Homeಅಂತರಾಷ್ಟ್ರೀಯಭೂತಾನ್‌ನ ಇಂಧನ ಯೋಜನೆಗಳಿಗೆ 4 ಸಾವಿರ ಕೋಟಿ ಸಾಲ ಘೋಷಿಸಿದ ಮೋದಿ : ಅದಾನಿ, ಅಂಬಾನಿ...

ಭೂತಾನ್‌ನ ಇಂಧನ ಯೋಜನೆಗಳಿಗೆ 4 ಸಾವಿರ ಕೋಟಿ ಸಾಲ ಘೋಷಿಸಿದ ಮೋದಿ : ಅದಾನಿ, ಅಂಬಾನಿ ಕಂಪನಿಗಳಿಂದ ಒಪ್ಪಂದಕ್ಕೆ ಸಹಿ

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೋಟ ಸಂಭವಿಸಿ 12 ಜನರು ಸಾವಿಗೀಡಾಗಿರುವ ನಡುವೆ ದೊರೆಯ ಜನ್ಮ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಭೂತಾನ್‌ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಹೊಸ ಇಂಧನ ಯೋಜನೆಗಳನ್ನು ಬೆಂಬಲಿಸಲು 4,000 ಕೋಟಿ ರೂಪಾಯಿ (ಸುಮಾರು 455 ಮಿಲಿಯನ್ ಡಾಲರ್) ಸಾಲವನ್ನು ಘೋಷಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಇದೇ ಸಂದರ್ಭದಲ್ಲಿ, ಭಾರತದ ಬೆಂಬಲದೊಂದಿಗೆ ನಿರ್ಮಿಸಲಾದ 1,020 ಮೆಗಾವ್ಯಾಟ್ ಸಾಮರ್ಥ್ಯದ ಪುನತ್ಸಂಗ್ಚು-II ಜಲವಿದ್ಯುತ್ ಯೋಜನೆಯನ್ನೂ ದೊರೆ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್ಚುಕ್ ಅವರೊಂದಿಗೆ ಮೋದಿ ಉದ್ಘಾಟಿಸಿದ್ದಾರೆ.

ರಾಯಿಟರ್ಸ್ ಪ್ರಕಾರ, ಟಾಟಾ ಪವರ್, ಅದಾನಿ ಗ್ರೂಪ್ ಮತ್ತು ರಿಲಯನ್ಸ್ ಪವರ್‌ನಂತಹ ಭಾರತದ ಖಾಸಗಿ ಕಂಪನಿಗಳು ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಜಲವಿದ್ಯುತ್ ಯೋಜನೆಗಳನ್ನು ಅಭಿವೃದ್ಧಿಪಡಿಸಲು ಭೂತಾನ್‌ನ ಡ್ರಕ್ ಗ್ರೀನ್ ಪವರ್ ಕಾರ್ಪೊರೇಷನ್‌ನೊಂದಿಗೆ ಒಪ್ಪಂದಗಳಿಗೆ ಸಹಿ ಹಾಕಿವೆ.

ಅತ್ತ ಚೀನಾ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಲು ಮತ್ತು ಭೂತಾನ್‌ನೊಂದಿಗಿನ ತನ್ನ ಗಡಿ ವಿವಾದವನ್ನು ಬಗೆಹರಿಸಲು ಕೆಲಸ ಮಾಡುತ್ತಿದೆ. ಇತ್ತ ಭೂತಾನ್‌ನೊಂದಿಗಿನ ತನ್ನ ಸಂಬಂಧವನ್ನು ಬಲಪಡಿಸಲು ಭಾರತವೂ ಪ್ರಯತ್ನಿಸುತ್ತಿದೆ. ಈ ನಡುವೆ ಮೋದಿ ಭೇಟಿ ನೀಡಿರುವುದು ಮಹತ್ವದ ಪಡೆದಿದೆ.

