Homeಅಂಕಣಗಳುಮೂರು ಸಾರಿ ಲಡ್ಡು ಹಂಚಲಾಯಿತು; ರೈತರಿಗೆ ಬೂಂದಿ ಕಾಳೂ ಸಿಗಲಿಲ್ಲ

ಮೂರು ಸಾರಿ ಲಡ್ಡು ಹಂಚಲಾಯಿತು; ರೈತರಿಗೆ ಬೂಂದಿ ಕಾಳೂ ಸಿಗಲಿಲ್ಲ

- Advertisement -
- Advertisement -

ಮಗು ಇನ್ನೂ ಹುಟ್ಟೇ ಇಲ್ಲ, ಆದರೆ ಈಗಾಗಲೇ ಮೂರು ಸಲ ಸಿಹಿ ಹಂಚಿಕೊಂಡು ತಿಂದುಬಿಟ್ಟರು. ರೈತರ ಬೆಳೆಗೆ ಸರಿಯಾದ ಬೆಲೆ ನೀಡುವಲ್ಲಿ ಮೋದಿ ಸರಕಾರ ಇದನ್ನೇ ಮಾಡಿದೆ. ಇಲ್ಲಿಯತನಕ ಒಬ್ಬ ರೈತನಿಗೂ ಹೆಚ್ಚಿಸಲಾದ ಬೆಲೆ ಸಿಕ್ಕಿಲ್ಲ. ಹೆಚ್ಚಿನ ರೈತರಿಗೆ ಬೆಲೆ ಸಿಗುವ ಸಾಧ್ಯತೆಯೂ ಕಾಣುತ್ತಿಲ್ಲ. ಆದರೆ ಮೂರು ಬಾರಿ ಚಪ್ಪಾಳೆ ತಟ್ಟಲಾಗಿದೆ, ಅಭಿನಂದನೆಗಳ ಪೋಸ್ಟರ್‍ಗಳು, ಹೋರ್ಡಿಂಗ್‍ಗಳನ್ನು ಹಚ್ಚಲಾಗಿದೆ, ಸಿಹಿ ತಿನ್ನಲಾಗಿದೆ.
ಫೆಬ್ರುವರಿ 1 ರಂದು ಅರುಣ್ ಜೇಟ್ಲಿಯವರು ಈ ‘ಐತಿಹಾಸಿಕ’ ನಿರ್ಣಯದ ಘೋಷಣೆ ಮಾಡಿದಾಗ ಮೊದಲ ಬಾರಿ ಲಡ್ಡೂ ತಿನ್ನಲಾಯಿತು. ವಿತ್ತ ಸಚಿವರು ಕೃಷಿ ವೆಚ್ಚದ ವ್ಯಾಖ್ಯೆಯನ್ನೇ ಬದಲಿಸಿದ ಹಾಗೂ ತಮ್ಮ ಮೂಲ ಆಶ್ವಾಸನೆಯಿಂದ ನುಣುಚಿಕೊಂಡ ಕಹಿ ಸತ್ಯ ಲಡ್ಡೂಗಳ ಸಿಹಿಯಲ್ಲಿ ಮುಚ್ಚಿಹೋಯಿತು. ಜುಲೈ 4 ರಂದು ಸರಕಾರ ಈ ವರ್ಷದ ಮುಂಗಾರು ಬೆಳೆಯ ಬೆಲೆಯಲ್ಲಿ ‘ಐತಿಹಾಸಿಕ’ ವೃದ್ಧಿ ಘೋಷಿಸಿದಾಗ ಎರಡನೇ ಬಾರಿ ಲಡ್ಡೂ ತಿನ್ನಲಾಯಿತು. ಇದಕ್ಕಿಂತ ಹೆಚ್ಚಿನ ಚುನಾವಣೆಯ ಉಂಡೆಗಳನ್ನು ಹಿಂದಿನ ಸರಕಾರ 2009 ರಲ್ಲಿಯೇ ಹಂಚಿತ್ತು ಎನ್ನುವ ಸತ್ಯವೂ ಈ ಲಡ್ಡೂಗಳ ಭಾರದಲ್ಲಿ ಅವಿತುಹೋಯಿತು.
