Homeಅಂಕಣಗಳುಮೂರು ಸಾರಿ ಲಡ್ಡು ಹಂಚಲಾಯಿತು; ರೈತರಿಗೆ ಬೂಂದಿ ಕಾಳೂ ಸಿಗಲಿಲ್ಲ

ಮೂರು ಸಾರಿ ಲಡ್ಡು ಹಂಚಲಾಯಿತು; ರೈತರಿಗೆ ಬೂಂದಿ ಕಾಳೂ ಸಿಗಲಿಲ್ಲ

- Advertisement -
- Advertisement -

ಮಗು ಇನ್ನೂ ಹುಟ್ಟೇ ಇಲ್ಲ, ಆದರೆ ಈಗಾಗಲೇ ಮೂರು ಸಲ ಸಿಹಿ ಹಂಚಿಕೊಂಡು ತಿಂದುಬಿಟ್ಟರು. ರೈತರ ಬೆಳೆಗೆ ಸರಿಯಾದ ಬೆಲೆ ನೀಡುವಲ್ಲಿ ಮೋದಿ ಸರಕಾರ ಇದನ್ನೇ ಮಾಡಿದೆ. ಇಲ್ಲಿಯತನಕ ಒಬ್ಬ ರೈತನಿಗೂ ಹೆಚ್ಚಿಸಲಾದ ಬೆಲೆ ಸಿಕ್ಕಿಲ್ಲ. ಹೆಚ್ಚಿನ ರೈತರಿಗೆ ಬೆಲೆ ಸಿಗುವ ಸಾಧ್ಯತೆಯೂ ಕಾಣುತ್ತಿಲ್ಲ. ಆದರೆ ಮೂರು ಬಾರಿ ಚಪ್ಪಾಳೆ ತಟ್ಟಲಾಗಿದೆ, ಅಭಿನಂದನೆಗಳ ಪೋಸ್ಟರ್‍ಗಳು, ಹೋರ್ಡಿಂಗ್‍ಗಳನ್ನು ಹಚ್ಚಲಾಗಿದೆ, ಸಿಹಿ ತಿನ್ನಲಾಗಿದೆ.
ಫೆಬ್ರುವರಿ 1 ರಂದು ಅರುಣ್ ಜೇಟ್ಲಿಯವರು ಈ ‘ಐತಿಹಾಸಿಕ’ ನಿರ್ಣಯದ ಘೋಷಣೆ ಮಾಡಿದಾಗ ಮೊದಲ ಬಾರಿ ಲಡ್ಡೂ ತಿನ್ನಲಾಯಿತು. ವಿತ್ತ ಸಚಿವರು ಕೃಷಿ ವೆಚ್ಚದ ವ್ಯಾಖ್ಯೆಯನ್ನೇ ಬದಲಿಸಿದ ಹಾಗೂ ತಮ್ಮ ಮೂಲ ಆಶ್ವಾಸನೆಯಿಂದ ನುಣುಚಿಕೊಂಡ ಕಹಿ ಸತ್ಯ ಲಡ್ಡೂಗಳ ಸಿಹಿಯಲ್ಲಿ ಮುಚ್ಚಿಹೋಯಿತು. ಜುಲೈ 4 ರಂದು ಸರಕಾರ ಈ ವರ್ಷದ ಮುಂಗಾರು ಬೆಳೆಯ ಬೆಲೆಯಲ್ಲಿ ‘ಐತಿಹಾಸಿಕ’ ವೃದ್ಧಿ ಘೋಷಿಸಿದಾಗ ಎರಡನೇ ಬಾರಿ ಲಡ್ಡೂ ತಿನ್ನಲಾಯಿತು. ಇದಕ್ಕಿಂತ ಹೆಚ್ಚಿನ ಚುನಾವಣೆಯ ಉಂಡೆಗಳನ್ನು ಹಿಂದಿನ ಸರಕಾರ 2009 ರಲ್ಲಿಯೇ ಹಂಚಿತ್ತು ಎನ್ನುವ ಸತ್ಯವೂ ಈ ಲಡ್ಡೂಗಳ ಭಾರದಲ್ಲಿ ಅವಿತುಹೋಯಿತು.
