Homeಮುಖಪುಟವಿಮಾನದಲ್ಲಿ ಮೋದಿ ಭಕ್ತನೊಬ್ಬನ ಗಲಾಟೆ: ಬಲ್ಗೇರಿಯಾದಲ್ಲಿ ತುರ್ತು ಲ್ಯಾಂಡಿಂಗ್ - ಬಂಧನ!

ವಿಮಾನದಲ್ಲಿ ಮೋದಿ ಭಕ್ತನೊಬ್ಬನ ಗಲಾಟೆ: ಬಲ್ಗೇರಿಯಾದಲ್ಲಿ ತುರ್ತು ಲ್ಯಾಂಡಿಂಗ್ – ಬಂಧನ!

ಆತನ ಮೇಲೆ ವಿಮಾನ ಸುರಕ್ಷತೆಗೆ ಅಪಾಯ ಉಂಟುಮಾಡಿದ ಪ್ರಕರಣ ದಾಖಲಾಗಿದೆ. ಅಪರಾಧ ಸಾಬೀತಾದರೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

- Advertisement -
- Advertisement -

ಪ್ಯಾರಿಸ್‌ನಿಂದ ನವದೆಹಲಿಗೆ ಹೋಗುವ ಮಾರ್ಗದಲ್ಲಿ ಏರ್ ಫ್ರಾನ್ಸ್ ವಿಮಾನವೊಂದು ಬಲ್ಗೇರಿಯಾದ ಸೋಫಿಯಾ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಬೇಕಾದ ಘಟನೆ ನಡೆದಿದೆ. ಇದಕ್ಕೆ ಕಾರಣವಾದದ್ದು ಮೋದಿ ಮೋದಿ ಎಂದು ಘೋಷಣೆ ಕೂಗಿದ್ದ ಭಾರತೀಯ ಪ್ರಯಾಣಿಕರೊಬ್ಬರ ಅಶಿಸ್ತು ಮತ್ತು ಪ್ರಯಾಣಿಕರಿಗೆ ಬೆದರಿಕೆ ಒಡ್ಡುವ ವರ್ತನೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಪ್ರಯಾಣಿಕನ ಹೆಸರನ್ನು ಸಂಸ್ಥೆ ಬಹಿರಂಗಪಡಿಸಿಲ್ಲ. ತಕ್ಷಣ ತುರ್ತು ನಿಲುಗಡೆ ಮಾಡಿ ವ್ಯಕ್ತಿಯನ್ನು ವಿಮಾನದಿಂದ ಇಳಿಸಲಾಗಿದೆ. ಆತನ ಮೇಲೆ ವಿಮಾನ ಸುರಕ್ಷತೆಗೆ ಅಪಾಯ ಉಂಟುಮಾಡಿದ ಪ್ರಕರಣ ದಾಖಲಾಗಿದೆ. ಅಪರಾಧ ಸಾಬೀತಾದರೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

ನಡೆದದ್ದು ಏನು…?

ಬಲ್ಗೇರಿಯಾದ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಯಾಗಿದ್ದ ಇವಾಯಿಲೊ ಏಂಜೆಲೋವ್ ಅವರನ್ನು ಉಲ್ಲೆಖಿಸಿರುವ ರಾಯಿಟರ್ಸ್, ’ವಿಮಾನ ಟೇಕ್-ಆಫ್ ಆದ ಕೂಡಲೇ  ಬಂಧಿತ ವ್ಯಕ್ತಿ ವಿಚಿತ್ರವಾಗಿ ವರ್ತಿಸಲು ಪ್ರಾರಂಭಿಸಿದನು. ಇತರ ಪ್ರಯಾಣಿಕರೊಂದಿಗೆ ಜಗಳವಾಡಿದ್ದಾರೆ. ವಿಮಾನ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ,  ಹಲವಾರು ಸಲ ಕಾಕ್ ಪಿಟ್ ಬಾಗಿಲನ್ನು ಹೊಡೆಯಲು ಆರಂಭಿಸಿದ್ದರು’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬ್ರಿಟನ್ ಸಂಸತ್‌ನಲ್ಲಿ ಭಾರತೀಯ ರೈತರ ಸುರಕ್ಷತೆಯ ಚರ್ಚೆ: ಅವಮಾನ ಎಂದ ಭಾರತ ಸರ್ಕಾರ

ವಿಮಾನದಲ್ಲಿದ್ದ ಸಿಖ್ ಪ್ಯಾಸೆಂಜರ್‌ಗಳನ್ನು ಬೊಟ್ಟು ಮಾಡಿ ಮೋದಿ ಮೋದಿ ಎಂದು ಜೋರಾಗಿ ಕಿರುಚಾಡತೊಡಗಿದ್ದಾರೆ,  ಸಿಖ್ ಯುವಕರು ಪ್ರತಿಕ್ರಿಯಿಸಿದಾಗ ಅವರನ್ನು ಬೈಯುತ್ತಾ ಜಗಳಕ್ಕೆ ನಿಂತಿದ್ದಾರೆ. ವಿಮಾನದ ಪರಿಚಾರಕರು ಮತ್ತು ಸಹಯಾತ್ರಿಕರು ಕೂಡಾ ವಿರೋಧಿಸಿದಾಗ ಅವರ ಮೇಲೆಯೂ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಸಹ ಪ್ರಯಾಣಿಕರ ಗುರುತಿನ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದನ್ನು ವಿಡಿಯೋದಲ್ಲಿ ಕೇಳಬಹುದು, “ಯೇಸು ಇನ್ನು ಹೊರಡಬೇಕಾಗುತ್ತದೆ” ಮತ್ತು “ಉಡ್ತಾ ಪಂಜಾಬ್”, ಜೈ ಹಿಂದ್, ಮೋದಿ ಎಂದು ಜೋರು ಜೋರಾಗಿ ಕೂಗುತ್ತಾನೆ.

