Homeಅಂತರಾಷ್ಟ್ರೀಯಭೂತಾನ್‌ನ ಇಂಧನ ಯೋಜನೆಗಳಿಗೆ 4 ಸಾವಿರ ಕೋಟಿ ಸಾಲ ಘೋಷಿಸಿದ ಮೋದಿ : ಅದಾನಿ, ಅಂಬಾನಿ...

ಭೂತಾನ್‌ನ ಇಂಧನ ಯೋಜನೆಗಳಿಗೆ 4 ಸಾವಿರ ಕೋಟಿ ಸಾಲ ಘೋಷಿಸಿದ ಮೋದಿ : ಅದಾನಿ, ಅಂಬಾನಿ ಕಂಪನಿಗಳಿಂದ ಒಪ್ಪಂದಕ್ಕೆ ಸಹಿ

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೋಟ ಸಂಭವಿಸಿ 12 ಜನರು ಸಾವಿಗೀಡಾಗಿರುವ ನಡುವೆ ದೊರೆಯ ಜನ್ಮ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಭೂತಾನ್‌ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಹೊಸ ಇಂಧನ ಯೋಜನೆಗಳನ್ನು ಬೆಂಬಲಿಸಲು 4,000 ಕೋಟಿ ರೂಪಾಯಿ (ಸುಮಾರು 455 ಮಿಲಿಯನ್ ಡಾಲರ್) ಸಾಲವನ್ನು ಘೋಷಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಇದೇ ಸಂದರ್ಭದಲ್ಲಿ, ಭಾರತದ ಬೆಂಬಲದೊಂದಿಗೆ ನಿರ್ಮಿಸಲಾದ 1,020 ಮೆಗಾವ್ಯಾಟ್ ಸಾಮರ್ಥ್ಯದ ಪುನತ್ಸಂಗ್ಚು-II ಜಲವಿದ್ಯುತ್ ಯೋಜನೆಯನ್ನೂ ದೊರೆ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್ಚುಕ್ ಅವರೊಂದಿಗೆ ಮೋದಿ ಉದ್ಘಾಟಿಸಿದ್ದಾರೆ.

ರಾಯಿಟರ್ಸ್ ಪ್ರಕಾರ, ಟಾಟಾ ಪವರ್, ಅದಾನಿ ಗ್ರೂಪ್ ಮತ್ತು ರಿಲಯನ್ಸ್ ಪವರ್‌ನಂತಹ ಭಾರತದ ಖಾಸಗಿ ಕಂಪನಿಗಳು ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಜಲವಿದ್ಯುತ್ ಯೋಜನೆಗಳನ್ನು ಅಭಿವೃದ್ಧಿಪಡಿಸಲು ಭೂತಾನ್‌ನ ಡ್ರಕ್ ಗ್ರೀನ್ ಪವರ್ ಕಾರ್ಪೊರೇಷನ್‌ನೊಂದಿಗೆ ಒಪ್ಪಂದಗಳಿಗೆ ಸಹಿ ಹಾಕಿವೆ.

ಅತ್ತ ಚೀನಾ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಲು ಮತ್ತು ಭೂತಾನ್‌ನೊಂದಿಗಿನ ತನ್ನ ಗಡಿ ವಿವಾದವನ್ನು ಬಗೆಹರಿಸಲು ಕೆಲಸ ಮಾಡುತ್ತಿದೆ. ಇತ್ತ ಭೂತಾನ್‌ನೊಂದಿಗಿನ ತನ್ನ ಸಂಬಂಧವನ್ನು ಬಲಪಡಿಸಲು ಭಾರತವೂ ಪ್ರಯತ್ನಿಸುತ್ತಿದೆ. ಈ ನಡುವೆ ಮೋದಿ ಭೇಟಿ ನೀಡಿರುವುದು ಮಹತ್ವದ ಪಡೆದಿದೆ.

