Homeಅಂತರಾಷ್ಟ್ರೀಯಭೂತಾನ್‌ನ ಇಂಧನ ಯೋಜನೆಗಳಿಗೆ 4 ಸಾವಿರ ಕೋಟಿ ಸಾಲ ಘೋಷಿಸಿದ ಮೋದಿ : ಅದಾನಿ, ಅಂಬಾನಿ...

ಭೂತಾನ್‌ನ ಇಂಧನ ಯೋಜನೆಗಳಿಗೆ 4 ಸಾವಿರ ಕೋಟಿ ಸಾಲ ಘೋಷಿಸಿದ ಮೋದಿ : ಅದಾನಿ, ಅಂಬಾನಿ ಕಂಪನಿಗಳಿಂದ ಒಪ್ಪಂದಕ್ಕೆ ಸಹಿ

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೋಟ ಸಂಭವಿಸಿ 12 ಜನರು ಸಾವಿಗೀಡಾಗಿರುವ ನಡುವೆ ದೊರೆಯ ಜನ್ಮ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಭೂತಾನ್‌ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಹೊಸ ಇಂಧನ ಯೋಜನೆಗಳನ್ನು ಬೆಂಬಲಿಸಲು 4,000 ಕೋಟಿ ರೂಪಾಯಿ (ಸುಮಾರು 455 ಮಿಲಿಯನ್ ಡಾಲರ್) ಸಾಲವನ್ನು ಘೋಷಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಇದೇ ಸಂದರ್ಭದಲ್ಲಿ, ಭಾರತದ ಬೆಂಬಲದೊಂದಿಗೆ ನಿರ್ಮಿಸಲಾದ 1,020 ಮೆಗಾವ್ಯಾಟ್ ಸಾಮರ್ಥ್ಯದ ಪುನತ್ಸಂಗ್ಚು-II ಜಲವಿದ್ಯುತ್ ಯೋಜನೆಯನ್ನೂ ದೊರೆ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್ಚುಕ್ ಅವರೊಂದಿಗೆ ಮೋದಿ ಉದ್ಘಾಟಿಸಿದ್ದಾರೆ.

ರಾಯಿಟರ್ಸ್ ಪ್ರಕಾರ, ಟಾಟಾ ಪವರ್, ಅದಾನಿ ಗ್ರೂಪ್ ಮತ್ತು ರಿಲಯನ್ಸ್ ಪವರ್‌ನಂತಹ ಭಾರತದ ಖಾಸಗಿ ಕಂಪನಿಗಳು ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಜಲವಿದ್ಯುತ್ ಯೋಜನೆಗಳನ್ನು ಅಭಿವೃದ್ಧಿಪಡಿಸಲು ಭೂತಾನ್‌ನ ಡ್ರಕ್ ಗ್ರೀನ್ ಪವರ್ ಕಾರ್ಪೊರೇಷನ್‌ನೊಂದಿಗೆ ಒಪ್ಪಂದಗಳಿಗೆ ಸಹಿ ಹಾಕಿವೆ.

ಅತ್ತ ಚೀನಾ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಲು ಮತ್ತು ಭೂತಾನ್‌ನೊಂದಿಗಿನ ತನ್ನ ಗಡಿ ವಿವಾದವನ್ನು ಬಗೆಹರಿಸಲು ಕೆಲಸ ಮಾಡುತ್ತಿದೆ. ಇತ್ತ ಭೂತಾನ್‌ನೊಂದಿಗಿನ ತನ್ನ ಸಂಬಂಧವನ್ನು ಬಲಪಡಿಸಲು ಭಾರತವೂ ಪ್ರಯತ್ನಿಸುತ್ತಿದೆ. ಈ ನಡುವೆ ಮೋದಿ ಭೇಟಿ ನೀಡಿರುವುದು ಮಹತ್ವದ ಪಡೆದಿದೆ.

