Homeಮುಖಪುಟವಿಮಾನದಲ್ಲಿ ಮೋದಿ ಭಕ್ತನೊಬ್ಬನ ಗಲಾಟೆ: ಬಲ್ಗೇರಿಯಾದಲ್ಲಿ ತುರ್ತು ಲ್ಯಾಂಡಿಂಗ್ - ಬಂಧನ!

ವಿಮಾನದಲ್ಲಿ ಮೋದಿ ಭಕ್ತನೊಬ್ಬನ ಗಲಾಟೆ: ಬಲ್ಗೇರಿಯಾದಲ್ಲಿ ತುರ್ತು ಲ್ಯಾಂಡಿಂಗ್ – ಬಂಧನ!

ಆತನ ಮೇಲೆ ವಿಮಾನ ಸುರಕ್ಷತೆಗೆ ಅಪಾಯ ಉಂಟುಮಾಡಿದ ಪ್ರಕರಣ ದಾಖಲಾಗಿದೆ. ಅಪರಾಧ ಸಾಬೀತಾದರೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

- Advertisement -
- Advertisement -

ಪ್ಯಾರಿಸ್‌ನಿಂದ ನವದೆಹಲಿಗೆ ಹೋಗುವ ಮಾರ್ಗದಲ್ಲಿ ಏರ್ ಫ್ರಾನ್ಸ್ ವಿಮಾನವೊಂದು ಬಲ್ಗೇರಿಯಾದ ಸೋಫಿಯಾ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಬೇಕಾದ ಘಟನೆ ನಡೆದಿದೆ. ಇದಕ್ಕೆ ಕಾರಣವಾದದ್ದು ಮೋದಿ ಮೋದಿ ಎಂದು ಘೋಷಣೆ ಕೂಗಿದ್ದ ಭಾರತೀಯ ಪ್ರಯಾಣಿಕರೊಬ್ಬರ ಅಶಿಸ್ತು ಮತ್ತು ಪ್ರಯಾಣಿಕರಿಗೆ ಬೆದರಿಕೆ ಒಡ್ಡುವ ವರ್ತನೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಪ್ರಯಾಣಿಕನ ಹೆಸರನ್ನು ಸಂಸ್ಥೆ ಬಹಿರಂಗಪಡಿಸಿಲ್ಲ. ತಕ್ಷಣ ತುರ್ತು ನಿಲುಗಡೆ ಮಾಡಿ ವ್ಯಕ್ತಿಯನ್ನು ವಿಮಾನದಿಂದ ಇಳಿಸಲಾಗಿದೆ. ಆತನ ಮೇಲೆ ವಿಮಾನ ಸುರಕ್ಷತೆಗೆ ಅಪಾಯ ಉಂಟುಮಾಡಿದ ಪ್ರಕರಣ ದಾಖಲಾಗಿದೆ. ಅಪರಾಧ ಸಾಬೀತಾದರೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

ನಡೆದದ್ದು ಏನು…?

ಬಲ್ಗೇರಿಯಾದ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಯಾಗಿದ್ದ ಇವಾಯಿಲೊ ಏಂಜೆಲೋವ್ ಅವರನ್ನು ಉಲ್ಲೆಖಿಸಿರುವ ರಾಯಿಟರ್ಸ್, ’ವಿಮಾನ ಟೇಕ್-ಆಫ್ ಆದ ಕೂಡಲೇ  ಬಂಧಿತ ವ್ಯಕ್ತಿ ವಿಚಿತ್ರವಾಗಿ ವರ್ತಿಸಲು ಪ್ರಾರಂಭಿಸಿದನು. ಇತರ ಪ್ರಯಾಣಿಕರೊಂದಿಗೆ ಜಗಳವಾಡಿದ್ದಾರೆ. ವಿಮಾನ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ,  ಹಲವಾರು ಸಲ ಕಾಕ್ ಪಿಟ್ ಬಾಗಿಲನ್ನು ಹೊಡೆಯಲು ಆರಂಭಿಸಿದ್ದರು’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬ್ರಿಟನ್ ಸಂಸತ್‌ನಲ್ಲಿ ಭಾರತೀಯ ರೈತರ ಸುರಕ್ಷತೆಯ ಚರ್ಚೆ: ಅವಮಾನ ಎಂದ ಭಾರತ ಸರ್ಕಾರ

ವಿಮಾನದಲ್ಲಿದ್ದ ಸಿಖ್ ಪ್ಯಾಸೆಂಜರ್‌ಗಳನ್ನು ಬೊಟ್ಟು ಮಾಡಿ ಮೋದಿ ಮೋದಿ ಎಂದು ಜೋರಾಗಿ ಕಿರುಚಾಡತೊಡಗಿದ್ದಾರೆ,  ಸಿಖ್ ಯುವಕರು ಪ್ರತಿಕ್ರಿಯಿಸಿದಾಗ ಅವರನ್ನು ಬೈಯುತ್ತಾ ಜಗಳಕ್ಕೆ ನಿಂತಿದ್ದಾರೆ. ವಿಮಾನದ ಪರಿಚಾರಕರು ಮತ್ತು ಸಹಯಾತ್ರಿಕರು ಕೂಡಾ ವಿರೋಧಿಸಿದಾಗ ಅವರ ಮೇಲೆಯೂ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಸಹ ಪ್ರಯಾಣಿಕರ ಗುರುತಿನ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದನ್ನು ವಿಡಿಯೋದಲ್ಲಿ ಕೇಳಬಹುದು, “ಯೇಸು ಇನ್ನು ಹೊರಡಬೇಕಾಗುತ್ತದೆ” ಮತ್ತು “ಉಡ್ತಾ ಪಂಜಾಬ್”, ಜೈ ಹಿಂದ್, ಮೋದಿ ಎಂದು ಜೋರು ಜೋರಾಗಿ ಕೂಗುತ್ತಾನೆ.

