Homeಕರ್ನಾಟಕ`ಮೋದಿ ಹೆಸರಿಂದ ಅಪಾಯವಿದೆ’ ಎಂಬ ಕಲ್ಲಡ್ಕ ಭಟ್ಟರ ಮಾತಿಗೆ ಅರ್ಥಗಳೇನು?

`ಮೋದಿ ಹೆಸರಿಂದ ಅಪಾಯವಿದೆ’ ಎಂಬ ಕಲ್ಲಡ್ಕ ಭಟ್ಟರ ಮಾತಿಗೆ ಅರ್ಥಗಳೇನು?

- Advertisement -
- Advertisement -

ಜೀವಬೆದರಿಕೆಯ ಕಾರಣದಿಂದ ಪೊಲೀಸರು ಅಜ್ಞಾತ ಸ್ಥಳದಲ್ಲಿಟ್ಟು ರಕ್ಷಣೆ ಕೊಟ್ಟ ಸುದೀರ್ಘ ಸಮಯದ ತರುವಾಯ ಕಲ್ಲಡ್ಕಭಟ್ಟರು ಆಡಿದ ಮಾತು ಹೊಸಹೊಸ ಅರ್ಥಗಳೊಂದಿಗೆ ಹರಿದಾಡುತ್ತಿದೆ. ಮಡಿಕೇರಿಯಲ್ಲಿ ಮಾಧ್ಯಮದವರ ಮುಂದೆ ‘ಬಿಜೆಪಿ ಅಭ್ಯರ್ಥಿಗಳು ಮೋದಿ ಹೆಸರಲ್ಲಿ ಮತ ಕೇಳುತ್ತಿರುವುದು ಭವಿಷ್ಯದಲ್ಲಿ ಅಪಾಯಕಾರಿಯಾಗಲಿದೆ. ಓರ್ವ ವ್ಯಕ್ತಿಯ ಸಾಧನೆ ಬಿಂಬಿಸಿಕೊಂಡು ಮತ ಕೇಳುವುದು ಒಳ್ಳೆಯ ಪ್ರಕ್ರಿಯೆ ಅಲ್ಲ, ವ್ಯಕ್ತಿ ಪೂಜೆ ನಮ್ಮ ಸಂಸ್ಕೃತಿಯಲ್ಲ’ ಎಂದು ಅವರಾಡಿದ ಮಾತುಗಳು ಬಹಳಷ್ಟು ಜನರನ್ನು ಅಚ್ಚರಿಗೊಳಿಸಿದ್ದರೆ, ಬಿಜೆಪಿಗರನ್ನು ಆಘಾತಕ್ಕೀಡು ಮಾಡಿವೆ. ಇದಕ್ಕೆ ಕಾರಣಗಳುಂಟು.

ಭಟ್ಟರ ಈ ಮಾತುಗಳನ್ನು ಎರಡು ನೆಲೆಗಟ್ಟಿನಲ್ಲಿ ವಿಶ್ಲೇಷಿಸಲಾಗುತ್ತಿದೆ. ಮೇಲ್ನೋಟಕ್ಕೆ ಕಾಣುವಂತೆ, ಬಿಜೆಪಿಯಲ್ಲಿ ಮೋದಿ-ಶಾಜೋಡಿಯ ಸರ್ವಾಧಿಕಾರವನ್ನು, ಮೋದಿಯವರ ವ್ಯಕ್ತಿಪೂಜೆಯನ್ನು ಟೀಕಿಸುತ್ತಿರುವುದು ಇಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ. ಬಿಜೆಪಿ ರಾಜಕೀಯ ಪಕ್ಷವಾದರು ಅದನ್ನು ನಿಯಂತ್ರಿಸುತ್ತಿರುವುದು ಆರೆಸೆಸ್ ಎಂಬುದರಲ್ಲಿ ಯಾವ ಅನುಮಾನವೂ ಇಲ್ಲ. ಬಿಜೆಪಿಯಲ್ಲಿ ಯಾವುದೇ ವ್ಯಕ್ತಿ, ಎಷ್ಟೇ ಉನ್ನತ ರಾಜಕೀಯ ಹುದ್ದೆಗೇರಿದರು ಆತ ತನ್ನ ಅಂಕೆಯಲ್ಲಿರಬೇಕೆಂದು ಆರೆಸೆಸ್ ಬಯಸುತ್ತದೆ, ಮತ್ತು ಹಾಗೇ ಹದ್ದುಬಸ್ತಿನಲ್ಲಿಡುತ್ತಾ ಬಂದಿದೆ. ಆದರೆ ಮೋದಿ ಅಧಿಕಾರಕ್ಕೇರಿದ ನಂತರ ಆರೆಸೆಸ್ ಅಂಕೆಯನ್ನೂ ಮೀರಿ ಏಕವ್ಯಕ್ತಿಕೇಂದ್ರಿತ ಶಕ್ತಿಯಾಗಿ ಬೆಳೆಯುತ್ತಿರುವುದು ಸಂಘ ಪರಿವಾರಕ್ಕೆ ನುಂಗಲಾರದ ತುತ್ತಾಗುತ್ತಿದೆ ಎಂಬ ವಾದ ಆಗಾಗ್ಗೆ ನಾಗ್ಪುರದ ಮೂಲಗಳಿಂದ ಕೇಳಿಬರುತ್ತಲೇ ಇತ್ತು. ಅದಕ್ಕೆ ಪೂರಕವಾಗಿ 2014ರ ಎಂಪಿ ಚುನಾವಣೆಯ ನಂತರ ನಡೆದ ಬಹುತೇಕ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಮೋದಿ-ಶಾ ನೇತೃತ್ವದಲ್ಲಿ ಗೆಲ್ಲುತ್ತಾ ಬಂದದ್ದು ಆರೆಸೆಸ್ ಅನ್ನು ಕಟ್ಟಿಹಾಕಿತ್ತು.