ಕಳೆದ ವಾರ ಸರಕಾರದ ಖರೀದಿಯ ವಾರ್ಷಿಕ ನೀತಿಯನ್ನು ಕ್ಯಾಬಿನೆಟ್ ಘೋಷಿಸಿದಾಗ ಮೂರನೇ ಬಾರಿ ಲಡ್ಡೂ ತಿನ್ನಲಾಯಿತು. ಮತ್ತೆ ಇದನ್ನು ಒಂದು ಹೊಸ ‘ಐತಿಹಾಸಿಕ’ ಘೋಷಣೆಯಂತೇ ದೇಶದ ಎದುರಿಡಲಾಯಿತು. ತನ್ನ ಕಾಯಕದ ಫಲ ಯಾವಾಗ ಸಿಗುವುದೆಂದು ರೈತ ಮಾತ್ರ ಕಣ್ಣು ಬಿಟ್ಟು ಕಾಯುತ್ತಿದ್ದ.
ಎಲ್ಲ ರೈತರು ತಮ್ಮ ಎಲ್ಲಾ ಬೆಳೆಗಳನ್ನು ಎಮ್‍ಎಸ್‍ಪಿ ದರದಲ್ಲಿ ಮಾರಾಟ ಮಾಡುವ ಒಂದು ವ್ಯವಸ್ಥೆ ಹೇಗೆ ಮಾಡಬಹುದು ಎಂಬ ಸಮಸ್ಯೆಗೆ ಹೊಸ ನೀತಿಯಲ್ಲೂ ಯಾವುದೇ ಉತ್ತರವಿಲ್ಲ. ಈಗ ಮೂರು ವಿಧಗಳಲ್ಲಿ ಒಂದು ವಿಧದಲ್ಲಿ ಸರಕಾರೀ ಖರೀದಿ ಆಗಬಹುದು. ಮೊದಲನೆಯದು ಹಳೆಯ ಸರಕಾರೀ ಖರೀದಿಯ ವಿಧ. ಈ ಯೋಜನೆ ಅನುಗುಣವಾಗಿ ರೇಷನ್ ಅಂಗಡಿಗಳಲ್ಲಿ ಮಾರಾಟ ಮಾಡಲು ಸರಕಾರ ಧಾನ್ಯಗಳನ್ನು ಖರೀದಿ ಮಾಡುತ್ತದೆ. ಅಥವಾ ಮೌಲ್ಯ ಸಮರ್ಥನೆ ಯೋಜನೆಯ ಅಡಿಯಲ್ಲಿ ಯಾವುದೇ ಬೆಳೆಯ ಮಾರುಕಟ್ಟೆಯ ಬೆಲೆ ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆಯಾದಲ್ಲಿ ಸರಕಾರ ಆ ಬೇಳೆಯನ್ನು ಖರೀದಿ ಮಾಡಲು ಪ್ರಾರಂಭಿಸುತ್ತದೆ. ಏಳು ತಿಂಗಳ ನಂತರ ಎಂದಿನಂತೆಯೇ ಈ ವರ್ಷ ಕೂಡ ಇದೇ ವಿಧಾನವನ್ನು ಅಳವಡಿಸಿಕೊಳ್ಳಲಾಗುವುದು ಎಂದು ಸರಕಾರ ನಿರ್ಣಯಿಸಿದೆ.
ಒಂದೇ ಒಂದು ಬದಲಾವಣೆ ಏನೆಂದರೆ, ಸರಕಾರ ತನ್ನ ಬಜೆಟ್‍ನಲ್ಲಿ ಮಾಡಿದ ಕಟುವ್ಯಂಗ್ಯವನ್ನು ಸುಧಾರಿಸುತ್ತ ಈ ಖರೀದಿಗಾಗಿ 200 ಕೋಟಿಗಳ ಬದಲಾಗಿ ಈಗ ಸುಮಾರು 16,000 ಕೋಟಿ ರೂಪಾಯಿಗಳನ್ನು ನೀಡುವ ನಿರ್ಣಯ ಮಾಡಿದೆ. ಅದರೊಂದಿಗೆ ಸರಕಾರೀ ಖರೀದಿ ಮಾಡುವ ಏಜೆನ್ಸಿಗಳು ಬ್ಯಾಂಕಿನಿಂದ 45,000 ಕೋಟಿ ರೂಪಾಯಿಗಳ ಸಾಲ ಮಾಡಬಹುದು ಎನ್ನುವ ಘೋಷಣೆಯನ್ನೂ ಮಾಡಿದೆ. ಆದರೆ ಇದರಲ್ಲಿ ಸರಕಾರ ಗ್ಯಾರಂಟಿ ಮಾತ್ರ ನೀಡಿದೆ, ತನ್ನ ಬೊಕ್ಕಸದಿಂದ ಒಂದು ರೂಪಾಯಿಯನ್ನೂ ಹಾಕಿಲ್ಲ.
