Homeಅಂಕಣಗಳುಮೂರು ಸಾರಿ ಲಡ್ಡು ಹಂಚಲಾಯಿತು; ರೈತರಿಗೆ ಬೂಂದಿ ಕಾಳೂ ಸಿಗಲಿಲ್ಲ

ಮೂರು ಸಾರಿ ಲಡ್ಡು ಹಂಚಲಾಯಿತು; ರೈತರಿಗೆ ಬೂಂದಿ ಕಾಳೂ ಸಿಗಲಿಲ್ಲ

- Advertisement -
- Advertisement -

ಮಗು ಇನ್ನೂ ಹುಟ್ಟೇ ಇಲ್ಲ, ಆದರೆ ಈಗಾಗಲೇ ಮೂರು ಸಲ ಸಿಹಿ ಹಂಚಿಕೊಂಡು ತಿಂದುಬಿಟ್ಟರು. ರೈತರ ಬೆಳೆಗೆ ಸರಿಯಾದ ಬೆಲೆ ನೀಡುವಲ್ಲಿ ಮೋದಿ ಸರಕಾರ ಇದನ್ನೇ ಮಾಡಿದೆ. ಇಲ್ಲಿಯತನಕ ಒಬ್ಬ ರೈತನಿಗೂ ಹೆಚ್ಚಿಸಲಾದ ಬೆಲೆ ಸಿಕ್ಕಿಲ್ಲ. ಹೆಚ್ಚಿನ ರೈತರಿಗೆ ಬೆಲೆ ಸಿಗುವ ಸಾಧ್ಯತೆಯೂ ಕಾಣುತ್ತಿಲ್ಲ. ಆದರೆ ಮೂರು ಬಾರಿ ಚಪ್ಪಾಳೆ ತಟ್ಟಲಾಗಿದೆ, ಅಭಿನಂದನೆಗಳ ಪೋಸ್ಟರ್‍ಗಳು, ಹೋರ್ಡಿಂಗ್‍ಗಳನ್ನು ಹಚ್ಚಲಾಗಿದೆ, ಸಿಹಿ ತಿನ್ನಲಾಗಿದೆ.
ಫೆಬ್ರುವರಿ 1 ರಂದು ಅರುಣ್ ಜೇಟ್ಲಿಯವರು ಈ ‘ಐತಿಹಾಸಿಕ’ ನಿರ್ಣಯದ ಘೋಷಣೆ ಮಾಡಿದಾಗ ಮೊದಲ ಬಾರಿ ಲಡ್ಡೂ ತಿನ್ನಲಾಯಿತು. ವಿತ್ತ ಸಚಿವರು ಕೃಷಿ ವೆಚ್ಚದ ವ್ಯಾಖ್ಯೆಯನ್ನೇ ಬದಲಿಸಿದ ಹಾಗೂ ತಮ್ಮ ಮೂಲ ಆಶ್ವಾಸನೆಯಿಂದ ನುಣುಚಿಕೊಂಡ ಕಹಿ ಸತ್ಯ ಲಡ್ಡೂಗಳ ಸಿಹಿಯಲ್ಲಿ ಮುಚ್ಚಿಹೋಯಿತು. ಜುಲೈ 4 ರಂದು ಸರಕಾರ ಈ ವರ್ಷದ ಮುಂಗಾರು ಬೆಳೆಯ ಬೆಲೆಯಲ್ಲಿ ‘ಐತಿಹಾಸಿಕ’ ವೃದ್ಧಿ ಘೋಷಿಸಿದಾಗ ಎರಡನೇ ಬಾರಿ ಲಡ್ಡೂ ತಿನ್ನಲಾಯಿತು. ಇದಕ್ಕಿಂತ ಹೆಚ್ಚಿನ ಚುನಾವಣೆಯ ಉಂಡೆಗಳನ್ನು ಹಿಂದಿನ ಸರಕಾರ 2009 ರಲ್ಲಿಯೇ ಹಂಚಿತ್ತು ಎನ್ನುವ ಸತ್ಯವೂ ಈ ಲಡ್ಡೂಗಳ ಭಾರದಲ್ಲಿ ಅವಿತುಹೋಯಿತು.
