Homeಮುಖಪುಟವಿಮಾನದಲ್ಲಿ ಮೋದಿ ಭಕ್ತನೊಬ್ಬನ ಗಲಾಟೆ: ಬಲ್ಗೇರಿಯಾದಲ್ಲಿ ತುರ್ತು ಲ್ಯಾಂಡಿಂಗ್ - ಬಂಧನ!

ವಿಮಾನದಲ್ಲಿ ಮೋದಿ ಭಕ್ತನೊಬ್ಬನ ಗಲಾಟೆ: ಬಲ್ಗೇರಿಯಾದಲ್ಲಿ ತುರ್ತು ಲ್ಯಾಂಡಿಂಗ್ – ಬಂಧನ!

ಆತನ ಮೇಲೆ ವಿಮಾನ ಸುರಕ್ಷತೆಗೆ ಅಪಾಯ ಉಂಟುಮಾಡಿದ ಪ್ರಕರಣ ದಾಖಲಾಗಿದೆ. ಅಪರಾಧ ಸಾಬೀತಾದರೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

- Advertisement -
- Advertisement -

ಪ್ಯಾರಿಸ್‌ನಿಂದ ನವದೆಹಲಿಗೆ ಹೋಗುವ ಮಾರ್ಗದಲ್ಲಿ ಏರ್ ಫ್ರಾನ್ಸ್ ವಿಮಾನವೊಂದು ಬಲ್ಗೇರಿಯಾದ ಸೋಫಿಯಾ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಬೇಕಾದ ಘಟನೆ ನಡೆದಿದೆ. ಇದಕ್ಕೆ ಕಾರಣವಾದದ್ದು ಮೋದಿ ಮೋದಿ ಎಂದು ಘೋಷಣೆ ಕೂಗಿದ್ದ ಭಾರತೀಯ ಪ್ರಯಾಣಿಕರೊಬ್ಬರ ಅಶಿಸ್ತು ಮತ್ತು ಪ್ರಯಾಣಿಕರಿಗೆ ಬೆದರಿಕೆ ಒಡ್ಡುವ ವರ್ತನೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಪ್ರಯಾಣಿಕನ ಹೆಸರನ್ನು ಸಂಸ್ಥೆ ಬಹಿರಂಗಪಡಿಸಿಲ್ಲ. ತಕ್ಷಣ ತುರ್ತು ನಿಲುಗಡೆ ಮಾಡಿ ವ್ಯಕ್ತಿಯನ್ನು ವಿಮಾನದಿಂದ ಇಳಿಸಲಾಗಿದೆ. ಆತನ ಮೇಲೆ ವಿಮಾನ ಸುರಕ್ಷತೆಗೆ ಅಪಾಯ ಉಂಟುಮಾಡಿದ ಪ್ರಕರಣ ದಾಖಲಾಗಿದೆ. ಅಪರಾಧ ಸಾಬೀತಾದರೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

ನಡೆದದ್ದು ಏನು…?

ಬಲ್ಗೇರಿಯಾದ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಯಾಗಿದ್ದ ಇವಾಯಿಲೊ ಏಂಜೆಲೋವ್ ಅವರನ್ನು ಉಲ್ಲೆಖಿಸಿರುವ ರಾಯಿಟರ್ಸ್, ’ವಿಮಾನ ಟೇಕ್-ಆಫ್ ಆದ ಕೂಡಲೇ  ಬಂಧಿತ ವ್ಯಕ್ತಿ ವಿಚಿತ್ರವಾಗಿ ವರ್ತಿಸಲು ಪ್ರಾರಂಭಿಸಿದನು. ಇತರ ಪ್ರಯಾಣಿಕರೊಂದಿಗೆ ಜಗಳವಾಡಿದ್ದಾರೆ. ವಿಮಾನ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ,  ಹಲವಾರು ಸಲ ಕಾಕ್ ಪಿಟ್ ಬಾಗಿಲನ್ನು ಹೊಡೆಯಲು ಆರಂಭಿಸಿದ್ದರು’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬ್ರಿಟನ್ ಸಂಸತ್‌ನಲ್ಲಿ ಭಾರತೀಯ ರೈತರ ಸುರಕ್ಷತೆಯ ಚರ್ಚೆ: ಅವಮಾನ ಎಂದ ಭಾರತ ಸರ್ಕಾರ

ವಿಮಾನದಲ್ಲಿದ್ದ ಸಿಖ್ ಪ್ಯಾಸೆಂಜರ್‌ಗಳನ್ನು ಬೊಟ್ಟು ಮಾಡಿ ಮೋದಿ ಮೋದಿ ಎಂದು ಜೋರಾಗಿ ಕಿರುಚಾಡತೊಡಗಿದ್ದಾರೆ,  ಸಿಖ್ ಯುವಕರು ಪ್ರತಿಕ್ರಿಯಿಸಿದಾಗ ಅವರನ್ನು ಬೈಯುತ್ತಾ ಜಗಳಕ್ಕೆ ನಿಂತಿದ್ದಾರೆ. ವಿಮಾನದ ಪರಿಚಾರಕರು ಮತ್ತು ಸಹಯಾತ್ರಿಕರು ಕೂಡಾ ವಿರೋಧಿಸಿದಾಗ ಅವರ ಮೇಲೆಯೂ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಸಹ ಪ್ರಯಾಣಿಕರ ಗುರುತಿನ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದನ್ನು ವಿಡಿಯೋದಲ್ಲಿ ಕೇಳಬಹುದು, “ಯೇಸು ಇನ್ನು ಹೊರಡಬೇಕಾಗುತ್ತದೆ” ಮತ್ತು “ಉಡ್ತಾ ಪಂಜಾಬ್”, ಜೈ ಹಿಂದ್, ಮೋದಿ ಎಂದು ಜೋರು ಜೋರಾಗಿ ಕೂಗುತ್ತಾನೆ.

