Homeಅಂತರಾಷ್ಟ್ರೀಯಭೂತಾನ್‌ನ ಇಂಧನ ಯೋಜನೆಗಳಿಗೆ 4 ಸಾವಿರ ಕೋಟಿ ಸಾಲ ಘೋಷಿಸಿದ ಮೋದಿ : ಅದಾನಿ, ಅಂಬಾನಿ...

ಭೂತಾನ್‌ನ ಇಂಧನ ಯೋಜನೆಗಳಿಗೆ 4 ಸಾವಿರ ಕೋಟಿ ಸಾಲ ಘೋಷಿಸಿದ ಮೋದಿ : ಅದಾನಿ, ಅಂಬಾನಿ ಕಂಪನಿಗಳಿಂದ ಒಪ್ಪಂದಕ್ಕೆ ಸಹಿ

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೋಟ ಸಂಭವಿಸಿ 12 ಜನರು ಸಾವಿಗೀಡಾಗಿರುವ ನಡುವೆ ದೊರೆಯ ಜನ್ಮ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಭೂತಾನ್‌ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಹೊಸ ಇಂಧನ ಯೋಜನೆಗಳನ್ನು ಬೆಂಬಲಿಸಲು 4,000 ಕೋಟಿ ರೂಪಾಯಿ (ಸುಮಾರು 455 ಮಿಲಿಯನ್ ಡಾಲರ್) ಸಾಲವನ್ನು ಘೋಷಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಇದೇ ಸಂದರ್ಭದಲ್ಲಿ, ಭಾರತದ ಬೆಂಬಲದೊಂದಿಗೆ ನಿರ್ಮಿಸಲಾದ 1,020 ಮೆಗಾವ್ಯಾಟ್ ಸಾಮರ್ಥ್ಯದ ಪುನತ್ಸಂಗ್ಚು-II ಜಲವಿದ್ಯುತ್ ಯೋಜನೆಯನ್ನೂ ದೊರೆ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್ಚುಕ್ ಅವರೊಂದಿಗೆ ಮೋದಿ ಉದ್ಘಾಟಿಸಿದ್ದಾರೆ.

ರಾಯಿಟರ್ಸ್ ಪ್ರಕಾರ, ಟಾಟಾ ಪವರ್, ಅದಾನಿ ಗ್ರೂಪ್ ಮತ್ತು ರಿಲಯನ್ಸ್ ಪವರ್‌ನಂತಹ ಭಾರತದ ಖಾಸಗಿ ಕಂಪನಿಗಳು ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಜಲವಿದ್ಯುತ್ ಯೋಜನೆಗಳನ್ನು ಅಭಿವೃದ್ಧಿಪಡಿಸಲು ಭೂತಾನ್‌ನ ಡ್ರಕ್ ಗ್ರೀನ್ ಪವರ್ ಕಾರ್ಪೊರೇಷನ್‌ನೊಂದಿಗೆ ಒಪ್ಪಂದಗಳಿಗೆ ಸಹಿ ಹಾಕಿವೆ.

ಅತ್ತ ಚೀನಾ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಲು ಮತ್ತು ಭೂತಾನ್‌ನೊಂದಿಗಿನ ತನ್ನ ಗಡಿ ವಿವಾದವನ್ನು ಬಗೆಹರಿಸಲು ಕೆಲಸ ಮಾಡುತ್ತಿದೆ. ಇತ್ತ ಭೂತಾನ್‌ನೊಂದಿಗಿನ ತನ್ನ ಸಂಬಂಧವನ್ನು ಬಲಪಡಿಸಲು ಭಾರತವೂ ಪ್ರಯತ್ನಿಸುತ್ತಿದೆ. ಈ ನಡುವೆ ಮೋದಿ ಭೇಟಿ ನೀಡಿರುವುದು ಮಹತ್ವದ ಪಡೆದಿದೆ.