ಕಳೆದ ವಾರ ಸರಕಾರದ ಖರೀದಿಯ ವಾರ್ಷಿಕ ನೀತಿಯನ್ನು ಕ್ಯಾಬಿನೆಟ್ ಘೋಷಿಸಿದಾಗ ಮೂರನೇ ಬಾರಿ ಲಡ್ಡೂ ತಿನ್ನಲಾಯಿತು. ಮತ್ತೆ ಇದನ್ನು ಒಂದು ಹೊಸ ‘ಐತಿಹಾಸಿಕ’ ಘೋಷಣೆಯಂತೇ ದೇಶದ ಎದುರಿಡಲಾಯಿತು. ತನ್ನ ಕಾಯಕದ ಫಲ ಯಾವಾಗ ಸಿಗುವುದೆಂದು ರೈತ ಮಾತ್ರ ಕಣ್ಣು ಬಿಟ್ಟು ಕಾಯುತ್ತಿದ್ದ.
ಎಲ್ಲ ರೈತರು ತಮ್ಮ ಎಲ್ಲಾ ಬೆಳೆಗಳನ್ನು ಎಮ್‍ಎಸ್‍ಪಿ ದರದಲ್ಲಿ ಮಾರಾಟ ಮಾಡುವ ಒಂದು ವ್ಯವಸ್ಥೆ ಹೇಗೆ ಮಾಡಬಹುದು ಎಂಬ ಸಮಸ್ಯೆಗೆ ಹೊಸ ನೀತಿಯಲ್ಲೂ ಯಾವುದೇ ಉತ್ತರವಿಲ್ಲ. ಈಗ ಮೂರು ವಿಧಗಳಲ್ಲಿ ಒಂದು ವಿಧದಲ್ಲಿ ಸರಕಾರೀ ಖರೀದಿ ಆಗಬಹುದು. ಮೊದಲನೆಯದು ಹಳೆಯ ಸರಕಾರೀ ಖರೀದಿಯ ವಿಧ. ಈ ಯೋಜನೆ ಅನುಗುಣವಾಗಿ ರೇಷನ್ ಅಂಗಡಿಗಳಲ್ಲಿ ಮಾರಾಟ ಮಾಡಲು ಸರಕಾರ ಧಾನ್ಯಗಳನ್ನು ಖರೀದಿ ಮಾಡುತ್ತದೆ. ಅಥವಾ ಮೌಲ್ಯ ಸಮರ್ಥನೆ ಯೋಜನೆಯ ಅಡಿಯಲ್ಲಿ ಯಾವುದೇ ಬೆಳೆಯ ಮಾರುಕಟ್ಟೆಯ ಬೆಲೆ ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆಯಾದಲ್ಲಿ ಸರಕಾರ ಆ ಬೇಳೆಯನ್ನು ಖರೀದಿ ಮಾಡಲು ಪ್ರಾರಂಭಿಸುತ್ತದೆ. ಏಳು ತಿಂಗಳ ನಂತರ ಎಂದಿನಂತೆಯೇ ಈ ವರ್ಷ ಕೂಡ ಇದೇ ವಿಧಾನವನ್ನು ಅಳವಡಿಸಿಕೊಳ್ಳಲಾಗುವುದು ಎಂದು ಸರಕಾರ ನಿರ್ಣಯಿಸಿದೆ.
ಒಂದೇ ಒಂದು ಬದಲಾವಣೆ ಏನೆಂದರೆ, ಸರಕಾರ ತನ್ನ ಬಜೆಟ್‍ನಲ್ಲಿ ಮಾಡಿದ ಕಟುವ್ಯಂಗ್ಯವನ್ನು ಸುಧಾರಿಸುತ್ತ ಈ ಖರೀದಿಗಾಗಿ 200 ಕೋಟಿಗಳ ಬದಲಾಗಿ ಈಗ ಸುಮಾರು 16,000 ಕೋಟಿ ರೂಪಾಯಿಗಳನ್ನು ನೀಡುವ ನಿರ್ಣಯ ಮಾಡಿದೆ. ಅದರೊಂದಿಗೆ ಸರಕಾರೀ ಖರೀದಿ ಮಾಡುವ ಏಜೆನ್ಸಿಗಳು ಬ್ಯಾಂಕಿನಿಂದ 45,000 ಕೋಟಿ ರೂಪಾಯಿಗಳ ಸಾಲ ಮಾಡಬಹುದು ಎನ್ನುವ ಘೋಷಣೆಯನ್ನೂ ಮಾಡಿದೆ. ಆದರೆ ಇದರಲ್ಲಿ ಸರಕಾರ ಗ್ಯಾರಂಟಿ ಮಾತ್ರ ನೀಡಿದೆ, ತನ್ನ ಬೊಕ್ಕಸದಿಂದ ಒಂದು ರೂಪಾಯಿಯನ್ನೂ ಹಾಕಿಲ್ಲ.
