Homeಮುಖಪುಟವಿಮಾನದಲ್ಲಿ ಮೋದಿ ಭಕ್ತನೊಬ್ಬನ ಗಲಾಟೆ: ಬಲ್ಗೇರಿಯಾದಲ್ಲಿ ತುರ್ತು ಲ್ಯಾಂಡಿಂಗ್ - ಬಂಧನ!

ವಿಮಾನದಲ್ಲಿ ಮೋದಿ ಭಕ್ತನೊಬ್ಬನ ಗಲಾಟೆ: ಬಲ್ಗೇರಿಯಾದಲ್ಲಿ ತುರ್ತು ಲ್ಯಾಂಡಿಂಗ್ – ಬಂಧನ!

ಆತನ ಮೇಲೆ ವಿಮಾನ ಸುರಕ್ಷತೆಗೆ ಅಪಾಯ ಉಂಟುಮಾಡಿದ ಪ್ರಕರಣ ದಾಖಲಾಗಿದೆ. ಅಪರಾಧ ಸಾಬೀತಾದರೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

- Advertisement -
- Advertisement -

ಪ್ಯಾರಿಸ್‌ನಿಂದ ನವದೆಹಲಿಗೆ ಹೋಗುವ ಮಾರ್ಗದಲ್ಲಿ ಏರ್ ಫ್ರಾನ್ಸ್ ವಿಮಾನವೊಂದು ಬಲ್ಗೇರಿಯಾದ ಸೋಫಿಯಾ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಬೇಕಾದ ಘಟನೆ ನಡೆದಿದೆ. ಇದಕ್ಕೆ ಕಾರಣವಾದದ್ದು ಮೋದಿ ಮೋದಿ ಎಂದು ಘೋಷಣೆ ಕೂಗಿದ್ದ ಭಾರತೀಯ ಪ್ರಯಾಣಿಕರೊಬ್ಬರ ಅಶಿಸ್ತು ಮತ್ತು ಪ್ರಯಾಣಿಕರಿಗೆ ಬೆದರಿಕೆ ಒಡ್ಡುವ ವರ್ತನೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಪ್ರಯಾಣಿಕನ ಹೆಸರನ್ನು ಸಂಸ್ಥೆ ಬಹಿರಂಗಪಡಿಸಿಲ್ಲ. ತಕ್ಷಣ ತುರ್ತು ನಿಲುಗಡೆ ಮಾಡಿ ವ್ಯಕ್ತಿಯನ್ನು ವಿಮಾನದಿಂದ ಇಳಿಸಲಾಗಿದೆ. ಆತನ ಮೇಲೆ ವಿಮಾನ ಸುರಕ್ಷತೆಗೆ ಅಪಾಯ ಉಂಟುಮಾಡಿದ ಪ್ರಕರಣ ದಾಖಲಾಗಿದೆ. ಅಪರಾಧ ಸಾಬೀತಾದರೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

ನಡೆದದ್ದು ಏನು…?

ಬಲ್ಗೇರಿಯಾದ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಯಾಗಿದ್ದ ಇವಾಯಿಲೊ ಏಂಜೆಲೋವ್ ಅವರನ್ನು ಉಲ್ಲೆಖಿಸಿರುವ ರಾಯಿಟರ್ಸ್, ’ವಿಮಾನ ಟೇಕ್-ಆಫ್ ಆದ ಕೂಡಲೇ  ಬಂಧಿತ ವ್ಯಕ್ತಿ ವಿಚಿತ್ರವಾಗಿ ವರ್ತಿಸಲು ಪ್ರಾರಂಭಿಸಿದನು. ಇತರ ಪ್ರಯಾಣಿಕರೊಂದಿಗೆ ಜಗಳವಾಡಿದ್ದಾರೆ. ವಿಮಾನ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ,  ಹಲವಾರು ಸಲ ಕಾಕ್ ಪಿಟ್ ಬಾಗಿಲನ್ನು ಹೊಡೆಯಲು ಆರಂಭಿಸಿದ್ದರು’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬ್ರಿಟನ್ ಸಂಸತ್‌ನಲ್ಲಿ ಭಾರತೀಯ ರೈತರ ಸುರಕ್ಷತೆಯ ಚರ್ಚೆ: ಅವಮಾನ ಎಂದ ಭಾರತ ಸರ್ಕಾರ

ವಿಮಾನದಲ್ಲಿದ್ದ ಸಿಖ್ ಪ್ಯಾಸೆಂಜರ್‌ಗಳನ್ನು ಬೊಟ್ಟು ಮಾಡಿ ಮೋದಿ ಮೋದಿ ಎಂದು ಜೋರಾಗಿ ಕಿರುಚಾಡತೊಡಗಿದ್ದಾರೆ,  ಸಿಖ್ ಯುವಕರು ಪ್ರತಿಕ್ರಿಯಿಸಿದಾಗ ಅವರನ್ನು ಬೈಯುತ್ತಾ ಜಗಳಕ್ಕೆ ನಿಂತಿದ್ದಾರೆ. ವಿಮಾನದ ಪರಿಚಾರಕರು ಮತ್ತು ಸಹಯಾತ್ರಿಕರು ಕೂಡಾ ವಿರೋಧಿಸಿದಾಗ ಅವರ ಮೇಲೆಯೂ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಸಹ ಪ್ರಯಾಣಿಕರ ಗುರುತಿನ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದನ್ನು ವಿಡಿಯೋದಲ್ಲಿ ಕೇಳಬಹುದು, “ಯೇಸು ಇನ್ನು ಹೊರಡಬೇಕಾಗುತ್ತದೆ” ಮತ್ತು “ಉಡ್ತಾ ಪಂಜಾಬ್”, ಜೈ ಹಿಂದ್, ಮೋದಿ ಎಂದು ಜೋರು ಜೋರಾಗಿ ಕೂಗುತ್ತಾನೆ.