ಉಭಯ ದೇಶಗಳ ನಾಯಕರು (ಮೋದಿ ಮತ್ತು ಭೂತಾನ್ ದೊರೆ) ಪುನತ್ಸಂಗ್ಚು-IIಯೋಜನೆಯನ್ನು ಉದ್ಘಾಟಿಸಿದ್ದಾರೆ. ಈ ಯೋಜನೆ ಭೂತಾನಿನ ಒಟ್ಟು ಜಲವಿದ್ಯುತ್ ಸಾಮರ್ಥ್ಯವನ್ನು ಸುಮಾರು 40 ಶೇಕಡ ಹೆಚ್ಚಿಸುತ್ತದೆ. ಇದು ಭೂತಾನಿನಲ್ಲಿ ಭಾರತದ ಬೆಂಬಲದೊಂದಿಗೆ ಕಾರ್ಯರೂಪಕ್ಕೆ ಬಂದ ಐದನೇ ಪ್ರಮುಖ ಜಲವಿದ್ಯುತ್ ಯೋಜನೆಯಾಗಿದೆ. ಈ ಮೂಲಕ ಭಾರತದ ನೆರವಿನ ವಿದ್ಯುತ್ ಯೋಜನೆಗಳ ಒಟ್ಟು ಉತ್ಪಾದನಾ ಸಾಮರ್ಥ್ಯ ಸುಮಾರು 3 ಸಾವಿರ ಮೆಗಾವ್ಯಾಟ್‌ಗಳಿಗೆ ಏರಿಕೆಯಾಗಲಿದೆ ಎಂದು ವರದಿಗಳು ಹೇಳಿವೆ.

ವ್ಯಾಪಾರ ಮತ್ತು ಪ್ರಾದೇಶಿಕ ಬೆಳವಣಿಗೆಗೆ ಸಂಪರ್ಕವನ್ನು ಸುಧಾರಿಸುವ ಮಾರ್ಗಗಳ ಬಗ್ಗೆಯೂ ಉಭಯ ನಾಯಕರು ಚರ್ಚಿಸಿದ್ದಾರೆ. ಇದು ವ್ಯಾಪಾರ ಮತ್ತು ಪ್ರಾದೇಶಿಕ ಬೆಳವಣಿಗೆಗೆ ಅತ್ಯಗತ್ಯ. “ಸಂಪರ್ಕವು ಅವಕಾಶವನ್ನು ಸೃಷ್ಟಿಸುತ್ತದೆ, ಅವಕಾಶವು ಸಮೃದ್ಧಿಯನ್ನು ಸೃಷ್ಟಿಸುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಭಾರತವು ಭೂತಾನ್‌ನ ಗೆಲೆಫು ಮತ್ತು ಸ್ಯಾಮ್ಟ್ಸೆಯನ್ನು ಭಾರತದ ರೈಲು ಜಾಲಕ್ಕೆ ಸಂಪರ್ಕಿಸಲಿದೆ. ಇದು ಪೂರ್ಣಗೊಂಡ ನಂತರ, ಭೂತಾನಿನ ರೈತರು ಮತ್ತು ಕೈಗಾರಿಕೆಗಳು ಭಾರತದ ದೊಡ್ಡ ಮಾರುಕಟ್ಟೆಗಳಿಗೆ ಸುಲಭವಾಗಿ ಪ್ರವೇಶವನ್ನು ಪಡೆಯಲು ಸಹಾಯ ಮಾಡುತ್ತದೆ ಎಂದು ಮೋದಿ ತಿಳಿಸಿದ್ದಾರೆ.

ಭೂತಾನಿನ ಮಾಜಿ ಇಂಧನ ಸಚಿವ ಲೋಕನಾಥ್ ಶರ್ಮಾ ಅವರು, “ಭೂತಾನ್ ತನ್ನ ಸ್ವಂತ ಇಂಧನ ಅಗತ್ಯಗಳನ್ನು (ಸುಮಾರು 1,000 ಮೆಗಾವ್ಯಾಟ್) ಪೂರೈಸಿದ ನಂತರ, ಹೆಚ್ಚುವರಿ ವಿದ್ಯುತ್ ಅನ್ನು ಭಾರತಕ್ಕೆ ರಫ್ತು ಮಾಡಲಿದೆ” ಎಂದು ಹೇಳಿದ್ದಾರೆ.