ಉಭಯ ದೇಶಗಳ ನಾಯಕರು (ಮೋದಿ ಮತ್ತು ಭೂತಾನ್ ದೊರೆ) ಪುನತ್ಸಂಗ್ಚು-IIಯೋಜನೆಯನ್ನು ಉದ್ಘಾಟಿಸಿದ್ದಾರೆ. ಈ ಯೋಜನೆ ಭೂತಾನಿನ ಒಟ್ಟು ಜಲವಿದ್ಯುತ್ ಸಾಮರ್ಥ್ಯವನ್ನು ಸುಮಾರು 40 ಶೇಕಡ ಹೆಚ್ಚಿಸುತ್ತದೆ. ಇದು ಭೂತಾನಿನಲ್ಲಿ ಭಾರತದ ಬೆಂಬಲದೊಂದಿಗೆ ಕಾರ್ಯರೂಪಕ್ಕೆ ಬಂದ ಐದನೇ ಪ್ರಮುಖ ಜಲವಿದ್ಯುತ್ ಯೋಜನೆಯಾಗಿದೆ. ಈ ಮೂಲಕ ಭಾರತದ ನೆರವಿನ ವಿದ್ಯುತ್ ಯೋಜನೆಗಳ ಒಟ್ಟು ಉತ್ಪಾದನಾ ಸಾಮರ್ಥ್ಯ ಸುಮಾರು 3 ಸಾವಿರ ಮೆಗಾವ್ಯಾಟ್‌ಗಳಿಗೆ ಏರಿಕೆಯಾಗಲಿದೆ ಎಂದು ವರದಿಗಳು ಹೇಳಿವೆ.

ವ್ಯಾಪಾರ ಮತ್ತು ಪ್ರಾದೇಶಿಕ ಬೆಳವಣಿಗೆಗೆ ಸಂಪರ್ಕವನ್ನು ಸುಧಾರಿಸುವ ಮಾರ್ಗಗಳ ಬಗ್ಗೆಯೂ ಉಭಯ ನಾಯಕರು ಚರ್ಚಿಸಿದ್ದಾರೆ. ಇದು ವ್ಯಾಪಾರ ಮತ್ತು ಪ್ರಾದೇಶಿಕ ಬೆಳವಣಿಗೆಗೆ ಅತ್ಯಗತ್ಯ. “ಸಂಪರ್ಕವು ಅವಕಾಶವನ್ನು ಸೃಷ್ಟಿಸುತ್ತದೆ, ಅವಕಾಶವು ಸಮೃದ್ಧಿಯನ್ನು ಸೃಷ್ಟಿಸುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಭಾರತವು ಭೂತಾನ್‌ನ ಗೆಲೆಫು ಮತ್ತು ಸ್ಯಾಮ್ಟ್ಸೆಯನ್ನು ಭಾರತದ ರೈಲು ಜಾಲಕ್ಕೆ ಸಂಪರ್ಕಿಸಲಿದೆ. ಇದು ಪೂರ್ಣಗೊಂಡ ನಂತರ, ಭೂತಾನಿನ ರೈತರು ಮತ್ತು ಕೈಗಾರಿಕೆಗಳು ಭಾರತದ ದೊಡ್ಡ ಮಾರುಕಟ್ಟೆಗಳಿಗೆ ಸುಲಭವಾಗಿ ಪ್ರವೇಶವನ್ನು ಪಡೆಯಲು ಸಹಾಯ ಮಾಡುತ್ತದೆ ಎಂದು ಮೋದಿ ತಿಳಿಸಿದ್ದಾರೆ.

ಭೂತಾನಿನ ಮಾಜಿ ಇಂಧನ ಸಚಿವ ಲೋಕನಾಥ್ ಶರ್ಮಾ ಅವರು, “ಭೂತಾನ್ ತನ್ನ ಸ್ವಂತ ಇಂಧನ ಅಗತ್ಯಗಳನ್ನು (ಸುಮಾರು 1,000 ಮೆಗಾವ್ಯಾಟ್) ಪೂರೈಸಿದ ನಂತರ, ಹೆಚ್ಚುವರಿ ವಿದ್ಯುತ್ ಅನ್ನು ಭಾರತಕ್ಕೆ ರಫ್ತು ಮಾಡಲಿದೆ” ಎಂದು ಹೇಳಿದ್ದಾರೆ.