ವಾಸ್ತವದಲ್ಲಿ ಈ ಮೊತ್ತವೂ ಒಂಟೆ ಬಾಯಲ್ಲಿ ಜೀರಿಗೆ ಹಾಕಿದಂತಿದೆ ಏಕೆಂದರೆ, ಸರಕಾರ ಎಲ್ಲಾ ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸುವ ಯೋಜನೆಯನ್ನು ಗಂಭೀರವಾಗಿ ಪರಿಗಣಿಸಿದ್ದಲ್ಲಿ ಅದಕ್ಕೆ ಕನಿಷ್ಠ ಒಂದೂವರೆಯಿಂದ ಎರಡು ಲಕ್ಷ ಕೋಟಿ ರೂಪಾಯಿಗಳ ವ್ಯವಸ್ಥೆ ಮಾಡಬೇಕಿತ್ತು. ಸರಕಾರ ಯಾವುದೇ ಬೆಳೆಯ ಸಂಪೂರ್ಣ ಉತ್ಪನ್ನದಲ್ಲಿ ಕೇವಲ 25% ಉತ್ಪನ್ನ ಖರೀದಿಸುವಲ್ಲಿ ಮಾತ್ರ ರಾಜ್ಯ ಸರಕಾರದೊಂದಿಗೆ ಸಹಯೋಗ ಮಾಡುವುದು ಎನ್ನುವ ಸತ್ಯವೂ ಲಡ್ಡೂಗಳ ತಟ್ಟೆಯ ಮುಂದೆ ಮುಚ್ಚಿಹೋಗಿದೆ. ಇನ್ನುಳಿದ 75% ಖರೀದಿ ಮಾಡುವುದು ರಾಜ್ಯಸರಕಾರದ ತಲೆನೋವು ಆಗಿರುತ್ತದೆ. ರಾಜ್ಯ ಸರಕಾರಗಳಲ್ಲಿ ಅಷ್ಟು ದುಡ್ಡು ಇರೋಲ್ಲ, ರೈತರಿಗೆ ಬೆಳೆಯನ್ನು ಖರೀದಿ ಮಾಡಲ್ಲ.
ಅದರ ಬದಲಿಗೆ ಕೇಂದ್ರ ಸರಕಾರ ಪ್ರಾಯೋಗಿಕವಾಗಿ ಎರಡು ಬೇರೇ ವಿಧಾನಗಳ ಘೋಷಣೆ ಮಾಡಿದೆ. ಆದರೆ ಇವೆರಡರಿಂದಲೂ ರೈತರಿಗೆ ಯಾವುದೇ ಲಾಭ ಆಗಲು ಸಾಧ್ಯವಿಲ್ಲ. ಮೊದಲನೇದಂತೂ ಮಧ್ಯಪ್ರದೇಶದಲ್ಲಿ ಸಂಪೂರ್ಣವಾಗಿ ಫೇಲ್ ಆದ ‘ಭಾವಾಂತರ’ ಯೋಜನೆ. ಇದರಲ್ಲಿ ರೈತರು ಭಾರಿ ನಷ್ಟ ಅನುಭವಿಸಬೇಕಾಗಿ ಬಂತು. ಇನ್ನೊಂದೆಡೆ ಈ ಯೋಜನೆಯ ಗರಿಷ್ಠ ಲಾಭ ಪಡೆಯಲು ವ್ಯಾಪಾರಿಗಳು ರಾತ್ರೋರಾತ್ರಿ ಬೆಳೆಗಳನ್ನು ಬೆಲೆ ಇಳಿಸಿಬಿಟ್ಟರು ಹಾಗೂ ನಂತರ ಭಾರೀ ಲಾಭ ಗಳಿಸಿದರು. ಇದನ್ನು ಸುಧಾರಿಸದೇ ಭಾವಾಂತರ ಯೋಜನೆ ದೇಶಾದ್ಯಂತ ಅನುಷ್ಠಾನಗೊಳಿಸಿದರೆ ರೈತರಿಗೆ ನಷ್ಠ ಹಾಗೂ ವ್ಯಾಪಾರಿ ಮತ್ತು ವಂಚಕರಿಗೆ ಲಾಭ ಕಟ್ಟಿಟ್ಟ ಬುತ್ತಿ.