ಉಭಯ ದೇಶಗಳ ನಾಯಕರು (ಮೋದಿ ಮತ್ತು ಭೂತಾನ್ ದೊರೆ) ಪುನತ್ಸಂಗ್ಚು-IIಯೋಜನೆಯನ್ನು ಉದ್ಘಾಟಿಸಿದ್ದಾರೆ. ಈ ಯೋಜನೆ ಭೂತಾನಿನ ಒಟ್ಟು ಜಲವಿದ್ಯುತ್ ಸಾಮರ್ಥ್ಯವನ್ನು ಸುಮಾರು 40 ಶೇಕಡ ಹೆಚ್ಚಿಸುತ್ತದೆ. ಇದು ಭೂತಾನಿನಲ್ಲಿ ಭಾರತದ ಬೆಂಬಲದೊಂದಿಗೆ ಕಾರ್ಯರೂಪಕ್ಕೆ ಬಂದ ಐದನೇ ಪ್ರಮುಖ ಜಲವಿದ್ಯುತ್ ಯೋಜನೆಯಾಗಿದೆ. ಈ ಮೂಲಕ ಭಾರತದ ನೆರವಿನ ವಿದ್ಯುತ್ ಯೋಜನೆಗಳ ಒಟ್ಟು ಉತ್ಪಾದನಾ ಸಾಮರ್ಥ್ಯ ಸುಮಾರು 3 ಸಾವಿರ ಮೆಗಾವ್ಯಾಟ್‌ಗಳಿಗೆ ಏರಿಕೆಯಾಗಲಿದೆ ಎಂದು ವರದಿಗಳು ಹೇಳಿವೆ.

ವ್ಯಾಪಾರ ಮತ್ತು ಪ್ರಾದೇಶಿಕ ಬೆಳವಣಿಗೆಗೆ ಸಂಪರ್ಕವನ್ನು ಸುಧಾರಿಸುವ ಮಾರ್ಗಗಳ ಬಗ್ಗೆಯೂ ಉಭಯ ನಾಯಕರು ಚರ್ಚಿಸಿದ್ದಾರೆ. ಇದು ವ್ಯಾಪಾರ ಮತ್ತು ಪ್ರಾದೇಶಿಕ ಬೆಳವಣಿಗೆಗೆ ಅತ್ಯಗತ್ಯ. “ಸಂಪರ್ಕವು ಅವಕಾಶವನ್ನು ಸೃಷ್ಟಿಸುತ್ತದೆ, ಅವಕಾಶವು ಸಮೃದ್ಧಿಯನ್ನು ಸೃಷ್ಟಿಸುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಭಾರತವು ಭೂತಾನ್‌ನ ಗೆಲೆಫು ಮತ್ತು ಸ್ಯಾಮ್ಟ್ಸೆಯನ್ನು ಭಾರತದ ರೈಲು ಜಾಲಕ್ಕೆ ಸಂಪರ್ಕಿಸಲಿದೆ. ಇದು ಪೂರ್ಣಗೊಂಡ ನಂತರ, ಭೂತಾನಿನ ರೈತರು ಮತ್ತು ಕೈಗಾರಿಕೆಗಳು ಭಾರತದ ದೊಡ್ಡ ಮಾರುಕಟ್ಟೆಗಳಿಗೆ ಸುಲಭವಾಗಿ ಪ್ರವೇಶವನ್ನು ಪಡೆಯಲು ಸಹಾಯ ಮಾಡುತ್ತದೆ ಎಂದು ಮೋದಿ ತಿಳಿಸಿದ್ದಾರೆ.

ಭೂತಾನಿನ ಮಾಜಿ ಇಂಧನ ಸಚಿವ ಲೋಕನಾಥ್ ಶರ್ಮಾ ಅವರು, “ಭೂತಾನ್ ತನ್ನ ಸ್ವಂತ ಇಂಧನ ಅಗತ್ಯಗಳನ್ನು (ಸುಮಾರು 1,000 ಮೆಗಾವ್ಯಾಟ್) ಪೂರೈಸಿದ ನಂತರ, ಹೆಚ್ಚುವರಿ ವಿದ್ಯುತ್ ಅನ್ನು ಭಾರತಕ್ಕೆ ರಫ್ತು ಮಾಡಲಿದೆ” ಎಂದು ಹೇಳಿದ್ದಾರೆ.