ಕಳೆದ ಸೆಪ್ಟೆಂಬರ್‌ನಲ್ಲಿ, ಅದಾನಿ ಪವರ್ ಮತ್ತು ಭೂತಾನ್‌ನ ಡ್ರಕ್ ಗ್ರೀನ್ ಪವರ್ ಕಾರ್ಪ್ 570 ಮೆಗಾವ್ಯಾಟ್ ವಾಂಗ್ಚು ಜಲವಿದ್ಯುತ್ ಯೋಜನೆಯನ್ನು ನಿರ್ಮಿಸಲು ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಿವೆ. ಭೂತಾನ್‌ನ ಪ್ರಧಾನಿ ತ್ಸೆರಿಂಗ್ ಟೋಬ್ಗೇ ಮತ್ತು ಗೌತಮ್ ಅದಾನಿ ಅವರ ಬೆಂಬಲದೊಂದಿಗೆ 6,000 ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯು ಭೂತಾನ್‌ನ ಚಳಿಗಾಲದ ವಿದ್ಯುತ್ ಅಗತ್ಯಗಳನ್ನು ಪೂರೈಸಲು ಮತ್ತು ಬೇಸಿಗೆಯಲ್ಲಿ ಭಾರತಕ್ಕೆ ಹೆಚ್ಚುವರಿ ಶಕ್ತಿಯನ್ನು ರಫ್ತು ಮಾಡಲು ಸಹಾಯ ಮಾಡುತ್ತದೆ ಎಂದು ವರದಿಯಾಗಿದೆ.

ಅದಾನಿ ಗ್ರೂಪ್‌ನ ಅಧಿಕೃತ ವೆಬ್‌ಸೈಟ್ ಪ್ರಕಾರ, ಈ ಯೋಜನೆಯ ನಿರ್ಮಾಣ ಕಾರ್ಯವು 2026ರ ಮೊದಲಾರ್ಧದ ವೇಳೆಗೆ ಪ್ರಾರಂಭವಾಗುವ ನಿರೀಕ್ಷೆಯಿದೆ. ಇದನ್ನು ಐದು ವರ್ಷಗಳಲ್ಲಿ ಪೂರ್ಣಗೊಳಿಸುವ ಗುರಿಯನ್ನು ಹೊಂದಿದೆ. “ಸುಸ್ಥಿರ ಅಭಿವೃದ್ಧಿಯಲ್ಲಿ ಭೂತಾನ್ ಜಗತ್ತಿಗೆ ಮಾದರಿಯಾಗಿದೆ, ಮತ್ತು ಈ ನವೀಕರಿಸಬಹುದಾದ ಇಂಧನ ಯೋಜನೆಯ ಮೂಲಕ ದೇಶದ ನೈಸರ್ಗಿಕ ಸಂಪನ್ಮೂಲಗಳ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಲು ನಾವು ತುಂಬಾ ಉತ್ಸುಕರಾಗಿದ್ದೇವೆ. ವಾಂಗ್ಚು ಜಲವಿದ್ಯುತ್ ಯೋಜನೆಯು ಜಲವಿದ್ಯುತ್ ಉತ್ಪಾದನೆ ಕಡಿಮೆ ಇರುವಾಗ ಭೂತಾನ್‌ನ ಚಳಿಗಾಲದ ಗರಿಷ್ಠ ಬೇಡಿಕೆಯನ್ನು ನಿರ್ಣಾಯಕವಾಗಿ ಪೂರೈಸುತ್ತದೆ. ಬೇಸಿಗೆಯ ತಿಂಗಳುಗಳಲ್ಲಿ, ಇದು ಭಾರತಕ್ಕೆ ವಿದ್ಯುತ್ ರಫ್ತು ಮಾಡುತ್ತದೆ” ಎಂದು ಅದಾನಿ ಪವರ್‌ನ ಸಿಇಒ ಎಸ್‌ಬಿ ಖಯಾಲಿಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಭೂತಾನಿನ ಮೈಂಡ್‌ಫುಲ್‌ನೆಸ್ ಸಿಟಿ ಯೋಜನೆಗೆ ಬೆಂಬಲ