ಕಳೆದ ವಾರ ಸರಕಾರದ ಖರೀದಿಯ ವಾರ್ಷಿಕ ನೀತಿಯನ್ನು ಕ್ಯಾಬಿನೆಟ್ ಘೋಷಿಸಿದಾಗ ಮೂರನೇ ಬಾರಿ ಲಡ್ಡೂ ತಿನ್ನಲಾಯಿತು. ಮತ್ತೆ ಇದನ್ನು ಒಂದು ಹೊಸ ‘ಐತಿಹಾಸಿಕ’ ಘೋಷಣೆಯಂತೇ ದೇಶದ ಎದುರಿಡಲಾಯಿತು. ತನ್ನ ಕಾಯಕದ ಫಲ ಯಾವಾಗ ಸಿಗುವುದೆಂದು ರೈತ ಮಾತ್ರ ಕಣ್ಣು ಬಿಟ್ಟು ಕಾಯುತ್ತಿದ್ದ.
ಎಲ್ಲ ರೈತರು ತಮ್ಮ ಎಲ್ಲಾ ಬೆಳೆಗಳನ್ನು ಎಮ್‍ಎಸ್‍ಪಿ ದರದಲ್ಲಿ ಮಾರಾಟ ಮಾಡುವ ಒಂದು ವ್ಯವಸ್ಥೆ ಹೇಗೆ ಮಾಡಬಹುದು ಎಂಬ ಸಮಸ್ಯೆಗೆ ಹೊಸ ನೀತಿಯಲ್ಲೂ ಯಾವುದೇ ಉತ್ತರವಿಲ್ಲ. ಈಗ ಮೂರು ವಿಧಗಳಲ್ಲಿ ಒಂದು ವಿಧದಲ್ಲಿ ಸರಕಾರೀ ಖರೀದಿ ಆಗಬಹುದು. ಮೊದಲನೆಯದು ಹಳೆಯ ಸರಕಾರೀ ಖರೀದಿಯ ವಿಧ. ಈ ಯೋಜನೆ ಅನುಗುಣವಾಗಿ ರೇಷನ್ ಅಂಗಡಿಗಳಲ್ಲಿ ಮಾರಾಟ ಮಾಡಲು ಸರಕಾರ ಧಾನ್ಯಗಳನ್ನು ಖರೀದಿ ಮಾಡುತ್ತದೆ. ಅಥವಾ ಮೌಲ್ಯ ಸಮರ್ಥನೆ ಯೋಜನೆಯ ಅಡಿಯಲ್ಲಿ ಯಾವುದೇ ಬೆಳೆಯ ಮಾರುಕಟ್ಟೆಯ ಬೆಲೆ ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆಯಾದಲ್ಲಿ ಸರಕಾರ ಆ ಬೇಳೆಯನ್ನು ಖರೀದಿ ಮಾಡಲು ಪ್ರಾರಂಭಿಸುತ್ತದೆ. ಏಳು ತಿಂಗಳ ನಂತರ ಎಂದಿನಂತೆಯೇ ಈ ವರ್ಷ ಕೂಡ ಇದೇ ವಿಧಾನವನ್ನು ಅಳವಡಿಸಿಕೊಳ್ಳಲಾಗುವುದು ಎಂದು ಸರಕಾರ ನಿರ್ಣಯಿಸಿದೆ.
ಒಂದೇ ಒಂದು ಬದಲಾವಣೆ ಏನೆಂದರೆ, ಸರಕಾರ ತನ್ನ ಬಜೆಟ್‍ನಲ್ಲಿ ಮಾಡಿದ ಕಟುವ್ಯಂಗ್ಯವನ್ನು ಸುಧಾರಿಸುತ್ತ ಈ ಖರೀದಿಗಾಗಿ 200 ಕೋಟಿಗಳ ಬದಲಾಗಿ ಈಗ ಸುಮಾರು 16,000 ಕೋಟಿ ರೂಪಾಯಿಗಳನ್ನು ನೀಡುವ ನಿರ್ಣಯ ಮಾಡಿದೆ. ಅದರೊಂದಿಗೆ ಸರಕಾರೀ ಖರೀದಿ ಮಾಡುವ ಏಜೆನ್ಸಿಗಳು ಬ್ಯಾಂಕಿನಿಂದ 45,000 ಕೋಟಿ ರೂಪಾಯಿಗಳ ಸಾಲ ಮಾಡಬಹುದು ಎನ್ನುವ ಘೋಷಣೆಯನ್ನೂ ಮಾಡಿದೆ. ಆದರೆ ಇದರಲ್ಲಿ ಸರಕಾರ ಗ್ಯಾರಂಟಿ ಮಾತ್ರ ನೀಡಿದೆ, ತನ್ನ ಬೊಕ್ಕಸದಿಂದ ಒಂದು ರೂಪಾಯಿಯನ್ನೂ ಹಾಕಿಲ್ಲ.