ಆದರೆ ಕಳೆದ ಡಿಸೆಂಬರ್‍ನಲ್ಲಿ ಮುಗಿದ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‍ಗಢ ಎಲೆಕ್ಷನ್‍ನಲ್ಲಿ ಬಿಜೆಪಿ ಸೋತು ಅಧಿಕಾರ ಕಳೆದುಕೊಂಡ ತರುವಾಯ ಆರೆಸೆಸ್ ವಲಯದೊಳಗಿನ ಆಂತರಿಕ ಲೆಕ್ಕಾಚಾರಗಳು ಬುಡಮೇಲಾಗಿವೆ ಎನ್ನಲಾಗುತ್ತಿದೆ. ಬಿಜೆಪಿಯಲ್ಲಿ ಮೋದಿ ಪ್ರಭುತ್ವವನ್ನು ಕುಗ್ಗಿಸಲು, ಪಕ್ಷದ ಮೇಲೆ ಮತ್ತೆ ನಾಗ್ಪುರ ಕೇಂದ್ರದ ಹಿಡಿತವನ್ನು ಬಿಗಿತಗೊಳಿಸಲು ಕಸರತ್ತುಗಳು ಶುರುವಾಗಿದ್ದವು. ಮೋದಿಯ ಪ್ರಭಾವ ತಗ್ಗಿಸುವುದರ ಜೊತೆಗೆ ಇದಕ್ಕೆ ಮತ್ತೂ ಒಂದು ಕಾರಣವಿತ್ತು. 2019ರ ಚುನಾವಣೆಯಲ್ಲಿ ಬಿಜೆಪಿಯಾಗಲಿ ಅಥವಾ ಎನ್‍ಡಿಎ ಆಗಲಿ ಸ್ವಂತ ಬಲದ ಮೇಲೆ ಸರ್ಕಾರ ರಚಿಸುವಷ್ಟು ಸೀಟುಗಳನ್ನು ಗೆಲ್ಲುವುದಿಲ್ಲ ಎಂಬ ಸುಳಿವು ಆರೆಸೆಸ್‍ಗೆ ಸಿಕ್ಕಾಗಿತ್ತು. ಅಂತಹ ಅತಂತ್ರದಲ್ಲಿ ಉಳಿದ ಸಣ್ಣಪುಟ್ಟ ಪಕ್ಷಗಳನ್ನು ಸೆಳೆದುಕೊಂಡು ಸರ್ಕಾರ ರಚಿಸುವ ಪರಿಸ್ಥಿತಿ ಎದುರಾಗಲಿದ್ದು, ಸರ್ವಾಧಿಕಾರಿ ಇಮೇಜಿನ ಮೋದಿಯನ್ನು ಮುಂದಿಟ್ಟುಕೊಂಡರೆ ಆ ಪಕ್ಷಗಳು ತಮಗೆ ಬೆಂಬಲ ಕೊಡದೇ ಹೋಗಬಹುದು, ಆಗ ಎಲ್ಲಾ ಪಕ್ಷಗಳಿಗೂ ಪ್ರಿಯವಾದ ಬೇರೊಂದು ಮುಖವನ್ನು ಪ್ರಧಾನಿ ಹುದ್ದೆಗೆ ಪ್ರಪೋಸ್ ಮಾಡಿ ಬೆಂಬಲ ಪಡೆದುಕೊಳ್ಳಬೇಕಾಗುತ್ತೆ. ಮೋದಿ ಇಷ್ಟೇ ಪ್ರಭಾವಿಯಾಗಿದ್ದರೆ ಬೇರೊಬ್ಬರನ್ನು ಪ್ರಧಾನಿ ಮಾಡಲು ಆತ ಅಡ್ಡಿಯಾಗಬಹುದು ಎಂಬ ದೂರಾಲೋಚನೆಯಿಟ್ಟುಕೊಂಡು ಆರೆಸೆಸ್ ಒಂದು ಕಾರ್ಯತಂತ್ರ ಹೆಣೆದಿತ್ತು. ಬಿಜೆಪಿಯೊಳಗೆಮೋದಿಗೆ ಪರ್ಯಾಯವಾಗಿ ಮತ್ತೊಬ್ಬ ನಾಯಕನನ್ನು ಪ್ರೊಜೆಕ್ಟ್ ಮಾಡುವುದು ಆ ತಂತ್ರವಾಗಿತ್ತು.