ಭೂತಾನಿನ ದೊರೆ ಜಿಗ್ಮೆ ಸಿಂಗ್ಯೆ ವಾಂಗ್‌ಚುಕ್ ಅವರ 70 ನೇ ಹುಟ್ಟುಹಬ್ಬದ ಆಚರಣೆಯೊಂದಿಗೆ ಪ್ರಧಾನಿ ಮೋದಿಯವರ ಎರಡು ದಿನಗಳ ಭೇಟಿ ಪ್ರಾರಂಭವಾಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ ಅವರು, ಎರಡೂ ರಾಷ್ಟ್ರಗಳ ನಡುವಿನ ನಿಕಟ ಸ್ನೇಹವನ್ನು ಶ್ಲಾಘಿಸಿದ್ದಾರೆ. “ಭಾರತ ಮತ್ತು ಭೂತಾನ್ ನಡುವಿನ ನಂಬಿಕೆ ಮತ್ತು ಅಭಿವೃದ್ಧಿಯ ಪಾಲುದಾರಿಕೆ ಇಡೀ ಪ್ರದೇಶಕ್ಕೆ ಮಾದರಿಯಾಗಿದೆ. ನಮ್ಮ ಎರಡೂ ದೇಶಗಳು ವೇಗವಾಗಿ ಪ್ರಗತಿ ಹೊಂದುತ್ತಿರುವಾಗ, ನಮ್ಮ ಇಂಧನ ಪಾಲುದಾರಿಕೆ ಈ ಬೆಳವಣಿಗೆಯನ್ನು ಮತ್ತಷ್ಟು ವೇಗಗೊಳಿಸುತ್ತಿದೆ” ಎಂದಿದ್ದಾರೆ.

ಅಭಿವೃದ್ಧಿಯನ್ನು ಆಧ್ಯಾತ್ಮಿಕ ಮತ್ತು ಪರಿಸರ ಯೋಗಕ್ಷೇಮದೊಂದಿಗೆ ಸಂಯೋಜಿಸುವ ಗುರಿಯನ್ನು ಹೊಂದಿರುವ ಗೆಲೆಫು ಮೈಂಡ್‌ಫುಲ್‌ನೆಸ್ ಸಿಟಿ ಯೋಜನೆಗೆ ಭಾರತವು ಭೂತಾನ್‌ಗೆ ಸಹಾಯ ಮಾಡಲಿದೆ. ಇದನ್ನು ಬೆಂಬಲಿಸಲು, ಪ್ರಧಾನಿ ಮೋದಿ ಗೆಲೆಫು ಬಳಿ ಹೊಸ ವಲಸೆ ಚೆಕ್‌ಪಾಯಿಂಟ್ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ ಎಂದು ವರದಿಗಳು ಹೇಳಿವೆ.

ರಸ್ತೆಗಳು, ಕೃಷಿ, ಆರೋಗ್ಯ ರಕ್ಷಣೆ ಮತ್ತು ಹಣಕಾಸು ಮುಂತಾದ ಕ್ಷೇತ್ರಗಳಲ್ಲಿನ ಯೋಜನೆಗಳನ್ನು ಬೆಂಬಲಿಸುವ ಭೂತಾನಿನ ಪ್ರಸ್ತುತ ನಡೆಯುತ್ತಿರುವ ಪಂಚವಾರ್ಷಿಕ ಯೋಜನೆಗೆ ಭಾರತವು ಈ ಹಿಂದೆ ನೀಡಿದ 10,000 ಕೋಟಿಗಳ ನೆರವನ್ನು ಮೋದಿ ನೆನಪಿಸಿಕೊಂಡಿದ್ದಾರೆ. ಭೇಟಿಯ ಸಮಯದಲ್ಲಿ, ನವೀಕರಿಸಬಹುದಾದ ಇಂಧನ, ಆರೋಗ್ಯ ರಕ್ಷಣೆ ಮತ್ತು ಔಷಧ ಮತ್ತು ಮಾನಸಿಕ ಆರೋಗ್ಯ ಸೇವೆಗಳಲ್ಲಿ ಸಹಕರಿಸಲು ಉಭಯ ನಾಯಕರು ಮೂರು ಹೊಸ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ ಎಂದು ವರದಿಗಳು ವಿವರಿಸಿವೆ.

‘Tryst with Destiny’ : ವಿಜಯ ಭಾಷಣದಲ್ಲಿ ನೆಹರು ಹೇಳಿಕೆ ಉಲ್ಲೇಖಿಸಿದ ಝೊಹ್ರಾನ್ ಮಮ್ದಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

ದೇಶದಲ್ಲಿ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ಮೇಲೆ ಅತೀವ ಕೆಲಸದ ಹೊರೆಯನ್ನು ಹೇರಿ ಅವರ ಖಾಸಗಿ ಜೀವನವನ್ನು ಕಿತ್ತುಕೊಳ್ಳುವ ಮೂಲಕ ಮಾನಸಿಕ ಒತ್ತಡಕ್ಕೆ ತಳ್ಳುತ್ತಿರುವ ಪರಿಸ್ಥಿತಿ ಗಂಭೀರ ಹಂತಕ್ಕೆ ತಲುಪಿದೆ. ಅದಾಗ್ಯೂ ಕೆಲ ಕಾರ್ಪೋರೇಟ್‌...

ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ...

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ. ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ...

ಒಳಮೀಸಲಾತಿ : ಶೇ.17ರ ಪ್ರಮಾಣದಲ್ಲೇ ಮುಂದುವರಿಯಲು ಸರ್ಕಾರ ತೀರ್ಮಾನ?

ಒಳಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಕಗ್ಗಂಟನ್ನು ಎದುರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೇಕಡ 17ರ ಮೀಸಲಾತಿ ಪ್ರಮಾಣದಲ್ಲೇ ಮುಂದುವರಿಯಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಶನಿವಾರ ಸಂಜೆ (ಡಿಸೆಂಬರ್ 6) ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಗೋವಾ ನೈಟ್ ಕ್ಲಬ್‌ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು

ಉತ್ತರ ಗೋವಾದ ನೈಟ್‌ ಕ್ಲಬ್‌ವೊಂದರಲ್ಲಿ ಶನಿವಾರ (ಡಿಸೆಂಬರ್ 6) ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಸಿಬ್ಬಂದಿಯಾಗಿದ್ದು,...

ಮೈಸೂರು| ಒಳಮೀಸಲಾತಿ ಹೋರಾಟ ಹತ್ತಿಕ್ಕಲು ನಿಷೇಧಾಜ್ಞೆ ಹೇರಿದ ಕಾಂಗ್ರೆಸ್ ಸರ್ಕಾರ

ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ' ನಡೆಸುತ್ತಿದ್ದ ಹೋರಾಟಕ್ಕೆ ಜಿಲ್ಲಾ ಪೊಲೀಸರು ಅನುಮತಿ ನಿರಾಕರಿಸಿದ್ದು, ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಇಂದು ಪಾದಯಾತ್ರೆ ಆರಂಭಿಸಿದ ಹೋರಾಟಗಾರರನ್ನು...

‘ನಕಲಿ ಬ್ಯಾಂಕ್ ಗ್ಯಾರಂಟಿ’ ಪ್ರಕರಣ : ರಿಲಯನ್ಸ್ ಪವರ್, ಇತರ ಸಂಸ್ಥೆಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ರಿಲಯನ್ಸ್ ಪವರ್ ಕಂಪನಿಯು ಭಾರತೀಯ ಸೌರಶಕ್ತಿ ನಿಗಮಕ್ಕೆ (ಎಸ್‌ಇಸಿಐ) ಟೆಂಡರ್ ಪಡೆಯಲು ಸಲ್ಲಿಸಿದ 68 ಕೋಟಿ ರೂಪಾಯಿಗಳ ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್‌ನ...

ಉತ್ತರ ಪ್ರದೇಶ| ಬಾಬರಿ ಮಸೀದಿ ಮೇಲಿನ ದಾಳಿಗೆ 33 ವರ್ಷ; ಅಯೋಧ್ಯೆ-ವಾರಣಾಸಿಯಲ್ಲಿ ಬಿಗಿ ಭದ್ರತೆ

ಬಾಬರಿ ಮಸೀದಿ ಧ್ವಂಸವಾಗಿ 33ನೇ ವರ್ಷ ತುಂಬುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಜಾಗರೂಕರಾಗಿದ್ದು, ಎಲ್ಲಾ ಮಾರ್ಗಗಳಲ್ಲಿ ವಾಹನಗಳ ಸಂಪೂರ್ಣ ತಪಾಸಣೆ ನಡೆಸುತ್ತಿವೆ. ಈ ಕುರಿತು...

ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ: ‘ಡಿಕೆ’ ಸಹೋದರರಿಗೆ ಇಡಿ-ದೆಹಲಿ ಪೊಲೀಸರಿಂದ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳಿಗೆ ನೀಡಿದ ದೇಣಿಗೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೈಗೊಂಡಿರುವ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯವು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು...