ಸರ್ಕಾರ ರಚಿಸುವಷ್ಟು ಸೀಟುಗಳನ್ನು ಗೆಲ್ಲುವುದಿಲ್ಲ ಎಂಬ ಸುಳಿವು ಆರೆಸೆಸ್‍ಗೆ ಸಿಕ್ಕಾಗಿತ್ತು. ಅಂತಹ ಅತಂತ್ರದಲ್ಲಿ ಉಳಿದ ಸಣ್ಣಪುಟ್ಟ ಪಕ್ಷಗಳನ್ನು ಸೆಳೆದುಕೊಂಡು ಸರ್ಕಾರ ರಚಿಸುವ ಪರಿಸ್ಥಿತಿ ಎದುರಾಗಲಿದ್ದು, ಸರ್ವಾಧಿಕಾರಿ ಇಮೇಜಿನ ಮೋದಿಯನ್ನು ಮುಂದಿಟ್ಟುಕೊಂಡರೆ ಆ ಪಕ್ಷಗಳು ತಮಗೆ ಬೆಂಬಲ ಕೊಡದೇ ಹೋಗಬಹುದು, ಆಗ ಎಲ್ಲಾ ಪಕ್ಷಗಳಿಗೂ ಪ್ರಿಯವಾದ ಬೇರೊಂದು ಮುಖವನ್ನು ಪ್ರಧಾನಿ ಹುದ್ದೆಗೆ ಪ್ರಪೋಸ್ ಮಾಡಿ ಬೆಂಬಲ ಪಡೆದುಕೊಳ್ಳಬೇಕಾಗುತ್ತೆ. ಮೋದಿ ಇಷ್ಟೇ ಪ್ರಭಾವಿಯಾಗಿದ್ದರೆ ಬೇರೊಬ್ಬರನ್ನು ಪ್ರಧಾನಿ ಮಾಡಲು ಆತ ಅಡ್ಡಿಯಾಗಬಹುದು ಎಂಬ ದೂರಾಲೋಚನೆಯಿಟ್ಟುಕೊಂಡು ಆರೆಸೆಸ್ ಒಂದು ಕಾರ್ಯತಂತ್ರ ಹೆಣೆದಿತ್ತು. ಬಿಜೆಪಿಯೊಳಗೆಮೋದಿಗೆ ಪರ್ಯಾಯವಾಗಿ ಮತ್ತೊಬ್ಬ ನಾಯಕನನ್ನು ಪ್ರೊಜೆಕ್ಟ್ ಮಾಡುವುದು ಆ ತಂತ್ರವಾಗಿತ್ತು.

ಅದರ ಭಾಗವಾಗಿಯೇ ಹಾಲಿ ಕೇಂದ್ರ ಮಂತ್ರಿಯೂ, ಮಾಜಿ ಬಿಜೆಪಿ ಅಧ್ಯಕ್ಷರೂ ಆದ ನಾಗ್ಪುರ ನಂಟಿನ ನಿತಿನ್ ಗಡ್ಕರಿ ಮೋದಿ-ಶಾ ಜೋಡಿಗೆ ರೆಬೆಲ್ ಮಾತುಗಳನ್ನಾಡಲು ಶುರು ಮಾಡಿದ್ದರು. ಡಿಸೆಂಬರ್ ಚುನಾವಣೆಗಳ ಸೋಲನ್ನು ಬಿಜೆಪಿ ಅಧ್ಯಕ್ಷರೇ ಹೊತ್ತುಕೊಳ್ಳಬೇಕು ಎಂದದ್ದಾಗಲಿ, ತನ್ನ ಮನೆಯನ್ನೇ ಸರಿಯಾಗಿ ನೋಡಿಕೊಳ್ಳಲಾರದವ ದೇಶವನ್ನು ಹೇಗೆ ಸಂಭಾಳಿಸಿಯಾನು ಎಂದು ಪರೋಕ್ಷವಾಗಿ ಮೋದಿಯನ್ನು ಕುಟುಕಿದ್ದಾಗಲಿ, ಮೋದಿಯನ್ನು ನಖಾಶಿಖಾಂತ ಟೀಕಿಸುತ್ತಿದ್ದ ಶಿವಸೇನೆ ಮಹಾರಾಷ್ಟ್ರದಲ್ಲಿ ಹಠಾತ್ತನೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಾಗಲಿ ಇವೆಲ್ಲವೂ ನಿತಿನ್ ಗಡ್ಕರಿಗೆ ಆರೆಸೆಸ್‍ನಿಂದ ಸಿಗುತ್ತಿದ್ದ ಪ್ರೋತ್ಸಾಹದ ಸೂಚಕಗಳಾಗಿದ್ದವು. ಆದರೆ ಇಂಥಾ ಪ್ರಯತ್ನ ಲೋಕಸಭಾ ಚುನಾವಣೆ ವೇಳೆ ಕಾರ್ಯಕರ್ತರ ಆತ್ಮವಿಶ್ವಾಸದ ಮೇಲೆಯೇ ಅಡ್ಡಪರಿಣಾಮ ಬೀರಬಹುದೆನ್ನುವ ಕಾರಣಕ್ಕೆ ಆರೆಸೆಸ್ ಕೊನೇ ಕ್ಷಣದಲ್ಲಿ ಅದನ್ನು ಮುಂದಕ್ಕೂಡಿತ್ತು.

