Homeಕರ್ನಾಟಕ`ಮೋದಿ ಹೆಸರಿಂದ ಅಪಾಯವಿದೆ’ ಎಂಬ ಕಲ್ಲಡ್ಕ ಭಟ್ಟರ ಮಾತಿಗೆ ಅರ್ಥಗಳೇನು?

`ಮೋದಿ ಹೆಸರಿಂದ ಅಪಾಯವಿದೆ’ ಎಂಬ ಕಲ್ಲಡ್ಕ ಭಟ್ಟರ ಮಾತಿಗೆ ಅರ್ಥಗಳೇನು?

- Advertisement -
- Advertisement -

ಜೀವಬೆದರಿಕೆಯ ಕಾರಣದಿಂದ ಪೊಲೀಸರು ಅಜ್ಞಾತ ಸ್ಥಳದಲ್ಲಿಟ್ಟು ರಕ್ಷಣೆ ಕೊಟ್ಟ ಸುದೀರ್ಘ ಸಮಯದ ತರುವಾಯ ಕಲ್ಲಡ್ಕಭಟ್ಟರು ಆಡಿದ ಮಾತು ಹೊಸಹೊಸ ಅರ್ಥಗಳೊಂದಿಗೆ ಹರಿದಾಡುತ್ತಿದೆ. ಮಡಿಕೇರಿಯಲ್ಲಿ ಮಾಧ್ಯಮದವರ ಮುಂದೆ ‘ಬಿಜೆಪಿ ಅಭ್ಯರ್ಥಿಗಳು ಮೋದಿ ಹೆಸರಲ್ಲಿ ಮತ ಕೇಳುತ್ತಿರುವುದು ಭವಿಷ್ಯದಲ್ಲಿ ಅಪಾಯಕಾರಿಯಾಗಲಿದೆ. ಓರ್ವ ವ್ಯಕ್ತಿಯ ಸಾಧನೆ ಬಿಂಬಿಸಿಕೊಂಡು ಮತ ಕೇಳುವುದು ಒಳ್ಳೆಯ ಪ್ರಕ್ರಿಯೆ ಅಲ್ಲ, ವ್ಯಕ್ತಿ ಪೂಜೆ ನಮ್ಮ ಸಂಸ್ಕೃತಿಯಲ್ಲ’ ಎಂದು ಅವರಾಡಿದ ಮಾತುಗಳು ಬಹಳಷ್ಟು ಜನರನ್ನು ಅಚ್ಚರಿಗೊಳಿಸಿದ್ದರೆ, ಬಿಜೆಪಿಗರನ್ನು ಆಘಾತಕ್ಕೀಡು ಮಾಡಿವೆ. ಇದಕ್ಕೆ ಕಾರಣಗಳುಂಟು.

ಭಟ್ಟರ ಈ ಮಾತುಗಳನ್ನು ಎರಡು ನೆಲೆಗಟ್ಟಿನಲ್ಲಿ ವಿಶ್ಲೇಷಿಸಲಾಗುತ್ತಿದೆ. ಮೇಲ್ನೋಟಕ್ಕೆ ಕಾಣುವಂತೆ, ಬಿಜೆಪಿಯಲ್ಲಿ ಮೋದಿ-ಶಾಜೋಡಿಯ ಸರ್ವಾಧಿಕಾರವನ್ನು, ಮೋದಿಯವರ ವ್ಯಕ್ತಿಪೂಜೆಯನ್ನು ಟೀಕಿಸುತ್ತಿರುವುದು ಇಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ. ಬಿಜೆಪಿ ರಾಜಕೀಯ ಪಕ್ಷವಾದರು ಅದನ್ನು ನಿಯಂತ್ರಿಸುತ್ತಿರುವುದು ಆರೆಸೆಸ್ ಎಂಬುದರಲ್ಲಿ ಯಾವ ಅನುಮಾನವೂ ಇಲ್ಲ. ಬಿಜೆಪಿಯಲ್ಲಿ ಯಾವುದೇ ವ್ಯಕ್ತಿ, ಎಷ್ಟೇ ಉನ್ನತ ರಾಜಕೀಯ ಹುದ್ದೆಗೇರಿದರು ಆತ ತನ್ನ ಅಂಕೆಯಲ್ಲಿರಬೇಕೆಂದು ಆರೆಸೆಸ್ ಬಯಸುತ್ತದೆ, ಮತ್ತು ಹಾಗೇ ಹದ್ದುಬಸ್ತಿನಲ್ಲಿಡುತ್ತಾ ಬಂದಿದೆ. ಆದರೆ ಮೋದಿ ಅಧಿಕಾರಕ್ಕೇರಿದ ನಂತರ ಆರೆಸೆಸ್ ಅಂಕೆಯನ್ನೂ ಮೀರಿ ಏಕವ್ಯಕ್ತಿಕೇಂದ್ರಿತ ಶಕ್ತಿಯಾಗಿ ಬೆಳೆಯುತ್ತಿರುವುದು ಸಂಘ ಪರಿವಾರಕ್ಕೆ ನುಂಗಲಾರದ ತುತ್ತಾಗುತ್ತಿದೆ ಎಂಬ ವಾದ ಆಗಾಗ್ಗೆ ನಾಗ್ಪುರದ ಮೂಲಗಳಿಂದ ಕೇಳಿಬರುತ್ತಲೇ ಇತ್ತು. ಅದಕ್ಕೆ ಪೂರಕವಾಗಿ 2014ರ ಎಂಪಿ ಚುನಾವಣೆಯ ನಂತರ ನಡೆದ ಬಹುತೇಕ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಮೋದಿ-ಶಾ ನೇತೃತ್ವದಲ್ಲಿ ಗೆಲ್ಲುತ್ತಾ ಬಂದದ್ದು ಆರೆಸೆಸ್ ಅನ್ನು ಕಟ್ಟಿಹಾಕಿತ್ತು.