ಕಳೆದ ಸೆಪ್ಟೆಂಬರ್‌ನಲ್ಲಿ, ಅದಾನಿ ಪವರ್ ಮತ್ತು ಭೂತಾನ್‌ನ ಡ್ರಕ್ ಗ್ರೀನ್ ಪವರ್ ಕಾರ್ಪ್ 570 ಮೆಗಾವ್ಯಾಟ್ ವಾಂಗ್ಚು ಜಲವಿದ್ಯುತ್ ಯೋಜನೆಯನ್ನು ನಿರ್ಮಿಸಲು ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಿವೆ. ಭೂತಾನ್‌ನ ಪ್ರಧಾನಿ ತ್ಸೆರಿಂಗ್ ಟೋಬ್ಗೇ ಮತ್ತು ಗೌತಮ್ ಅದಾನಿ ಅವರ ಬೆಂಬಲದೊಂದಿಗೆ 6,000 ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯು ಭೂತಾನ್‌ನ ಚಳಿಗಾಲದ ವಿದ್ಯುತ್ ಅಗತ್ಯಗಳನ್ನು ಪೂರೈಸಲು ಮತ್ತು ಬೇಸಿಗೆಯಲ್ಲಿ ಭಾರತಕ್ಕೆ ಹೆಚ್ಚುವರಿ ಶಕ್ತಿಯನ್ನು ರಫ್ತು ಮಾಡಲು ಸಹಾಯ ಮಾಡುತ್ತದೆ ಎಂದು ವರದಿಯಾಗಿದೆ.

ಅದಾನಿ ಗ್ರೂಪ್‌ನ ಅಧಿಕೃತ ವೆಬ್‌ಸೈಟ್ ಪ್ರಕಾರ, ಈ ಯೋಜನೆಯ ನಿರ್ಮಾಣ ಕಾರ್ಯವು 2026ರ ಮೊದಲಾರ್ಧದ ವೇಳೆಗೆ ಪ್ರಾರಂಭವಾಗುವ ನಿರೀಕ್ಷೆಯಿದೆ. ಇದನ್ನು ಐದು ವರ್ಷಗಳಲ್ಲಿ ಪೂರ್ಣಗೊಳಿಸುವ ಗುರಿಯನ್ನು ಹೊಂದಿದೆ. “ಸುಸ್ಥಿರ ಅಭಿವೃದ್ಧಿಯಲ್ಲಿ ಭೂತಾನ್ ಜಗತ್ತಿಗೆ ಮಾದರಿಯಾಗಿದೆ, ಮತ್ತು ಈ ನವೀಕರಿಸಬಹುದಾದ ಇಂಧನ ಯೋಜನೆಯ ಮೂಲಕ ದೇಶದ ನೈಸರ್ಗಿಕ ಸಂಪನ್ಮೂಲಗಳ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಲು ನಾವು ತುಂಬಾ ಉತ್ಸುಕರಾಗಿದ್ದೇವೆ. ವಾಂಗ್ಚು ಜಲವಿದ್ಯುತ್ ಯೋಜನೆಯು ಜಲವಿದ್ಯುತ್ ಉತ್ಪಾದನೆ ಕಡಿಮೆ ಇರುವಾಗ ಭೂತಾನ್‌ನ ಚಳಿಗಾಲದ ಗರಿಷ್ಠ ಬೇಡಿಕೆಯನ್ನು ನಿರ್ಣಾಯಕವಾಗಿ ಪೂರೈಸುತ್ತದೆ. ಬೇಸಿಗೆಯ ತಿಂಗಳುಗಳಲ್ಲಿ, ಇದು ಭಾರತಕ್ಕೆ ವಿದ್ಯುತ್ ರಫ್ತು ಮಾಡುತ್ತದೆ” ಎಂದು ಅದಾನಿ ಪವರ್‌ನ ಸಿಇಒ ಎಸ್‌ಬಿ ಖಯಾಲಿಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಭೂತಾನಿನ ಮೈಂಡ್‌ಫುಲ್‌ನೆಸ್ ಸಿಟಿ ಯೋಜನೆಗೆ ಬೆಂಬಲ

ಭೂತಾನಿನ ದೊರೆ ಜಿಗ್ಮೆ ಸಿಂಗ್ಯೆ ವಾಂಗ್‌ಚುಕ್ ಅವರ 70 ನೇ ಹುಟ್ಟುಹಬ್ಬದ ಆಚರಣೆಯೊಂದಿಗೆ ಪ್ರಧಾನಿ ಮೋದಿಯವರ ಎರಡು ದಿನಗಳ ಭೇಟಿ ಪ್ರಾರಂಭವಾಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ ಅವರು, ಎರಡೂ ರಾಷ್ಟ್ರಗಳ ನಡುವಿನ ನಿಕಟ ಸ್ನೇಹವನ್ನು ಶ್ಲಾಘಿಸಿದ್ದಾರೆ. “ಭಾರತ ಮತ್ತು ಭೂತಾನ್ ನಡುವಿನ ನಂಬಿಕೆ ಮತ್ತು ಅಭಿವೃದ್ಧಿಯ ಪಾಲುದಾರಿಕೆ ಇಡೀ ಪ್ರದೇಶಕ್ಕೆ ಮಾದರಿಯಾಗಿದೆ. ನಮ್ಮ ಎರಡೂ ದೇಶಗಳು ವೇಗವಾಗಿ ಪ್ರಗತಿ ಹೊಂದುತ್ತಿರುವಾಗ, ನಮ್ಮ ಇಂಧನ ಪಾಲುದಾರಿಕೆ ಈ ಬೆಳವಣಿಗೆಯನ್ನು ಮತ್ತಷ್ಟು ವೇಗಗೊಳಿಸುತ್ತಿದೆ” ಎಂದಿದ್ದಾರೆ.

ಅಭಿವೃದ್ಧಿಯನ್ನು ಆಧ್ಯಾತ್ಮಿಕ ಮತ್ತು ಪರಿಸರ ಯೋಗಕ್ಷೇಮದೊಂದಿಗೆ ಸಂಯೋಜಿಸುವ ಗುರಿಯನ್ನು ಹೊಂದಿರುವ ಗೆಲೆಫು ಮೈಂಡ್‌ಫುಲ್‌ನೆಸ್ ಸಿಟಿ ಯೋಜನೆಗೆ ಭಾರತವು ಭೂತಾನ್‌ಗೆ ಸಹಾಯ ಮಾಡಲಿದೆ. ಇದನ್ನು ಬೆಂಬಲಿಸಲು, ಪ್ರಧಾನಿ ಮೋದಿ ಗೆಲೆಫು ಬಳಿ ಹೊಸ ವಲಸೆ ಚೆಕ್‌ಪಾಯಿಂಟ್ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ ಎಂದು ವರದಿಗಳು ಹೇಳಿವೆ.

ರಸ್ತೆಗಳು, ಕೃಷಿ, ಆರೋಗ್ಯ ರಕ್ಷಣೆ ಮತ್ತು ಹಣಕಾಸು ಮುಂತಾದ ಕ್ಷೇತ್ರಗಳಲ್ಲಿನ ಯೋಜನೆಗಳನ್ನು ಬೆಂಬಲಿಸುವ ಭೂತಾನಿನ ಪ್ರಸ್ತುತ ನಡೆಯುತ್ತಿರುವ ಪಂಚವಾರ್ಷಿಕ ಯೋಜನೆಗೆ ಭಾರತವು ಈ ಹಿಂದೆ ನೀಡಿದ 10,000 ಕೋಟಿಗಳ ನೆರವನ್ನು ಮೋದಿ ನೆನಪಿಸಿಕೊಂಡಿದ್ದಾರೆ. ಭೇಟಿಯ ಸಮಯದಲ್ಲಿ, ನವೀಕರಿಸಬಹುದಾದ ಇಂಧನ, ಆರೋಗ್ಯ ರಕ್ಷಣೆ ಮತ್ತು ಔಷಧ ಮತ್ತು ಮಾನಸಿಕ ಆರೋಗ್ಯ ಸೇವೆಗಳಲ್ಲಿ ಸಹಕರಿಸಲು ಉಭಯ ನಾಯಕರು ಮೂರು ಹೊಸ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ ಎಂದು ವರದಿಗಳು ವಿವರಿಸಿವೆ.

‘Tryst with Destiny’ : ವಿಜಯ ಭಾಷಣದಲ್ಲಿ ನೆಹರು ಹೇಳಿಕೆ ಉಲ್ಲೇಖಿಸಿದ ಝೊಹ್ರಾನ್ ಮಮ್ದಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...