ಈಗ ದೇಶದಲ್ಲಿ ಎರಡು ಹಂತದ ಚುನಾವಣೆಗಳು ಮುಗಿದ ಸಂದರ್ಭದಲ್ಲಿ ಕಲ್ಲಡ್ಕ ಭಟ್ಟರು ಇಂಥಾ ಮಾತುಗಳನ್ನು ಆಡುತ್ತಿರುವುದು ನೋಡಿದರೆ, ಆರೆಸೆಸ್‍ನ ಹಳೇ ಕಾರ್ಯತಂತ್ರ ಮತ್ತೆ ಚಾಲನೆ ಪಡೆದುಕೊಂಡಿದೆ ಎಂಬ ಅನುಮಾನ ಮೂಡುತ್ತಿದೆ. ಯಾಕೆಂದರೆ ಕಲ್ಲಡ್ಕ ಭಟ್ಟರು ಸಾಮಾನ್ಯ ಕಾರ್ಯಕರ್ತರಲ್ಲ. ಆರೆಸೆಸ್‍ನ ದಕ್ಷಿಣ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ.ಹೀಗೆ ದೇಶದ ಅಲ್ಲೊಂದು, ಇಲ್ಲೊಂದು ಮೂಲೆಯಲ್ಲಿ ಇಂಥಾ ಪ್ರಭಾವಿಗಳಿಂದ `ಮೋದಿ-ವಿರೋಧಿ’ ಹೇಳಿಕೆಗಳನ್ನು ನೀಡಿಸುವ ಮೂಲಕ ಹಂತಹಂತವಾಗಿ ಮೋದಿಯನ್ನು ಪ್ರಧಾನಿ ಹುದ್ದೆಯಿಂದ ದೂರವಾಗಿಸಲು, ಬಿಜೆಪಿ ಕಾರ್ಯಕರ್ತರ ನಡುವೆ ಮೋದಿ-ಶಾವ್ಯಕ್ತಿ ಪೂಜೆಯನ್ನು ತಗ್ಗಿಸಲು ಆರೆಸೆಸ್ ಮುಂದಾಗಿರಬಹುದು ಎನ್ನಲಾಗುತ್ತಿದೆ.

ಇನ್ನೊಂದು ವಿಶ್ಲೇಷಣೆಯ ಪ್ರಕಾರ, ಬಿಜೆಪಿ ಪಕ್ಷದ ಆವರಣದಲ್ಲಿ ಕುಸಿಯುತ್ತಿರುವ ತನ್ನ ವೈಯಕ್ತಿಕ ವರ್ಚಸ್ಸಿನ ಹತಾಶೆಯಿಂದ ಭಟ್ಟರು ಹೀಗೆ ಮಾತಾಡಿದ್ದಾರೆ ಎನ್ನಲಾಗುತ್ತಿದೆ. ಉ.ಕನ್ನಡ, ದ.ಕನ್ನಡ, ಉಡುಪಿ-ಚಿಕ್ಕಮಗಳೂರು ಸೇರಿದಂತೆ ಕರಾವಳಿ ಭಾಗದ ಬಿಜೆಪಿಗೆ ಇದೇ ಭಟ್ಟರು ಅಧಿನಾಯಕರಂತಿದ್ದರು. ಇವರು ಹೇಳಿದ ಅಭ್ಯರ್ಥಿಗೇ ಟಿಕೇಟು ನಿಕ್ಕಿ ಎನ್ನುವಂತಿತ್ತು. ಆದರೆ ಈ ಸಲ,ತನಗೇ ತಿರುಮಂತ್ರ ಹಾಕುತ್ತಿರುವ ದಕ್ಷಿಣ ಕನ್ನಡದ ನಳೀನ್ ಕುಮಾರ್ ಕಟೀಲ್‍ಗೆ ಟಿಕೇಟ್ ಕೊಡಬಾರದು ಎಂಬುದು ಕಲ್ಲಡ್ಕಭಟ್ಟರ ಹಠವಾಗಿತ್ತು. ಆದರೆ ಅದಕ್ಕೆ ಸೊಪ್ಪು ಹಾಕದ ಬಿಜೆಪಿ ನಳೀನ್‍ರನ್ನೇ ಮತ್ತೆ ಕಣಕ್ಕಿಳಿಸಿದೆ. ತನ್ನ ನೆರವಿಲ್ಲದ ನಳೀನ್ ಈಚುನಾವಣೆಯಲ್ಲಿ ಮೋದಿ ಹೆಸರೇಳಿಕೊಂಡು ಮತ ಯಾಚಿಸುತ್ತಿರುವುದು ಭಟ್ಟರಿಗೆ ಕೋಪ ತರಿಸಿ ಹೀಗೆ ಹೇಳಿರಬಹುದು ಎನ್ನುವುದು ಎರಡನೇ ವಿಶ್ಲೇಷಣೆ. ಆದರೆ ಒಂದಂತೂ ಸತ್ಯ, ಭಟ್ಟರ ಮಾತುಗಳು ಸೂಚ್ಯವಾಗಿ ಮುಂದಿನ ರಾಜಕಾರಣದ ದಿಕ್ಕುತೋರುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...