ಆದರೆ ಕಳೆದ ಡಿಸೆಂಬರ್‍ನಲ್ಲಿ ಮುಗಿದ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‍ಗಢ ಎಲೆಕ್ಷನ್‍ನಲ್ಲಿ ಬಿಜೆಪಿ ಸೋತು ಅಧಿಕಾರ ಕಳೆದುಕೊಂಡ ತರುವಾಯ ಆರೆಸೆಸ್ ವಲಯದೊಳಗಿನ ಆಂತರಿಕ ಲೆಕ್ಕಾಚಾರಗಳು ಬುಡಮೇಲಾಗಿವೆ ಎನ್ನಲಾಗುತ್ತಿದೆ. ಬಿಜೆಪಿಯಲ್ಲಿ ಮೋದಿ ಪ್ರಭುತ್ವವನ್ನು ಕುಗ್ಗಿಸಲು, ಪಕ್ಷದ ಮೇಲೆ ಮತ್ತೆ ನಾಗ್ಪುರ ಕೇಂದ್ರದ ಹಿಡಿತವನ್ನು ಬಿಗಿತಗೊಳಿಸಲು ಕಸರತ್ತುಗಳು ಶುರುವಾಗಿದ್ದವು. ಮೋದಿಯ ಪ್ರಭಾವ ತಗ್ಗಿಸುವುದರ ಜೊತೆಗೆ ಇದಕ್ಕೆ ಮತ್ತೂ ಒಂದು ಕಾರಣವಿತ್ತು. 2019ರ ಚುನಾವಣೆಯಲ್ಲಿ ಬಿಜೆಪಿಯಾಗಲಿ ಅಥವಾ ಎನ್‍ಡಿಎ ಆಗಲಿ ಸ್ವಂತ ಬಲದ ಮೇಲೆ ಸರ್ಕಾರ ರಚಿಸುವಷ್ಟು ಸೀಟುಗಳನ್ನು ಗೆಲ್ಲುವುದಿಲ್ಲ ಎಂಬ ಸುಳಿವು ಆರೆಸೆಸ್‍ಗೆ ಸಿಕ್ಕಾಗಿತ್ತು. ಅಂತಹ ಅತಂತ್ರದಲ್ಲಿ ಉಳಿದ ಸಣ್ಣಪುಟ್ಟ ಪಕ್ಷಗಳನ್ನು ಸೆಳೆದುಕೊಂಡು ಸರ್ಕಾರ ರಚಿಸುವ ಪರಿಸ್ಥಿತಿ ಎದುರಾಗಲಿದ್ದು, ಸರ್ವಾಧಿಕಾರಿ ಇಮೇಜಿನ ಮೋದಿಯನ್ನು ಮುಂದಿಟ್ಟುಕೊಂಡರೆ ಆ ಪಕ್ಷಗಳು ತಮಗೆ ಬೆಂಬಲ ಕೊಡದೇ ಹೋಗಬಹುದು, ಆಗ ಎಲ್ಲಾ ಪಕ್ಷಗಳಿಗೂ ಪ್ರಿಯವಾದ ಬೇರೊಂದು ಮುಖವನ್ನು ಪ್ರಧಾನಿ ಹುದ್ದೆಗೆ ಪ್ರಪೋಸ್ ಮಾಡಿ ಬೆಂಬಲ ಪಡೆದುಕೊಳ್ಳಬೇಕಾಗುತ್ತೆ. ಮೋದಿ ಇಷ್ಟೇ ಪ್ರಭಾವಿಯಾಗಿದ್ದರೆ ಬೇರೊಬ್ಬರನ್ನು ಪ್ರಧಾನಿ ಮಾಡಲು ಆತ ಅಡ್ಡಿಯಾಗಬಹುದು ಎಂಬ ದೂರಾಲೋಚನೆಯಿಟ್ಟುಕೊಂಡು ಆರೆಸೆಸ್ ಒಂದು ಕಾರ್ಯತಂತ್ರ ಹೆಣೆದಿತ್ತು. ಬಿಜೆಪಿಯೊಳಗೆಮೋದಿಗೆ ಪರ್ಯಾಯವಾಗಿ ಮತ್ತೊಬ್ಬ ನಾಯಕನನ್ನು ಪ್ರೊಜೆಕ್ಟ್ ಮಾಡುವುದು ಆ ತಂತ್ರವಾಗಿತ್ತು.