ಕಳೆದ ಸೆಪ್ಟೆಂಬರ್‌ನಲ್ಲಿ, ಅದಾನಿ ಪವರ್ ಮತ್ತು ಭೂತಾನ್‌ನ ಡ್ರಕ್ ಗ್ರೀನ್ ಪವರ್ ಕಾರ್ಪ್ 570 ಮೆಗಾವ್ಯಾಟ್ ವಾಂಗ್ಚು ಜಲವಿದ್ಯುತ್ ಯೋಜನೆಯನ್ನು ನಿರ್ಮಿಸಲು ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಿವೆ. ಭೂತಾನ್‌ನ ಪ್ರಧಾನಿ ತ್ಸೆರಿಂಗ್ ಟೋಬ್ಗೇ ಮತ್ತು ಗೌತಮ್ ಅದಾನಿ ಅವರ ಬೆಂಬಲದೊಂದಿಗೆ 6,000 ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯು ಭೂತಾನ್‌ನ ಚಳಿಗಾಲದ ವಿದ್ಯುತ್ ಅಗತ್ಯಗಳನ್ನು ಪೂರೈಸಲು ಮತ್ತು ಬೇಸಿಗೆಯಲ್ಲಿ ಭಾರತಕ್ಕೆ ಹೆಚ್ಚುವರಿ ಶಕ್ತಿಯನ್ನು ರಫ್ತು ಮಾಡಲು ಸಹಾಯ ಮಾಡುತ್ತದೆ ಎಂದು ವರದಿಯಾಗಿದೆ.

ಅದಾನಿ ಗ್ರೂಪ್‌ನ ಅಧಿಕೃತ ವೆಬ್‌ಸೈಟ್ ಪ್ರಕಾರ, ಈ ಯೋಜನೆಯ ನಿರ್ಮಾಣ ಕಾರ್ಯವು 2026ರ ಮೊದಲಾರ್ಧದ ವೇಳೆಗೆ ಪ್ರಾರಂಭವಾಗುವ ನಿರೀಕ್ಷೆಯಿದೆ. ಇದನ್ನು ಐದು ವರ್ಷಗಳಲ್ಲಿ ಪೂರ್ಣಗೊಳಿಸುವ ಗುರಿಯನ್ನು ಹೊಂದಿದೆ. “ಸುಸ್ಥಿರ ಅಭಿವೃದ್ಧಿಯಲ್ಲಿ ಭೂತಾನ್ ಜಗತ್ತಿಗೆ ಮಾದರಿಯಾಗಿದೆ, ಮತ್ತು ಈ ನವೀಕರಿಸಬಹುದಾದ ಇಂಧನ ಯೋಜನೆಯ ಮೂಲಕ ದೇಶದ ನೈಸರ್ಗಿಕ ಸಂಪನ್ಮೂಲಗಳ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಲು ನಾವು ತುಂಬಾ ಉತ್ಸುಕರಾಗಿದ್ದೇವೆ. ವಾಂಗ್ಚು ಜಲವಿದ್ಯುತ್ ಯೋಜನೆಯು ಜಲವಿದ್ಯುತ್ ಉತ್ಪಾದನೆ ಕಡಿಮೆ ಇರುವಾಗ ಭೂತಾನ್‌ನ ಚಳಿಗಾಲದ ಗರಿಷ್ಠ ಬೇಡಿಕೆಯನ್ನು ನಿರ್ಣಾಯಕವಾಗಿ ಪೂರೈಸುತ್ತದೆ. ಬೇಸಿಗೆಯ ತಿಂಗಳುಗಳಲ್ಲಿ, ಇದು ಭಾರತಕ್ಕೆ ವಿದ್ಯುತ್ ರಫ್ತು ಮಾಡುತ್ತದೆ” ಎಂದು ಅದಾನಿ ಪವರ್‌ನ ಸಿಇಒ ಎಸ್‌ಬಿ ಖಯಾಲಿಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಭೂತಾನಿನ ಮೈಂಡ್‌ಫುಲ್‌ನೆಸ್ ಸಿಟಿ ಯೋಜನೆಗೆ ಬೆಂಬಲ

