Homeಮುಖಪುಟಸಿಜೆಐ ಚಂದ್ರಚೂಡ್ ಮನೆಯ ಗಣಪತಿ ಪೂಜೆಯಲ್ಲಿ ಪಾಲ್ಗೊಂಡ ಮೋದಿ : ವಕೀಲರು, ಚಿಂತಕರಿಂದ ತೀವ್ರ ಆಕ್ಷೇಪ

ಸಿಜೆಐ ಚಂದ್ರಚೂಡ್ ಮನೆಯ ಗಣಪತಿ ಪೂಜೆಯಲ್ಲಿ ಪಾಲ್ಗೊಂಡ ಮೋದಿ : ವಕೀಲರು, ಚಿಂತಕರಿಂದ ತೀವ್ರ ಆಕ್ಷೇಪ

- Advertisement -
- Advertisement -

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ ಗಣಪತಿ ಪೂಜೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಸಿಜೆಐ ಚಂದ್ರಚೂಡ್ ಮತ್ತು ಅವರ ಪತ್ನಿಯ ಜೊತೆಗೂಡಿ ಪ್ರಧಾನಿ ಮೋದಿ ಗಣೇಶನ ವಿಗ್ರಹಕ್ಕೆ ಆರತಿ ಮಾಡಿ ಪ್ರಾರ್ಥನೆ ಸಲ್ಲಿಸುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಈ ಕುರಿತು ಹಲವು ಪ್ರಮುಖ ವಕೀಲರು, ಚಿಂತಕರು, ಹೋರಾಟಗಾರರು ಪ್ರತಿಕ್ರಿಯಿಸಿದ್ದಾರೆ.

ಸಿಜೆಐ ನಡೆಗೆ ಆಕ್ಪೇಪ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲೆ ಇಂದಿರಾ ಜೈಸಿಂಗ್ “ಭಾರತದ ಮುಖ್ಯ ನ್ಯಾಯಾಧೀಶರು ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವಿನ ಅಧಿಕಾರದ ಅಂತರದಲ್ಲಿ ರಾಜಿ ಮಾಡಿಕೊಂಡಿದ್ದಾರೆ. ಸಿಜೆಐ ಸ್ವತಂತ್ರ ಎಂಬುವುದರ ಮೇಲಿನ ನಂಬಿಕೆ ಸಂಪೂರ್ಣ ಕಳೆದುಕೊಂಡಿದ್ದೇನೆ. ಸ್ವತಂತ್ರ ಸಿಜೆಐ ಕಾರ್ಯಾಂಗದ ಜೊತೆ ಸಾರ್ವಜನಿಕವಾಗಿ ರಾಜಿ ಮಾಡಿಕೊಂಡಿರುವುದನ್ನು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಶನ್ (ಎಸ್‌ಸಿಬಿಎ) ಖಂಡಿಸಬೇಕು” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಸುಪ್ರೀಂ ಕೋರ್ಟ್‌ನ ಮತ್ತೋರ್ವ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಪ್ರತಿಕ್ರಿಯಿಸಿ “ಸಿಜೆಐ ಚಂದ್ರಚೂಡ್ ಅವರು ಮೋದಿಯವರನ್ನು ಅವರ ನಿವಾಸಕ್ಕೆ ಖಾಸಗಿ ಭೇಟಿ ಮಾಡಲು ಅವಕಾಶ ಮಾಡಿಕೊಟ್ಟಿರುವುದು ಆಘಾತಕಾರಿಯಾಗಿದೆ. ಇದು ಸರ್ಕಾರ ಸಂವಿಧಾನದ ಮಿತಿಯಲ್ಲಿ ಕಾರ್ಯಾಚರಿಸುತ್ತಿದೆ ಎಂದು ಖಚಿತಪಡಿಸುವ ಮತ್ತು ಕಾರ್ಯಾಂಗದಿಂದ ನಾಗರಿಕರ ಮೂಲಭೂತ ಹಕ್ಕನ್ನು ರಕ್ಷಿಸುವ ಜವಾಬ್ದಾರಿಯನ್ನು ಹೊಂದಿರುವ ನ್ಯಾಯಾಂಗಕ್ಕೆ ಕೆಟ್ಟ ಸಂದೇಶವನ್ನು ರವಾನಿಸುತ್ತದೆ. ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವೆ ದೀರ್ಘವಾದ ಅಂತರ ಇರಬೇಕು” ಎಂದು ಹೇಳಿದ್ದಾರೆ.

ವಕೀಲ, ಹೋರಾಟಗಾರ ವಿನಯ್ ಕೂರಗಾಯಲ ಶ್ರೀನಿವಾಸ ಪ್ರತಿಕ್ರಿಯಿಸಿ “ಇದು ನ್ಯಾಯಾಧೀಶರ ಒಂದು ಭಯಾನಕ ಉದಾಹರಣೆಯಾಗಿದೆ. ಸಿದ್ದರಾಮಯ್ಯ ಅವರ ಪ್ರಕರಣ ವಿಚಾರಣೆಯಲ್ಲಿರುವಾಗ, ಅವರು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯ ಮನೆಗೆ ಊಟಕ್ಕೆ ಹೋದರೆ ಒಪ್ಪಿಕೊಳ್ಳಬಹುದೇ? ಸಂವಿಧಾನವನ್ನು ಎತ್ತಿ ಹಿಡಿಯಬೇಕಾದ ವ್ಯಕ್ತಿಯೇ ಅದನ್ನು ದುರ್ಬಲಗೊಳಿಸಿದ್ದಾರೆ. ಸಿಜೆಐ ಚಂದ್ರಚೂಡ್ ಕ್ಷಮೆಯಾಚಿಸಬೇಕು ಅಥವಾ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

“ಸಿಜೆಐ ಚಂದ್ರಚೂಡ್ ಅವರೇ ನೀವು ಚುನಾವಣಾ ಬಾಂಡ್ ಕುರಿತು ತೀರ್ಪು ನೀಡಿದಾಗಿನಿಂದ ನಿಮ್ಮ ಮೇಲೆ ಅತೀವ ಗೌರವ ಇತ್ತು. ಅದು ಇವತ್ತು ಹೊರಟೋಯಿತು” ಎಂದು ಎಕ್ಸ್ ಬಳಕೆದಾರರೊಬ್ಬರು ಬರೆದುಕೊಂಡಿದ್ದಾರೆ.

“ನ್ಯಾಯಮೂರ್ತಿ ಲೋಯಾ ಅವರ ಮೇಲಿನ ನನ್ನ ಗೌರವ ಇಂದು ಹೆಚ್ಚಾಗಿದೆ. ಅವರಂತಹ ಶಕ್ತಿ ಎಲ್ಲರಿಗೂ ಇರಲಾರದು. ನಮ್ಮನ್ನು ಕ್ಷಮಿಸಿ ಸರ್ ” ಎಂದು ಮತ್ತೊಬ್ಬರು ಎಕ್ಸ್‌ ಬಳಕೆದಾರರು ಸಿಜೆಐ ನಡೆಯನ್ನು ಖಂಡಿಸಿದ್ದಾರೆ.

ಇದನ್ನೂ ಓದಿ : ನಕಲಿ ಎನ್‌ಕೌಂಟರ್ | “ಆರೋಪಿಗಳು ಈ ರೀತಿ ಪ್ರಾಣ ಕಳೆದುಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ” : ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...