ಅದರ ಭಾಗವಾಗಿಯೇ ಹಾಲಿ ಕೇಂದ್ರ ಮಂತ್ರಿಯೂ, ಮಾಜಿ ಬಿಜೆಪಿ ಅಧ್ಯಕ್ಷರೂ ಆದ ನಾಗ್ಪುರ ನಂಟಿನ ನಿತಿನ್ ಗಡ್ಕರಿ ಮೋದಿ-ಶಾ ಜೋಡಿಗೆ ರೆಬೆಲ್ ಮಾತುಗಳನ್ನಾಡಲು ಶುರು ಮಾಡಿದ್ದರು. ಡಿಸೆಂಬರ್ ಚುನಾವಣೆಗಳ ಸೋಲನ್ನು ಬಿಜೆಪಿ ಅಧ್ಯಕ್ಷರೇ ಹೊತ್ತುಕೊಳ್ಳಬೇಕು ಎಂದದ್ದಾಗಲಿ, ತನ್ನ ಮನೆಯನ್ನೇ ಸರಿಯಾಗಿ ನೋಡಿಕೊಳ್ಳಲಾರದವ ದೇಶವನ್ನು ಹೇಗೆ ಸಂಭಾಳಿಸಿಯಾನು ಎಂದು ಪರೋಕ್ಷವಾಗಿ ಮೋದಿಯನ್ನು ಕುಟುಕಿದ್ದಾಗಲಿ, ಮೋದಿಯನ್ನು ನಖಾಶಿಖಾಂತ ಟೀಕಿಸುತ್ತಿದ್ದ ಶಿವಸೇನೆ ಮಹಾರಾಷ್ಟ್ರದಲ್ಲಿ ಹಠಾತ್ತನೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಾಗಲಿ ಇವೆಲ್ಲವೂ ನಿತಿನ್ ಗಡ್ಕರಿಗೆ ಆರೆಸೆಸ್‍ನಿಂದ ಸಿಗುತ್ತಿದ್ದ ಪ್ರೋತ್ಸಾಹದ ಸೂಚಕಗಳಾಗಿದ್ದವು. ಆದರೆ ಇಂಥಾ ಪ್ರಯತ್ನ ಲೋಕಸಭಾ ಚುನಾವಣೆ ವೇಳೆ ಕಾರ್ಯಕರ್ತರ ಆತ್ಮವಿಶ್ವಾಸದ ಮೇಲೆಯೇ ಅಡ್ಡಪರಿಣಾಮ ಬೀರಬಹುದೆನ್ನುವ ಕಾರಣಕ್ಕೆ ಆರೆಸೆಸ್ ಕೊನೇ ಕ್ಷಣದಲ್ಲಿ ಅದನ್ನು ಮುಂದಕ್ಕೂಡಿತ್ತು.