ಭೂತಾನಿನ ದೊರೆ ಜಿಗ್ಮೆ ಸಿಂಗ್ಯೆ ವಾಂಗ್‌ಚುಕ್ ಅವರ 70 ನೇ ಹುಟ್ಟುಹಬ್ಬದ ಆಚರಣೆಯೊಂದಿಗೆ ಪ್ರಧಾನಿ ಮೋದಿಯವರ ಎರಡು ದಿನಗಳ ಭೇಟಿ ಪ್ರಾರಂಭವಾಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ ಅವರು, ಎರಡೂ ರಾಷ್ಟ್ರಗಳ ನಡುವಿನ ನಿಕಟ ಸ್ನೇಹವನ್ನು ಶ್ಲಾಘಿಸಿದ್ದಾರೆ. “ಭಾರತ ಮತ್ತು ಭೂತಾನ್ ನಡುವಿನ ನಂಬಿಕೆ ಮತ್ತು ಅಭಿವೃದ್ಧಿಯ ಪಾಲುದಾರಿಕೆ ಇಡೀ ಪ್ರದೇಶಕ್ಕೆ ಮಾದರಿಯಾಗಿದೆ. ನಮ್ಮ ಎರಡೂ ದೇಶಗಳು ವೇಗವಾಗಿ ಪ್ರಗತಿ ಹೊಂದುತ್ತಿರುವಾಗ, ನಮ್ಮ ಇಂಧನ ಪಾಲುದಾರಿಕೆ ಈ ಬೆಳವಣಿಗೆಯನ್ನು ಮತ್ತಷ್ಟು ವೇಗಗೊಳಿಸುತ್ತಿದೆ” ಎಂದಿದ್ದಾರೆ.

ಅಭಿವೃದ್ಧಿಯನ್ನು ಆಧ್ಯಾತ್ಮಿಕ ಮತ್ತು ಪರಿಸರ ಯೋಗಕ್ಷೇಮದೊಂದಿಗೆ ಸಂಯೋಜಿಸುವ ಗುರಿಯನ್ನು ಹೊಂದಿರುವ ಗೆಲೆಫು ಮೈಂಡ್‌ಫುಲ್‌ನೆಸ್ ಸಿಟಿ ಯೋಜನೆಗೆ ಭಾರತವು ಭೂತಾನ್‌ಗೆ ಸಹಾಯ ಮಾಡಲಿದೆ. ಇದನ್ನು ಬೆಂಬಲಿಸಲು, ಪ್ರಧಾನಿ ಮೋದಿ ಗೆಲೆಫು ಬಳಿ ಹೊಸ ವಲಸೆ ಚೆಕ್‌ಪಾಯಿಂಟ್ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ ಎಂದು ವರದಿಗಳು ಹೇಳಿವೆ.

ರಸ್ತೆಗಳು, ಕೃಷಿ, ಆರೋಗ್ಯ ರಕ್ಷಣೆ ಮತ್ತು ಹಣಕಾಸು ಮುಂತಾದ ಕ್ಷೇತ್ರಗಳಲ್ಲಿನ ಯೋಜನೆಗಳನ್ನು ಬೆಂಬಲಿಸುವ ಭೂತಾನಿನ ಪ್ರಸ್ತುತ ನಡೆಯುತ್ತಿರುವ ಪಂಚವಾರ್ಷಿಕ ಯೋಜನೆಗೆ ಭಾರತವು ಈ ಹಿಂದೆ ನೀಡಿದ 10,000 ಕೋಟಿಗಳ ನೆರವನ್ನು ಮೋದಿ ನೆನಪಿಸಿಕೊಂಡಿದ್ದಾರೆ. ಭೇಟಿಯ ಸಮಯದಲ್ಲಿ, ನವೀಕರಿಸಬಹುದಾದ ಇಂಧನ, ಆರೋಗ್ಯ ರಕ್ಷಣೆ ಮತ್ತು ಔಷಧ ಮತ್ತು ಮಾನಸಿಕ ಆರೋಗ್ಯ ಸೇವೆಗಳಲ್ಲಿ ಸಹಕರಿಸಲು ಉಭಯ ನಾಯಕರು ಮೂರು ಹೊಸ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ ಎಂದು ವರದಿಗಳು ವಿವರಿಸಿವೆ.

