Homeಮುಖಪುಟಸಿಜೆಐ ಚಂದ್ರಚೂಡ್ ಮನೆಯ ಗಣಪತಿ ಪೂಜೆಯಲ್ಲಿ ಪಾಲ್ಗೊಂಡ ಮೋದಿ : ವಕೀಲರು, ಚಿಂತಕರಿಂದ ತೀವ್ರ ಆಕ್ಷೇಪ

ಸಿಜೆಐ ಚಂದ್ರಚೂಡ್ ಮನೆಯ ಗಣಪತಿ ಪೂಜೆಯಲ್ಲಿ ಪಾಲ್ಗೊಂಡ ಮೋದಿ : ವಕೀಲರು, ಚಿಂತಕರಿಂದ ತೀವ್ರ ಆಕ್ಷೇಪ

- Advertisement -
- Advertisement -

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ ಗಣಪತಿ ಪೂಜೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಸಿಜೆಐ ಚಂದ್ರಚೂಡ್ ಮತ್ತು ಅವರ ಪತ್ನಿಯ ಜೊತೆಗೂಡಿ ಪ್ರಧಾನಿ ಮೋದಿ ಗಣೇಶನ ವಿಗ್ರಹಕ್ಕೆ ಆರತಿ ಮಾಡಿ ಪ್ರಾರ್ಥನೆ ಸಲ್ಲಿಸುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಈ ಕುರಿತು ಹಲವು ಪ್ರಮುಖ ವಕೀಲರು, ಚಿಂತಕರು, ಹೋರಾಟಗಾರರು ಪ್ರತಿಕ್ರಿಯಿಸಿದ್ದಾರೆ.

ಸಿಜೆಐ ನಡೆಗೆ ಆಕ್ಪೇಪ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲೆ ಇಂದಿರಾ ಜೈಸಿಂಗ್ “ಭಾರತದ ಮುಖ್ಯ ನ್ಯಾಯಾಧೀಶರು ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವಿನ ಅಧಿಕಾರದ ಅಂತರದಲ್ಲಿ ರಾಜಿ ಮಾಡಿಕೊಂಡಿದ್ದಾರೆ. ಸಿಜೆಐ ಸ್ವತಂತ್ರ ಎಂಬುವುದರ ಮೇಲಿನ ನಂಬಿಕೆ ಸಂಪೂರ್ಣ ಕಳೆದುಕೊಂಡಿದ್ದೇನೆ. ಸ್ವತಂತ್ರ ಸಿಜೆಐ ಕಾರ್ಯಾಂಗದ ಜೊತೆ ಸಾರ್ವಜನಿಕವಾಗಿ ರಾಜಿ ಮಾಡಿಕೊಂಡಿರುವುದನ್ನು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಶನ್ (ಎಸ್‌ಸಿಬಿಎ) ಖಂಡಿಸಬೇಕು” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಸುಪ್ರೀಂ ಕೋರ್ಟ್‌ನ ಮತ್ತೋರ್ವ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಪ್ರತಿಕ್ರಿಯಿಸಿ “ಸಿಜೆಐ ಚಂದ್ರಚೂಡ್ ಅವರು ಮೋದಿಯವರನ್ನು ಅವರ ನಿವಾಸಕ್ಕೆ ಖಾಸಗಿ ಭೇಟಿ ಮಾಡಲು ಅವಕಾಶ ಮಾಡಿಕೊಟ್ಟಿರುವುದು ಆಘಾತಕಾರಿಯಾಗಿದೆ. ಇದು ಸರ್ಕಾರ ಸಂವಿಧಾನದ ಮಿತಿಯಲ್ಲಿ ಕಾರ್ಯಾಚರಿಸುತ್ತಿದೆ ಎಂದು ಖಚಿತಪಡಿಸುವ ಮತ್ತು ಕಾರ್ಯಾಂಗದಿಂದ ನಾಗರಿಕರ ಮೂಲಭೂತ ಹಕ್ಕನ್ನು ರಕ್ಷಿಸುವ ಜವಾಬ್ದಾರಿಯನ್ನು ಹೊಂದಿರುವ ನ್ಯಾಯಾಂಗಕ್ಕೆ ಕೆಟ್ಟ ಸಂದೇಶವನ್ನು ರವಾನಿಸುತ್ತದೆ. ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವೆ ದೀರ್ಘವಾದ ಅಂತರ ಇರಬೇಕು” ಎಂದು ಹೇಳಿದ್ದಾರೆ.

ವಕೀಲ, ಹೋರಾಟಗಾರ ವಿನಯ್ ಕೂರಗಾಯಲ ಶ್ರೀನಿವಾಸ ಪ್ರತಿಕ್ರಿಯಿಸಿ “ಇದು ನ್ಯಾಯಾಧೀಶರ ಒಂದು ಭಯಾನಕ ಉದಾಹರಣೆಯಾಗಿದೆ. ಸಿದ್ದರಾಮಯ್ಯ ಅವರ ಪ್ರಕರಣ ವಿಚಾರಣೆಯಲ್ಲಿರುವಾಗ, ಅವರು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯ ಮನೆಗೆ ಊಟಕ್ಕೆ ಹೋದರೆ ಒಪ್ಪಿಕೊಳ್ಳಬಹುದೇ? ಸಂವಿಧಾನವನ್ನು ಎತ್ತಿ ಹಿಡಿಯಬೇಕಾದ ವ್ಯಕ್ತಿಯೇ ಅದನ್ನು ದುರ್ಬಲಗೊಳಿಸಿದ್ದಾರೆ. ಸಿಜೆಐ ಚಂದ್ರಚೂಡ್ ಕ್ಷಮೆಯಾಚಿಸಬೇಕು ಅಥವಾ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

“ಸಿಜೆಐ ಚಂದ್ರಚೂಡ್ ಅವರೇ ನೀವು ಚುನಾವಣಾ ಬಾಂಡ್ ಕುರಿತು ತೀರ್ಪು ನೀಡಿದಾಗಿನಿಂದ ನಿಮ್ಮ ಮೇಲೆ ಅತೀವ ಗೌರವ ಇತ್ತು. ಅದು ಇವತ್ತು ಹೊರಟೋಯಿತು” ಎಂದು ಎಕ್ಸ್ ಬಳಕೆದಾರರೊಬ್ಬರು ಬರೆದುಕೊಂಡಿದ್ದಾರೆ.

“ನ್ಯಾಯಮೂರ್ತಿ ಲೋಯಾ ಅವರ ಮೇಲಿನ ನನ್ನ ಗೌರವ ಇಂದು ಹೆಚ್ಚಾಗಿದೆ. ಅವರಂತಹ ಶಕ್ತಿ ಎಲ್ಲರಿಗೂ ಇರಲಾರದು. ನಮ್ಮನ್ನು ಕ್ಷಮಿಸಿ ಸರ್ ” ಎಂದು ಮತ್ತೊಬ್ಬರು ಎಕ್ಸ್‌ ಬಳಕೆದಾರರು ಸಿಜೆಐ ನಡೆಯನ್ನು ಖಂಡಿಸಿದ್ದಾರೆ.

ಇದನ್ನೂ ಓದಿ : ನಕಲಿ ಎನ್‌ಕೌಂಟರ್ | “ಆರೋಪಿಗಳು ಈ ರೀತಿ ಪ್ರಾಣ ಕಳೆದುಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ” : ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...