ವಾಸ್ತವದಲ್ಲಿ ಈ ಮೊತ್ತವೂ ಒಂಟೆ ಬಾಯಲ್ಲಿ ಜೀರಿಗೆ ಹಾಕಿದಂತಿದೆ ಏಕೆಂದರೆ, ಸರಕಾರ ಎಲ್ಲಾ ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸುವ ಯೋಜನೆಯನ್ನು ಗಂಭೀರವಾಗಿ ಪರಿಗಣಿಸಿದ್ದಲ್ಲಿ ಅದಕ್ಕೆ ಕನಿಷ್ಠ ಒಂದೂವರೆಯಿಂದ ಎರಡು ಲಕ್ಷ ಕೋಟಿ ರೂಪಾಯಿಗಳ ವ್ಯವಸ್ಥೆ ಮಾಡಬೇಕಿತ್ತು. ಸರಕಾರ ಯಾವುದೇ ಬೆಳೆಯ ಸಂಪೂರ್ಣ ಉತ್ಪನ್ನದಲ್ಲಿ ಕೇವಲ 25% ಉತ್ಪನ್ನ ಖರೀದಿಸುವಲ್ಲಿ ಮಾತ್ರ ರಾಜ್ಯ ಸರಕಾರದೊಂದಿಗೆ ಸಹಯೋಗ ಮಾಡುವುದು ಎನ್ನುವ ಸತ್ಯವೂ ಲಡ್ಡೂಗಳ ತಟ್ಟೆಯ ಮುಂದೆ ಮುಚ್ಚಿಹೋಗಿದೆ. ಇನ್ನುಳಿದ 75% ಖರೀದಿ ಮಾಡುವುದು ರಾಜ್ಯಸರಕಾರದ ತಲೆನೋವು ಆಗಿರುತ್ತದೆ. ರಾಜ್ಯ ಸರಕಾರಗಳಲ್ಲಿ ಅಷ್ಟು ದುಡ್ಡು ಇರೋಲ್ಲ, ರೈತರಿಗೆ ಬೆಳೆಯನ್ನು ಖರೀದಿ ಮಾಡಲ್ಲ.
ಅದರ ಬದಲಿಗೆ ಕೇಂದ್ರ ಸರಕಾರ ಪ್ರಾಯೋಗಿಕವಾಗಿ ಎರಡು ಬೇರೇ ವಿಧಾನಗಳ ಘೋಷಣೆ ಮಾಡಿದೆ. ಆದರೆ ಇವೆರಡರಿಂದಲೂ ರೈತರಿಗೆ ಯಾವುದೇ ಲಾಭ ಆಗಲು ಸಾಧ್ಯವಿಲ್ಲ. ಮೊದಲನೇದಂತೂ ಮಧ್ಯಪ್ರದೇಶದಲ್ಲಿ ಸಂಪೂರ್ಣವಾಗಿ ಫೇಲ್ ಆದ ‘ಭಾವಾಂತರ’ ಯೋಜನೆ. ಇದರಲ್ಲಿ ರೈತರು ಭಾರಿ ನಷ್ಟ ಅನುಭವಿಸಬೇಕಾಗಿ ಬಂತು. ಇನ್ನೊಂದೆಡೆ ಈ ಯೋಜನೆಯ ಗರಿಷ್ಠ ಲಾಭ ಪಡೆಯಲು ವ್ಯಾಪಾರಿಗಳು ರಾತ್ರೋರಾತ್ರಿ ಬೆಳೆಗಳನ್ನು ಬೆಲೆ ಇಳಿಸಿಬಿಟ್ಟರು ಹಾಗೂ ನಂತರ ಭಾರೀ ಲಾಭ ಗಳಿಸಿದರು. ಇದನ್ನು ಸುಧಾರಿಸದೇ ಭಾವಾಂತರ ಯೋಜನೆ ದೇಶಾದ್ಯಂತ ಅನುಷ್ಠಾನಗೊಳಿಸಿದರೆ ರೈತರಿಗೆ ನಷ್ಠ ಹಾಗೂ ವ್ಯಾಪಾರಿ ಮತ್ತು ವಂಚಕರಿಗೆ ಲಾಭ ಕಟ್ಟಿಟ್ಟ ಬುತ್ತಿ.