ಇದನ್ನೂ ಓದಿ: ಚಿನ್ನ ಕಳ್ಳಸಾಗಣೆ ಪ್ರಕರಣ: ಪಿಣರಾಯಿ ವಿಜಯನ್ ಹೆಸರನ್ನು ಉಲ್ಲೇಖಿಸುವಂತೆ ಆರೋಪಿಗೆ ಒತ್ತಡ!

’ಉಡ್ತಾ ಪಂಜಾಬ್’ ಹೆಸರಿನ ಬಾಲಿವುಡ್ ಚಲನಚಿತ್ರವೊಂದರಲ್ಲಿ ಪಂಜಾಬ್‌ನಲ್ಲಿ ಡ್ರಗ್ಸ್ ಸರಬರಾಜು, ಬಳಕೆ ಬಗ್ಗೆ ಅತಿರೇಕದ ವಿಚಾರಗಳನ್ನು ತೋರಿಸಲಾಗಿತ್ತು.

“ಮೋದಿ, ನನ್ನ ಸಹೋದರ ಮೋದಿ … ಮೋದಿ, ಮೋದಿ,” ಎಂದು ಆ ವ್ಯಕ್ತಿ ಹೇಳುತ್ತಾರೆ. “ಮೋದಿ ಕರೆ ಮಾಡುತ್ತಿದ್ದಾರೆ, ಇಲ್ಲಿಗೆ ಬನ್ನಿ” ಎಂಬ ಅಸಂಬದ್ಧ ಮಾತುಗಳನ್ನು ಆಡುತ್ತಾ, ಕಿರುಚುತ್ತಾ ಸಹ ಪ್ರಯಾಣಿಕರಿಗೆ ತೊಂದರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗುತ್ತಾರೆ. ವಿಮಾನ ಸಿಬ್ಬಂದಿ ತಡೆಯಲು ಬಂದರೆ ಅವರ ಮೇಲೂ ಹಲ್ಲೆ ಮಾಡಿದ್ದಾನೆ. ಕೆಲವು ಸೆಕೆಂಡುಗಳ ನಂತರ, ತನ್ನ ಸುತ್ತಲಿನವರನ್ನು ನಿಂದಿಸುತ್ತಾ ಬೆದರಿಕೆ ಹಾಕಿದ್ದಾನೆ.

ಆರೋಪಿಯ ವರ್ತನೆಗೆ ಯಾವುದೇ ಸಮಂಜಸವಾದ ವಿವರಣೆಯಿಲ್ಲ, ನಾವು ಅವರ ಕಾರ್ಯಗಳು ಮತ್ತು ಉದ್ದೇಶಗಳನ್ನು ತನಿಖೆ ಮಾಡುತ್ತಿದ್ದೇವೆ” ಎಂದು ತನಿಖಾ ಸಂಸ್ಥೆ ಅಧಿಕಾರಿ ಇವಾಯಿಲೊ ಏಂಜೆಲೋವ್ ಹೇಳಿದ್ದಾರೆ.

ಸದ್ಯ ಈ ವ್ಯಕ್ತಿಗೆ ನ್ಯಾಯಾಲಯದಿಂದ ನೇಮಕಗೊಂಡ ರಕ್ಷಣಾ ವಕೀಲ ಮತ್ತು ಇಂಟರ್ಪ್ರಿಟರ್ ನೀಡಲಾಗಿದೆ. ಅವರ ಅಶಿಸ್ತಿನ ವರ್ತನೆಯ ಬಗ್ಗೆ ಬಲ್ಗೇರಿಯಾದ ಭಾರತದ ರಾಯಭಾರ ಕಚೇರಿಗೆ ಮಾಹಿತಿ ನೀಡಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಘಟನೆಯ ವಿಡಿಯೋ ಹಂಚಿಕೊಂಡಿರುವ ನೆಟ್ಟಿಗರು ಭಾರತದ ಮರ್ಯಾದೆ ತೆಗೆದಿದ್ದಾನೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಮತ್ತೆ ಕೆಲವರು ಶೇಮ್ ಶೇಮ್ ಎಂದಿದ್ದಾರೆ. ಇನ್ನೊಬ್ಬರು ಪ್ರಧಾನಿ ಮೋದಿಯವರನ್ನು ಟ್ಯಾಗ್ ಮಾಡಿ ಶುಭಾಶಯಗಳು ಎಂದು ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ದೇವಸ್ಥಾನದ ಕಾಣಿಕ ಡಬ್ಬಿ ಕಳವು: ಬಜರಂಗದಳ ಸಂಚಾಲಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...