ಇದನ್ನೂ ಓದಿ: ಚಿನ್ನ ಕಳ್ಳಸಾಗಣೆ ಪ್ರಕರಣ: ಪಿಣರಾಯಿ ವಿಜಯನ್ ಹೆಸರನ್ನು ಉಲ್ಲೇಖಿಸುವಂತೆ ಆರೋಪಿಗೆ ಒತ್ತಡ!

’ಉಡ್ತಾ ಪಂಜಾಬ್’ ಹೆಸರಿನ ಬಾಲಿವುಡ್ ಚಲನಚಿತ್ರವೊಂದರಲ್ಲಿ ಪಂಜಾಬ್‌ನಲ್ಲಿ ಡ್ರಗ್ಸ್ ಸರಬರಾಜು, ಬಳಕೆ ಬಗ್ಗೆ ಅತಿರೇಕದ ವಿಚಾರಗಳನ್ನು ತೋರಿಸಲಾಗಿತ್ತು.

“ಮೋದಿ, ನನ್ನ ಸಹೋದರ ಮೋದಿ … ಮೋದಿ, ಮೋದಿ,” ಎಂದು ಆ ವ್ಯಕ್ತಿ ಹೇಳುತ್ತಾರೆ. “ಮೋದಿ ಕರೆ ಮಾಡುತ್ತಿದ್ದಾರೆ, ಇಲ್ಲಿಗೆ ಬನ್ನಿ” ಎಂಬ ಅಸಂಬದ್ಧ ಮಾತುಗಳನ್ನು ಆಡುತ್ತಾ, ಕಿರುಚುತ್ತಾ ಸಹ ಪ್ರಯಾಣಿಕರಿಗೆ ತೊಂದರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗುತ್ತಾರೆ. ವಿಮಾನ ಸಿಬ್ಬಂದಿ ತಡೆಯಲು ಬಂದರೆ ಅವರ ಮೇಲೂ ಹಲ್ಲೆ ಮಾಡಿದ್ದಾನೆ. ಕೆಲವು ಸೆಕೆಂಡುಗಳ ನಂತರ, ತನ್ನ ಸುತ್ತಲಿನವರನ್ನು ನಿಂದಿಸುತ್ತಾ ಬೆದರಿಕೆ ಹಾಕಿದ್ದಾನೆ.

ಆರೋಪಿಯ ವರ್ತನೆಗೆ ಯಾವುದೇ ಸಮಂಜಸವಾದ ವಿವರಣೆಯಿಲ್ಲ, ನಾವು ಅವರ ಕಾರ್ಯಗಳು ಮತ್ತು ಉದ್ದೇಶಗಳನ್ನು ತನಿಖೆ ಮಾಡುತ್ತಿದ್ದೇವೆ” ಎಂದು ತನಿಖಾ ಸಂಸ್ಥೆ ಅಧಿಕಾರಿ ಇವಾಯಿಲೊ ಏಂಜೆಲೋವ್ ಹೇಳಿದ್ದಾರೆ.

ಸದ್ಯ ಈ ವ್ಯಕ್ತಿಗೆ ನ್ಯಾಯಾಲಯದಿಂದ ನೇಮಕಗೊಂಡ ರಕ್ಷಣಾ ವಕೀಲ ಮತ್ತು ಇಂಟರ್ಪ್ರಿಟರ್ ನೀಡಲಾಗಿದೆ. ಅವರ ಅಶಿಸ್ತಿನ ವರ್ತನೆಯ ಬಗ್ಗೆ ಬಲ್ಗೇರಿಯಾದ ಭಾರತದ ರಾಯಭಾರ ಕಚೇರಿಗೆ ಮಾಹಿತಿ ನೀಡಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಘಟನೆಯ ವಿಡಿಯೋ ಹಂಚಿಕೊಂಡಿರುವ ನೆಟ್ಟಿಗರು ಭಾರತದ ಮರ್ಯಾದೆ ತೆಗೆದಿದ್ದಾನೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಮತ್ತೆ ಕೆಲವರು ಶೇಮ್ ಶೇಮ್ ಎಂದಿದ್ದಾರೆ. ಇನ್ನೊಬ್ಬರು ಪ್ರಧಾನಿ ಮೋದಿಯವರನ್ನು ಟ್ಯಾಗ್ ಮಾಡಿ ಶುಭಾಶಯಗಳು ಎಂದು ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ದೇವಸ್ಥಾನದ ಕಾಣಿಕ ಡಬ್ಬಿ ಕಳವು: ಬಜರಂಗದಳ ಸಂಚಾಲಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...