ಉಭಯ ದೇಶಗಳ ನಾಯಕರು (ಮೋದಿ ಮತ್ತು ಭೂತಾನ್ ದೊರೆ) ಪುನತ್ಸಂಗ್ಚು-IIಯೋಜನೆಯನ್ನು ಉದ್ಘಾಟಿಸಿದ್ದಾರೆ. ಈ ಯೋಜನೆ ಭೂತಾನಿನ ಒಟ್ಟು ಜಲವಿದ್ಯುತ್ ಸಾಮರ್ಥ್ಯವನ್ನು ಸುಮಾರು 40 ಶೇಕಡ ಹೆಚ್ಚಿಸುತ್ತದೆ. ಇದು ಭೂತಾನಿನಲ್ಲಿ ಭಾರತದ ಬೆಂಬಲದೊಂದಿಗೆ ಕಾರ್ಯರೂಪಕ್ಕೆ ಬಂದ ಐದನೇ ಪ್ರಮುಖ ಜಲವಿದ್ಯುತ್ ಯೋಜನೆಯಾಗಿದೆ. ಈ ಮೂಲಕ ಭಾರತದ ನೆರವಿನ ವಿದ್ಯುತ್ ಯೋಜನೆಗಳ ಒಟ್ಟು ಉತ್ಪಾದನಾ ಸಾಮರ್ಥ್ಯ ಸುಮಾರು 3 ಸಾವಿರ ಮೆಗಾವ್ಯಾಟ್‌ಗಳಿಗೆ ಏರಿಕೆಯಾಗಲಿದೆ ಎಂದು ವರದಿಗಳು ಹೇಳಿವೆ.

ವ್ಯಾಪಾರ ಮತ್ತು ಪ್ರಾದೇಶಿಕ ಬೆಳವಣಿಗೆಗೆ ಸಂಪರ್ಕವನ್ನು ಸುಧಾರಿಸುವ ಮಾರ್ಗಗಳ ಬಗ್ಗೆಯೂ ಉಭಯ ನಾಯಕರು ಚರ್ಚಿಸಿದ್ದಾರೆ. ಇದು ವ್ಯಾಪಾರ ಮತ್ತು ಪ್ರಾದೇಶಿಕ ಬೆಳವಣಿಗೆಗೆ ಅತ್ಯಗತ್ಯ. “ಸಂಪರ್ಕವು ಅವಕಾಶವನ್ನು ಸೃಷ್ಟಿಸುತ್ತದೆ, ಅವಕಾಶವು ಸಮೃದ್ಧಿಯನ್ನು ಸೃಷ್ಟಿಸುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಭಾರತವು ಭೂತಾನ್‌ನ ಗೆಲೆಫು ಮತ್ತು ಸ್ಯಾಮ್ಟ್ಸೆಯನ್ನು ಭಾರತದ ರೈಲು ಜಾಲಕ್ಕೆ ಸಂಪರ್ಕಿಸಲಿದೆ. ಇದು ಪೂರ್ಣಗೊಂಡ ನಂತರ, ಭೂತಾನಿನ ರೈತರು ಮತ್ತು ಕೈಗಾರಿಕೆಗಳು ಭಾರತದ ದೊಡ್ಡ ಮಾರುಕಟ್ಟೆಗಳಿಗೆ ಸುಲಭವಾಗಿ ಪ್ರವೇಶವನ್ನು ಪಡೆಯಲು ಸಹಾಯ ಮಾಡುತ್ತದೆ ಎಂದು ಮೋದಿ ತಿಳಿಸಿದ್ದಾರೆ.

ಭೂತಾನಿನ ಮಾಜಿ ಇಂಧನ ಸಚಿವ ಲೋಕನಾಥ್ ಶರ್ಮಾ ಅವರು, “ಭೂತಾನ್ ತನ್ನ ಸ್ವಂತ ಇಂಧನ ಅಗತ್ಯಗಳನ್ನು (ಸುಮಾರು 1,000 ಮೆಗಾವ್ಯಾಟ್) ಪೂರೈಸಿದ ನಂತರ, ಹೆಚ್ಚುವರಿ ವಿದ್ಯುತ್ ಅನ್ನು ಭಾರತಕ್ಕೆ ರಫ್ತು ಮಾಡಲಿದೆ” ಎಂದು ಹೇಳಿದ್ದಾರೆ.