ಮೂರನೇ ವಿಧಾನ, ಸರಕಾರದ ಪರವಾಗಿ ಕನಿಷ್ಠ ಬೆಂಬಲ ಬೆಲೆ ಮೇಲೆ ಖರೀದಿಯನ್ನು ಖಾಸಗೀ ವ್ಯಾಪಾರಿಗಳು ಮಾಡುವುದು. ಖರೀದಿ, ಸಂಸ್ಕರಣೆ, ಶೇಖರಣೆ ಮತ್ತು ಮಾರಾಟ ಇವೆಲ್ಲವೂ ಅವರ ಜವಾಬ್ದಾರಿ ಆಗಿರುತ್ತವೆ. ಸರಕಾರ ಅವರ ಈ ಕೆಲಸಕ್ಕಾಗಿ 15% ವರೆಗೆ ಶುಲ್ಕ ಪಾವತಿಸುತ್ತದೆ. ಆದರೆ, ಪ್ರಶ್ನೆ ಇರುವುದು, ಒಂದು ವೇಳೆ ಬೆಳೆಯ ಮಾರುಕಟ್ಟೆಯ ಬೆಲೆ ಕನಿಷ್ಠ ಬೆಂಬಲ ಬೆಲೆಗಿಂತ ತುಂಬಾ ಕಡಿಮೆ ಇದ್ದಲ್ಲಿ ಯಾವುದೇ ವ್ಯಾಪಾರಿ ಅದನ್ನೇಕೆ ಖರೀದಿಸುತ್ತಾರೆ ಎನ್ನುವುದು. ಇದರ ಬದಲಾಗಿ ಸರಕಾರ ಯಾವುದೇ ವ್ಯಾಪಾರಿ ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ದರದಲ್ಲಿ ಖರೀದಿಸುವುದನ್ನು ಅಪರಾಧ ಎಂದು ಪರಿಗಣಿಸುವಂತೆ ನಿಯಮ ಮಾಡಬೇಕು ಎಂದು ರೈತ ಚಳವಳಿಗಳು ಬೇಡಿಕೆ ಇಟ್ಟಿದ್ದವು. ಇದರ ಬಗ್ಗೆ ಕೇಂದ್ರ ಸರಕಾರ ಮೌನ ತೋರಿದೆ.
ಈಗ ಅನಿಸುವುದೇನೆಂದರೆ, ಈ ಬಾರಿಯೂ ಮತ್ತೊಮ್ಮೆ ಕುರ್ಚಿಗಳು ಲಡ್ಡೂ ತಿಂದು ಹಾಕುತ್ತವೆ ಹಾಗೂ ರೈತ ನೋಡುತ್ತ ನಿಲ್ಲಲಿದ್ದಾನೆ. ಸರ್ಕಾರ ಈ ‘ಐತಿಹಾಸಿಕ’ ನಿರ್ಣಯದ ಘೋಷಣೆ ಮಾಡಿಬಿಟ್ಟೆನೆಂದು ಕೇಂದ್ರ ಸರ್ಕಾರ ತನ್ನ ಬೆನ್ನನ್ನು ತಾನೇ ತಟ್ಟಿಕೊಂಡು ಸಂಭ್ರಮ ಆಚರಿಸುತ್ತಿದ್ದಾಗ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದ ಮಂಡಿಗಳಲ್ಲಿ ಹೆಸರುಕಾಳು ಬಂದು ಬಿದ್ದಿತ್ತು. ಸಾಮಾನ್ಯ ಕನಿಷ್ಠ ಬೆಂಬಲ ಬೆಲೆ ಸರ್ಕಾರದ ಪ್ರಕಾರ ಅಧಿಕೃತವಾಗಿ 6975 ಆಗಿದ್ದರೂ, ಮಂಡಿಯ ವೆಬ್‍ಸೈಟುಗಳಲ್ಲಿ ಅದು 3900 ಅಥವಾ 4400 ಎಂದು ಕಾಣಿಸಿಕೊಳ್ಳುತ್ತಾ, ಹೆಸರುಕಾಳಿನ ವಹಿವಾಟು ಅಷ್ಟಕ್ಕೇ ನಡೆದು ಮುಗಿಯಿತು. ಹೆಸರಿನ ಉಂಡೆಗಳಂತೂ ರೈತರ ಪಾಲಿಗೆ ಬಹಳ ಕಹಿಯಾದವು. ಇನ್ನುಳಿದ ಲಡ್ಡುಗಳ ಸಿಹಿಯು ರೈತರ ಮನೆಬಾಗಿಲಿನವರೆಗೆ ತಲುಪಲಿದೆಯೇ?

– ಯೋಗೇಂದ್ರ ಯಾದವ್
ಅನುವಾದ: ರಾಜಶೇಖರ್ ಅಕ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....