Homeಅಂತರಾಷ್ಟ್ರೀಯಭೂತಾನ್‌ನ ಇಂಧನ ಯೋಜನೆಗಳಿಗೆ 4 ಸಾವಿರ ಕೋಟಿ ಸಾಲ ಘೋಷಿಸಿದ ಮೋದಿ : ಅದಾನಿ, ಅಂಬಾನಿ...

ಭೂತಾನ್‌ನ ಇಂಧನ ಯೋಜನೆಗಳಿಗೆ 4 ಸಾವಿರ ಕೋಟಿ ಸಾಲ ಘೋಷಿಸಿದ ಮೋದಿ : ಅದಾನಿ, ಅಂಬಾನಿ ಕಂಪನಿಗಳಿಂದ ಒಪ್ಪಂದಕ್ಕೆ ಸಹಿ

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೋಟ ಸಂಭವಿಸಿ 12 ಜನರು ಸಾವಿಗೀಡಾಗಿರುವ ನಡುವೆ ದೊರೆಯ ಜನ್ಮ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಭೂತಾನ್‌ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಹೊಸ ಇಂಧನ ಯೋಜನೆಗಳನ್ನು ಬೆಂಬಲಿಸಲು 4,000 ಕೋಟಿ ರೂಪಾಯಿ (ಸುಮಾರು 455 ಮಿಲಿಯನ್ ಡಾಲರ್) ಸಾಲವನ್ನು ಘೋಷಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಇದೇ ಸಂದರ್ಭದಲ್ಲಿ, ಭಾರತದ ಬೆಂಬಲದೊಂದಿಗೆ ನಿರ್ಮಿಸಲಾದ 1,020 ಮೆಗಾವ್ಯಾಟ್ ಸಾಮರ್ಥ್ಯದ ಪುನತ್ಸಂಗ್ಚು-II ಜಲವಿದ್ಯುತ್ ಯೋಜನೆಯನ್ನೂ ದೊರೆ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್ಚುಕ್ ಅವರೊಂದಿಗೆ ಮೋದಿ ಉದ್ಘಾಟಿಸಿದ್ದಾರೆ.

ರಾಯಿಟರ್ಸ್ ಪ್ರಕಾರ, ಟಾಟಾ ಪವರ್, ಅದಾನಿ ಗ್ರೂಪ್ ಮತ್ತು ರಿಲಯನ್ಸ್ ಪವರ್‌ನಂತಹ ಭಾರತದ ಖಾಸಗಿ ಕಂಪನಿಗಳು ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಜಲವಿದ್ಯುತ್ ಯೋಜನೆಗಳನ್ನು ಅಭಿವೃದ್ಧಿಪಡಿಸಲು ಭೂತಾನ್‌ನ ಡ್ರಕ್ ಗ್ರೀನ್ ಪವರ್ ಕಾರ್ಪೊರೇಷನ್‌ನೊಂದಿಗೆ ಒಪ್ಪಂದಗಳಿಗೆ ಸಹಿ ಹಾಕಿವೆ.

ಅತ್ತ ಚೀನಾ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಲು ಮತ್ತು ಭೂತಾನ್‌ನೊಂದಿಗಿನ ತನ್ನ ಗಡಿ ವಿವಾದವನ್ನು ಬಗೆಹರಿಸಲು ಕೆಲಸ ಮಾಡುತ್ತಿದೆ. ಇತ್ತ ಭೂತಾನ್‌ನೊಂದಿಗಿನ ತನ್ನ ಸಂಬಂಧವನ್ನು ಬಲಪಡಿಸಲು ಭಾರತವೂ ಪ್ರಯತ್ನಿಸುತ್ತಿದೆ. ಈ ನಡುವೆ ಮೋದಿ ಭೇಟಿ ನೀಡಿರುವುದು ಮಹತ್ವದ ಪಡೆದಿದೆ.