ಕಳೆದ ಸೆಪ್ಟೆಂಬರ್‌ನಲ್ಲಿ, ಅದಾನಿ ಪವರ್ ಮತ್ತು ಭೂತಾನ್‌ನ ಡ್ರಕ್ ಗ್ರೀನ್ ಪವರ್ ಕಾರ್ಪ್ 570 ಮೆಗಾವ್ಯಾಟ್ ವಾಂಗ್ಚು ಜಲವಿದ್ಯುತ್ ಯೋಜನೆಯನ್ನು ನಿರ್ಮಿಸಲು ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಿವೆ. ಭೂತಾನ್‌ನ ಪ್ರಧಾನಿ ತ್ಸೆರಿಂಗ್ ಟೋಬ್ಗೇ ಮತ್ತು ಗೌತಮ್ ಅದಾನಿ ಅವರ ಬೆಂಬಲದೊಂದಿಗೆ 6,000 ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯು ಭೂತಾನ್‌ನ ಚಳಿಗಾಲದ ವಿದ್ಯುತ್ ಅಗತ್ಯಗಳನ್ನು ಪೂರೈಸಲು ಮತ್ತು ಬೇಸಿಗೆಯಲ್ಲಿ ಭಾರತಕ್ಕೆ ಹೆಚ್ಚುವರಿ ಶಕ್ತಿಯನ್ನು ರಫ್ತು ಮಾಡಲು ಸಹಾಯ ಮಾಡುತ್ತದೆ ಎಂದು ವರದಿಯಾಗಿದೆ.

ಅದಾನಿ ಗ್ರೂಪ್‌ನ ಅಧಿಕೃತ ವೆಬ್‌ಸೈಟ್ ಪ್ರಕಾರ, ಈ ಯೋಜನೆಯ ನಿರ್ಮಾಣ ಕಾರ್ಯವು 2026ರ ಮೊದಲಾರ್ಧದ ವೇಳೆಗೆ ಪ್ರಾರಂಭವಾಗುವ ನಿರೀಕ್ಷೆಯಿದೆ. ಇದನ್ನು ಐದು ವರ್ಷಗಳಲ್ಲಿ ಪೂರ್ಣಗೊಳಿಸುವ ಗುರಿಯನ್ನು ಹೊಂದಿದೆ. “ಸುಸ್ಥಿರ ಅಭಿವೃದ್ಧಿಯಲ್ಲಿ ಭೂತಾನ್ ಜಗತ್ತಿಗೆ ಮಾದರಿಯಾಗಿದೆ, ಮತ್ತು ಈ ನವೀಕರಿಸಬಹುದಾದ ಇಂಧನ ಯೋಜನೆಯ ಮೂಲಕ ದೇಶದ ನೈಸರ್ಗಿಕ ಸಂಪನ್ಮೂಲಗಳ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಲು ನಾವು ತುಂಬಾ ಉತ್ಸುಕರಾಗಿದ್ದೇವೆ. ವಾಂಗ್ಚು ಜಲವಿದ್ಯುತ್ ಯೋಜನೆಯು ಜಲವಿದ್ಯುತ್ ಉತ್ಪಾದನೆ ಕಡಿಮೆ ಇರುವಾಗ ಭೂತಾನ್‌ನ ಚಳಿಗಾಲದ ಗರಿಷ್ಠ ಬೇಡಿಕೆಯನ್ನು ನಿರ್ಣಾಯಕವಾಗಿ ಪೂರೈಸುತ್ತದೆ. ಬೇಸಿಗೆಯ ತಿಂಗಳುಗಳಲ್ಲಿ, ಇದು ಭಾರತಕ್ಕೆ ವಿದ್ಯುತ್ ರಫ್ತು ಮಾಡುತ್ತದೆ” ಎಂದು ಅದಾನಿ ಪವರ್‌ನ ಸಿಇಒ ಎಸ್‌ಬಿ ಖಯಾಲಿಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಭೂತಾನಿನ ಮೈಂಡ್‌ಫುಲ್‌ನೆಸ್ ಸಿಟಿ ಯೋಜನೆಗೆ ಬೆಂಬಲ