‘Tryst with Destiny’ : ವಿಜಯ ಭಾಷಣದಲ್ಲಿ ನೆಹರು ಹೇಳಿಕೆ ಉಲ್ಲೇಖಿಸಿದ ಝೊಹ್ರಾನ್ ಮಮ್ದಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆತ ಗಲ್ಲಿಗೇರುವವರೆಗೆ ಹೋರಾಟ ಮುಂದುವರಿಸುತ್ತೇನೆ’ : ಸುಪ್ರೀಂ ಕೋರ್ಟ್ ಆದೇಶ ಸ್ವಾಗತಿಸಿದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತಿಗೆ ತಡೆ ನೀಡಿರುವ ಸುಪ್ರೀಂ ಕೋರ್ಟ್‌ ಆದೇಶವನ್ನು ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸ್ವಾಗತಿಸಿದ್ದು, ಸೆಂಗಾರ್‌ ಗಲ್ಲಿಗೇರುವವರೆಗೆ ತನ್ನ ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ. "ಈ...

ಅರಾವಳಿ ಬೆಟ್ಟ, ಶ್ರೇಣಿಗಳ ಮರು ವ್ಯಾಖ್ಯಾನಕ್ಕೆ ಸುಪ್ರೀಂ ಕೋರ್ಟ್ ತಡೆ

ಅರಾವಳಿ ಬೆಟ್ಟ ಮತ್ತು ಶ್ರೇಣಿಗಳ ಹೊಸ ವ್ಯಾಖ್ಯಾನ ಕುರಿತು ನವೆಂಬರ್ 20ರಂದು ನಿವೃತ್ತ ಸಿಜೆಐ ಬಿ. ಆರ್ ಗವಾಯಿ ನೇತೃತ್ವದ ಪೀಠ ನೀಡಿದ ತೀರ್ಪಿನ ಅನುಷ್ಠಾನವನ್ನು ಮೂವರು ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ನ ವಿಶೇಷ...

ತಮಿಳುನಾಡು: ವಲಸೆ ಕಾರ್ಮಿಕನ ಮೇಲೆ ನಾಲ್ವರು ಅಪ್ರಾಪ್ತ ಗಾಂಜಾ ವ್ಯಸನಿಗಳಿಂದ ಹಲ್ಲೆ; ಡಿಎಂಕೆಯನ್ನು ಟೀಕಿಸಿದ ಬಿಜೆಪಿ 

ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯಲ್ಲಿ ವಲಸೆ ಕಾರ್ಮಿಕನ ಮೇಲೆ ನಾಲ್ವರು ಅಪ್ರಾಪ್ತ ವಯಸ್ಕರು ಹಲ್ಲೆ ನಡೆಸಿದ್ದು, ವಲಸೆ ಕಾರ್ಮಿಕ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯನ್ನು ಅಪ್ರಾಪ್ತ ವಯಸ್ಕರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದು, ಈ ಆಘಾತಕಾರಿ...

ಬಿಜೆಪಿ ಶಾಸಕ ಶರಣು ಸಲಗರ್ ಮೇಲೆ ಎಫ್ಐಆರ್: ಚುನಾವಣೆ ವೇಳೆ ₹99 ಲಕ್ಷ ಸಾಲ ಪಡೆದು ವಂಚನೆ ಆರೋಪ

ಬೀದರ್: 2023 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸಾಲವಾಗಿ ಪಡೆದಿದ್ದ ಹಣವನ್ನು ಹಿಂದಿರುಗಿಸಲು ವಿಫಲವಾದ ಆರೋಪದ ಮೇಲೆ 99 ಲಕ್ಷ ರೂ.ಗಳ ಚೆಕ್ ಅಮಾನ್ಯವಾದ ದೂರಿಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಶರಣು ಸಲಗರ್...

