Homeಮುಖಪುಟಸಿಜೆಐ ಚಂದ್ರಚೂಡ್ ಮನೆಯ ಗಣಪತಿ ಪೂಜೆಯಲ್ಲಿ ಪಾಲ್ಗೊಂಡ ಮೋದಿ : ವಕೀಲರು, ಚಿಂತಕರಿಂದ ತೀವ್ರ ಆಕ್ಷೇಪ

ಸಿಜೆಐ ಚಂದ್ರಚೂಡ್ ಮನೆಯ ಗಣಪತಿ ಪೂಜೆಯಲ್ಲಿ ಪಾಲ್ಗೊಂಡ ಮೋದಿ : ವಕೀಲರು, ಚಿಂತಕರಿಂದ ತೀವ್ರ ಆಕ್ಷೇಪ

- Advertisement -
- Advertisement -

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ ಗಣಪತಿ ಪೂಜೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಸಿಜೆಐ ಚಂದ್ರಚೂಡ್ ಮತ್ತು ಅವರ ಪತ್ನಿಯ ಜೊತೆಗೂಡಿ ಪ್ರಧಾನಿ ಮೋದಿ ಗಣೇಶನ ವಿಗ್ರಹಕ್ಕೆ ಆರತಿ ಮಾಡಿ ಪ್ರಾರ್ಥನೆ ಸಲ್ಲಿಸುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಈ ಕುರಿತು ಹಲವು ಪ್ರಮುಖ ವಕೀಲರು, ಚಿಂತಕರು, ಹೋರಾಟಗಾರರು ಪ್ರತಿಕ್ರಿಯಿಸಿದ್ದಾರೆ.

ಸಿಜೆಐ ನಡೆಗೆ ಆಕ್ಪೇಪ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲೆ ಇಂದಿರಾ ಜೈಸಿಂಗ್ “ಭಾರತದ ಮುಖ್ಯ ನ್ಯಾಯಾಧೀಶರು ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವಿನ ಅಧಿಕಾರದ ಅಂತರದಲ್ಲಿ ರಾಜಿ ಮಾಡಿಕೊಂಡಿದ್ದಾರೆ. ಸಿಜೆಐ ಸ್ವತಂತ್ರ ಎಂಬುವುದರ ಮೇಲಿನ ನಂಬಿಕೆ ಸಂಪೂರ್ಣ ಕಳೆದುಕೊಂಡಿದ್ದೇನೆ. ಸ್ವತಂತ್ರ ಸಿಜೆಐ ಕಾರ್ಯಾಂಗದ ಜೊತೆ ಸಾರ್ವಜನಿಕವಾಗಿ ರಾಜಿ ಮಾಡಿಕೊಂಡಿರುವುದನ್ನು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಶನ್ (ಎಸ್‌ಸಿಬಿಎ) ಖಂಡಿಸಬೇಕು” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಸುಪ್ರೀಂ ಕೋರ್ಟ್‌ನ ಮತ್ತೋರ್ವ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಪ್ರತಿಕ್ರಿಯಿಸಿ “ಸಿಜೆಐ ಚಂದ್ರಚೂಡ್ ಅವರು ಮೋದಿಯವರನ್ನು ಅವರ ನಿವಾಸಕ್ಕೆ ಖಾಸಗಿ ಭೇಟಿ ಮಾಡಲು ಅವಕಾಶ ಮಾಡಿಕೊಟ್ಟಿರುವುದು ಆಘಾತಕಾರಿಯಾಗಿದೆ. ಇದು ಸರ್ಕಾರ ಸಂವಿಧಾನದ ಮಿತಿಯಲ್ಲಿ ಕಾರ್ಯಾಚರಿಸುತ್ತಿದೆ ಎಂದು ಖಚಿತಪಡಿಸುವ ಮತ್ತು ಕಾರ್ಯಾಂಗದಿಂದ ನಾಗರಿಕರ ಮೂಲಭೂತ ಹಕ್ಕನ್ನು ರಕ್ಷಿಸುವ ಜವಾಬ್ದಾರಿಯನ್ನು ಹೊಂದಿರುವ ನ್ಯಾಯಾಂಗಕ್ಕೆ ಕೆಟ್ಟ ಸಂದೇಶವನ್ನು ರವಾನಿಸುತ್ತದೆ. ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವೆ ದೀರ್ಘವಾದ ಅಂತರ ಇರಬೇಕು” ಎಂದು ಹೇಳಿದ್ದಾರೆ.

ವಕೀಲ, ಹೋರಾಟಗಾರ ವಿನಯ್ ಕೂರಗಾಯಲ ಶ್ರೀನಿವಾಸ ಪ್ರತಿಕ್ರಿಯಿಸಿ “ಇದು ನ್ಯಾಯಾಧೀಶರ ಒಂದು ಭಯಾನಕ ಉದಾಹರಣೆಯಾಗಿದೆ. ಸಿದ್ದರಾಮಯ್ಯ ಅವರ ಪ್ರಕರಣ ವಿಚಾರಣೆಯಲ್ಲಿರುವಾಗ, ಅವರು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯ ಮನೆಗೆ ಊಟಕ್ಕೆ ಹೋದರೆ ಒಪ್ಪಿಕೊಳ್ಳಬಹುದೇ? ಸಂವಿಧಾನವನ್ನು ಎತ್ತಿ ಹಿಡಿಯಬೇಕಾದ ವ್ಯಕ್ತಿಯೇ ಅದನ್ನು ದುರ್ಬಲಗೊಳಿಸಿದ್ದಾರೆ. ಸಿಜೆಐ ಚಂದ್ರಚೂಡ್ ಕ್ಷಮೆಯಾಚಿಸಬೇಕು ಅಥವಾ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

“ಸಿಜೆಐ ಚಂದ್ರಚೂಡ್ ಅವರೇ ನೀವು ಚುನಾವಣಾ ಬಾಂಡ್ ಕುರಿತು ತೀರ್ಪು ನೀಡಿದಾಗಿನಿಂದ ನಿಮ್ಮ ಮೇಲೆ ಅತೀವ ಗೌರವ ಇತ್ತು. ಅದು ಇವತ್ತು ಹೊರಟೋಯಿತು” ಎಂದು ಎಕ್ಸ್ ಬಳಕೆದಾರರೊಬ್ಬರು ಬರೆದುಕೊಂಡಿದ್ದಾರೆ.

“ನ್ಯಾಯಮೂರ್ತಿ ಲೋಯಾ ಅವರ ಮೇಲಿನ ನನ್ನ ಗೌರವ ಇಂದು ಹೆಚ್ಚಾಗಿದೆ. ಅವರಂತಹ ಶಕ್ತಿ ಎಲ್ಲರಿಗೂ ಇರಲಾರದು. ನಮ್ಮನ್ನು ಕ್ಷಮಿಸಿ ಸರ್ ” ಎಂದು ಮತ್ತೊಬ್ಬರು ಎಕ್ಸ್‌ ಬಳಕೆದಾರರು ಸಿಜೆಐ ನಡೆಯನ್ನು ಖಂಡಿಸಿದ್ದಾರೆ.

ಇದನ್ನೂ ಓದಿ : ನಕಲಿ ಎನ್‌ಕೌಂಟರ್ | “ಆರೋಪಿಗಳು ಈ ರೀತಿ ಪ್ರಾಣ ಕಳೆದುಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ” : ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...