ಮೂರನೇ ವಿಧಾನ, ಸರಕಾರದ ಪರವಾಗಿ ಕನಿಷ್ಠ ಬೆಂಬಲ ಬೆಲೆ ಮೇಲೆ ಖರೀದಿಯನ್ನು ಖಾಸಗೀ ವ್ಯಾಪಾರಿಗಳು ಮಾಡುವುದು. ಖರೀದಿ, ಸಂಸ್ಕರಣೆ, ಶೇಖರಣೆ ಮತ್ತು ಮಾರಾಟ ಇವೆಲ್ಲವೂ ಅವರ ಜವಾಬ್ದಾರಿ ಆಗಿರುತ್ತವೆ. ಸರಕಾರ ಅವರ ಈ ಕೆಲಸಕ್ಕಾಗಿ 15% ವರೆಗೆ ಶುಲ್ಕ ಪಾವತಿಸುತ್ತದೆ. ಆದರೆ, ಪ್ರಶ್ನೆ ಇರುವುದು, ಒಂದು ವೇಳೆ ಬೆಳೆಯ ಮಾರುಕಟ್ಟೆಯ ಬೆಲೆ ಕನಿಷ್ಠ ಬೆಂಬಲ ಬೆಲೆಗಿಂತ ತುಂಬಾ ಕಡಿಮೆ ಇದ್ದಲ್ಲಿ ಯಾವುದೇ ವ್ಯಾಪಾರಿ ಅದನ್ನೇಕೆ ಖರೀದಿಸುತ್ತಾರೆ ಎನ್ನುವುದು. ಇದರ ಬದಲಾಗಿ ಸರಕಾರ ಯಾವುದೇ ವ್ಯಾಪಾರಿ ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ದರದಲ್ಲಿ ಖರೀದಿಸುವುದನ್ನು ಅಪರಾಧ ಎಂದು ಪರಿಗಣಿಸುವಂತೆ ನಿಯಮ ಮಾಡಬೇಕು ಎಂದು ರೈತ ಚಳವಳಿಗಳು ಬೇಡಿಕೆ ಇಟ್ಟಿದ್ದವು. ಇದರ ಬಗ್ಗೆ ಕೇಂದ್ರ ಸರಕಾರ ಮೌನ ತೋರಿದೆ.
ಈಗ ಅನಿಸುವುದೇನೆಂದರೆ, ಈ ಬಾರಿಯೂ ಮತ್ತೊಮ್ಮೆ ಕುರ್ಚಿಗಳು ಲಡ್ಡೂ ತಿಂದು ಹಾಕುತ್ತವೆ ಹಾಗೂ ರೈತ ನೋಡುತ್ತ ನಿಲ್ಲಲಿದ್ದಾನೆ. ಸರ್ಕಾರ ಈ ‘ಐತಿಹಾಸಿಕ’ ನಿರ್ಣಯದ ಘೋಷಣೆ ಮಾಡಿಬಿಟ್ಟೆನೆಂದು ಕೇಂದ್ರ ಸರ್ಕಾರ ತನ್ನ ಬೆನ್ನನ್ನು ತಾನೇ ತಟ್ಟಿಕೊಂಡು ಸಂಭ್ರಮ ಆಚರಿಸುತ್ತಿದ್ದಾಗ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದ ಮಂಡಿಗಳಲ್ಲಿ ಹೆಸರುಕಾಳು ಬಂದು ಬಿದ್ದಿತ್ತು. ಸಾಮಾನ್ಯ ಕನಿಷ್ಠ ಬೆಂಬಲ ಬೆಲೆ ಸರ್ಕಾರದ ಪ್ರಕಾರ ಅಧಿಕೃತವಾಗಿ 6975 ಆಗಿದ್ದರೂ, ಮಂಡಿಯ ವೆಬ್‍ಸೈಟುಗಳಲ್ಲಿ ಅದು 3900 ಅಥವಾ 4400 ಎಂದು ಕಾಣಿಸಿಕೊಳ್ಳುತ್ತಾ, ಹೆಸರುಕಾಳಿನ ವಹಿವಾಟು ಅಷ್ಟಕ್ಕೇ ನಡೆದು ಮುಗಿಯಿತು. ಹೆಸರಿನ ಉಂಡೆಗಳಂತೂ ರೈತರ ಪಾಲಿಗೆ ಬಹಳ ಕಹಿಯಾದವು. ಇನ್ನುಳಿದ ಲಡ್ಡುಗಳ ಸಿಹಿಯು ರೈತರ ಮನೆಬಾಗಿಲಿನವರೆಗೆ ತಲುಪಲಿದೆಯೇ?

– ಯೋಗೇಂದ್ರ ಯಾದವ್
ಅನುವಾದ: ರಾಜಶೇಖರ್ ಅಕ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....