ಇದನ್ನೂ ಓದಿ: ಚಿನ್ನ ಕಳ್ಳಸಾಗಣೆ ಪ್ರಕರಣ: ಪಿಣರಾಯಿ ವಿಜಯನ್ ಹೆಸರನ್ನು ಉಲ್ಲೇಖಿಸುವಂತೆ ಆರೋಪಿಗೆ ಒತ್ತಡ!

’ಉಡ್ತಾ ಪಂಜಾಬ್’ ಹೆಸರಿನ ಬಾಲಿವುಡ್ ಚಲನಚಿತ್ರವೊಂದರಲ್ಲಿ ಪಂಜಾಬ್‌ನಲ್ಲಿ ಡ್ರಗ್ಸ್ ಸರಬರಾಜು, ಬಳಕೆ ಬಗ್ಗೆ ಅತಿರೇಕದ ವಿಚಾರಗಳನ್ನು ತೋರಿಸಲಾಗಿತ್ತು.

“ಮೋದಿ, ನನ್ನ ಸಹೋದರ ಮೋದಿ … ಮೋದಿ, ಮೋದಿ,” ಎಂದು ಆ ವ್ಯಕ್ತಿ ಹೇಳುತ್ತಾರೆ. “ಮೋದಿ ಕರೆ ಮಾಡುತ್ತಿದ್ದಾರೆ, ಇಲ್ಲಿಗೆ ಬನ್ನಿ” ಎಂಬ ಅಸಂಬದ್ಧ ಮಾತುಗಳನ್ನು ಆಡುತ್ತಾ, ಕಿರುಚುತ್ತಾ ಸಹ ಪ್ರಯಾಣಿಕರಿಗೆ ತೊಂದರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗುತ್ತಾರೆ. ವಿಮಾನ ಸಿಬ್ಬಂದಿ ತಡೆಯಲು ಬಂದರೆ ಅವರ ಮೇಲೂ ಹಲ್ಲೆ ಮಾಡಿದ್ದಾನೆ. ಕೆಲವು ಸೆಕೆಂಡುಗಳ ನಂತರ, ತನ್ನ ಸುತ್ತಲಿನವರನ್ನು ನಿಂದಿಸುತ್ತಾ ಬೆದರಿಕೆ ಹಾಕಿದ್ದಾನೆ.

ಆರೋಪಿಯ ವರ್ತನೆಗೆ ಯಾವುದೇ ಸಮಂಜಸವಾದ ವಿವರಣೆಯಿಲ್ಲ, ನಾವು ಅವರ ಕಾರ್ಯಗಳು ಮತ್ತು ಉದ್ದೇಶಗಳನ್ನು ತನಿಖೆ ಮಾಡುತ್ತಿದ್ದೇವೆ” ಎಂದು ತನಿಖಾ ಸಂಸ್ಥೆ ಅಧಿಕಾರಿ ಇವಾಯಿಲೊ ಏಂಜೆಲೋವ್ ಹೇಳಿದ್ದಾರೆ.

ಸದ್ಯ ಈ ವ್ಯಕ್ತಿಗೆ ನ್ಯಾಯಾಲಯದಿಂದ ನೇಮಕಗೊಂಡ ರಕ್ಷಣಾ ವಕೀಲ ಮತ್ತು ಇಂಟರ್ಪ್ರಿಟರ್ ನೀಡಲಾಗಿದೆ. ಅವರ ಅಶಿಸ್ತಿನ ವರ್ತನೆಯ ಬಗ್ಗೆ ಬಲ್ಗೇರಿಯಾದ ಭಾರತದ ರಾಯಭಾರ ಕಚೇರಿಗೆ ಮಾಹಿತಿ ನೀಡಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಘಟನೆಯ ವಿಡಿಯೋ ಹಂಚಿಕೊಂಡಿರುವ ನೆಟ್ಟಿಗರು ಭಾರತದ ಮರ್ಯಾದೆ ತೆಗೆದಿದ್ದಾನೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಮತ್ತೆ ಕೆಲವರು ಶೇಮ್ ಶೇಮ್ ಎಂದಿದ್ದಾರೆ. ಇನ್ನೊಬ್ಬರು ಪ್ರಧಾನಿ ಮೋದಿಯವರನ್ನು ಟ್ಯಾಗ್ ಮಾಡಿ ಶುಭಾಶಯಗಳು ಎಂದು ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ದೇವಸ್ಥಾನದ ಕಾಣಿಕ ಡಬ್ಬಿ ಕಳವು: ಬಜರಂಗದಳ ಸಂಚಾಲಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...