ಇದನ್ನೂ ಓದಿ: ಚಿನ್ನ ಕಳ್ಳಸಾಗಣೆ ಪ್ರಕರಣ: ಪಿಣರಾಯಿ ವಿಜಯನ್ ಹೆಸರನ್ನು ಉಲ್ಲೇಖಿಸುವಂತೆ ಆರೋಪಿಗೆ ಒತ್ತಡ!

’ಉಡ್ತಾ ಪಂಜಾಬ್’ ಹೆಸರಿನ ಬಾಲಿವುಡ್ ಚಲನಚಿತ್ರವೊಂದರಲ್ಲಿ ಪಂಜಾಬ್‌ನಲ್ಲಿ ಡ್ರಗ್ಸ್ ಸರಬರಾಜು, ಬಳಕೆ ಬಗ್ಗೆ ಅತಿರೇಕದ ವಿಚಾರಗಳನ್ನು ತೋರಿಸಲಾಗಿತ್ತು.

“ಮೋದಿ, ನನ್ನ ಸಹೋದರ ಮೋದಿ … ಮೋದಿ, ಮೋದಿ,” ಎಂದು ಆ ವ್ಯಕ್ತಿ ಹೇಳುತ್ತಾರೆ. “ಮೋದಿ ಕರೆ ಮಾಡುತ್ತಿದ್ದಾರೆ, ಇಲ್ಲಿಗೆ ಬನ್ನಿ” ಎಂಬ ಅಸಂಬದ್ಧ ಮಾತುಗಳನ್ನು ಆಡುತ್ತಾ, ಕಿರುಚುತ್ತಾ ಸಹ ಪ್ರಯಾಣಿಕರಿಗೆ ತೊಂದರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗುತ್ತಾರೆ. ವಿಮಾನ ಸಿಬ್ಬಂದಿ ತಡೆಯಲು ಬಂದರೆ ಅವರ ಮೇಲೂ ಹಲ್ಲೆ ಮಾಡಿದ್ದಾನೆ. ಕೆಲವು ಸೆಕೆಂಡುಗಳ ನಂತರ, ತನ್ನ ಸುತ್ತಲಿನವರನ್ನು ನಿಂದಿಸುತ್ತಾ ಬೆದರಿಕೆ ಹಾಕಿದ್ದಾನೆ.

ಆರೋಪಿಯ ವರ್ತನೆಗೆ ಯಾವುದೇ ಸಮಂಜಸವಾದ ವಿವರಣೆಯಿಲ್ಲ, ನಾವು ಅವರ ಕಾರ್ಯಗಳು ಮತ್ತು ಉದ್ದೇಶಗಳನ್ನು ತನಿಖೆ ಮಾಡುತ್ತಿದ್ದೇವೆ” ಎಂದು ತನಿಖಾ ಸಂಸ್ಥೆ ಅಧಿಕಾರಿ ಇವಾಯಿಲೊ ಏಂಜೆಲೋವ್ ಹೇಳಿದ್ದಾರೆ.

ಸದ್ಯ ಈ ವ್ಯಕ್ತಿಗೆ ನ್ಯಾಯಾಲಯದಿಂದ ನೇಮಕಗೊಂಡ ರಕ್ಷಣಾ ವಕೀಲ ಮತ್ತು ಇಂಟರ್ಪ್ರಿಟರ್ ನೀಡಲಾಗಿದೆ. ಅವರ ಅಶಿಸ್ತಿನ ವರ್ತನೆಯ ಬಗ್ಗೆ ಬಲ್ಗೇರಿಯಾದ ಭಾರತದ ರಾಯಭಾರ ಕಚೇರಿಗೆ ಮಾಹಿತಿ ನೀಡಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಘಟನೆಯ ವಿಡಿಯೋ ಹಂಚಿಕೊಂಡಿರುವ ನೆಟ್ಟಿಗರು ಭಾರತದ ಮರ್ಯಾದೆ ತೆಗೆದಿದ್ದಾನೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಮತ್ತೆ ಕೆಲವರು ಶೇಮ್ ಶೇಮ್ ಎಂದಿದ್ದಾರೆ. ಇನ್ನೊಬ್ಬರು ಪ್ರಧಾನಿ ಮೋದಿಯವರನ್ನು ಟ್ಯಾಗ್ ಮಾಡಿ ಶುಭಾಶಯಗಳು ಎಂದು ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ದೇವಸ್ಥಾನದ ಕಾಣಿಕ ಡಬ್ಬಿ ಕಳವು: ಬಜರಂಗದಳ ಸಂಚಾಲಕನ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...