ಗಾಜಾದಲ್ಲಿ ನರಮೇಧ ಮುಂದುವರೆಸಿದ ಇಸ್ರೇಲ್: 80 ದಿನಗಳಲ್ಲಿ 969 ಬಾರಿ ಕದನ ವಿರಾಮ ಉಲ್ಲಂಘನೆ: 418ಜನರ ಹತ್ಯೆ

80 ದಿನಗಳ ಅವಧಿಯಲ್ಲಿ ಇಸ್ರೇಲ್ 969 ಬಾರಿ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದು, 418 ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 1,141 ಜನರು ಗಾಯಗೊಂಡಿದ್ದಾರೆ ಎಂದು ಗಾಜಾದಲ್ಲಿರುವ ಸರ್ಕಾರಿ ಮಾಧ್ಯಮ ಕಚೇರಿ ತಿಳಿಸಿದೆ. ಭಾನುವಾರ ಬಿಡುಗಡೆ...

BREAKING NEWS: ಉನ್ನಾವೋ ಅತ್ಯಾಚಾರ: ಸೆಂಗಾರ್ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

2017 ರ ಉನ್ನಾವೋ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶವನ್ನು...

‘ಲವ್ ಜಿಹಾದ್’ ಆರೋಪ: ಬರೇಲಿಯಲ್ಲಿ ಹುಟ್ಟುಹಬ್ಬದ ಪಾರ್ಟಿಯನ್ನು ಹಿಂಸಾಚಾರಕ್ಕೆ ತಿರುಗಿಸಿದ ಬಜರಂಗದಳ 

ಬರೇಲಿಯ ಕೆಫೆಯೊಂದರಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯ ಹುಟ್ಟುಹಬ್ಬದ ಆಚರಣೆಯಾಗಿ ಆರಂಭವಾದ ಸಂಭ್ರಮ, ಶನಿವಾರ ಬಜರಂಗದಳ ಸದಸ್ಯರು ಸ್ಥಳಕ್ಕೆ ನುಗ್ಗಿ, ಅತಿಥಿಗಳ ಮೇಲೆ ಹಲ್ಲೆ ನಡೆಸಿ, ಅಲ್ಲಿದ್ದ ಇಬ್ಬರು ಮುಸ್ಲಿಂ ಹುಡುಗರನ್ನು "ಲವ್ ಜಿಹಾದ್" ಎಂದು...

ಉನ್ನಾವೋ ಅತ್ಯಾಚಾರ: ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ಅಮಾನತ್ತಿನಲ್ಲಿಟ್ಟಿರುವುದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು (ಡಿ.29) ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ಮುಖ್ಯ ನ್ಯಾಯಮೂರ್ತಿ...

ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ : ಓರ್ವ ಪ್ರಯಾಣಿಕ ಸಾವು

ಆಂಧ್ರ ಪ್ರದೇಶದ ಅನಕಪಲ್ಲಿ ಜಿಲ್ಲೆಯ ಎಲಮಂಚಿಲಿ ಬಳಿ ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನ ಎರಡು ಬೋಗಿಗಳಲ್ಲಿ ಸೋಮವಾರ (ಡಿ.29) ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅನಕಪಲ್ಲಿ ಪೊಲೀಸ್ ವರಿಷ್ಠಾಧಿಕಾರಿ...

ಉಸ್ಮಾನ್ ಹಾದಿ ಹತ್ಯೆ : ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಮೂಲಕ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದ ಬಾಂಗ್ಲಾ ಪೊಲೀಸರು

ಬಾಂಗ್ಲಾದೇಶದ ರಾಜಕೀಯ ಕಾರ್ಯಕರ್ತ ಉಸ್ಮಾನ್ ಹಾದಿ ಹತ್ಯೆಯ ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಗಡಿಯ ಮೂಲಕ ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂದು ಢಾಕಾ ಮೆಟ್ರೋಪಾಲಿಟನ್ ಪೊಲೀಸರು (ಡಿಎಂಪಿ) ತಿಳಿಸಿದ್ದಾರೆ ಎಂದು ದಿ ಡೈಲಿ...