ಅದರ ಭಾಗವಾಗಿಯೇ ಹಾಲಿ ಕೇಂದ್ರ ಮಂತ್ರಿಯೂ, ಮಾಜಿ ಬಿಜೆಪಿ ಅಧ್ಯಕ್ಷರೂ ಆದ ನಾಗ್ಪುರ ನಂಟಿನ ನಿತಿನ್ ಗಡ್ಕರಿ ಮೋದಿ-ಶಾ ಜೋಡಿಗೆ ರೆಬೆಲ್ ಮಾತುಗಳನ್ನಾಡಲು ಶುರು ಮಾಡಿದ್ದರು. ಡಿಸೆಂಬರ್ ಚುನಾವಣೆಗಳ ಸೋಲನ್ನು ಬಿಜೆಪಿ ಅಧ್ಯಕ್ಷರೇ ಹೊತ್ತುಕೊಳ್ಳಬೇಕು ಎಂದದ್ದಾಗಲಿ, ತನ್ನ ಮನೆಯನ್ನೇ ಸರಿಯಾಗಿ ನೋಡಿಕೊಳ್ಳಲಾರದವ ದೇಶವನ್ನು ಹೇಗೆ ಸಂಭಾಳಿಸಿಯಾನು ಎಂದು ಪರೋಕ್ಷವಾಗಿ ಮೋದಿಯನ್ನು ಕುಟುಕಿದ್ದಾಗಲಿ, ಮೋದಿಯನ್ನು ನಖಾಶಿಖಾಂತ ಟೀಕಿಸುತ್ತಿದ್ದ ಶಿವಸೇನೆ ಮಹಾರಾಷ್ಟ್ರದಲ್ಲಿ ಹಠಾತ್ತನೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಾಗಲಿ ಇವೆಲ್ಲವೂ ನಿತಿನ್ ಗಡ್ಕರಿಗೆ ಆರೆಸೆಸ್‍ನಿಂದ ಸಿಗುತ್ತಿದ್ದ ಪ್ರೋತ್ಸಾಹದ ಸೂಚಕಗಳಾಗಿದ್ದವು. ಆದರೆ ಇಂಥಾ ಪ್ರಯತ್ನ ಲೋಕಸಭಾ ಚುನಾವಣೆ ವೇಳೆ ಕಾರ್ಯಕರ್ತರ ಆತ್ಮವಿಶ್ವಾಸದ ಮೇಲೆಯೇ ಅಡ್ಡಪರಿಣಾಮ ಬೀರಬಹುದೆನ್ನುವ ಕಾರಣಕ್ಕೆ ಆರೆಸೆಸ್ ಕೊನೇ ಕ್ಷಣದಲ್ಲಿ ಅದನ್ನು ಮುಂದಕ್ಕೂಡಿತ್ತು.