ಭೂತಾನಿನ ದೊರೆ ಜಿಗ್ಮೆ ಸಿಂಗ್ಯೆ ವಾಂಗ್‌ಚುಕ್ ಅವರ 70 ನೇ ಹುಟ್ಟುಹಬ್ಬದ ಆಚರಣೆಯೊಂದಿಗೆ ಪ್ರಧಾನಿ ಮೋದಿಯವರ ಎರಡು ದಿನಗಳ ಭೇಟಿ ಪ್ರಾರಂಭವಾಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ ಅವರು, ಎರಡೂ ರಾಷ್ಟ್ರಗಳ ನಡುವಿನ ನಿಕಟ ಸ್ನೇಹವನ್ನು ಶ್ಲಾಘಿಸಿದ್ದಾರೆ. “ಭಾರತ ಮತ್ತು ಭೂತಾನ್ ನಡುವಿನ ನಂಬಿಕೆ ಮತ್ತು ಅಭಿವೃದ್ಧಿಯ ಪಾಲುದಾರಿಕೆ ಇಡೀ ಪ್ರದೇಶಕ್ಕೆ ಮಾದರಿಯಾಗಿದೆ. ನಮ್ಮ ಎರಡೂ ದೇಶಗಳು ವೇಗವಾಗಿ ಪ್ರಗತಿ ಹೊಂದುತ್ತಿರುವಾಗ, ನಮ್ಮ ಇಂಧನ ಪಾಲುದಾರಿಕೆ ಈ ಬೆಳವಣಿಗೆಯನ್ನು ಮತ್ತಷ್ಟು ವೇಗಗೊಳಿಸುತ್ತಿದೆ” ಎಂದಿದ್ದಾರೆ.

ಅಭಿವೃದ್ಧಿಯನ್ನು ಆಧ್ಯಾತ್ಮಿಕ ಮತ್ತು ಪರಿಸರ ಯೋಗಕ್ಷೇಮದೊಂದಿಗೆ ಸಂಯೋಜಿಸುವ ಗುರಿಯನ್ನು ಹೊಂದಿರುವ ಗೆಲೆಫು ಮೈಂಡ್‌ಫುಲ್‌ನೆಸ್ ಸಿಟಿ ಯೋಜನೆಗೆ ಭಾರತವು ಭೂತಾನ್‌ಗೆ ಸಹಾಯ ಮಾಡಲಿದೆ. ಇದನ್ನು ಬೆಂಬಲಿಸಲು, ಪ್ರಧಾನಿ ಮೋದಿ ಗೆಲೆಫು ಬಳಿ ಹೊಸ ವಲಸೆ ಚೆಕ್‌ಪಾಯಿಂಟ್ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ ಎಂದು ವರದಿಗಳು ಹೇಳಿವೆ.

ರಸ್ತೆಗಳು, ಕೃಷಿ, ಆರೋಗ್ಯ ರಕ್ಷಣೆ ಮತ್ತು ಹಣಕಾಸು ಮುಂತಾದ ಕ್ಷೇತ್ರಗಳಲ್ಲಿನ ಯೋಜನೆಗಳನ್ನು ಬೆಂಬಲಿಸುವ ಭೂತಾನಿನ ಪ್ರಸ್ತುತ ನಡೆಯುತ್ತಿರುವ ಪಂಚವಾರ್ಷಿಕ ಯೋಜನೆಗೆ ಭಾರತವು ಈ ಹಿಂದೆ ನೀಡಿದ 10,000 ಕೋಟಿಗಳ ನೆರವನ್ನು ಮೋದಿ ನೆನಪಿಸಿಕೊಂಡಿದ್ದಾರೆ. ಭೇಟಿಯ ಸಮಯದಲ್ಲಿ, ನವೀಕರಿಸಬಹುದಾದ ಇಂಧನ, ಆರೋಗ್ಯ ರಕ್ಷಣೆ ಮತ್ತು ಔಷಧ ಮತ್ತು ಮಾನಸಿಕ ಆರೋಗ್ಯ ಸೇವೆಗಳಲ್ಲಿ ಸಹಕರಿಸಲು ಉಭಯ ನಾಯಕರು ಮೂರು ಹೊಸ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ ಎಂದು ವರದಿಗಳು ವಿವರಿಸಿವೆ.

‘Tryst with Destiny’ : ವಿಜಯ ಭಾಷಣದಲ್ಲಿ ನೆಹರು ಹೇಳಿಕೆ ಉಲ್ಲೇಖಿಸಿದ ಝೊಹ್ರಾನ್ ಮಮ್ದಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...