ಉಭಯ ದೇಶಗಳ ನಾಯಕರು (ಮೋದಿ ಮತ್ತು ಭೂತಾನ್ ದೊರೆ) ಪುನತ್ಸಂಗ್ಚು-IIಯೋಜನೆಯನ್ನು ಉದ್ಘಾಟಿಸಿದ್ದಾರೆ. ಈ ಯೋಜನೆ ಭೂತಾನಿನ ಒಟ್ಟು ಜಲವಿದ್ಯುತ್ ಸಾಮರ್ಥ್ಯವನ್ನು ಸುಮಾರು 40 ಶೇಕಡ ಹೆಚ್ಚಿಸುತ್ತದೆ. ಇದು ಭೂತಾನಿನಲ್ಲಿ ಭಾರತದ ಬೆಂಬಲದೊಂದಿಗೆ ಕಾರ್ಯರೂಪಕ್ಕೆ ಬಂದ ಐದನೇ ಪ್ರಮುಖ ಜಲವಿದ್ಯುತ್ ಯೋಜನೆಯಾಗಿದೆ. ಈ ಮೂಲಕ ಭಾರತದ ನೆರವಿನ ವಿದ್ಯುತ್ ಯೋಜನೆಗಳ ಒಟ್ಟು ಉತ್ಪಾದನಾ ಸಾಮರ್ಥ್ಯ ಸುಮಾರು 3 ಸಾವಿರ ಮೆಗಾವ್ಯಾಟ್‌ಗಳಿಗೆ ಏರಿಕೆಯಾಗಲಿದೆ ಎಂದು ವರದಿಗಳು ಹೇಳಿವೆ.

ವ್ಯಾಪಾರ ಮತ್ತು ಪ್ರಾದೇಶಿಕ ಬೆಳವಣಿಗೆಗೆ ಸಂಪರ್ಕವನ್ನು ಸುಧಾರಿಸುವ ಮಾರ್ಗಗಳ ಬಗ್ಗೆಯೂ ಉಭಯ ನಾಯಕರು ಚರ್ಚಿಸಿದ್ದಾರೆ. ಇದು ವ್ಯಾಪಾರ ಮತ್ತು ಪ್ರಾದೇಶಿಕ ಬೆಳವಣಿಗೆಗೆ ಅತ್ಯಗತ್ಯ. “ಸಂಪರ್ಕವು ಅವಕಾಶವನ್ನು ಸೃಷ್ಟಿಸುತ್ತದೆ, ಅವಕಾಶವು ಸಮೃದ್ಧಿಯನ್ನು ಸೃಷ್ಟಿಸುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಭಾರತವು ಭೂತಾನ್‌ನ ಗೆಲೆಫು ಮತ್ತು ಸ್ಯಾಮ್ಟ್ಸೆಯನ್ನು ಭಾರತದ ರೈಲು ಜಾಲಕ್ಕೆ ಸಂಪರ್ಕಿಸಲಿದೆ. ಇದು ಪೂರ್ಣಗೊಂಡ ನಂತರ, ಭೂತಾನಿನ ರೈತರು ಮತ್ತು ಕೈಗಾರಿಕೆಗಳು ಭಾರತದ ದೊಡ್ಡ ಮಾರುಕಟ್ಟೆಗಳಿಗೆ ಸುಲಭವಾಗಿ ಪ್ರವೇಶವನ್ನು ಪಡೆಯಲು ಸಹಾಯ ಮಾಡುತ್ತದೆ ಎಂದು ಮೋದಿ ತಿಳಿಸಿದ್ದಾರೆ.

ಭೂತಾನಿನ ಮಾಜಿ ಇಂಧನ ಸಚಿವ ಲೋಕನಾಥ್ ಶರ್ಮಾ ಅವರು, “ಭೂತಾನ್ ತನ್ನ ಸ್ವಂತ ಇಂಧನ ಅಗತ್ಯಗಳನ್ನು (ಸುಮಾರು 1,000 ಮೆಗಾವ್ಯಾಟ್) ಪೂರೈಸಿದ ನಂತರ, ಹೆಚ್ಚುವರಿ ವಿದ್ಯುತ್ ಅನ್ನು ಭಾರತಕ್ಕೆ ರಫ್ತು ಮಾಡಲಿದೆ” ಎಂದು ಹೇಳಿದ್ದಾರೆ.