ಈಗ ದೇಶದಲ್ಲಿ ಎರಡು ಹಂತದ ಚುನಾವಣೆಗಳು ಮುಗಿದ ಸಂದರ್ಭದಲ್ಲಿ ಕಲ್ಲಡ್ಕ ಭಟ್ಟರು ಇಂಥಾ ಮಾತುಗಳನ್ನು ಆಡುತ್ತಿರುವುದು ನೋಡಿದರೆ, ಆರೆಸೆಸ್‍ನ ಹಳೇ ಕಾರ್ಯತಂತ್ರ ಮತ್ತೆ ಚಾಲನೆ ಪಡೆದುಕೊಂಡಿದೆ ಎಂಬ ಅನುಮಾನ ಮೂಡುತ್ತಿದೆ. ಯಾಕೆಂದರೆ ಕಲ್ಲಡ್ಕ ಭಟ್ಟರು ಸಾಮಾನ್ಯ ಕಾರ್ಯಕರ್ತರಲ್ಲ. ಆರೆಸೆಸ್‍ನ ದಕ್ಷಿಣ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ.ಹೀಗೆ ದೇಶದ ಅಲ್ಲೊಂದು, ಇಲ್ಲೊಂದು ಮೂಲೆಯಲ್ಲಿ ಇಂಥಾ ಪ್ರಭಾವಿಗಳಿಂದ `ಮೋದಿ-ವಿರೋಧಿ’ ಹೇಳಿಕೆಗಳನ್ನು ನೀಡಿಸುವ ಮೂಲಕ ಹಂತಹಂತವಾಗಿ ಮೋದಿಯನ್ನು ಪ್ರಧಾನಿ ಹುದ್ದೆಯಿಂದ ದೂರವಾಗಿಸಲು, ಬಿಜೆಪಿ ಕಾರ್ಯಕರ್ತರ ನಡುವೆ ಮೋದಿ-ಶಾವ್ಯಕ್ತಿ ಪೂಜೆಯನ್ನು ತಗ್ಗಿಸಲು ಆರೆಸೆಸ್ ಮುಂದಾಗಿರಬಹುದು ಎನ್ನಲಾಗುತ್ತಿದೆ.

ಇನ್ನೊಂದು ವಿಶ್ಲೇಷಣೆಯ ಪ್ರಕಾರ, ಬಿಜೆಪಿ ಪಕ್ಷದ ಆವರಣದಲ್ಲಿ ಕುಸಿಯುತ್ತಿರುವ ತನ್ನ ವೈಯಕ್ತಿಕ ವರ್ಚಸ್ಸಿನ ಹತಾಶೆಯಿಂದ ಭಟ್ಟರು ಹೀಗೆ ಮಾತಾಡಿದ್ದಾರೆ ಎನ್ನಲಾಗುತ್ತಿದೆ. ಉ.ಕನ್ನಡ, ದ.ಕನ್ನಡ, ಉಡುಪಿ-ಚಿಕ್ಕಮಗಳೂರು ಸೇರಿದಂತೆ ಕರಾವಳಿ ಭಾಗದ ಬಿಜೆಪಿಗೆ ಇದೇ ಭಟ್ಟರು ಅಧಿನಾಯಕರಂತಿದ್ದರು. ಇವರು ಹೇಳಿದ ಅಭ್ಯರ್ಥಿಗೇ ಟಿಕೇಟು ನಿಕ್ಕಿ ಎನ್ನುವಂತಿತ್ತು. ಆದರೆ ಈ ಸಲ,ತನಗೇ ತಿರುಮಂತ್ರ ಹಾಕುತ್ತಿರುವ ದಕ್ಷಿಣ ಕನ್ನಡದ ನಳೀನ್ ಕುಮಾರ್ ಕಟೀಲ್‍ಗೆ ಟಿಕೇಟ್ ಕೊಡಬಾರದು ಎಂಬುದು ಕಲ್ಲಡ್ಕಭಟ್ಟರ ಹಠವಾಗಿತ್ತು. ಆದರೆ ಅದಕ್ಕೆ ಸೊಪ್ಪು ಹಾಕದ ಬಿಜೆಪಿ ನಳೀನ್‍ರನ್ನೇ ಮತ್ತೆ ಕಣಕ್ಕಿಳಿಸಿದೆ. ತನ್ನ ನೆರವಿಲ್ಲದ ನಳೀನ್ ಈಚುನಾವಣೆಯಲ್ಲಿ ಮೋದಿ ಹೆಸರೇಳಿಕೊಂಡು ಮತ ಯಾಚಿಸುತ್ತಿರುವುದು ಭಟ್ಟರಿಗೆ ಕೋಪ ತರಿಸಿ ಹೀಗೆ ಹೇಳಿರಬಹುದು ಎನ್ನುವುದು ಎರಡನೇ ವಿಶ್ಲೇಷಣೆ. ಆದರೆ ಒಂದಂತೂ ಸತ್ಯ, ಭಟ್ಟರ ಮಾತುಗಳು ಸೂಚ್ಯವಾಗಿ ಮುಂದಿನ ರಾಜಕಾರಣದ ದಿಕ್ಕುತೋರುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...