ವಾಸ್ತವದಲ್ಲಿ ಈ ಮೊತ್ತವೂ ಒಂಟೆ ಬಾಯಲ್ಲಿ ಜೀರಿಗೆ ಹಾಕಿದಂತಿದೆ ಏಕೆಂದರೆ, ಸರಕಾರ ಎಲ್ಲಾ ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸುವ ಯೋಜನೆಯನ್ನು ಗಂಭೀರವಾಗಿ ಪರಿಗಣಿಸಿದ್ದಲ್ಲಿ ಅದಕ್ಕೆ ಕನಿಷ್ಠ ಒಂದೂವರೆಯಿಂದ ಎರಡು ಲಕ್ಷ ಕೋಟಿ ರೂಪಾಯಿಗಳ ವ್ಯವಸ್ಥೆ ಮಾಡಬೇಕಿತ್ತು. ಸರಕಾರ ಯಾವುದೇ ಬೆಳೆಯ ಸಂಪೂರ್ಣ ಉತ್ಪನ್ನದಲ್ಲಿ ಕೇವಲ 25% ಉತ್ಪನ್ನ ಖರೀದಿಸುವಲ್ಲಿ ಮಾತ್ರ ರಾಜ್ಯ ಸರಕಾರದೊಂದಿಗೆ ಸಹಯೋಗ ಮಾಡುವುದು ಎನ್ನುವ ಸತ್ಯವೂ ಲಡ್ಡೂಗಳ ತಟ್ಟೆಯ ಮುಂದೆ ಮುಚ್ಚಿಹೋಗಿದೆ. ಇನ್ನುಳಿದ 75% ಖರೀದಿ ಮಾಡುವುದು ರಾಜ್ಯಸರಕಾರದ ತಲೆನೋವು ಆಗಿರುತ್ತದೆ. ರಾಜ್ಯ ಸರಕಾರಗಳಲ್ಲಿ ಅಷ್ಟು ದುಡ್ಡು ಇರೋಲ್ಲ, ರೈತರಿಗೆ ಬೆಳೆಯನ್ನು ಖರೀದಿ ಮಾಡಲ್ಲ.
ಅದರ ಬದಲಿಗೆ ಕೇಂದ್ರ ಸರಕಾರ ಪ್ರಾಯೋಗಿಕವಾಗಿ ಎರಡು ಬೇರೇ ವಿಧಾನಗಳ ಘೋಷಣೆ ಮಾಡಿದೆ. ಆದರೆ ಇವೆರಡರಿಂದಲೂ ರೈತರಿಗೆ ಯಾವುದೇ ಲಾಭ ಆಗಲು ಸಾಧ್ಯವಿಲ್ಲ. ಮೊದಲನೇದಂತೂ ಮಧ್ಯಪ್ರದೇಶದಲ್ಲಿ ಸಂಪೂರ್ಣವಾಗಿ ಫೇಲ್ ಆದ ‘ಭಾವಾಂತರ’ ಯೋಜನೆ. ಇದರಲ್ಲಿ ರೈತರು ಭಾರಿ ನಷ್ಟ ಅನುಭವಿಸಬೇಕಾಗಿ ಬಂತು. ಇನ್ನೊಂದೆಡೆ ಈ ಯೋಜನೆಯ ಗರಿಷ್ಠ ಲಾಭ ಪಡೆಯಲು ವ್ಯಾಪಾರಿಗಳು ರಾತ್ರೋರಾತ್ರಿ ಬೆಳೆಗಳನ್ನು ಬೆಲೆ ಇಳಿಸಿಬಿಟ್ಟರು ಹಾಗೂ ನಂತರ ಭಾರೀ ಲಾಭ ಗಳಿಸಿದರು. ಇದನ್ನು ಸುಧಾರಿಸದೇ ಭಾವಾಂತರ ಯೋಜನೆ ದೇಶಾದ್ಯಂತ ಅನುಷ್ಠಾನಗೊಳಿಸಿದರೆ ರೈತರಿಗೆ ನಷ್ಠ ಹಾಗೂ ವ್ಯಾಪಾರಿ ಮತ್ತು ವಂಚಕರಿಗೆ ಲಾಭ ಕಟ್ಟಿಟ್ಟ ಬುತ್ತಿ.