ಕಳೆದ ಸೆಪ್ಟೆಂಬರ್‌ನಲ್ಲಿ, ಅದಾನಿ ಪವರ್ ಮತ್ತು ಭೂತಾನ್‌ನ ಡ್ರಕ್ ಗ್ರೀನ್ ಪವರ್ ಕಾರ್ಪ್ 570 ಮೆಗಾವ್ಯಾಟ್ ವಾಂಗ್ಚು ಜಲವಿದ್ಯುತ್ ಯೋಜನೆಯನ್ನು ನಿರ್ಮಿಸಲು ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಿವೆ. ಭೂತಾನ್‌ನ ಪ್ರಧಾನಿ ತ್ಸೆರಿಂಗ್ ಟೋಬ್ಗೇ ಮತ್ತು ಗೌತಮ್ ಅದಾನಿ ಅವರ ಬೆಂಬಲದೊಂದಿಗೆ 6,000 ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯು ಭೂತಾನ್‌ನ ಚಳಿಗಾಲದ ವಿದ್ಯುತ್ ಅಗತ್ಯಗಳನ್ನು ಪೂರೈಸಲು ಮತ್ತು ಬೇಸಿಗೆಯಲ್ಲಿ ಭಾರತಕ್ಕೆ ಹೆಚ್ಚುವರಿ ಶಕ್ತಿಯನ್ನು ರಫ್ತು ಮಾಡಲು ಸಹಾಯ ಮಾಡುತ್ತದೆ ಎಂದು ವರದಿಯಾಗಿದೆ.

ಅದಾನಿ ಗ್ರೂಪ್‌ನ ಅಧಿಕೃತ ವೆಬ್‌ಸೈಟ್ ಪ್ರಕಾರ, ಈ ಯೋಜನೆಯ ನಿರ್ಮಾಣ ಕಾರ್ಯವು 2026ರ ಮೊದಲಾರ್ಧದ ವೇಳೆಗೆ ಪ್ರಾರಂಭವಾಗುವ ನಿರೀಕ್ಷೆಯಿದೆ. ಇದನ್ನು ಐದು ವರ್ಷಗಳಲ್ಲಿ ಪೂರ್ಣಗೊಳಿಸುವ ಗುರಿಯನ್ನು ಹೊಂದಿದೆ. “ಸುಸ್ಥಿರ ಅಭಿವೃದ್ಧಿಯಲ್ಲಿ ಭೂತಾನ್ ಜಗತ್ತಿಗೆ ಮಾದರಿಯಾಗಿದೆ, ಮತ್ತು ಈ ನವೀಕರಿಸಬಹುದಾದ ಇಂಧನ ಯೋಜನೆಯ ಮೂಲಕ ದೇಶದ ನೈಸರ್ಗಿಕ ಸಂಪನ್ಮೂಲಗಳ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಲು ನಾವು ತುಂಬಾ ಉತ್ಸುಕರಾಗಿದ್ದೇವೆ. ವಾಂಗ್ಚು ಜಲವಿದ್ಯುತ್ ಯೋಜನೆಯು ಜಲವಿದ್ಯುತ್ ಉತ್ಪಾದನೆ ಕಡಿಮೆ ಇರುವಾಗ ಭೂತಾನ್‌ನ ಚಳಿಗಾಲದ ಗರಿಷ್ಠ ಬೇಡಿಕೆಯನ್ನು ನಿರ್ಣಾಯಕವಾಗಿ ಪೂರೈಸುತ್ತದೆ. ಬೇಸಿಗೆಯ ತಿಂಗಳುಗಳಲ್ಲಿ, ಇದು ಭಾರತಕ್ಕೆ ವಿದ್ಯುತ್ ರಫ್ತು ಮಾಡುತ್ತದೆ” ಎಂದು ಅದಾನಿ ಪವರ್‌ನ ಸಿಇಒ ಎಸ್‌ಬಿ ಖಯಾಲಿಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಭೂತಾನಿನ ಮೈಂಡ್‌ಫುಲ್‌ನೆಸ್ ಸಿಟಿ ಯೋಜನೆಗೆ ಬೆಂಬಲ