ಈಗ ದೇಶದಲ್ಲಿ ಎರಡು ಹಂತದ ಚುನಾವಣೆಗಳು ಮುಗಿದ ಸಂದರ್ಭದಲ್ಲಿ ಕಲ್ಲಡ್ಕ ಭಟ್ಟರು ಇಂಥಾ ಮಾತುಗಳನ್ನು ಆಡುತ್ತಿರುವುದು ನೋಡಿದರೆ, ಆರೆಸೆಸ್‍ನ ಹಳೇ ಕಾರ್ಯತಂತ್ರ ಮತ್ತೆ ಚಾಲನೆ ಪಡೆದುಕೊಂಡಿದೆ ಎಂಬ ಅನುಮಾನ ಮೂಡುತ್ತಿದೆ. ಯಾಕೆಂದರೆ ಕಲ್ಲಡ್ಕ ಭಟ್ಟರು ಸಾಮಾನ್ಯ ಕಾರ್ಯಕರ್ತರಲ್ಲ. ಆರೆಸೆಸ್‍ನ ದಕ್ಷಿಣ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ.ಹೀಗೆ ದೇಶದ ಅಲ್ಲೊಂದು, ಇಲ್ಲೊಂದು ಮೂಲೆಯಲ್ಲಿ ಇಂಥಾ ಪ್ರಭಾವಿಗಳಿಂದ `ಮೋದಿ-ವಿರೋಧಿ’ ಹೇಳಿಕೆಗಳನ್ನು ನೀಡಿಸುವ ಮೂಲಕ ಹಂತಹಂತವಾಗಿ ಮೋದಿಯನ್ನು ಪ್ರಧಾನಿ ಹುದ್ದೆಯಿಂದ ದೂರವಾಗಿಸಲು, ಬಿಜೆಪಿ ಕಾರ್ಯಕರ್ತರ ನಡುವೆ ಮೋದಿ-ಶಾವ್ಯಕ್ತಿ ಪೂಜೆಯನ್ನು ತಗ್ಗಿಸಲು ಆರೆಸೆಸ್ ಮುಂದಾಗಿರಬಹುದು ಎನ್ನಲಾಗುತ್ತಿದೆ.

ಇನ್ನೊಂದು ವಿಶ್ಲೇಷಣೆಯ ಪ್ರಕಾರ, ಬಿಜೆಪಿ ಪಕ್ಷದ ಆವರಣದಲ್ಲಿ ಕುಸಿಯುತ್ತಿರುವ ತನ್ನ ವೈಯಕ್ತಿಕ ವರ್ಚಸ್ಸಿನ ಹತಾಶೆಯಿಂದ ಭಟ್ಟರು ಹೀಗೆ ಮಾತಾಡಿದ್ದಾರೆ ಎನ್ನಲಾಗುತ್ತಿದೆ. ಉ.ಕನ್ನಡ, ದ.ಕನ್ನಡ, ಉಡುಪಿ-ಚಿಕ್ಕಮಗಳೂರು ಸೇರಿದಂತೆ ಕರಾವಳಿ ಭಾಗದ ಬಿಜೆಪಿಗೆ ಇದೇ ಭಟ್ಟರು ಅಧಿನಾಯಕರಂತಿದ್ದರು. ಇವರು ಹೇಳಿದ ಅಭ್ಯರ್ಥಿಗೇ ಟಿಕೇಟು ನಿಕ್ಕಿ ಎನ್ನುವಂತಿತ್ತು. ಆದರೆ ಈ ಸಲ,ತನಗೇ ತಿರುಮಂತ್ರ ಹಾಕುತ್ತಿರುವ ದಕ್ಷಿಣ ಕನ್ನಡದ ನಳೀನ್ ಕುಮಾರ್ ಕಟೀಲ್‍ಗೆ ಟಿಕೇಟ್ ಕೊಡಬಾರದು ಎಂಬುದು ಕಲ್ಲಡ್ಕಭಟ್ಟರ ಹಠವಾಗಿತ್ತು. ಆದರೆ ಅದಕ್ಕೆ ಸೊಪ್ಪು ಹಾಕದ ಬಿಜೆಪಿ ನಳೀನ್‍ರನ್ನೇ ಮತ್ತೆ ಕಣಕ್ಕಿಳಿಸಿದೆ. ತನ್ನ ನೆರವಿಲ್ಲದ ನಳೀನ್ ಈಚುನಾವಣೆಯಲ್ಲಿ ಮೋದಿ ಹೆಸರೇಳಿಕೊಂಡು ಮತ ಯಾಚಿಸುತ್ತಿರುವುದು ಭಟ್ಟರಿಗೆ ಕೋಪ ತರಿಸಿ ಹೀಗೆ ಹೇಳಿರಬಹುದು ಎನ್ನುವುದು ಎರಡನೇ ವಿಶ್ಲೇಷಣೆ. ಆದರೆ ಒಂದಂತೂ ಸತ್ಯ, ಭಟ್ಟರ ಮಾತುಗಳು ಸೂಚ್ಯವಾಗಿ ಮುಂದಿನ ರಾಜಕಾರಣದ ದಿಕ್ಕುತೋರುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...