ಮೂರನೇ ವಿಧಾನ, ಸರಕಾರದ ಪರವಾಗಿ ಕನಿಷ್ಠ ಬೆಂಬಲ ಬೆಲೆ ಮೇಲೆ ಖರೀದಿಯನ್ನು ಖಾಸಗೀ ವ್ಯಾಪಾರಿಗಳು ಮಾಡುವುದು. ಖರೀದಿ, ಸಂಸ್ಕರಣೆ, ಶೇಖರಣೆ ಮತ್ತು ಮಾರಾಟ ಇವೆಲ್ಲವೂ ಅವರ ಜವಾಬ್ದಾರಿ ಆಗಿರುತ್ತವೆ. ಸರಕಾರ ಅವರ ಈ ಕೆಲಸಕ್ಕಾಗಿ 15% ವರೆಗೆ ಶುಲ್ಕ ಪಾವತಿಸುತ್ತದೆ. ಆದರೆ, ಪ್ರಶ್ನೆ ಇರುವುದು, ಒಂದು ವೇಳೆ ಬೆಳೆಯ ಮಾರುಕಟ್ಟೆಯ ಬೆಲೆ ಕನಿಷ್ಠ ಬೆಂಬಲ ಬೆಲೆಗಿಂತ ತುಂಬಾ ಕಡಿಮೆ ಇದ್ದಲ್ಲಿ ಯಾವುದೇ ವ್ಯಾಪಾರಿ ಅದನ್ನೇಕೆ ಖರೀದಿಸುತ್ತಾರೆ ಎನ್ನುವುದು. ಇದರ ಬದಲಾಗಿ ಸರಕಾರ ಯಾವುದೇ ವ್ಯಾಪಾರಿ ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ದರದಲ್ಲಿ ಖರೀದಿಸುವುದನ್ನು ಅಪರಾಧ ಎಂದು ಪರಿಗಣಿಸುವಂತೆ ನಿಯಮ ಮಾಡಬೇಕು ಎಂದು ರೈತ ಚಳವಳಿಗಳು ಬೇಡಿಕೆ ಇಟ್ಟಿದ್ದವು. ಇದರ ಬಗ್ಗೆ ಕೇಂದ್ರ ಸರಕಾರ ಮೌನ ತೋರಿದೆ.
ಈಗ ಅನಿಸುವುದೇನೆಂದರೆ, ಈ ಬಾರಿಯೂ ಮತ್ತೊಮ್ಮೆ ಕುರ್ಚಿಗಳು ಲಡ್ಡೂ ತಿಂದು ಹಾಕುತ್ತವೆ ಹಾಗೂ ರೈತ ನೋಡುತ್ತ ನಿಲ್ಲಲಿದ್ದಾನೆ. ಸರ್ಕಾರ ಈ ‘ಐತಿಹಾಸಿಕ’ ನಿರ್ಣಯದ ಘೋಷಣೆ ಮಾಡಿಬಿಟ್ಟೆನೆಂದು ಕೇಂದ್ರ ಸರ್ಕಾರ ತನ್ನ ಬೆನ್ನನ್ನು ತಾನೇ ತಟ್ಟಿಕೊಂಡು ಸಂಭ್ರಮ ಆಚರಿಸುತ್ತಿದ್ದಾಗ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದ ಮಂಡಿಗಳಲ್ಲಿ ಹೆಸರುಕಾಳು ಬಂದು ಬಿದ್ದಿತ್ತು. ಸಾಮಾನ್ಯ ಕನಿಷ್ಠ ಬೆಂಬಲ ಬೆಲೆ ಸರ್ಕಾರದ ಪ್ರಕಾರ ಅಧಿಕೃತವಾಗಿ 6975 ಆಗಿದ್ದರೂ, ಮಂಡಿಯ ವೆಬ್‍ಸೈಟುಗಳಲ್ಲಿ ಅದು 3900 ಅಥವಾ 4400 ಎಂದು ಕಾಣಿಸಿಕೊಳ್ಳುತ್ತಾ, ಹೆಸರುಕಾಳಿನ ವಹಿವಾಟು ಅಷ್ಟಕ್ಕೇ ನಡೆದು ಮುಗಿಯಿತು. ಹೆಸರಿನ ಉಂಡೆಗಳಂತೂ ರೈತರ ಪಾಲಿಗೆ ಬಹಳ ಕಹಿಯಾದವು. ಇನ್ನುಳಿದ ಲಡ್ಡುಗಳ ಸಿಹಿಯು ರೈತರ ಮನೆಬಾಗಿಲಿನವರೆಗೆ ತಲುಪಲಿದೆಯೇ?

– ಯೋಗೇಂದ್ರ ಯಾದವ್
ಅನುವಾದ: ರಾಜಶೇಖರ್ ಅಕ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....