ಭೂತಾನಿನ ದೊರೆ ಜಿಗ್ಮೆ ಸಿಂಗ್ಯೆ ವಾಂಗ್‌ಚುಕ್ ಅವರ 70 ನೇ ಹುಟ್ಟುಹಬ್ಬದ ಆಚರಣೆಯೊಂದಿಗೆ ಪ್ರಧಾನಿ ಮೋದಿಯವರ ಎರಡು ದಿನಗಳ ಭೇಟಿ ಪ್ರಾರಂಭವಾಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ ಅವರು, ಎರಡೂ ರಾಷ್ಟ್ರಗಳ ನಡುವಿನ ನಿಕಟ ಸ್ನೇಹವನ್ನು ಶ್ಲಾಘಿಸಿದ್ದಾರೆ. “ಭಾರತ ಮತ್ತು ಭೂತಾನ್ ನಡುವಿನ ನಂಬಿಕೆ ಮತ್ತು ಅಭಿವೃದ್ಧಿಯ ಪಾಲುದಾರಿಕೆ ಇಡೀ ಪ್ರದೇಶಕ್ಕೆ ಮಾದರಿಯಾಗಿದೆ. ನಮ್ಮ ಎರಡೂ ದೇಶಗಳು ವೇಗವಾಗಿ ಪ್ರಗತಿ ಹೊಂದುತ್ತಿರುವಾಗ, ನಮ್ಮ ಇಂಧನ ಪಾಲುದಾರಿಕೆ ಈ ಬೆಳವಣಿಗೆಯನ್ನು ಮತ್ತಷ್ಟು ವೇಗಗೊಳಿಸುತ್ತಿದೆ” ಎಂದಿದ್ದಾರೆ.

ಅಭಿವೃದ್ಧಿಯನ್ನು ಆಧ್ಯಾತ್ಮಿಕ ಮತ್ತು ಪರಿಸರ ಯೋಗಕ್ಷೇಮದೊಂದಿಗೆ ಸಂಯೋಜಿಸುವ ಗುರಿಯನ್ನು ಹೊಂದಿರುವ ಗೆಲೆಫು ಮೈಂಡ್‌ಫುಲ್‌ನೆಸ್ ಸಿಟಿ ಯೋಜನೆಗೆ ಭಾರತವು ಭೂತಾನ್‌ಗೆ ಸಹಾಯ ಮಾಡಲಿದೆ. ಇದನ್ನು ಬೆಂಬಲಿಸಲು, ಪ್ರಧಾನಿ ಮೋದಿ ಗೆಲೆಫು ಬಳಿ ಹೊಸ ವಲಸೆ ಚೆಕ್‌ಪಾಯಿಂಟ್ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ ಎಂದು ವರದಿಗಳು ಹೇಳಿವೆ.

ರಸ್ತೆಗಳು, ಕೃಷಿ, ಆರೋಗ್ಯ ರಕ್ಷಣೆ ಮತ್ತು ಹಣಕಾಸು ಮುಂತಾದ ಕ್ಷೇತ್ರಗಳಲ್ಲಿನ ಯೋಜನೆಗಳನ್ನು ಬೆಂಬಲಿಸುವ ಭೂತಾನಿನ ಪ್ರಸ್ತುತ ನಡೆಯುತ್ತಿರುವ ಪಂಚವಾರ್ಷಿಕ ಯೋಜನೆಗೆ ಭಾರತವು ಈ ಹಿಂದೆ ನೀಡಿದ 10,000 ಕೋಟಿಗಳ ನೆರವನ್ನು ಮೋದಿ ನೆನಪಿಸಿಕೊಂಡಿದ್ದಾರೆ. ಭೇಟಿಯ ಸಮಯದಲ್ಲಿ, ನವೀಕರಿಸಬಹುದಾದ ಇಂಧನ, ಆರೋಗ್ಯ ರಕ್ಷಣೆ ಮತ್ತು ಔಷಧ ಮತ್ತು ಮಾನಸಿಕ ಆರೋಗ್ಯ ಸೇವೆಗಳಲ್ಲಿ ಸಹಕರಿಸಲು ಉಭಯ ನಾಯಕರು ಮೂರು ಹೊಸ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ ಎಂದು ವರದಿಗಳು ವಿವರಿಸಿವೆ.

‘Tryst with Destiny’ : ವಿಜಯ ಭಾಷಣದಲ್ಲಿ ನೆಹರು ಹೇಳಿಕೆ ಉಲ್ಲೇಖಿಸಿದ ಝೊಹ್ರಾನ್ ಮಮ್ದಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...